ಶಿವಮೊಗ್ಗದಲ್ಲಿ ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

231221 Law College Students Protest in Shimoga

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು? ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು … Read more

ಕುವೆಂಪು ವಿವಿ ಕ್ಯಾಂಪಸ್’ನಲ್ಲಿ ಪ್ರೊಫೆಸರ್, ವಿದ್ಯಾರ್ಥಿ ಸೇರಿ ಮೂವರ ಮೇಲೆ ಹೆಜ್ಜೇನು ದಾಳಿ

Kuvempu University General Image 1

ಶಿವಮೊಗ್ಗ ಲೈವ್.ಕಾಂ | SHANKARAGHATTA NEWS | 17 ಡಿಸೆಂಬರ್ 2021 ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್’ನಲ್ಲಿ ಹೆಜ್ಜೇನು ದಾಳಿಗೆ ತುತ್ತಾಗಿ ವಿದ್ಯಾರ್ಥಿಯೊಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ದಾಖಲು ಮಾಡಲಾಗಿದೆ. ಇವತ್ತು ಸಂಜೆ ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್’ನ ಕಲಾ ವಿಭಾಗದ ಕಟ್ಟಡದ ಮುಂದೆ ಘಟನೆ ಸಂಭವಿಸಿದೆ. ಪತ್ರಿಕೋದ್ಯಮ ವಿಭಾಗದ ಪ್ರೊ. ಡಿ.ಎಸ್.ಪೂರ್ಣಾನಂದ, ಕಚೇರಿ ಸಹಾಯಕ ನಾಗರಾಜ್, ಸಂಶೋಧನಾ ವಿದ್ಯಾರ್ಥಿ ಪ್ರವೀಣ್ ಎಂಬುವವರ ಮೇಲೆ ಹೆಜ್ಜೇನುಗಳು ದಾಳಿ ಮಾಡಿವೆ. ಕಲಾ … Read more

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಇಬ್ಬರಿಗೆ ಸ್ಥಾನ

Kuvempu-University

ಶಿವಮೊಗ್ಗ ಲೈವ್.ಕಾಂ |SHANKARAGATTA  NEWS | 23 ಅಕ್ಟೋಬರ್ 2021 ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ ಗಿರೀಶ್ ಮತ್ತು ಡಾ.ಬಿ.ಇ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ … Read more

ATNC ಕಾಲೇಜಿನಲ್ಲಿ ಸಾಂಸ್ಕೃತಿಕ ದಿನ, ಭರ್ಜರಿ ಡಾನ್ಸ್ ಮಾಡಿ ವಿದ್ಯಾರ್ಥಿಗಳ ಸಂಭ್ರಮ | PHOTO ALBUM

210921 ATNC College Traditional Day

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಸೆಪ್ಟೆಂಬರ್ 2021 ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಇವತ್ತು ಸಾಂಸ್ಕೃತಿಕ ದಿನಾಚರಣೆ ಮಾಡಲಾಯಿತು. ವಿವಿಧ ಸಾಂಸ್ಕೃತಿಕ ದಿರಿಸು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಕಾಲೇಜು ಆವರಣದ ತುಂಬಾ ಸಂಭ್ರಮದಿಂದ ಓಡಾಡಿದರು. ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೋಟೊ ತೆಗಿಸಿಕೊಂಡು ಸಂಭ್ರಮಿಸಿದರು. ಪ್ರತಿಭಾ ಪುರಸ್ಕಾರ ಇದಕ್ಕೂ ಮೊದಲು ರಾಂಕ್ ವಿಜೇತರಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ … Read more

ತರಗತಿಗೆ ಬಂದವರಿಗೆ ಸಿಕ್ತು ಇಂಜೆಕ್ಷನ್, ಹೇಗಿತ್ತು ಮೊದಲ ದಿನದ ಪದವಿ ಕ್ಲಾಸ್? ಶೇ.40ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದೇಕೆ?

270721 Degree Colleges Restarts at Shimoga District 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜುಲೈ 2021 ನಾಲ್ಕು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನಾರಂಭವಾಗಿದೆ. ಮೊದಲ ದಿನ ಶೇ.60ರಷ್ಟು ಹಾಜರಾತಿ ಇತ್ತು. ಕರೋನಾ ಲಾಕ್‍ ಡೌನ್ ಹಿನ್ನೆಲೆ ಪದವಿ ಕಾಲೇಜುಗಳು ಬಂದ್ ಆಗಿದ್ದವು. ನಾಲ್ಕು ತಿಂಗಳ ಬಳಿಕ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ತರಗತಿಗಳಲ್ಲಿ ಪಾಠಗಳು ಶುರುವಾಗಿದೆ. ಹೇಗಿತ್ತು ಮೊದಲ ದಿನ? ಜಿಲ್ಲೆಯಲ್ಲಿ 8 ಅನುದಾನಿತ ಕಾಲೇಜು, 16 ಸರ್ಕಾರಿ ಪದವಿ ಕಾಲೇಜು, 60ಕ್ಕೂ ಅಧಿಕ ಖಾಸಗಿ ಕಾಲೇಜುಗಳಿವೆ. ಅನುದಾನಿತ … Read more

ಮದುವೆ, ಅಂತ್ಯ ಸಂಸ್ಕಾರಕ್ಕೊಂದು ರೂಲ್ಸು, ಖೇಲೋ ಇಂಡಿಯಾ ಸಭೆಗೊಂದು ಒಂದು ರೂಲ್ಸು, ಇಲ್ಲಿ ಹರಡೋದಿಲ್ವಾ ಸೋಂಕು?

270421 No Covid Rules at Khelo India Meeting 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021 ಖೇಲೋ ಇಂಡಿಯಾ ಯೋಜನೆ ಅಡಿ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‍ನಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ (ಎಸ್‍ಟಿಸಿ) ಸ್ಥಾಪನೆ ಮಾಡಲಾಗುತ್ತಿದೆ. ಈ ಸಂಬಂಧ ಇವತ್ತು ಉಪನ್ಯಾಸಕರ ಸಭೆ ಆಯೋಜಿಸಲಾಗಿತ್ತು. ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಕುಲಸಚಿವ ಎಸ್‍.ಎಸ್‍.ಪಾಟೀಲ್‍ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಒಳಾಂಗಣದಲ್ಲಿ ಸಭೆ ನಡೆಸಲಾಗುತ್ತಿದ್ದು, ಐವತ್ತಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದು ಕೋವಿಡ್ ನಿಯಮದ ಉಲ್ಲಂಘನೆಯಾಗಿದೆ. ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರುಗಳು, ಉಪನ್ಯಾಸಕರು … Read more

ಅರ್ಧಕ್ಕರ್ಧ ಸಹ್ಯಾದ್ರಿ ಕಾಲೇಜು ಜಾಗದಲ್ಲಿ ಖೇಲೋ ಇಂಡಿಯಾ, ಗೇಟು ಹಾರಿ ಹೋಗಿ ವಿಸಿಗೆ ಮುತ್ತಿಗೆ

270421 NSUI Students Protest Against Khelo India 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021 ಸಹ್ಯಾದ್ರಿ ಕಾಲೇಜು ಕ್ಯಾಂಪಸ್‍ನಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಭೆ ನಡೆಸಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಇವತ್ತು NSUI ಕಾರ್ಯಕರ್ತರು ಮುತ್ತಿಗೆ ಹಾಕಿ, ಘೋಷಣೆ ಕೂಗಿದರು. ಖೇಲೋ ಇಂಡಿಯಾ ಯೋಜನೆ ಅಡಿಯಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ಆದರೆ ಈ ಕೇಂದ್ರ ಸ್ಥಾಪನೆಯಿಂದ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ ಎಂದು NSUI ಕಾರ್ಯಕರ್ತರು ಆರೋಪಿಸಿದರು. … Read more

ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದಕ್ಕೆ, ಮತ್ಯಾವಾಗ ನಡೆಯುತ್ತೆ ಎಗ್ಸಾಂ?

ಬೆಂಗಳೂರು : ರಾಜ್ಯಾದ್ಯಂತ 14 ದಿನ ಕರೋನ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥನಾರಾಯಣ್, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರೋನ ಕರ್ಫ್ಯೂ ಮುಗಿದ ಬಳಿಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಿಟಿಯು ಪರೀಕ್ಷೆ ಮುಂದೂಡಿಕೆ ಈ ನಡುವೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಏಪ್ರಿಲ್ 27ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮೌಲ್ಯಮಾಪನ … Read more

BREAKING NEWS | ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ, ಮತ್ಯಾವಾಗ ನಡೆಯುತ್ತೆ?

Kuvempu University General Image 1

ಶಿವಮೊಗ್ಗ ಲೈವ್.ಕಾಂ | KUVEMPU UNIVERSITY | 20 APRIL 2021 ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರ ನಂತರ ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಪದವಿ‌ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಹೊರಬಿದ್ದ … Read more

KSRTC ಮುಷ್ಕರ, ನಾಳೆ ಎಂದಿನಂತೆ ನಡೆಯುತ್ತೆ ಪರೀಕ್ಷೆ, ಮುಂದಿನ ಪರೀಕ್ಷೆಗಳ ಬಗ್ಗೆ ಕುವೆಂಪು ವಿವಿ ನಿರ್ಧಾರವೇನು?

Kuvempu University General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವಿದ್ದರೂ ನಿಗದಿಯಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ವೇಳಾಪಟ್ಟಿ ಪ್ರಕಾರವೇ ನಡೆಯಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ. ಏಪ್ರಿಲ್‌ 7ರಂದು ನಿಗದಿಯಾಗಿರುವ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ  | KSRTC ನೌಕರರ ಮುಷ್ಕರ, ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ? ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಅನಿರ್ದಿಷ್ಟಾವಧಿಯದಾಗಿದ್ದು, ಮುಷ್ಕರ ಮುಂದುವರೆಯುವವರೆಗೆ … Read more