ರೈಲ್ವೆ ಹಳಿ ಬಳಿ ಕತ್ತಲಲ್ಲಿ ಕಂಡರು ಇಬ್ಬರು, ಪ್ರಶ್ನಿಸಿದವರ ಮೇಲೆ ಮನಸೋಯಿಚ್ಛೆ ಹಲ್ಲೆ

crime name image

SHIMOGA NEWS, 27 SEPTEMBER 2024 : ರೈಲ್ವೆ ಹಳಿ (Track) ಬಳಿ ರಾತ್ರಿ ಕತ್ತಲಲ್ಲಿ ಕುಳಿತಿದ್ದವರನ್ನು ಪ್ರಶ್ನಿಸಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಆವೇಜ್‌ ಅಲಿ ಮತ್ತು ಅಭಿಷೇಕ್‌ ಎಂಬುವವರು ಗಾಯಗೊಂಡಿದ್ದಾರೆ. ಶೇಷಾದ್ರಿಪುರಂ ಫ್ಲೈ ಓವರ್‌ ಕಳೆಗೆ ಆವೇಜ್‌ ಅಲಿ ಮತ್ತು ಅಭಿಷೇಕ್‌ ಮದ್ಯ ಸೇವಿಸಿ, ರೈಲ್ವೆ ಹಳಿ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಕತ್ತಲಲ್ಲಿ ಇಬ್ಬರು ಎನೋ ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಆಗ … Read more

ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ

Crime-News-General-Image

SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಣಸೋಡು ಗ್ರಾಮದ ರೇಣುಕಾಪ್ರಸಾದ್‌ ಎಂಬುವವರು ಗೋಪಿ ಸರ್ಕಲ್‌ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್‌ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್‌ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ … Read more

ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್‌, ಯಾಕೆ?

Shivamogga-Court-Balaraja-Urs-Road

SHIMOGA NEWS, 27 SEPTEMBER 2024 : ಹಣದ ಪಡೆದು ಜಾಮೀನು (Bail) ನೀಡಲು ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಬೆಂಗಳೂರಿನ ಗಂಗಮ್ಮ ಎಂಬುವವರು ಬಂದಿದ್ದರು. ಆರೋಪಿ ತನಗೆ ಪರಿಚಯ ಇದ್ದಾರೆ ಎಂದು ತಿಳಿಸಿದ್ದರು. ಪ್ರಶ್ನಿಸಿದಾಗ ಗಂಗಮ್ಮಳಿಗು, ಆರೋಪಿಗು ಪರಿಯವಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ ಜಾಮೀನು ನೀಡಿದರೆ 5 ಸಾವಿರ ರೂ. ಹಣ ನೀಡುವುದಾಗಿ ಮಾಮು ಎಂಬಾತ … Read more

ಮಂಗಳೂರಿನಿಂದ ಶಿವಮೊಗ್ಗಕ್ಕೆ ಬಸ್ಸಲ್ಲಿ ಬಂದಿಳಿದ ವ್ಯಕ್ತಿಗೆ ಕಾದಿತ್ತು ಶಾಕ್

KSRTC-Bus-Stand-in-Shimoga

SHIMOGA NEWS, 26 SEPTEMBER 2024 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ (Bike) ಕಳ್ಳತನವಾಗಿದೆ. ಇನ್ನೊಂದೆಡೆ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಇದನ್ನೂ ಓದಿ » ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು

ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು

areca-tree-cut-by-misrceants.

HOLEHONNURU NEWS, 21 SEPTEMBER 2024 : ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು  (Areca Tree) ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ನಾಶ ಮಾಡಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಕಲ್ಲಿಹಾಳ್ ಗ್ರಾಮದ ಷಹಿಮುನ್ನಿಸ ಅವರಿಗೆ ಸೇರಿದ 1.6 ಎಕರೆ ಜಮೀನಿನಲ್ಲಿ ಸುಮಾರು 34 ವರ್ಷದ ಫಲ ನೀಡುತ್ತಿದ್ದ ಅಡಿಕೆ ಮರಗಳಿದ್ದವು. ಬುಧವಾರ ಬೆಳಗ್ಗೆ ಅಡಕೆ ಕಟಾವು ಮಾಡಬೇಕಿತ್ತು. ಮಂಗಳವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಸುಮಾರು 700 ಅಡಿಕೆ ಮರಗಳನ್ನು ಗರಗಸದಿಂದ ಅರ್ಧಕ್ಕೆ ಕತ್ತರಿಸಿದ್ದಾರೆ. … Read more

ಕಾರು ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SAGARA NEWS, 21 SEPTEMBER 2024 : ಬೈಕ್ (Bike) ಮತ್ತು ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸಮೀರ್ (22) ಸಾವಿಗೀಡಾಗಿದ್ದಾನೆ. ಸಾಗರದ ಗಾಂಧಿನಗರ ನಿವಾಸಿ ಸಮೀರ್ ಮಂಗಳವಾರ ತನ್ನ ಬೈಕ್‌ನಲ್ಲಿ ಅಣಲೆಕೊಪ್ಪದಲ್ಲಿರುವ ಸಹೋದರಿ ಮನೆಗೆ ಹೋಗುತ್ತಿದ್ದಾಗ ಗ್ರಾಮಾಂತರ ಠಾಣೆ ಸಮೀಪ ಬೆಳಗಾವಿ ಮೂಲದ ಕಾರೊಂದಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಸಾ ಮಿಲ್‌ನಲ್ಲಿ ನೇಣು … Read more

ಸಾ ಮಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಲೀಕನ ಮಗ

200123 Police Jeep With Light jpg

SHIMOGA NEWS, 24 SEPTEMBER 2024 : ನಗರ ಸಾ ಮಿಲ್‌ (Saw Mill) ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಆತನ ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಇಲಿಯಾಸ್‌ ನಗರದಲ್ಲಿರುವ ಸಾ ಮಿಲ್‌ನಲ್ಲಿ ಅದರ ಮಾಲೀಕರ ಪುತ್ರ ಮಂಜುನಾಥ್‌ (32) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಾಲದ ವಿಚಾರವಾಗಿ ಕೆಲವು ಮಂಜುನಾಥ್‌ಗೆ ಬೆದರಿಕೆ ಒಡ್ಡುತ್ತಿದ್ದರು. ಹಾಗಾಗಿ ಮಂಜುನಾಥ್‌ನನ್ನು ಕೊಲೆಗೈದು ನೇಣಿಗೇರಿಸಲಾಗಿದೆ ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ … Read more

ನಡುರಾತ್ರಿ ಮನೆಗೆ ಬಂದ ಕುಟುಂಬ, ಕೊಠಡಿಯಲ್ಲಿ ಅಡ್ಡಡ್ಡ ಬಿದ್ದಿತ್ತು ಬೀರು

crime name image

SORABA NEWS, 22 SEPTEMBER 2024 : ಕುಟುಂಬದವರೆಲ್ಲ ಈದ್‌ ಮಿಲಾದ್‌ ಮೆರವಣಿಗೆ ನೋಡಲು ತೆರಳಿದ್ದಾಗ ಮನೆಯ ಬಾಗಿಲಿನ ಚಿಲಕ ಮುರಿದು ಕಳ್ಳತನ ಮಾಡಲಾಗಿದೆ. ಕೊಠಡಿಯಲ್ಲಿದ್ದ (ROOM) ಬೀರುವನ್ನು ಅಡ್ಡಲಾಗಿ ಬೀಳಿಸಿ, ಬಾಗಿಲನ್ನು ಮೀಟಿ ತೆಗೆದು ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ತಲಗಡ್ಡೆ ಗ್ರಾಮದ ಮೊಹಮದ್‌ ಸಾದಿಕ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿದ್ದ 70 ಸಾವಿರ ರೂ. ನಗದು, ಚಿನ್ನದ ಸರ, ಉಂಗುರುಗಳು ಸೇರಿ 75 ಸಾವಿರ ರೂ. ಮೌಲ್ಯದ … Read more

ತಲವಾರ್‌ ಹಿಡಿದು ರಾತ್ರಿ ರಸ್ತೆಯಲ್ಲಿ ಓಡಾಟ, ಅರೆಸ್ಟ್‌

Crime-News-General-Image

BHADRAVATHI NEWS, 21 SEPTEMBER 2024 : ರಾತ್ರಿ ವೇಳೆ ತಲವಾರ್‌ ಹಿಡಿದುಕೊಂಡು ನಡು ರಸ್ತೆಯಲ್ಲಿ (Road) ಓಡಾಡುತ್ತ, ಜನರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಯಶವಂತ ಎಂಬಾತನನ್ನು ಬಂಧಿಸಲಾಗಿದೆ. ಈತ ತಲವಾರ್‌ ಹಿಡಿದು ಓಡಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಚಂದ್ರಶೇಖರ್‌ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ತೀರ್ಥಹಳ್ಳಿಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಕಾದಿತ್ತು ಶಾಕ್

Thirthahalli-Police-Station

THIRTHAHALLI NEWS, 20 SEPTEMBER 2024 : ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಮನೆಯೊಳಗೆ (House) ನುಗ್ಗಿದ ಕಳ್ಳರು ನಗದು ಮತ್ತು ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೈಲುಕೊಪ್ಪದ ಮದನ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮದನ್‌ ಅವರು ಮರಗೆಲಸಕ್ಕೆ ತೆರಳಿದ್ದರು. ಅವರ ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ರೂಮ್‌ನಲ್ಲಿದ್ದ ಬೀರುವಿನ ಬಾಗಿಲನ್ನು ತೆಗೆದು 20 ಸಾವಿರ ರೂ. ನಗದು, … Read more