ಮೆಗ್ಗಾನ್‌ ಆಸ್ಪತ್ರೆಯಿಂದ ಹೊರ ಬಂದು ಆಟೋ ಹತ್ತಿದ್ದ ಮಹಿಳೆಗೆ ಆಘಾತ

Mc-Gann-Hospital-Shimoga

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯಲ್ಲಿ (Hospital) ಜನ ದಟ್ಟಣೆ ಹೆಚ್ಚಿದ್ದ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದು ಒಳಗಿದ್ದ 2.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವ ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ತಬಸುಮ್‌ ಎಂಬುವರ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನವಾಗಿದೆ. ತಬಸುಮ್‌ ತಮ್ಮ ತಾಯಿಯನ್ನು ವೈದ್ಯರ ಬಳಿ ಪರೀಕ್ಷೆಗೆ ಕರೆತಂದಿದ್ದರು. ಈ ಸಂದರ್ಭ ಮೆಗ್ಗಾನ್‌ ಆಶ್ಪತ್ರೆಯಲ್ಲಿ ಜನ ದಟ್ಟಣೆ ಹೆಚ್ಚಿತ್ತು. … Read more

ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ (BAG) ಕಂತೆ ಕಂತೆ ಹಣ ಕಳ್ಳತನ ಮಾಡಲಾಗಿದೆ. ಮನೆ ಕಟ್ಟಲು ಬ್ಯಾಂಕ್‌ನಿಂದ ಹಣ ಬಿಡಿಸಿಕೊಂಡು ಚನ್ನಗಿರಿಯ ತಮ್ಮೂರಿಗೆ ಕೊಂಡೊಯ್ಯುತ್ತಿರುವಾಗ ಘಟನೆ ಸಂಭವಿಸಿದೆ. ಚನ್ನಗಿರಿಯ ಚಿಕ್ಕಮ್ಮ ಎಂಬುವವರಿಗೆ ಸೇರಿದ 1.50 ಲಕ್ಷ ರೂ. ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಚಿಕ್ಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿ 2.19 ಲಕ್ಷ ರೂ. ಹಣವಿತ್ತು. ಘಟನೆ ಸಂಭವಿಸಿದ್ದು ಹೇಗೆ? ಚಿಕ್ಕಮ್ಮ ಚನ್ನಗಿರಿಯಲ್ಲಿ … Read more

ಶಿವಮೊಗ್ಗದಲ್ಲಿ ರಾಜೇಶ್‌ ಹತ್ಯೆ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ

SP Mithun Kumar

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ಬೊಮ್ಮನಕಟ್ಟೆಯಲ್ಲಿ ರೌಡಿ ರಾಜೇಶ್‌ ಶೆಟ್ಟೆ ಹತ್ಯೆ ಮಾಡಿದ್ದ ಆರೋಪಿ ಪತ್ತೆಗೆ ಮೂರು ತಂಡ ರಚಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ (Reaction). ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿ.ಕೆ.ಮಿಥುನ್‌ ಕುಮಾರ್‌, ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರಾಜೇಶ್‌ ಎಂಬಾತನ ಕೊಲೆಯಾಗಿದೆ. ಆರೋಪಿ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ … Read more

BREAKING NEWS – ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

bommanakatte-rajesh-shetty.

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ (Crime). ಮೃತನನ್ನು ರಾಜೇಶ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನಲೆ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬೊಮ್ಮನಕಟ್ಟೆಯಲ್ಲಿ ಯುವಕರು ದಿಢೀರ್‌ ದಾಳಿ ನಡೆಸಿ, ರಾಜೇಶ್‌ ಶಟ್ಟಿಯ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್‌ ಸ್ಪೋಟ, ದಂಪತಿಗೆ ಗಂಭೀರ ಗಾಯ

ಹೊಸನಗರದಲ್ಲಿ ಲೋಕಾಯುಕ್ತ ಪೊಲೀಸ್‌ ಬಲೆಗೆ ಎಪಿಪಿ

Lokayuktha-Raid-General-Image

SHIVAMOGGA LIVE NEWS | 30 NOVEMBER 2024 ಹೊಸನಗರ : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣವೊಂದರ ಆರೋಪಿಯಿಂದ ಲಂಚ (Bribe) ಪಡೆಯುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಪಿಪಿ ರವಿಯನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಲ್ಲಿ ಏನಿದೆ? ಆರೋಪಿಗೆ ಪ್ರಕರಣವನ್ನು ರಾಜಿ ಮಾಡಿಕೊಳ್ಳುವಂತೆ ತಿಳಿಸಿದ್ದ ಎಪಿಪಿ ರವಿ, 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ರೂ. ಹಣ ಪಡೆದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.29ರಂದು ನ್ಯಾಯಾಲಯದಲ್ಲಿ … Read more

ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಕಟಿಸಿದ್ದ ವ್ಯಕ್ತಿಗೆ ಸಂಕಷ್ಟ

Vinobanagara-Police-Station.

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ (Post) ಪ್ರಕಟಿಸಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಮೋಹಿತ್‌ ನರಸಿಂಹಮೂರ್ತಿ ಎಂಬಾತನ ವಿರುದ್ಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. … Read more

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

Crime-News-General-Image

SHIVAMOGGA LIVE NEWS, 28 NOVEMBER 2024 ಸಾಗರ : ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ (Transformer) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪದ ಹಾನಂಬಿ ಹೊಳೆಯ ಮೇಲ್ಭಾಗದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ಸಾಗರದ ಜನ್ನತ್‌ ನಗರದ ನಿವಾಸಿ ಪ್ರಕಾಶ್‌ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಯುವಕ ಬಾರ್‌ ಬೆಂಡಿಂಗ್‌ ಕೆಲಸ ಮಾಡುತ್ತಿದ್ದ. ಬುಧವಾರ ಈತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ … Read more

ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ

Kumsi-Police-Station-Shimoga

SHIMOGA NEWS, 27 NOVEMBER 2024 ಕುಂಸಿ : ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಕುಂಸಿಯ ಕನಕನಗರ ನಿವಾಸಿ ಮಂಜುನಾಥ (35) ಸೀರೆಯಿಂದ (Saree) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮಂಜುನಾಥ್‌ ಅವರ ಪತ್ನಿ ಶಿಲ್ಪಾ ಪಕ್ಕದಲ್ಲೇ ಇದ್ದ ಮಾವನ ಮನೆಗೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದು ಮಗ ಮೃತಪಟ್ಟಿದ್ದ. ಇದರಿಂದ ಮಂಜುನಾಥ್‌ ಖಿನ್ನತೆಗೆ ಒಳಗಾಗಿದ್ದರು. … Read more

ಶಿವಮೊಗ್ಗದಲ್ಲಿ ಬ್ಯಾಂಕ್‌ ಉದ್ಯೋಗಿಗೇ ಲಕ್ಷ ಲಕ್ಷ ರೂ. ವಂಚಿಸಿದ ಸೈಬರ್‌ ವಂಚಕರು

SMS-Fraud-Shimoga-CEN-Police-Station.

SHIMOGA NEWS, 27 NOVEMBER 2024 ಕ್ರೈಮ್‌ ಸುದ್ದಿ : ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ (Bank Employee) ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಶೇ.5 ರಿಂದ ಶೇ.30ರಷ್ಟು ಲಾಭ ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ … Read more

ಪೊಲೀಸರ ಕಂಡು ಎಸ್ಕೇಪ್‌ ಆಗಲು ಯತ್ನಿಸಿದ ಯುವಕರು, ಹಿಡಿದು ವಿಚಾರಿಸಿದಾಗ ಹೊರಬಿತ್ತು ಶಾಕಿಂಗ್‌ ವಿಷಯ

Police-General-Image

SHIMOGA NEWS, 27 NOVEMBER 2024 ಶಿವಮೊಗ್ಗ ಸಿಟಿ : ಪೊಲೀಸ್‌ ವಾಹನ ಕಂಡು ಬೈಕ್‌ಗಳ ಸಹಿತ ಪರಾರಿಯಾಗಲು ಯತ್ನಿಸಿದ್ದ ಮೂವರು ಯುವಕರನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳತನ ಮಾಡಿದ್ದ ಬೈಕುಗಳ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸ್‌ ವಾಹನ ಕಂಡು ಹೆದರಿ ಪರಾರಿಯಾಗಿದ್ದಾಗಿ ಯುವಕರು ತಪ್ಪೊಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್‌ ಕಾಲೇಜು ಸಮೀಪದ ಪುರಲೆ ಬೈಪಾಸ್‌ ಬಳಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬೆಳಗ್ಗೆ ಗಸ್ತು ತಿರುಗುತ್ತಿದ್ದರು. ಬೈಪಾಸ್‌ … Read more