‘ಅಭಿವೃದ್ಧಿ ನೆಪದಲ್ಲಿ ಅವೈಜ್ಞಾನಿಕ ಕಾಮಗಾರಿ, ಭದ್ರಾವತಿ ಜನ್ನಾಪುರ ಕೆರೆ ಜಾಗ ಕಬಳಿಸಲು ಪ್ಲಾನ್’

Jannapura-Lake-protest-at-Shimoga-DC-office

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ಜನ್ನಾಪುರದ ಕೆರೆ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಕೆರೆ ಜಾಗವನ್ನು ಕೆಲವರು ಕಬಳಿಸಲು ಮುಂದಾಗಿದ್ದಾರೆ. ಇದನ್ನು ತಪ್ಪಿಸಬೇಕೆಂದು ಒತ್ತಾಯಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜನ್ನಾಪುರ ಸರ್ವೇ ನಂ. 70ರಲ್ಲಿನ 52 ಎಕರೆ ಕೆರೆ ಜಾಗವನ್ನು ಸರ್ವೇ ಮೂಲಕ ಸಮರ್ಪಕವಾಗಿ ಗಡಿ ಗುರುತಿಸಬೇಕು. ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಕೆರೆಯ ಹೂಳು … Read more

ಭದ್ರಾವತಿಯ ಸೂಕ್ಷ್ಮ ಪ್ರದೇಶದಲ್ಲಿ ಮದ್ಯದಂಗಡಿ, ತೆರವಿಗೆ ಆಗ್ರಹ

Shashi-Kumar-Gowda-Memorandum-to-ADC

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿರುವ ಮದ್ಯದಂಗಡಿ ತೆರವು ಗೊಳಿಸುವುದೂ ಸೇರಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ ಗೌಡ ಹಾಗೂ ಕರ್ನಾಟಕ ರಕ್ಷಣಾ ಸೇನೆಯ ಶಶಿಕುಮಾರ್ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲವು ಬಾರ್‌ಗಳಲ್ಲಿ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಬಾರ್‌ಗಳನ್ನು ಸ್ಥಳಾಂತರ ಮಾಡಬೇಕು. ಮದ್ಯದಂಗಡಿಗಳಲ್ಲಿ ಅಬಕಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ … Read more

ಭದ್ರಾವತಿಯಲ್ಲಿ ಹಳದಮ್ಮ ದೇವಿ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಜನವೋ ಜನ

Sidi-Utsava-in-Bhadaravathi-old-town-haladamma-temple

SHIVAMOGGA LIVE NEWS | BHADRAVATHI | 06 ಮೇ 2022 ಭದ್ರಾವತಿ ಹಳೆನಗರದ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ಊರ ಹಬ್ಬದ ಅಂಗವಾಗಿ ಮಹಾ ಸಿಡಿ ಉತ್ಸವ ನೆರವೇರಿಸಲಾಯಿತು. ಜಾತ್ರೆ ಮತ್ತು ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಇಲ್ಲಿನ ಸಿಡಿ ಉತ್ಸವ ಮೈ ನವಿರೇಳಿಸುತ್ತದೆ. ಹಲವು ವರ್ಷದಿಂದ ನಡೆದುಕೊಂಡು ಬಂದಿರುವ ಈ ಉತ್ಸವ ಕಣ್ತುಂಬಿಕೊಳ್ಳುವುದಕ್ಕೆ ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಏನಿದು ಸಿಡಿ ಉತ್ಸವ? ಜಾತ್ರೆ ಅಂಗವಾಗಿ ಸಿಡಿ ಕಂಬಕ್ಕೆ … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಸಿದ್ದಾಪುರದ ಯುವಕ ಸ್ಥಳದಲ್ಲೆ ಸಾವು

Bhadravathi News Graphics

ಶಿವಮೊಗ್ಗ ಲೈವ್.ಕಾಂ | ACCIDENT | 28 ಏಪ್ರಿಲ್ 2022 ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೊಸ ಸಿದ್ದಾಪುರ ಗ್ರಾಮದ ಅರುಣ್ (30) ಮೃತ ದುರ್ದೈವಿ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹಿಟ್ ಅಂಡ್ ರನ್ ಅರುಣ್ ಬೈಪಾಸ್ ರಸ್ತೆಯಲ್ಲಿ ಸಿದ್ದಾಪುರದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ವಾಹನ ಅರುಣ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ಇದೆ. ಕೆಳಗೆ ಬಿದ್ದ … Read more

ಐಪಿಎಲ್ ಬೆಟ್ಟಿಂಗ್ ದಂಧೆ, ಬೀಡಾ ಅಂಗಡಿ ಮಾಲೀಕ ಅರೆಸ್ಟ್

Arrest News Graphics

SHIVAMOGGA LIVE NEWS | IPL BETTING | 27 ಏಪ್ರಿಲ್ 2022 IPL ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಬೀಡಾ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಅಶೋಕನಗರದಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಯುವಕನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರದ ಬೀಡಾ ಅಂಗಡಿ ಮಾಲೀಕ ಮಂಜುನಾಥ ಬಂಧಿತ. ಮಂಜುನಾಥ ಬೆಟ್ಟಿಂಗ್ ಹಣವನ್ನು ಕಮಿಷನ್ ಆಧಾರದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹಸ್ತಾಂತರಿಸುವ ವ್ಯವಹಾರ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬೆಟ್ಟಿಂಗ್‌ ಹಣದ ವ್ಯವಹಾರದಲ್ಲಿ ಈತನ ಅಂಗಡಿ ಎದುರು ಪದೇ ಪದೆ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ, ನಿರ್ಮಾಣ ಹಂತದ ಶೆಡ್ ಕುಸಿತ

Shimoga-City-Rain-Woman-with-Umbrella.

SHIVAMOGGA LIVE NEWS | SHIMOGA RAIN | 25 ಏಪ್ರಿಲ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದವರಿಗೆ ಮಳೆ ತುಸು ತಂಪು ನೀಡಿದೆ. ಬೆಳಗ್ಗೆಯಿಂದಲೂ ಜೋರು ಬಿಸಿಲು ಆವರಿಸಿತ್ತು. ಮಧ್ಯಾಹ್ನದ ವೇಳೆಗೆ ವಾತಾವರಣ ಬದಲಾಯಿತು. ಮೋಡ ಕವಿದು, ಗುಡುಗು ಸಹಿತ ಮಳೆ ಸುರಿಯಿತು. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಆರಂಭವಾಯಿತು. ಬಹು ಹೊತ್ತು ಜಿಟಿ ಜಿಟಿ ಮಳೆ ಬಂದಿದೆ. ಶಿವಮೊಗ್ಗ ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಜೋರು … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ಹೋಗುವಾಗ ದುರ್ಘಟನೆ, ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

crime name image

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ತನ್ನೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ಸವಾರ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು ಎನ್.ಆರ್.ಪುರದ ಬಾಳೆಹೊನ್ನೂರು ರಸ್ತೆಯಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಬಿ.ಎಚ್.ಕೈಮರದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಮನೋಜ್ ಎಂಬಾತ ಗಾಯಗೊಂಡಿದ್ದಾನೆ. ಹೇಗಾಯ್ತು ಘಟನೆ? ಶಿವಕುಮಾರ್‌ ಹಾಗೂ ಮನೋಜ್ ಸ್ನೇಹಿತರಾಗಿದ್ದು, ಚಲನಚಿತ್ರ ವೀಕ್ಷಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಸಿನಿಮಾ ನೋಡಿದ ಬಳಿಕ ಶಿವಮೊಗ್ಗದಿಂದ ಭದ್ರಾವತಿಗೆ ಬಂದಿದ್ದರು. ರಾತ್ರಿ 1 … Read more

ಸರ್ಕಾರಿ ಹಾಸ್ಟೆಲ್ ಬೀಗ ಮುರಿದ ಕಳ್ಳತನ, ಏನೆಲ್ಲ ಕಳುವಾಗಿದೆ?

theft case general image

SHIVAMOGGA LIVE NEWS | BHADRAVATHI | 20 ಏಪ್ರಿಲ್ 2022 ಸರ್ಕಾರಿ ಹಾಸ್ಟೆಲ್ ಒಂದರ ಬೀಗ ಒಡೆದು ಬ್ಯಾಟರಿ, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್’ನಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 13ರ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಲಯದ ಕಚೇರಿಯ ಬೀಗ ಮರಿದು ಕಳ್ಳತನ ಮಾಡಲಾಗಿದೆ. 6 ಯುಪಿಎಸ್ ಬ್ಯಾಟರಿಗಳು, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಇನ್ನು, ಅಡುಗೆ ಕೋಣೆಯ ಬೀಗ ಮುರಿದು, ಭೋಜನಾಲಯದಲ್ಲಿದ್ದ … Read more

ಭದ್ರಾವತಿಯಲ್ಲಿ ವಾಹನ ದಟ್ಟಣೆ, ಅಪಘಾತದ ಭೀತಿ, ಹಂಪ್’ಗಾಗಿ ಹೋರಾಟ

hashi-kumar-gowda-JDU-Protest-in-Bhadravathi

SHIVAMOGGA LIVE NEWS | BHADRAVATHI | 19 ಏಪ್ರಿಲ್ 2022 ಭದ್ರಾವತಿ ನಗರದ ಕೆಳಸೇತುವೆಯಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ವೃತ್ತದವರೆಗಿನ ರಸ್ತೆಗೆ ಹಂಪ್ ಅಳವಡಿಸುವಂತೆ ಆಗ್ರಹಿಸಿ ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್‌ ಎಸ್.ಗೌಡ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂಭಾಗ ಶಕಶಿಕುಮಾರ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಡರ್‌ಬ್ರಿಡ್ಜ್ನಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ಸರ್ಕಲ್‌ವರೆಗೂ ರಸ್ತೆ ಅಗಲೀಕರಣ ಮಾಡಲಾಗಿದೆ. ಹೊಸದಾಗಿ ರಸ್ತೆಯನ್ನು ನಿರ್ಮಿಸಲಾಗಿದೆ. ಕಡದಕಟ್ಟೆ ಬಳಿ ರೈಲ್ವೆ ಮೇಲ್ವೇತುವೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಬದಲಿ … Read more

ಸದಸ್ಯತ್ವ ಅಭಿಯಾನ, ಪಕ್ಷದ ಮುಖಂಡರಿಗೆ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್, ಏನದು?

DK-Shivakumar-in-Bhadravathi

SHIVAMOGGA LIVE NEWS | 6 ಏಪ್ರಿಲ್ 2022 ಕೆಲವು ಕ್ಷೇತ್ರಗಳಲ್ಲಿ ಸದಸ್ಯತ್ವ ಅಭಿಯಾನ ನಿಧಾನಗತಿಯಲ್ಲಿ ನಡೆಯುತ್ತಿದೆ. ಮುಖಂಡರು ಸದಸ್ಯತ್ವ ಅಭಿಯಾನವನ್ನು ಬಿರುಸುಗೊಳಿಸಬೇಕು. ಇಲ್ಲವೇ ಮನೆಗೆ ನಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ನಡೆದ ಪಕ್ಷದ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಶಿಕಾರಿಪುರ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ನಿಧಾನಗತಿಯಲ್ಲಿ ಸಾಗಿದೆ. ಶಿವಮೊಗ್ಗದಲ್ಲಿ 23 ಸಾವಿರ ಹಾಗೂ … Read more