‌BREAKING NEWS | ಭದ್ರಾವತಿಯಲ್ಲಿ ಗುಂಡನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

BHADRAVATHI-BREAKING-NEWS.jpg

ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್‌ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಗುಂಡ ಅಲಿಯಾಸ್‌ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ ಗುಂಡ ಪೊಲೀಸ್‌ ಸಿಬ್ಬಂದಿ ಆದರ್ಶ್‌ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. … Read more

ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ, ಚುನಾವಣೆ ಸಂದರ್ಭ ಏನೇನಾಯ್ತು?

Geetha-Rajakumar-new-president-of-Bhadravathi-nagarasabha

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರಸಭೆ ನೂತನ ಅಧ್ಯಕ್ಷೆಯಾಗಿ (President) ಗೀತಾ ರಾಜಕುಮಾರ್‌ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ನಿಗದಿಯಾಗಿದ್ದ ಚುನಾವಣೆಯಲ್ಲಿ ಗೀತಾ ರಾಜಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ನೂತನ ಅಧ್ಯಕ್ಷೆ ಗೀತಾ ರಾಜಕುಮಾರ್‌ಗೆ ಶಾಸಕ ಬಿ.ಕೆ.ಸಂಗಮೇಶ್ವರ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್‌ ಸೇರಿದಂತೆ ನಗರಸಭೆಯ ಸದಸ್ಯರು, ಪಕ್ಷದ ಪ್ರಮುಖರು ಶುಭಾಶಯ ತಿಳಿಸಿದರು. ಭದ್ರಾವತಿಯ ಅಭಿವೃದ್ಧಿಗೆ ಪೂರಕವಾದ ಕೆಲಸ ಮಾಡಲಿದ್ದೇವೆ. ಶಾಸಕರ … Read more

ಭದ್ರಾವತಿಯ ಹಲವು ಭಾಗದಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರದ ಜೆಪಿಎಸ್ ಮತ್ತು ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಹಿನ್ನೆಲೆ ಫೆ.15ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ನ್ಯೂಟೌನ್, ಆಕಾಶವಾಣಿ, ಕಾಗದನಗರ, ಸುರಗೀತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು, ತಾಂಡ್ಯಾ, ಸಂಕ್ಲೀಪುರ, … Read more

ಭದ್ರಾ ಜಲಾಶಯದಿಂದ ನದಿಗೆ 5800 ಕ್ಯೂಸೆಕ್‌ ನೀರು, ಯಾವಾಗ? ಕಾರಣವೇನು?

Bhadra-Dam-General-Image

SHIVAMOGGA LIVE NEWS, 1 FEBRUARY 2025 ಶಿವಮೊಗ್ಗ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ (Dam) ತುಂಗ-ಭದ್ರಾ ನದಿಗೆ 5800 ಕ್ಯೂಸೆಕ್‌ ನೀರು ಹರಿಸಲು ನಿರ್ಧರಿಸಲಾಗಿದೆ. ಫೆ.5 ರಿಂದ 11ರವರೆಗೆ ನೀರು ಹರಿಸಲು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಪ್ರಾದೇಶಿಕ ಆಯುಕ್ತರ ಆದೇಶದ ಹಿನ್ನೆಲೆ ಫೆ.5ರ ರಾತ್ರಿ 100 ಕ್ಯೂಸೆಕ್‌, ಫೆ.6 ರಿಂದ 11ರವರೆಗೆ ಪ್ರತಿದಿನ 800 ಕ್ಯೂಸೆಕ್‌ನಂತೆ ಒಟ್ಟು … Read more

ಭದ್ರಾವತಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ, ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಏನೆಲ್ಲ ಹೇಳಿದರು?

dss-samavesha-at-bhadravathi-minister-satish-jarakiholi-participated

SHIVAMOGGA LIVE NEWS, 30 JANUARY 2025 ಭದ್ರಾವತಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ತಾಲ್ಲೂಕು ಘಟಕದಿಂದ ಹಳೆ ನಗರದ ವೀರಶೈವ ಸಭಾಭವನದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಮಾವೇಶ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂವಿಧಾನ ಅಶಯ ಕುರಿತು ತಿಳಿಸಿದರು. ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಆರ್.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಹೆಚ್‌.ಪಿ.ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ.ಬಿ.ಕೃಷ್ಣಪ್ಪ, ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ … Read more

ಭದ್ರಾವತಿಯಲ್ಲಿ ಚಿರತೆ ಮೃತದೇಹ ಪತ್ತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

Leapord-at-Bhadravathi-Paper-town

SHIVAMOGGA LIVE NEWS, 27 JANUARY 2025 ಭದ್ರಾವತಿ : ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹ ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ಚಿರತೆ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಲೆ ದೊಡ್ಡ ಸಂಖ್ಯೆಯ ಜನರು ಸೇತುವೆ ಬಳಿ ಜಮಾಯಿಸಿದ್ದರು. ಸಾಯಿಸಿ, ತಂದು ಹಾಕಿರುವ ಶಂಕೆ ಚಿರತೆಯನ್ನು ಸಾಯಿಸಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. … Read more

ಭದ್ರಾವತಿಯ ದೊಡ್ಡೇರಿಯಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Dodderi-Shantha-kumar-deceased-over-transformer-issue

SHIVAMOGGA LIVE NEWS, 23 JANUARY 2025 ಭದ್ರಾವತಿ : ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಅಳವಡಿಕೆ ವಿಚಾರವಾಗಿ ಜಗಳವಾಗಿ ಒಬ್ಬನ ಹತ್ಯೆಯಾಗಿದೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ದೊಡ್ಡೇರಿಯ ಶಾಂತಕುಮಾರ್‌ (35) ಮೃತ ವ್ಯಕ್ತಿ. ಲೇಪಾಕ್ಷಿ ಸೇರಿದಂತೆ ಮೂವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ … Read more

ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್‌ ಕಾಗೋಡು ತಿಮ್ಮಪ್ಪ

kagodu-thimmappa-received-doctorate

SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಡಿಫೆನ್ಸ್‌ ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಪ್ರೊ. ಸಿ.ಎಸ್‌.ಉನ್ನೀಕೃಷ್ಣನ್‌, ಯೋಗ ಗುರು ಭದ್ರಾವತಿಯ ಡಿ.ನಾಗರಾಜ್‌ ಅವರಿಗೆ ಗೌರವ ಡಾಕ್ಟರೇಟ್‌ (Doctorate) ಪದವಿ ಪ್ರದಾನ ಮಾಡಲಾಯಿತು. ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು. ಮಾಜಿ ಎಂಎಲ್‌ಎಯಿಂದ ಶುಭಾಶಯ ಇಂಡಸ್ಟ್ರೀಯಲ್‌ ಕೆಮಿಸ್ಟ್ರಿ ವಿಭಾಗದಲ್ಲಿ … Read more

ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?

Gold-medal-at-kuvempu-university-convocation

SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ನಡೆಯಿತು. ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್‌ ಗೆಹ್ಲೋಟ್‌ ಸ್ವರ್ಣ ಪದಕ (Gold Medal) ಪ್ರದಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?

ಭದ್ರಾವತಿಯಲ್ಲಿ ಭೀಕರ ಅಪಘಾತ, ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

BHADRAVATHI-BREAKING-NEWS.jpg

SHIVAMOGGA LIVE NEWS, 18 JANUARY 2025 ಭದ್ರಾವತಿ : ಟ್ರಾಕ್ಟರ್‌ (Tractor) ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಾರಂದೂರು ಕ್ರಾಸ್‌ ಬಳಿ ಅಪಘಾತ ಸಂಭವಿಸಿದೆ. ವೈದ್ಯಕೀಯ ವಿದ್ಯಾರ್ಥಿನಿ ಕೃತಿ (21) ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದಿಂದ ಕುಟುಂಬದೊಂದಿಗೆ ತಮ್ಮೂರು ತರೀಕೆರೆಯ ಅಮೃತಾಪುರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪೇಪರ್‌ ಟೌನ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿ ಬಸ್ಸುಗಳ … Read more