ಮಹಾರಾಷ್ಟ್ರದಿಂದ ಬಂದವರಿಗೆ ರಾತ್ರೋರಾತ್ರಿ ಕ್ವಾರಂಟೈನ್‌ಗೆ ಯತ್ನ, ಭದ್ರಾವತಿ ಜಂಕ್ಷನ್‌ನಲ್ಲಿ ಸ್ಥಳೀಯರ ಆಕ್ರೋಶ

230520 Bhadravathi Junction Quarantine Clash 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 23 ಮೇ 2020 ಮಹಾರಾಷ್ಟ್ರದಿಂದ ಬಂದವರ ಹಾಸ್ಟೆಲ್ ಕ್ವಾರಂಟೈನ್‍ಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಭದ್ರಾವತಿ ತಾಲೂಕು ಜಂಕ್ಷನ್‍ನಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಗಾಗಲಿ, ಗ್ರಾಮಸ್ಥರಿಗಾಗಲಿ ತಿಳಿಸದೆ ಏಕಾಏಕಿ ಕ್ವಾರಂಟೈನ್ ಮಾಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಹಾರಾಷ್ಟ್ರದಿಂದ ಬಂದಿರುವ 18 ಮಂದಿಯನ್ನು ಇಲ್ಲಿನ ಸರ್ಕಾರಿ ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ್ ಮಾಡಲು ಕರೆತರಲಾಗಿತ್ತು. ಗ್ರಾಮಸ್ಥರಿಗೆ ತಿಳಿಸದೆಯೆ ಏಕಾಏಕಿ ಬಂದು ಕ್ವಾರಂಟೈನ್ ಮಾಡುತ್ತಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ 3 ದಿನದಲ್ಲಿ ನಡೆಯಬೇಕಿದ್ದ 4 ಬಾಲ್ಯ ವಿವಾಹಕ್ಕೆ ಬ್ರೇಕ್, ಎಲ್ಲೆಲ್ಲಿ ನಡೆಯಲಿದ್ದವು ಮದುವೆ?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020 ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನದಲ್ಲಿ ನಾಲ್ಕು ಕಡೆ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಅಲ್ಲದೆ ಪೋಷಕರಿಗೆ ತಿಳಿ ಹೇಳಿ, ಮದುವೆ ನಡೆಸದಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ಪ್ರಕರಣ 1 ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯೊಬ್ಬಳ ಮದುವೆ ನಿಶ್ಚಯ ಮಾಡಲಾಗಿತ್ತು. ಮಾಹಿತಿ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಮದುವೆಯನ್ನು ನಿಲ್ಲಿಸಿದ್ದಾರೆ. ಪ್ರಕರಣ 2 ಶಿಕಾರಿಪುರದ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳ … Read more

ಮಾಸ್ಕ್ ಹಾಕದೆ ಭದ್ರಾವತಿಯಲ್ಲಿ ಆಸ್ಪತ್ರೆಗೆ ಬಂದವರಿಗೆ ಬಿತ್ತು ದಂಡ, ಎಷ್ಟು ಗೊತ್ತಾ ಫೈನ್?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 10 ಮೇ 2020 ಮಾಸ್ಕ್ ಧರಿಸದೆ ಆಸ್ಪತ್ರೆಗೆ ಬಂದವರಿಗೆ ವೈದ್ಯಾಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ. ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮಾಸ್ಕ್ ಧರಿಸದೆ ಬಂದವರಿಗೆ ದಂಡ ವಿಧಿಸಲಾಗಿದೆ. ಮೊದಲ ದಿನ 10 ಮಂದಿಗೆ ದಂಡ ಹಾಕಲಾಗಿದೆ. ಒಬ್ಬರಿಗೆ 50 ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮಾಸ್ಕ್ ಧರಿಸದೆ ಬಂದಿದ್ದಕ್ಕಾಗಿ ಅಸ್ಪತ್ರೆ ಪ್ರವೇಶವನ್ನು ನಿರಾಕರಿಸಲಾಗಿದೆ. ತಾಲೂಕು ವೈದ್ಯಾಧಿಕಾರಿ ಡಾ.ಓ.ಮಲ್ಲಪ್ಪ, ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್, ಮುನಿರಾಜ್, … Read more

ಎರಡು ಲಕ್ಷ ರೂ. ಮೊತ್ತದ ಮೊಬೈಗಳನ್ನು ಕದ್ದು ಮಾರಾಟ ಮಾಡುತ್ತಿದ್ದವನು ಭದ್ರಾವತಿಯಲ್ಲಿ ಅರೆಸ್ಟ್

030520 Mobile Thief Arrest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಮೇ 2020 ಎರಡು ಲಕ್ಷ ರುಪಾಯಿ ಮೊತ್ತದ ಮೊಬೈಲ್‌ಗಳನ್ನು ಕಳ್ಳತನ ಮಾಡಿ, ಮಾರಾಟ ಮಾಡುತ್ತಿದ್ದ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ತಿಪ್ಲಾಪುರ ಕ್ಯಾಂಪ್‌ನ ನಿವಾಸಿ ಅಬ್ದುಲ್‌ ಖಾದರ್‌ (30) ಬಂಧಿತ. ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಹಲವು ಬ್ರಾಂಡ್‌ಗಳ ಮೊಬೈಲ್‌ಗಳು ಈತನ ಬಳಿ ಪತ್ತೆಯಾಗಿದೆ. ಇವುಗಳ ಮೊತ್ತ 2.08 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ. ಭದ್ರಾವತಿ ಡಿವೈಎಸ್‌ಪಿ ಸುಧಾಕರ್‌ ನಾಯಕ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ … Read more

ದಾವಣಗೆರೆಯಿಂದ ಒಂದೇ ಬೈಕಿನಲ್ಲಿ ಭದ್ರಾವತಿಗೆ ಬಂದಿದ್ದ ಆರು ಜನಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 2 ಮೇ 2020 ಪಕ್ಕದ ಜಿಲ್ಲೆ ದಾವಣಗೆರೆಯಿಂದ ಭದ್ರಾವತಿಯ ಸಂಬಂಧಿಕರ ಮನೆಗೆ ಒಂದೇ ಬೈಕಿನಲ್ಲಿ ಬಂದಿದ್ದ ಆರು ಜನರನ್ನು ಹೆಚ್ಚಿನ ತಪಾಸಣೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ದಾವಣಗೆರೆಯಲ್ಲಿ ಕರೋನ ಪಾಸಿಟಿವ್ ಪ್ರಕರಣ ಹೆಚ್ಚಾದ ಹಿನ್ನೆಲೆ ಪತ್ನಿ, ನಾಲ್ಕು ಮಕ್ಕಳ ಜೊತೆಗೆ ವ್ಯಕ್ತಿಯೊಬ್ಬ ಭದ್ರಾವತಿಯ ಸಂಬಂಧಿಕರ ಮನೆಗೆ ಬಂದಿದ್ದರು. ವಿಚಾರ ತಿಳಿಯುತ್ತಿದ್ದಂತೆ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಅರೋಗ್ಯ ತಪಾಸಣೆ ನಡೆಸಿದರು. ಹೆಚ್ಚಿನ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಯಿತು. ಇನ್ನು, … Read more

ಭದ್ರಾವತಿ ಸಿಟಿ, ಹಲವು ಗ್ರಾಮಗಳಲ್ಲಿ ಮೇ 2ರಂದು ಬೆಳಗ್ಗೆಯಿಂದ ಸಂಜೆತನಕ ಕರೆಂಟ್ ಇರಲ್ಲ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 1 ಮೇ 2020 ಭದ್ರಾವತಿ ತಾಲೂಕಿನ ವಿವಿಧೆಡೆ ಮೇ 2ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ಭದ್ರಾವತಿ ಸಿಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕರೆಂಟ್‌ ಇರಲ್ಲ ಅಂತಾ ಮೆಸ್ಕಾಂ ಭದ್ರಾವತಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. MRS ಉಪಕೇಂದ್ರದಿಂದ ವಿದ್ಯುತ್‌ ಸರಬರಾಜು ಬದಲಿಸಿ ಕಡೂರು – ಶಿವಮೊಗ್ಗ 110 ಕೆವಿ ಮಾರ್ಗಕ್ಕೆ ಬದಲಿಸುವ ಹಿನ್ನೆಲೆ ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯೆಯ ಸಾದ್ಯತೆ ಇದೆ. … Read more

ಬಾರ್ ಕಳ್ಳತನ ಮಾಡಿದ್ದ ನಾಲ್ಕು ಮಂದಿ ಭದ್ರಾವತಿಯಲ್ಲಿ ಅರೆಸ್ಟ್

250420 Paper Town Police Arrest Four in Bar Theft cAse 1

ಶಿವಮೊಗ್ಗ ಲೈವ್.ಕಾಂ | BHADRAVATHI | 25 ಏಪ್ರಿಲ್ 2020 ಬಾರ್‍ನಲ್ಲಿ ಮದ್ಯ ಕಳ್ಳತನ ಮಾಡಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ 20 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ಡಿ.ಜಿ.ಹಳ್ಳಿ ತಾಂಡದ ಸೋಮಶೇಖರ್ ಅಲಿಯಾಸ್ ಪಂದಿ (29), ಮಣಿಕಂದನ್ ಅಲಿಯಾಸ್ ಮಣಿಕಂಠ (27), ಆನಂದ ಅಲಿಯಾಸ್ ಹೊಟ್ಟೆ (28), ರಾಜಾನಾಯ್ಕ ಅಲಿಯಾಸ್‌ ಗುಂಡ (19) ಎಂಬುವವರನ್ನು ಬಂಧಿಸಲಾಗಿದೆ. ಏಪ್ರಿಲ್‌ 16ರಂದು ರಾತ್ರಿ ಬಾರಂದೂರು ಗ್ರಾಮದ ವೈನ್‌ ಶಾಪ್‌ ಒಂದರಲ್ಲಿ ಕಳ್ಳತನ … Read more

ಭದ್ರಾವತಿಯ ವೈನ್ ಶಾಪ್‌ನಿಂದ ಎಣ್ಣೆ ಕದ್ದವರು 24 ಗಂಟೆಯಲ್ಲೇ ಅರೆಸ್ಟ್, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 13 ಏಪ್ರಿಲ್ 2020 ವೈನ್ ಸ್ಟೋರ್ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯಲ್ಲೇ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಲಾಕ್‌ಡೌನ್ ಬಳಿಕ ಮದ್ಯ ಸಿಗದೇ ಸಾವಿರಾರು ಜನ ಪರಿತಪಿಸುತ್ತಿದ್ದಾರೆ. ಕೆಲವು ಕಡೆ ಸಿಕ್ಕ ಮದ್ಯಕ್ಕೆ ನಾಲ್ಕೈದು ಪಟ್ಟು ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ವೈನ್‌ ಶಾಪ್‌ನಿಂದ ಮದ್ಯ ಕದ್ದು ಹಣ ಮಾಡಿಕೊಳ್ಳಲು ಮುಂದಾಗಿದ್ದ ಇಬ್ಬರು ಈಗ ಪೊಲೀಸರ ಅತಿಥಿಯಾಗಿದ್ದಾರೆ. 24 ಸಾವಿರದ ಎಣ್ಣೆ ಕದ್ದರು … Read more

ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದವನು ಮೆಗ್ಗಾನ್ ಆಸ್ಪತ್ರೆ ಕ್ವಾರಂಟೈನ್‌ಗೆ

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020 ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದು ಪರಿಚಯದವರ ಮನೆಯಲ್ಲಿದ್ದ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 28 ದಿನ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಿಂದ ತಬ್ಬೀರ್ ಸಾಬ್ (55) ಎಂಬಾತ ಭದ್ರಾವತಿಗೆ ಆಗಮಿಸಿದ್ದಾನೆ. ಈತ ಏಪ್ರಿಲ್ 10ರಂದು ದೊಣಬಘಟ್ಟದ  ಪರಿಚಯದವರ ಮನೆಗೆ ಬಂದಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೆ ಆರೋಗ್ಯ ಇಲಾಖೆ ಅಧಿಕಾರಿಗಳು ತಬ್ಬೀರ್ ಸಾಬ್‍ನನ್ನು … Read more

ಭದ್ರಾವತಿಯಲ್ಲಿ ಬೀದಿಗಿಳಿದ ವಕೀಲರು, ರಸ್ತೆ ಅಗಲೀಕರಣದಲ್ಲಿ ತಾರತಮ್ಯ ಆಕ್ರೋಶ, ಸಮಸ್ಯೆ ಏನು? ಏನೆಲ್ಲ ತಾರತಮ್ಯ ಆಗಿದೆ ಗೊತ್ತಾ?

090320 Bhadravathi Advocates Protest for Road 1

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ನಿಗದಿತ ಅಳತೆಗಿಂತಲೂ ಕಡಿಮೆ ಅಳತೆಯಲ್ಲಿ ರಸ್ತೆ ಅಗಲೀಕರಣ ಮಾಡುತ್ತಿರುವುದನ್ನು ಖಂಡಿಸಿ ಭದ್ರಾವತಿಯಲ್ಲಿ ವಕೀಲರು, ವಿವಿಧ ಸಂಘಟನೆಗಳು ಮತ್ತು ನಾಗರೀಕರು ಇವತ್ತು ಬೃಹತ್ ಪ್ರತಿಭಟನೆ ನಡೆಸಿದರು. ರಾಜಕೀಯ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ರಸ್ತೆ ಅಗಲೀಕರಣ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿ ನ್ಯಾಯಾಲಯದಿಂದ ಅಂಬೇಡ್ಕರ್ ಸರ್ಕಲ್’ವರೆಗೆ ವಕೀಲರು ಮೆರವಣಿಗೆ ನಡೆಸಿದರು. ಇವರ ಜೊತೆಗೆ ನಾಗರೀಕರು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಸ್ತೆ ಅಗಲೀಕರಣದಲ್ಲಿ … Read more