ಹಂದಿ ಅಣ್ಣಿ ಕೊಲೆ ಕೇಸ್‌, ಶಿವಮೊಗ್ಗ ಕೋರ್ಟ್‌ ಸುತ್ತ ಬಂದೋಬಸ್ತ್‌, ಡ್ರೋಣ್‌ ಕಣ್ಗಾವಲು, ಕಾರಣವೇನು?

Handi-Anni-Case-high-alert-in-Shimoga-court

ಶಿವಮೊಗ್ಗ : ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಹಿನ್ನೆಲೆ ಇವತ್ತು ಶಿವಮೊಗ್ಗ ನ್ಯಾಯಾಲಯದ (court) ಸುತ್ತಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಡ್ರೋಣ್‌ ಕ್ಯಾಮರಾಗಳ ಮೂಲಕ ಪೊಲೀಸರು ಕಣ್ಣಾವಲು ನೆಟ್ಟಿದ್ದರು. ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಮಧುಸೂದನ್‌, ಮದನ್‌ ರಾಯ್‌, ಫಾರೂಖ್‌, ಚಂದನ್‌ ಇವತ್ತು ವಿಚಾರಣೆಗೆ ಹಾಜರಾಗಿದ್ದರು. ಕೋರ್ಟ್‌ ಸುತ್ತಮುತ್ತ ಬಿಗಿ ಭದ್ರತೆ ಆರೋಪಿಗಳು ವಿಚಾರಣೆಗೆ ಹಾಜರಾದ ಹಿನ್ನೆಲೆ ಶಿವಮೊಗ್ಗ ನ್ಯಾಯಾಲಯದ (Court) ಸುತ್ತಲು ಬಿಗಿ ಬಂದೋಬಸ್ತ್‌ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, 626 ಕೇಸ್‌ ದಾಖಲು

-Police-raid-on-shops-booke-cotpa-cases

ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಜೆರಾಕ್ಸ್‌ ಅಂಗಡಿ, ಪೆಟ್ಟಿಗೆ ಅಂಗಡಿ ಮತ್ತು ಬೇಕರಿಗಳ ಮೇಲೆ ಪೊಲೀಸರು ದಾಳಿ (Raid) ನಡೆಸಿದ್ದಾರೆ. ಕೋಟ್ಪಾ ಕಾಯ್ದೆ ಅಡಿ 626 ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಾಲೆ, ಕಾಲೇಜು ಆವರಣದಿಂದ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಶಿವಮೊಗ್ಗ – ಎ ಉಪ ವಿಭಾಗದಲ್ಲಿ – 145,  ಶಿವಮೊಗ್ಗ – … Read more

ಹಂದಿಗಾಗಿ ಕೈ ಕೈ ಮಿಲಾಯಿಸಿ ಆಸ್ಪತ್ರೆ ಸೇರಿದ ಯುವಕರು, ದೂರು, ಪ್ರತಿದೂರು ದಾಖಲು

Altercation-between-two-men-crime-news

ಶಿವಮೊಗ್ಗ : ಹಂದಿ (Pig) ವಿಚಾರವಾಗಿ ಇಬ್ಬರು ಯುವಕರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇನ್ನು ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಾಗಿದೆ. ಶಿವಮೊಗ್ಗದ ಗೋಪಾಳದ ಕೆಹೆಚ್‌ಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಅರ್ಜುನ್‌ ಮತ್ತು ಮಂಜುನಾಥ್‌ ಮಧ್ಯೆ ಗಲಾಟೆಯಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರ್ಜುನ್‌ ದೂರಿನಲ್ಲಿ ಏನಿದೆ? ತಮ್ಮ ಪುತ್ರನನ್ನು ಶಾಲೆಯಿಂದ ಕರೆತರಲು ಬೈಕಿನಲ್ಲಿ ಹೋಗುತ್ತಿದ್ದಾಗ ನಾಲ್ವರು ಯುವಕರು ಹಂದಿ ಕಳ್ಳತನ … Read more

ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

ಶಿವಮೊಗ್ಗ : ಕುಟುಂಬದವರು ದುಬೈ (Dubai) ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ದುಬೈ ಪ್ರವಾಸದಿಂದ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಟ್ಯಾಂಕ್‌ ಮೊಹಲ್ಲಾದ ಯುಸುಫ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಬೀರುವಿನಲ್ಲಿದ್ದ 1.10 ಲಕ್ಷ ರು. ಮೌಲ್ಯದ ಚಿನ್ನಾಭರಣ, 28 ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ದುಬೈ ಪ್ರವಾಸ ಮುಗಿಸಿ ಯುಸುಫ್‌ ಅವರ ಕುಟುಂಬ ಶಿವಮೊಗ್ಗಕ್ಕೆ ಹಿಂತಿರುಗುತ್ತಿತ್ತು. ಆದ್ದರಿಂದ … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಬೈಕ್‌ಗಳು ಕಳ್ಳತನ, ಎಲ್ಲೆಲ್ಲಿ? ಹೇಗಾಯ್ತು ಘಟನೆ?

bike theft reference image

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ನಗರದ ವಿವಿಧೆಡೆ ಬೈಕುಗಳ (Bike) ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಈಚೆಗೆ ವಿವಿಧ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ. ಎಲ್ಲೆಲ್ಲಿ ಬೈಕ್‌ ಕಳ್ಳತನವಾಗಿದೆ? ಶರಾವತಿ ನಗರದ 7ನೇ ಅಡ್ಡರಸ್ತೆಯಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿ ಪ್ರಶಿಕುಮಾರ್‌ ಎಂಬುವವರ ಟಿವಿಎಸ್‌ ವಿಕ್ಟರ್‌ ಬೈಕ್‌ ಕಳ್ಳತನವಾಗಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಬೆಳಗ್ಗೆ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋಬನಗರದ ಇಂದಿರಾ ಕ್ಯಾಂಟೀನ್‌ … Read more

ಶಿವಮೊಗ್ಗ RTO ಕಚೇರಿಯಲ್ಲಿ ಶೂ ಕೈಯಲ್ಲಿ ಹಿಡಿದು ಅಧಿಕಾರಿಗಳ ಕಿತ್ತಾಟ

RTO-office-at-jayanagara-in-Shimoga

SHIVAMOGGA LIVE NEWS, 7 FEBRUARY 2025 ಶಿವಮೊಗ್ಗ : ನಗರದ ಸಾರಿಗೆ ಇಲಾಖೆ (RTO) ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಕೈ ಕೈ ಮಿಲಾಯಿಸಿದ್ದಾರೆ. ಶೂ ಕೈಯಲ್ಲಿ ಹಿಡಿದು ಗಲಾಟೆ ಮಾಡಿಕೊಂಡಿದ್ದಾರೆ. ನೂಕಾಟದ ವೇಳೆ ಕಂಪ್ಯೂಟರ್‌ ಒಂದಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಕೆಲಸದ ವಿಚಾರವಾಗಿ ಇಬ್ಬರು ಅಧಿಕಾರಿಗಳ (ಕಾರಣಾಂತರದಿಂದ ಹೆಸರು ಗೌಪ್ಯ) ಮಧ್ಯೆ ಜಗಳವಾಗಿದೆ ಎಂದು ಆರೋಪಿಸಲಾಗಿದೆ. ಒಬ್ಬ ಅಧಿಕಾರಿ ಶೂ ಕೈಯಲ್ಲಿ ಹಿಡಿದುಕೊಂಡು ಹೊಡೆಯುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ. ಗಲಾಟೆಯಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಉಳಿದ ಸಿಬ್ಬಂದಿ ಹಿಡಿದುಕೊಂಡಿದ್ದಾರೆ. … Read more

ಪ್ರತಿದಿನ ಒಂದರಿಂದ ಎರಡು ಸಾವಿರ ರೂ. ಸಂಪಾದಿಸಬಹುದು, ನಂಬಿದ ಮಹಿಳೆಗೆ ಕಾದಿತ್ತು ಆಘಾತ

Instagram-Cyber-Crime-Shimoga-Station.

SHIVAMOGGA LIVE NEWS, 7 FEBRUARY 2025 ಶಿವಮೊಗ್ಗ : ಪಾರ್ಟ್‌ ಟೈಮ್‌ ಉದ್ಯೋಗ ಮಾಡಿ ಪ್ರತಿದಿನ ಒಂದರಿಂದ ಎರಡು ಸಾವಿರ ರೂ.ವರೆಗೆ ಆದಾಯ (Income) ಗಳಿಸಬಹುದು ಎಂದು ನಂಬಿಸಿ ಮಹಿಳೆಗೆ 5.90 ಲಕ್ಷ ರೂ. ವಂಚಿಸಲಾಗಿದೆ. ಮಹಿಳೆಯೊಬ್ಬರು ಹಣ ಕಳೆದುಕೊಂಡಿರುವುದಾಗಿ ಆರೋಪಿಸಿ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಶಿವಮೊಗ್ಗದ ಮಹಿಳೆ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂ ನೋಡುತ್ತಿದ್ದಾಗ ಪಾರ್ಟ್‌ ಟೈಮ್‌ ಜಾಬ್‌ ಜಾಹೀರಾತು ಗಮನಿಸಿದ್ದರು. ಅದರ ಲಿಂಕ್‌ ಕ್ಲಿಕ್‌ ಮಾಡಿದಾಗ … Read more

ಜಿಂಕೆಗೆ ಡಿಕ್ಕಿ ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS, 7 FEBRUARY 2025 ಸೊರಬ : ರಸ್ತೆಯಲ್ಲಿ ದಿಢೀರ್‌ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು (Deer) ತಪ್ಪಿಸಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್‌ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್‌ ಎದುರಾದ ಜಿಂಕೆಗೆ ಬೈಕ್‌ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ … Read more

ಶಿವಮೊಗ್ಗದಲ್ಲಿ ಚಳ್ಳಕೆರೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಮುಂದಾದ ವ್ಯಕ್ತಿಗೆ ಕಾದಿತ್ತು ಶಾಕ್‌

KSRTC-Bus-General-Image-Shimoga-Bangalore

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನ ಮಾಡುತ್ತಿದ್ದ ಖದೀಮರು ಈ ಪುರುಷರ ಜೇಬಿಗೆ ಕೈ ಹಾಕಲು ಆರಂಭಿಸಿದ್ದಾರೆ. ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಪ್ಯಾಂಟ್‌ ಜೇಬಿನಿಂದ ಪರ್ಸ್‌ ಪಿಕ್‌ಪಾಕೆಟ್‌ ಮಾಡಿದ್ದಾರೆ. ಅದರಲ್ಲಿ ದುಬಾರಿ ಬೆಲೆಯ ಬ್ರೇಸ್‌ಲೆಟ್ ಮತ್ತು ನಗದು ಇತ್ತು ಎಂದು ಆರೋಪಿಸಲಾಗಿದೆ. ತೇವರಚಟ್ನಹಳ್ಳಿಯ ಹೊನ್ನೂರಪ್ಪ ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಚಳ್ಳಕೆರೆಗೆ ತೆರಳುವ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತು ಟಿಕೆಟ್‌ ಮಾಡಿಸಲು ಪರ್ಸ್‌ಗೆ … Read more

ಶಿವಮೊಗ್ಗದಲ್ಲಿ ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ಶಾಹಿ ಗಾರ್ಮೆಂಟ್ಸ್‌ ಸಿಬ್ಬಂದಿ ಸಾವು

car-and-bus-mishap-at-sagara-road-in-Shimoga-city.

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಗಾರ್ಮೆಂಟ್ಸ್‌ (garments) ಒಂದರ ಸೀನಿಯರ್‌ ಕ್ವಾಲಿಟಿ ಮ್ಯಾನೇಜರ್‌ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆ ಭಾರ್ಗವಿ ಪೆಟ್ರೋಲ್‌ ಬಂಕ್‌ ಸಮೀಪ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಧಾರವಾಡ ಮೂಲದ ವಿಜಯ ಕುರ್ಲಿ (48) ಮೃತರು. ವಿನೋಬನಗರದಲ್ಲಿರುವ ಸ್ನೇಹಿತರೊಬ್ಬರ ಮನೆಯಿಂದ ವಿಜಯ ಕುರ್ಲಿ ಮಲವಗೊಪ್ಪದ ಶಾಹಿ ಗಾರ್ಮೆಂಟ್ಸ್‌ಗೆ ತೆರಳುತ್ತಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಬಸ್‌ಗೆ ಡಿಕ್ಕಿ … Read more