ಬಿಜೆಪಿ ನಾಯಕನಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದ ಕಾಂಗ್ರೆಸ್‌ ಸರ್ಕಾರ, ಕೆಂಡವಾದ ಕೈ ಕಾರ್ಯಕರ್ತರು, ಏನಿದು?

shivamogga-congress-uproar-minister-status-bjp-leader-bd-bhukanth-shikaripura-politics.

ಶಿವಮೊಗ್ಗ: ನಿಗಮ, ಮಂಡಳಿ ಅಧ್ಯಕ್ಷರುಗಳಿಗೆ ರಾಜ್ಯ ಸರ್ಕಾರ ಸಚಿವ ದರ್ಜೆ ಸ್ಥಾನಮಾನ (Minister Status) ನೀಡಿ ಆದೇಶಿಸಿದೆ. ಇದರ ಬೆನ್ನಿಗೆ ಶಿಕಾರಿಪುರ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರು, ಮುಖಂಡರು ಆಕ್ರೋಶಗೊಂಡಿದ್ದಾರೆ. ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಮುಖಂಡರು ಅಚ್ಚರಿಗೊಂಡಿದ್ದು, ಜಿಲ್ಲಾಧ್ಯಕ್ಷರು ಬೆಂಗಳೂರಿಗೆ ದೌಡಾಯಿಸಿದ್ದಾರೆ. ನಾಲ್ವರಿಗೆ ಮಿನಿಸ್ಟರ್‌ ದರ್ಜೆ ಯೋಗ ರಾಜ್ಯ ಸರ್ಕಾರ ಒಟ್ಟು 54 ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದೆ. ರಾಜ್ಯಪಾಲರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಫೆಬ್ರವರಿ 7ರಂದು ಆದೇಶ … Read more

ರಾಜ್ಯ ಸರ್ಕಾರದ ವಿರುದ್ಧ ಡಾ. ಸರ್ಜಿ ಆಕ್ರೋಶ, ಕಲಾಪದಲ್ಲಿ ಸಾಲು ಸಾಲು ನ್ಯೂನತೆ ಎತ್ತಿ ಎಡಿದು ಬೇಸರ

Dr-Dhananjaya-Sarji-in-session.

ಶಿವಮೊಗ್ಗ: ರಾಜ್ಯ ಸರ್ಕಾರವು (Government) ಕಾಂಗ್ರೆಸ್ ಹೈಕಮಾಂಡ್ ಅನ್ನು ಮೆಚ್ಚಿಸುವುದಕ್ಕಾಗಿ ತುರ್ತು ಅಧಿವೇಶನ ಕರೆದಿದೆ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸುವ ಕೆಲಸವನ್ನು ಈ ಸರ್ಕಾರ ಮಾಡಿದೆ ಎಂದು ವಿಧಾನ ಪರಿಷತ್‌ ಕಲಾಪದಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಸುಳ್ಳನ್ನು ಮುತ್ತಿನ ಹಾರದಂತೆ ಪೋಣಿಸಿ ರಾಜ್ಯದ ಜನರ ಕೊರಳಿಗೆ ಹಾಕಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರೇ ತಕ್ಕ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ರಾಜ್ಯದ ಯುವಕರಿಗೆ … Read more

‘ಕುಡುಕರ ರಾಜ್ಯ ಮಾಡಿ ದಕ್ಷಿಣ ಭಾರತದ ನಾಯಕನಾಗಲು ಹೊರಟಿದ್ದಾರೆ ಸಿದ್ದರಾಮಯ್ಯ’, ವಿಜಯೇಂದ್ರ ಗರಂ

BJP-President-BY-Vijayendra-Press-meet-in-shimoga.

ಶಿವಮೊಗ್ಗ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 9ನೇ ಬಜೆಟ್ (Budget) ‘ವಿಕಸಿತ ಭಾರತ’ದ ಗುರಿ ತಲುಪಲು ಪೂರಕವಾದ ಅತ್ಯುತ್ತಮ ಮತ್ತು ಕ್ರಾಂತಿಕಾರಿ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ಲಾಘಿಸಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಈ ಬಜೆಟ್ ಜನಪ್ರಿಯತೆಗಿಂತ ಜನಹಿತಕ್ಕೆ ಆದ್ಯತೆ ನೀಡಿದೆ ಎಂದರು. ಪಾಯಿಂಟ್ 1 ಆರ್ಥಿಕ ಶಿಸ್ತು: ವಿತ್ತೀಯ ಕೊರತೆಯನ್ನು 4.4% ಕ್ಕೆ ಇಳಿಸಿರುವುದು ಮತ್ತು ಮೂಲಭೂತ ಸೌಕರ್ಯಗಳಿಗೆ 12.2 ಲಕ್ಷ ಕೋಟಿ ರೂ. ಮೀಸಲಿಟ್ಟಿರುವುದು … Read more

‘ಅಂತ್ಯಕ್ರಿಯೆಗು ಮೊದಲೇ ಪ್ರತಿಕ್ರಿಯೆಯೇ ಅನುಮಾನಕ್ಕೆ ಕಾರಣʼ, ಶಿವಮೊಗ್ಗದಲ್ಲಿ ವಿಜಯೇಂದ್ರ ಆರೋಪ

-BY-Vijayendra-Press-meet.

ಶಿವಮೊಗ್ಗ: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ (C.J. Roy) ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಯ್ ಆತ್ಮಹತ್ಯೆ ಬಗ್ಗೆ ಇನ್ನೂ ಕುಟುಂಬದವರೇ ದೂರು ನೀಡಿಲ್ಲ. ಅಷ್ಟರಲ್ಲೇ ರಾಜ್ಯ ಸರ್ಕಾರ ತರಾತುರಿಯಲ್ಲಿ ರಾಯ್ ಅವರ ಆಪ್ತ ಜಾರ್ಜ್ ದೂರಿನ ಆಧಾರದ ಮೇರೆಗೆ ಎಸ್‌ಐಟಿ ರಚಿಸಿದೆ. ಹಿಂದೆಯೂ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ … Read more

‘ತುರ್ತು ಅಧಿವೇಶನ ಮುಖ್ಯಮಂತ್ರಿಯ ಕೊನೆಯ ಅಧಿವೇಶನʼ

MLA-SN-Channabasappa-Shimoga.

ಶಿವಮೊಗ್ಗ: ರಾಜ್ಯ ಸರ್ಕಾರ ತರಾತುರಿಯಲ್ಲಿ ಕರೆದಿರುವ ತುರ್ತು ಅಧಿವೇಶನವು ಮುಖ್ಯಮಂತ್ರಿಗಳ ವಿದಾಯದ ಭಾಷಣಕ್ಕೆ (farewell speech) ವೇದಿಕೆಯಾಗುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದ್ದಾರೆ. ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಈ ಅಧಿವೇಶನದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದರು. ” ಮಹಾರಾಷ್ಟ್ರದ ಫಲಿತಾಂಶ ಗಮನಿಸಿದರೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಸರ್ಕಾರ … Read more

‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್‌ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

BY-Raghavendra-speaks-in-Shimoga-city

ಶಿವಮೊಗ್ಗ: ಕೇಂದ್ರ ಸರ್ಕಾರ ನರೇಗಾ ಯೋಜನೆಯಲ್ಲಿದ್ದ ನ್ಯೂನತೆಗಳನ್ನು ಸರಿಪಡಿಸಿ, ಅದರ ಬದಲಾಗಿ ವಿಬಿ ಜಿ – ರಾಮ್ ಜಿ (Ram G) ಯೋಜನೆಯನ್ನು ಜಾರಿಗೆ ತಂದಿದೆ. ನೂತನ ಯೋಜನೆಯನ್ನು ದೇಶಾದ್ಯಂತ ಸಾರ್ವಜನಿಕರು ಸ್ವಾಗತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಮಾತ್ರ ರಾಜಕೀಯ ಲಾಭಕ್ಕಾಗಿ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗ್ರಾಮಗಳ ಅಭಿವೃದ್ಧಿ ಮತ್ತು ಭ್ರಷ್ಟಾಚಾರ ತಡೆಯುವ ದೃಷ್ಟಿಯಿಂದ ಮೋದಿಯವರು ಈ ಕ್ರಾಂತಿಕಾರಿ ಯೋಜನೆಯನ್ನು ತಂದಿದ್ದಾರೆ. ಆದರೆ … Read more

ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?

BY-Vijayendra-Press-meet-in-Shivamogga-BJP-Office

ಶಿವಮೊಗ್ಗ: ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪೈ ಪೋಟಿ ನಡೆಯುತ್ತಿದೆ. ಸರ್ಕಾರ ಬದುಕಿದ್ದೂ ಸತ್ತಂತಾಗಿದೆ ಎಂದು ಬಿಜೆಪಿ ರಾ‍ಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra ) ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, . ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಮತ್ತು ಇಚ್ಛಾಶಕ್ತಿಯ ಕೊರತೆಯಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಜಯೇಂದ್ರ ಏನೇನು ಹೇಳಿದರು? ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು, ರೈತರ, ಬಡವರ ಹಾಗೂ ನೇಕಾರರ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ … Read more

‘ನಾನೇನು ಸನ್ಯಾಸಿಯಲ್ಲ, ಹೈಕಮಾಂಡ್‌ ಶೀಘ್ರ ನಿರ್ಧಾರ ಕೈಗೊಳ್ಳಲಿʼ

Beluru-Gopalakrishna-speaks-to-media-in-Shimoga

ಶಿವಮೊಗ್ಗ: ನಾನೇನು ಸನ್ಯಾಸಿಯಲ್ಲ. ನನ್ನ ಹಕ್ಕು ಕೇಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಪರಿಹಾರ ಮಾಡುವುದರ ಜೊತೆಗೆ ಹೊಸಬರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನು ಹೈಕಮಾಂಡ್‌ ಶೀಘ್ರ ಬಗೆಹರಿಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಚಿವ ಸ್ಥಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಕೇಳಿದ್ದೇನೆ. ಪ್ರಬಲ ಆಕಾಂಕ್ಷಿ ಎಂಬುದನ್ನ ಮನದಟ್ಟು ಮಾಡಿದ್ದೇನೆ. ‘ನಾನು ಹೈಕಮಾಂಡ್‌ ಬಣʼ ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಗೊಂದಲ ಮೂಡಿಸಿದೆ. … Read more

ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಪದಾಧಿಕಾರಿಗಳ ನೇಮಕ, ಯಾರಿಗೆಲ್ಲ ಯಾವ ಜವಾಬ್ದಾರಿ ನೀಡಲಾಗಿದೆ?

BJP-Office-Shimoga

ಶಿವಮೊಗ್ಗ: ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ. ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳಿಗೆ ಮುಖಂಡರು, ಕಾರ್ಯಕರ್ತರನ್ನು ನೇಮಿಸಲಾಗಿದೆ. ಯಾವ್ಯಾವ ಹುದ್ದೆಗೆ ಯಾರೆಲ್ಲ ನೇಮಕ? ಜಿಲ್ಲಾ ಉಪಾಧ್ಯಕ್ಷರು: ಎಸ್. ಜ್ಞಾನೇಶ್ವರ್, ಕೊಳಗಿ ರೇವಣಪ್ಪ, ಗಜಾನನ ರಾವ್‌, ಎನ್. ಪದ್ಮನಿ, ಎ.ಟಿ ನಾಗರತ್ನ, ಎನ್.ಜಿ ನಾಗರಾಜ್, ಸೋಮಶೇಖರ್ ಚಂದುವಳ್ಳಿ, ಪ್ರಕಾಶ್ ತಲಕಾಲಕೊಪ್ಪ. ಪ್ರಧಾನ ಕಾರ್ಯದರ್ಶಿ: ಶಿವರಾಜು, ಎಂ.ಬಿ ಹರಿಕೃಷ್ಣ ಮತ್ತೂರು, ಸಿ.ಹೆಚ್ ಮಾಲತೇಶ್. ಕಾರ್ಯದರ್ಶಿ: ಸುವರ್ಣ ಟೀಕಪ್ಪ, ಶ್ರೀನಿವಾಸ್ ಕನಸಿನಕಟ್ಟೆ, ಶಿವಕುಮಾ‌ರ್ ಕಡಸೂರು, ಸುರೇಖಾ ಮುರುಳಿಧರ್, … Read more

ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್‌ ರಿಯಾಕ್ಷನ್‌, ಏನಂದ್ರು?

BS-Yedyurappa-and-BY-Raghavendra-spoke-to-media-about-result - ಬಿಹಾರ ಚುನಾವಣೆ ಫಲಿತಾಂಶ

ಶಿವಮೊಗ್ಗ: ಬಿಹಾರ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇತ್ತ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಫಲಿತಾಂಶ ಮತ್ತು ಗೆಲುವಿನ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಏನಂದ್ರು? ವಿನೋಬನಗರದ ತಮ್ಮ ಮನೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ. ಎನ್‌ಡಿಎ … Read more