ಭದ್ರಾ ಡ್ಯಾಂ ಮುಂದೆ ಭೀಕರ ಅಪಘಾತ, ನವುಲೆಯ ಇಬ್ಬರ ದುರ್ಮರಣ, ಪೊಲೀಸರ ವಿರುದ್ಧ ರೊಚ್ಚಿಗೆದ್ದ ಜನರಿಂದ ರಸ್ತ ತಡೆ

240220 Accident in Lakkavalli 1

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 24 ಫೆಬ್ರವರಿ 2020 ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಪೊಲೀಸರೆ ಕಾರಣ ಎಂದು ಆರೋಪಿಸಿ ಲಕ್ಕವಳ್ಳಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೇಗಾಯ್ತು ಅಪಘಾತ? ಬಿಆರ್’ಪಿ ಮತ್ತು ಲಕ್ಕವಳ್ಳಿ ನಡುವಿನ ಹೈವೇಯಲ್ಲಿ ಚಿಕ್ಕಮಗಳೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಬಿಆರ್’ಪಿ ಮತ್ತು ಲಕ್ಕವಳ್ಳಿ ನಡುವಿನ ರಸ್ತೆಯಲ್ಲಿ ಚಿಕ್ಕಮಗಳೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ … Read more

ಭದ್ರಾವತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ, 5.50 ಕೋಟಿ ಹಣ ಕೂಡಲೇ ಬಿಡುಗಡೆಗೆ ಆಗ್ರಹ

170220 Bhadravathi Ambedkar Bhavana Protest 1

ಶಿವಮೊಗ್ಗ ಲೈವ್.ಕಾಂ | BHADRAVATHI | 17 ಫೆಬ್ರವರಿ 2020 ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭದ್ರಾವತಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿದೆ. 2017ರಲ್ಲಿ ಆರಂಭವಾದ ಕಾಮಗಾರಿ ನಿಧಾನಗತಿಯಲ್ಲಿದ್ದು, ಹೆಚ್ಚುವರಿಯಾಗಿ 5.50 ಕೋಟಿ ರೂ. ಅಗತ್ಯವಿದೆ. ಇದನ್ನು ಬಿಡುಗಡೆ ಮಾಡಲು ಮಿನಮೇಷ ಎಣಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು … Read more

ಹೊಳೆಹೊನ್ನುರು ಬಳಿ ಭೀಕರ ಅಪಘಾತ, ಬೈಕ್, ಮದುವೆ ದಿಬ್ಬಣದ ಬಸ್ ಮುಖಾಮುಖಿ ಡಿಕ್ಕಿ, ಗರ್ಭಿಣಿ ಸೇರಿ ಮೂವರು ಸಾವು

ಶಿವಮೊಗ್ಗ ಲೈವ್.ಕಾಂ | BHADRAVATHI | 16 ಫೆಬ್ರವರಿ 2020 ಮದುವೆ ದಿಬ್ಬಣದ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಡಲ ವಿಠಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಹನುಂತಾಪುರದ ಈರಪ್ಪ (45), ಆಶಾ (34), ಹೇಮಂತ್ (7) ಮೃತ ದುರ್ದೈವಿಗಳು. ಹೊಳೆಹೊನ್ನೂರು ಆಸ್ಪತ್ರೆಗೆ ತೆರಳುವಾಗ ದುರ್ಘಟನೆ ಸಂಭಿವಿಸಿದೆ. ಜವರಾಯನಾದ ದಿಬ್ಬಣದ ಬಸ್ ಆರೋಗ್ಯ ತಪಾಸಣೆಗಾಗಿ ಗರ್ಭಿಣಿ ಪತ್ನಿಯನ್ನು ಈರಪ್ಪ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. … Read more

ಅಪರಿಚಿತ ವಾಹನ ಡಿಕ್ಕಿ, ಭದ್ರಾವತಿ ಪೇಪರ್ ಟೌನ್ ನಿವಾಸಿ ಸ್ಥಳದಲ್ಲೆ ಸಾವು

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 3 ಫೆಬ್ರವರಿ 2020 ಅಪರಿಚಿತ ವಾಹನ ಡಿಕ್ಕಿ ಹೊಡೆದು ಭದ್ರಾವತಿ ಪೇಪರ್ ಟೌನ್ ನಿವಾಸಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಜ್ಜಿನಿಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದೆ. ಕೇಬಲ್ ಮಂಜುನಾಥ ಗೌಡ (35) ಮೃತ ದುರ್ದೈವಿ. ಭದ್ರಾವತಿ ತಾಲೂಕು ಅಂತರಗಂಗೆಯಲ್ಲಿ ಕೇಬಲ್ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ. ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದಾಗ, ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪೇಪರ್ … Read more

ಸಬ್ ಇನ್ಸ್’ಪೆಕ್ಟರ್ ಅಮಾನತಿಗೆ ಆಗ್ರಹ, ಭದ್ರಾವತಿಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಶಿವಮೊಗ್ಗ ಲೈವ್.ಕಾಂ | BHADRAVATHI | 25 ಜನವರಿ 2020 ಗ್ರಾಮಾಂತರ ಪಿಎಸ್‌ಐ ಸುನಿಲ್ ಕುಮಾರ್ ಅಮಾನತಿಗೆ ಒತ್ತಾಯಿಸಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ನೇತೃತ್ವದಲ್ಲಿ ಮಿನಿವಿಧಾನಸೌಧ ಮುಂಭಾಗ ಅಹೋರಾತ್ರಿ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ನಡೆದಿದೆ. ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಕೂಡ್ಲಿಗೆರೆ, ಜಿಪಂ ವ್ಯಾಪ್ತಿಯ ಅರಳಿಹಳ್ಳಿಯಲ್ಲಿ ಜಿಪಂ ಸದಸ್ಯ ಎಸ್.ಮಣಿಶೇಖರ್ ಸಹಸ್ರಾರು ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಬಳಸೋಕೆರೆ ಅಭಿವೃದ್ಧಿಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಕೆರೆಪಕ್ಕದ, ಅದೇ ಗ್ರಾಮದ ಮಲ್ಲಿಕಾರ್ಜುನ, ಚಂದ್ರ, ಹೇಮಕುಮಾರ್, ನಾಗರಾಜ್ ಎಂಬ ಸಹೋದರರು … Read more

ಭದ್ರಾವತಿ ತಾಲೂಕು ಪಂಚಾಯಿತಿಯಲ್ಲಿ ಆಮಂತ್ರಣ ಪತ್ರಿಕೆ ಕಿರಿಕ್, ಅರ್ಧಕ್ಕೆ ನಿಂತು ಹೋಯ್ತು ಮೀಟಿಂಗ್

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಜನವರಿ 2020 ಸಮಾಜ ಕಲ್ಯಾಣ ಇಲಾಖೆಯ ನೂತನ ಕಟ್ಟಡ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಾಪಂ ಸ್ಥಾಯಿ ಸಮಿತಿ ಸದಸ್ಯರು ಆಶಾ ಶ್ರೀಧರ್ ನೇತೃತ್ವದಲ್ಲಿ ಸಭೆಯಿಂದ ಹೊರ ನಡೆದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್ ಜ.27ರಂದು ನಿಗದಿಪಡಿಸಿರುವ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕೊಟ್ಟಾಗ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಲು ಮುಂದಾದ ದೂದ್‌ಪೀರ್ ಜತೆ … Read more

ಭದ್ರಾವತಿಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಯತ್ನದ ಆರೋಪ, ಜಿಲ್ಲಾ ಪಂಚಾಯಿತಿ ಸದಸ್ಯ ಆಸ್ಪತ್ರೆಗೆ ದಾಖಲು

160120 ZP Member Assault in Bhadravathi 1

ಶಿವಮೊಗ್ಗ ಲೈವ್.ಕಾಂ | SHIMOGA | 15 ಜನವರಿ 2020 ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಭದ್ರಾವತಿಯಲ್ಲಿ ಹಲ್ಲೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡ ಸೇರಿದಂತೆ ಹಲವು ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಹಲ್ಲೆಗೇನು ಕಾರಣ? ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಹಲ್ಲೆಗೊಳಗಾಗಿದ್ದಾರೆ. ಭದ್ರಾವತಿ ತಾಲೂಕು ಅರಳಿಹಳ್ಳಿ ಕೆರೆಯ ಹೂಳು ತೆಗಿಸುವ ಕಾರ್ಯ ನಡೆಯುತ್ತಿತ್ತು. ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುತ್ತಿದ್ದ ಕಾಮಗಾರಿಯ ಪರಿಶೀಲನೆಗೆ ಮಣಿಶೇಖರ್ ಅವರು ತೆರಳಿದ್ದರು. ಈ ವೇಳೆ … Read more

ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಭದ ವೈಕುಂಠ ಏಕಾದಶಿ, ತನ್ನಿಂತಾನೆ ತೆರೆದುಕೊಳ್ಳುತ್ತವೆ ವೈಕುಂಠದ ಏಳು ಬಾಗಿಲು

060120 bhadravathi vaikunta ekadashi 1

ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020 ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆ ಐದು ಗಂಟೆಗಾಗಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ಬಳಿಕ ದೇವಾಲಯದ ಮುಂದೆ ಸ್ಥಾಪಿಸಲಾಗಿರುವ ಏಳು ಬಾಗಿಲು ತಾನಾಗಿಯೇ ತೆರೆದುಕೊಳ್ಳುವಂತೆ ರೂಪಿಸಲಾಗಿತ್ತು. ಗುಡಿಯೊಳಗೆ ಆಸಿನರಾಗಿದ್ದ ಶ್ರೀ ಲಕ್ಷ್ಮೀ ಹಾಗೂ ನರಸಿಂಹ ಸ್ವಾಮಿಯ ದರ್ಶನವನ್ನು ಸಾವಿರಾರು ಭಕ್ತರು ಪಡೆದುಕೊಂಡರು. ವೈಕುಂಠ ಏಕಾದಶಿಯಂದು 33 ಕೋಟಿ ದೇವತೆಗಳು ನರಸಿಂಹನ ದರ್ಶನಕ್ಕಾಗಿ … Read more

ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ, ಸಂಬಂಧಿಕರಿಂದ ಕೊಲೆ ಆರೋಪ

Suicide-Hanging-General

ಶಿವಮೊಗ್ಗ ಲೈವ್.ಕಾಂ | BHADRAVATHI| 4 ಜನವರಿ 2020 ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕು ಮೈದೊಳಲು ಗ್ರಾಮದಲ್ಲಿ ಘಟನೆ ನಡೆದಿದೆ. ದೀಪಾ (25) ಮೃತ ದುರ್ದೈವಿ. ಮೈದೊಳಲು ಗ್ರಾಮದ ಪ್ರದೀಪ್ ಎಂಬುವವರೊಂದಿಗೆ ದೀಪಾ ವಿವಾಹವಾಗಿದ್ದರು. ಐದು ವರ್ಷದಿಂದಲು ಮಕ್ಕಳಾಗಿರಲಿಲ್ಲ ಎಂದು ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ದೀಪಾ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದೀಪಾಳ … Read more

ಊಟ ಮಾಡ್ತಿದ್ದ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನನ್ನು ಮನೆಯಿಂದ ಹೊರಗೆ ಕರೆಯಿಸಿ ಚೂರಿ ಇರಿತ

ಶಿವಮೊಗ್ಗ ಲೈವ್.ಕಾಂ | BHADRAVATHI | 29 ಡಿಸೆಂಬರ್ 2019 ಭದ್ರಾವತಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಶಾಂತಕುಮಾರ್ (50) ಅವರ ಮೇಲೆ ಹಲ್ಲೆಯಾಗಿದೆ. ಹೇಗಾಯ್ತು ಘಟನೆ? ಕಾರಣವೇನು? ಶನಿವಾರ ರಾತ್ರಿ ಶಾಂತಕುಮಾರ್ ಅವರು ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ, ಅದೇ ಗ್ರಾಮದ ಮೂವರು ಮನೆಗೆ ಬಂದಿದ್ದಾರೆ. ಶಾಂತಕುಮಾರ್ ಅವರನ್ನು … Read more