ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?

Crime-News-General-Image

ಶಿವಮೊಗ್ಗ : ಒಂದು ಲೋಡ್‌ ಗೋಧಿ (Wheat) ಕಳುಹಿಸುವುದಾಗಿ ನಂಬಿಸಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಗುಜರಾತ್‌ ಮೂಲದ ವ್ಯಕ್ತಿಯೊಬ್ಬ 7 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮನ್ಸೂರ್‌ ಎಂಬುವವರು ಭತ್ತ, ಜೋಳ, ಗೋಧಿ (Wheat) ವ್ಯಾಪಾರ ಮಾಡುತ್ತಿದ್ದಾರೆ. ಗುಜರಾತ್‌ ಮೂಲದ ಶೇಖ್‌ ಮೊಹಮ್ಮದ್‌ ಫರೀದ್‌ ಎಂಬಾತ ಮನ್ಸೂರ್‌ ಅವರಿಗೆ ಪರಿಚಯವಾಗಿದ್ದು, ಗೋಧಿ ಕೊಡಿಸುವುದಾಗಿ ನಂಬಿಸಿದ್ದ. ಒಮ್ಮೆ ಆತ ಕರೆ ಮಾಡಿ ಒಂದು ಲೋಡ್‌ ಗೋಧಿ ಕಳುಹಿಸುವುದಾಗಿ ತಿಳಿಸಿ ಮೊದಲಿಗೆ … Read more

ಪ್ರತಿದಿನ 7 ರಿಂದ 8 ಸಾವಿರ ರೂ. ಲಾಭ, ಮನೆಯಲ್ಲೆ ಕುಳಿತು ಗಳಿಸಬಹುದು ಹಣ, ಮುಂದೇನಾಯ್ತು?

SMS-Fraud-Shimoga-CEN-Police-Station.

ಶಿವಮೊಗ್ಗ : ಮನೆಯಿಂದಲೆ ಕೆಲಸ (Work) ಮಾಡಿ ಪ್ರತಿದಿನ ಎಳೆಂಟು ಸಾವಿರ ರೂ. ಸಂಪಾದಿಸಬಹುದು ಎಂದು ನಂಬಿಸಿ ಮಹಿಳೆಯೊಬ್ಬರಿಗೆ (ಹೆಸರು ಗೌಪ್ಯ) 53 ಲಕ್ಷ ರೂ. ವಂಚಿಸಲಾಗಿದೆ. ಮಹಿಳೆಯೊಬ್ಬರ ಟೆಲಿಗ್ರಾಂ ಖಾತೆಗೆ ವರ್ಕ್‌ ಫ್ರಮ್‌ ಹೋಮ್‌ ಎಂದು ಮೆಸೇಜ್‌ ಬಂದಿತ್ತು. ಟಾಸ್ಕ್‌ ಪೂರೈಸಿದರೆ ನಿತ್ಯ 7 ರಿಂದ 8 ಸಾವಿರ ರೂ. ಗಳಿಸಬಹುದು ಎಂದು ತಿಳಿಸಲಾಗಿತ್ತು. ಮೆಸೇಜ್‌ನಲ್ಲಿದ್ದ ಲಿಂಕ್‌ ಕ್ಲಿಕ್‌ ಮಾಡಿದ ಮಹಿಳೆಗೆ ಮೊದಲು 10 ಸಾವಿರ ರೂ. ಹೂಡಿಕೆ ಮಾಡುವಂತೆ ತಿಳಿಸಲಾಗಿತ್ತು. ಅಂತೆಯೇ ಮಹಿಳೆ ಹಣ … Read more

ಶಿವಮೊಗ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್‌ ಸವಾರ, ಪೋಷಕರಿಗೆ ಬಿಸಿ ಮುಟ್ಟಿಸಿತು ನ್ಯಾಯಾಲಯ, ಆಗಿದ್ದೇನು?

Traffic-police-in-Shimoga-city.

ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ. ಫೆ.24ರಂದು ಮೀನಾಕ್ಷಿ ಭವನ ಹೊಟೇಲ್‌ ಸಮೀಪ ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ … Read more

ಕೋಣಂದೂರು ಸಮೀಪ ಕಾರುಗಳ ಸರಣಿ ಅಪಘಾತ, ಹರಿಹರಪುರ ಮಠದ ಶ್ರೀಗಳು ಪಾರು

070325-Swamiji-Car-accident-near-konanduru-in-thirthahalli.webp

ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ (Swamiji) ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ ಮತ್ತೊಂದು ಕಾರು ಸ್ವಾಮೀಜಿ ಇದ್ದ ಕಾರಿಗೆ ಅಪ್ಪಳಿಸಿದೆ. ಮೂರು ವಾಹನಗಳು ಜಖಂ ಆಗಿವೆ. … Read more

ಶಿವಮೊಗ್ಗದ ಡಾಕ್ಟರ್‌ಗೆ ಸೇನೆಯ ಕರ್ನಲ್‌ನಿಂದ ಫೋನ್‌, ಆಮೇಲೆ ಕಾದಿತ್ತು ಶಾಕ್‌, ಆಗಿದ್ದೇನು?

Online-Fraud-In-Shimoga

ಶಿವಮೊಗ್ಗ : ಭಾರತೀಯ ಸೇನೆಯ ಅಧಿಕಾರಿ ಎಂದು ನಂಬಿಸಿ ಶಿವಮೊಗ್ಗದ ವೈದ್ಯೆ (Doctor) ಮತ್ತು ಅವರ ಮನೆಯಲ್ಲಿ ಬಾಡಿಗೆಗೆ ಇರುವ ವ್ಯಕ್ತಿಯೊಬ್ಬರಿಗೆ 3.72 ಲಕ್ಷ ರೂ. ಹಣ ವಂಚಿಸಲಾಗಿದೆ. ವಿಡಿಯೋ ಕರೆ ಮಾಡಿ ರೋಗಿಗಳನ್ನು ಕಳುಹಿಸಲಾಗುತ್ತಿದೆ ಎಂದು ನಂಬಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎನ್‌ಸಿಸಿ ಕಚೇರಿಯಿಂದ ಫೋನ್..!‌ ಶಿವಮೊಗ್ಗದ ಎನ್‌ಸಿಸಿ ಕಚೇರಿಯಿಂದ ಕ್ಯಾಪ್ಟನ್‌ ಮಾತನಾಡುತ್ತಿರುವುದಾಗಿ ತಿಳಿಸಿ ವ್ಯಕ್ತಿಯೊಬ್ಬ ವೈದ್ಯೆಗೆ (ಹೆಸರು ಗೌಪ್ಯ) ಕರೆ ಮಾಡಿದ್ದ. ಸೇನಾ ವಾಹನದಲ್ಲಿ ಸುಮಾರು 45 ರೋಗಿಗಳನ್ನು ನಿಮ್ಮ ಕ್ಲಿನಿಕ್‌ಗೆ … Read more

ಆಯುರ್ವೇದ ಔಷಧಿ ಕೊಡಿಸುವ ಭರವಸೆ, ನಂಬಿದ ನಿವೃತ್ತ ಶಿಕ್ಷಕಿಗೆ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

ಶಿವಮೊಗ್ಗ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕಿಯೊಬ್ಬರಿಗೆ (ಹೆಸರು ಗೌಪ್ಯ) ಆಯುರ್ವೇದ ಔಷಧ ಕೊಡುವುದಾಗಿ ನಂಬಿಸಿ 1.75 ಲಕ್ಷ ರೂ. ಪಡೆದು ವಂಚಿಸಲಾಗಿದೆ. ಈಗ ಹಣವನ್ನು ಹಿಂತಿರುಗಿಸಿಲ್ಲ. ಔಷಧವನ್ನು ಕೊಟ್ಟಿಲ್ಲ ಎಂದು ಆರೋಪಿಸಿ ನಿವೃತ್ತ ಶಿಕ್ಷಕಿ (Teacher) ತುಂಗಾ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಸ್ಪತ್ರೆ ಮುಂದೆಯೇ ಸಿಕ್ಕ ವಂಚಕ ನಿಯಮಿತ ಆರೋಗ್ಯ ತಪಾಸಣೆ ಮುಗಿಸಿ ನಿವೃತ್ತ ಶಿಕ್ಷಕಿ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಪರಿಚಯಿಸಿಕೊಂಡಿದ್ದ. ಆಯುರ್ವೇದ ಔಷಧಿಯಿಂದ ಆರೋಗ್ಯ ಸುಧಾರಿಸಲಿದೆ ಎಂದು ನಂಬಿಸಿದ್ದ. ಅಲ್ಲದೆ … Read more

ಸ್ನೇಹಿತನ ಭೇಟಿಗೆ ರಾತ್ರಿ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದ ವ್ಯಕ್ತಿಗೆ ಕಾದಿತ್ತು ಆಘಾತ, ನಾಲ್ವರು ಅರೆಸ್ಟ್‌

shimoga railway station

ಶಿವಮೊಗ್ಗ : ರೈಲ್ವೆ ನಿಲ್ದಾಣದ ಮುಂಭಾಗ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಬ್ರೇಸ್‌ಲೆಟ್‌ (Bracelet) ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ನಾಲ್ವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಚಿನ್ನದ ಬ್ರೇಸ್‌ಲೆಟ್‌ ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆದಿದ್ದಾರೆ. ಕೃಷಿ ನಗರದ ಜಯದೇವಪ್ಪ ಎಂಬುವವರ ಕೈಯಲ್ಲಿದ್ದ ಬ್ರೇಸ್‌ಲೆಟ್‌ ದರೋಡೆಯಾಗಿತ್ತು. ಈ ಸಂಬಂಧ ಜಬೀರ್‌.ಜೆ, ಮೊಹಮ್ಮದ್‌ ಸಮೀವುಲ್ಲಾ, ಆಂಜನೇಯ ಮತ್ತು ಸೈಯದ್‌ ನೇಮನ್‌ ಬಂಧಿಸಲಾಗಿದೆ. ರೈಲ್ವೆ ನಿಲ್ದಾಣದ ಮುಂದೆ ಆಗಿದ್ದೇನು? ಜಯದೇವಪ್ಪ ತಮ್ಮ ಸ್ನೇಹಿತರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ … Read more

ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Shivamogga-Court-Balaraja-Urs-Road

ಶಿವಮೊಗ್ಗ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Jail) ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ. ಏನಿದು ಕೇಸ್‌? 2022ರಲ್ಲಿ ಭದ್ರಾವತಿ ನ್ಯೂ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 19 ವರ್ಷದ ಯುವಕನೊಬ್ಬ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿ ನೀಡಿದ್ದ ದೂರಿನ ಹಿನ್ನೆಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. … Read more

ಶಿವಮೊಗ್ಗದಲ್ಲಿ ಬಾರ್‌ ಮುಂಭಾಗ ಇಬ್ಬರು ಯುವಕರ ಮೇಲೆ ರಾಡ್‌ನಿಂದ ಅಟ್ಯಾಕ್‌

210225-Assault-on-two-persons-in-sagara-road-in-Shimoga-city rod

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದ್ದು ಇಬ್ಬರು ಯುವಕರ ಮೇಲೆ ರಾಡ್‌ನಿಂದ (Rod) ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ಬ್ಲೂ ಮೂನ್‌ ಬಾರ್‌ ಮುಂಭಾಗ ಘಟನೆ ಸಂಭವಿಸಿದೆ.   ಹೊಸಮನೆಯ ಹರೀಶ್‌ (35) ಮತ್ತು ಗೋಪಾಳದ ಮಂಜುನಾಥ್‌ (28) ಗಾಯಾಳುಗಳು. ಘಟನೆ ಸಂಭವಿಸಿದ್ದು ಹೇಗೆ? ಹರೀಶ್‌ ಮತ್ತು ಮಂಜುನಾಥ್‌ ಸ್ನೇಹಿತರೊಂದಿಗೆ ಬ್ಲೂ ಮೂನ್‌ ಬಾರ್‌ಗೆ ತೆರಳಿದ್ದರು. ಹೊರ ಬರುವಾಗ ಕ್ಷುಲಕ ವಿಚಾರದಲ್ಲಿ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಉಳಿದ ಸ್ನೇಹಿತರು ಹರೀಶ್‌ … Read more

ಹಂದಿ ಅಣ್ಣಿ ಕೊಲೆ ಕೇಸ್‌, ಶಿವಮೊಗ್ಗ ಕೋರ್ಟ್‌ ಸುತ್ತ ಬಂದೋಬಸ್ತ್‌, ಡ್ರೋಣ್‌ ಕಣ್ಗಾವಲು, ಕಾರಣವೇನು?

Handi-Anni-Case-high-alert-in-Shimoga-court

ಶಿವಮೊಗ್ಗ : ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಹಿನ್ನೆಲೆ ಇವತ್ತು ಶಿವಮೊಗ್ಗ ನ್ಯಾಯಾಲಯದ (court) ಸುತ್ತಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಡ್ರೋಣ್‌ ಕ್ಯಾಮರಾಗಳ ಮೂಲಕ ಪೊಲೀಸರು ಕಣ್ಣಾವಲು ನೆಟ್ಟಿದ್ದರು. ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಮಧುಸೂದನ್‌, ಮದನ್‌ ರಾಯ್‌, ಫಾರೂಖ್‌, ಚಂದನ್‌ ಇವತ್ತು ವಿಚಾರಣೆಗೆ ಹಾಜರಾಗಿದ್ದರು. ಕೋರ್ಟ್‌ ಸುತ್ತಮುತ್ತ ಬಿಗಿ ಭದ್ರತೆ ಆರೋಪಿಗಳು ವಿಚಾರಣೆಗೆ ಹಾಜರಾದ ಹಿನ್ನೆಲೆ ಶಿವಮೊಗ್ಗ ನ್ಯಾಯಾಲಯದ (Court) ಸುತ್ತಲು ಬಿಗಿ ಬಂದೋಬಸ್ತ್‌ … Read more