BREAKING NEWS | ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

KS-Eshwarappa-Press-meet-in-Shimoga-Press-Trust

SHIMOGA NEWS, 15 NOVEMBER 2024 : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ. ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ. ಈಚೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ಸಂದರ್ಭ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಏನಿದೆ? ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು, ಇಸ್ಲಾಮೀಕರಣಕ್ಕೆ … Read more

BREAKING NEWS | ಸಿಗಂದೂರು ಬಳಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆ

Siganduru-Bridge-in-sagara-taluk

SAGARA NEWS, 13 NOVEMBER 2024 : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು (Youths) ಕಣ್ಮರೆಯಾಗಿದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಳೆ ಸ್ಟಾಪ್‌ನಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ, ತಪ್ಪಿದ ಅನಾಹುತ

ಹೊಳೆ ಸ್ಟಾಪ್‌ನಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ, ತಪ್ಪಿದ ಅನಾಹುತ

Bus-incident-at-Hole-Bus-stop-in-Shimoga-city.

SHIMOGA NEWS, 13 NOVEMBER 2024 : ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ಹೊಳೆ ಬಸ್‌ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿಯಿಂದ ಶಿವಮೊಗ್ಗ ನಿಲ್ದಾಣಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್‌ ಅಪಘಾತಕ್ಕೀಡಾಗಿದೆ. ಹೊಸ ಸೇತುವೆ ಮೇಲೆ ಬಂದ ಬಸ್‌ ಬಿ.ಹೆಚ್‌.ರಸ್ತೆಯಲ್ಲಿ ಎಡಕ್ಕೆ ತಿರುವು ಪಡೆಯಬೇಕಿತ್ತು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಪೆಟ್ಟಾಗಿದೆ … Read more

ಕಾರು ಡಿಕ್ಕಿಯಾಗಿ ಹುಲಿಕಲ್‌ನ 102 ವರ್ಷದ ಮೀನಜ್ಜ ಕೊನೆಯುಸಿರು

hulikal-meenajja-Krishna-Devaru-succumbed.

HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್‌ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು. ಟ್ಯಾಂಕರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಶತಾಯುಷಿಯ ಸ್ವಾಭಿಮಾನದ ಬದುಕು ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ … Read more

100 ಅಡಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯಗೊಂಡಿದ್ದ ನರ್ಸ್‌ ಸಾವು

ACCIDENT-NEWS-GENERAL-IMAGE.

SHIMOGA NEWS, 12 NOVEMBER 2024 : ಕಾರು, ಬೈಕ್‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ (Nurse) ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆಕೆಯ ಪುತ್ರನಿಗೆ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ವಿನೋಬನಗರ ನಿವಾಸಿ ಉಮಾ (44) ಮೃತ ಮಹಿಳೆ. ಅವರ ಪುತ್ರ ಶ್ರೇಯಸ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ್ದು ಹೇಗೆ? ಉಮಾ ಅವರು ಕ್ಲಿನಿಕ್‌ ಒಂದರಲ್ಲಿ ನರ್ಸ್‌ ವೃತ್ತಿ ಮಾಡುತ್ತಿದ್ದರು. ನ.9ರ ರಾತ್ರಿ ಕಲ್ಲಹಳ್ಳಿಯಲ್ಲಿ ರೋಗಿಯೊಬ್ಬರಿಗೆ ಇಂಜೆಕ್ಷನ್‌ ಕೊಡುವ ಸಲುವಾಗಿ ಪುತ್ರ … Read more

ಲಾರಿ, ಬಸ್‌ ಡಿಕ್ಕಿ, ರಸ್ತೆ ಬದಿಗೆ ಪಲ್ಟಿಯಾದ ಖಾಸಗಿ ಬಸ್

Private-bus-incident-at-chikkajeni-near-ripponpete.

HOSANAGARA NEWS, 12 NOVEMBER 2024 : ಲಾರಿ ಮತ್ತು ಬಸ್‌ (Bus) ಮಧ್ಯೆ ಅಪಾಘವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ರಸ್ತೆ ಬದಿಗೆ ಪಲ್ಟಿಯಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿತ್ತು. ಲಾರಿ ಹೊಸನಗರದಿಂದ ಹೋಗುತ್ತಿತ್ತು. ಬಸ್‌ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿದೆ. … Read more

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಶಿಕ್ಷೆ ಪ್ರಕಟ

Shivamogga-Court-Balaraja-Urs-Road

CRIME NEWS, 11 NOVEMBER 2024 : ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಒಂದೂವರೆ ವರ್ಷ ಜೈಲು (Jail) ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗದ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಏನಿದು ಪ್ರಕರಣ? 2016ರಲ್ಲಿ ಶಿವಮೊಗ್ಗದ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಯುವತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಆಕೆಯ ಫೋಟೊಗಳನ್ನು ಇಟ್ಟುಕೊಂಡು, ದೂರು ನೀಡಿದರೆ ಮರ್ಯಾದೆ … Read more

ಭದ್ರಾವತಿಯ ವ್ಯಕ್ತಿಗೆ 4 ವರ್ಷ ಜೈಲು, 51 ಸಾವಿರ ರೂ. ದಂಡ

Shivamogga-Court-Balaraja-Urs-Road

SHIMOGA NEWS, 10 NOVEMBER 2024 : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 51 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ (Court) ನ್ಯಾಯಾಧೀಶ ಮೋಹನ್‌ ಜೆ.ಎಸ್‌. ಆದೇಶ ನೀಡಿದ್ದಾರೆ.  ದಂಡ ಕಟ್ಟಲು ವಿಫಲವಾದರೆ 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಇನ್ನು, ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 50 ಸಾವಿರ ರೂ. ಮತ್ತು ಸರ್ಕಾರದಿಂದ 2 ಲಕ್ಷ ರೂ. … Read more

ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

Traffic-Police-check-auto-for-meter

SHIMOGA NEWS, 10 NOVEMBER 2024 : ಕಡ್ಡಾಯವಿದ್ದರು ಮೀಟರ್‌ ಬಳಸದ ಆಟೋ (Auto) ಚಾಲಕರಿಗೆ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಸಿದ ಪೊಲೀಸರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅಟೋಗಳನ್ನು ವಶಕ್ಕೆ ಪಡೆದಿದ್ದಾರೆ. 20 ಆಟೋ ವಶಕ್ಕೆ, 100 ಕೇಸ್‌ ಮೀಟರ್ ಬಳಕೆ ಮಾಡದ 20 ಆಟೊಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಯಮ ಉಲ್ಲಂಘಿಸಿದ ಆಟೊ ಚಾಲಕರ ವಿರುದ್ಧ ಐಎಂವಿ ಕಾಯಿದೆ ಅಡಿ 100 ಪ್ರಕರಣಗಳನ್ನು ದಾಖಲಿಸಿದ್ದಾರೆ. … Read more

ಶಾಲೆ ಮುಗಿಸಿ ಮನೆಗೆ ಬಂದು ನೇಣಿಗೆ ಕೊರಳೊಡ್ಡಿದ ಬಾಲಕಿ

Doddapete-Police-Station-General-Image.

SHIMOGA NEWS, 10 NOVEMBER 2024 : ಶಾಲೆ (School) ಮುಗಿಸಿ ಮನೆಗೆ ಬಂದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗದ ಕೆ.ಆರ್‌.ಪುರಂ ಬಡಾವಣೆಯಲ್ಲಿ ಶನಿವಾರ ಘಟನೆ ನಡೆದಿದೆ. ಫಾತೀಮಾ (13) ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯವರು ಕೂಡಲೆ ಫಾತೀಮಾಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಕೊನೆಯುಸಿರೆಳೆದಿದ್ದಳು ಎಂದು ತಿಳಿದು ಬಂದಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಫಾತೀಮಾ 8ನೇ ತರಗತಿ ಓದುತ್ತಿದ್ದಳು. ಇದನ್ನೂ ಓದಿ » ಪತ್ನಿಯ … Read more