ರಿಪ್ಪನ್ ಪೇಟೆ ಬಳಿ ಕಾಡಲ್ಲಿ ಯುವತಿ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಪ್ರಿಯಕರ ಸಾವು, ಘಟನೆಗೆ ಕಾರಣವಾಯ್ತಾ ಭದ್ರಾವತಿ ಯುವಕನ ಪರಿಚಯ?

270821 Ripponpete Murder Case Youth Dies at Mc Gann

ಶಿವಮೊಗ್ಗ ಲೈವ್.ಕಾಂ | RIPPONPETE / SHIMOGA NEWS | 27 ಆಗಸ್ಟ್ 2021 ನೇರಲಿಗೆ ಅರಣ್ಯ ಪ್ರದೇಶದಲ್ಲಿ ಯುವತಿ ಹತ್ಯೆ ಮಾಡಿ, ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಕೊಲೆಗೈದು ಆತ್ಮಹತ್ಯೆಗೆ ಯತ್ನ ಶಿವಮೊಗ್ಗದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿನಿ ಕವಿತಾ (22) ಎಂಬಾಕೆಯನ್ನು ಆಕೆಯ ಸ್ನೇಹಿತ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶಿವಮೂರ್ತಿ ಕೊಲೆ … Read more

BREAKING NEWS | ಯುವತಿ ಅನುಮಾನಾಸ್ಪದ ಸಾವು, ರಿಪ್ಪನ್ ಪೇಟೆ ಬಳಿ ಸಿಕ್ತು ಮೃತದೇಹ

breaking news graphics

ಶಿವಮೊಗ್ಗ ಲೈವ್.ಕಾಂ | RIPPONPETE NEWS | 26 ಆಗಸ್ಟ್ 2021 ಕಾಡಿನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಹಲವು ಅನುಮಾನ ಉಂಟಾಗಿದೆ. ರಿಪ್ಪನ್’ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಳಗಿ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಹೊಸಕೆರೆ ಕೆರೆ ಬಳಿ ಯುವತಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರದು ಯುವತಿ? ಸಾವಿಗೇನು ಕಾರಣ? ಮೃತ ಯುವತಿ ಭಟ್ಕಳ ಮೂಲದವಳು ಎಂದು ಹೇಳಲಾಗುತ್ತಿದೆ. ಈಕೆ ಸಾವಿಗೆ ನಿಖರ ಕಾರಣ ತಿಳಿದು … Read more

ಶಿವಮೊಗ್ಗಕ್ಕೆ ಇವತ್ತು ಸಚಿವ ಈಶ್ವರಪ್ಪ ಭೇಟಿ, ನಾಳೆಯಿಂದ ಮೂರು ತಾಲೂಕಿನ ನೆರೆಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ನೆರೆ ಪರಿಹಾರ ಕಾರ್ಯಗಳು ತ್ವರಿತಗೊಳಿಸಬೇಕಿರುವ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ಹೊತ್ತಿರುವ ಸಚಿವ ಈಶ್ವರಪ್ಪ ಅವರು ಎರಡು ದಿನ ಮೂರು ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಶಿವಮೊಗ್ಗಕ್ಕೆ ಸಚಿವ ಈಶ್ವರಪ್ಪ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರ್ಪಡೆಯಾದ ಬಳಿಕ ಇವತ್ತು ಮಧ್ಯಾಹ್ನ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಸಂಜೆ ಶಿವಮೊಗ್ಗದ … Read more

ಸೇತುವೆ, ರಸ್ತೆ ಕುಸಿತ, ತೀರ್ಥಹಳ್ಳಿ, ಹೊಸನಗರದ ಹೆದ್ದಾರಿಗಳಲ್ಲಿ ಭಾರಿ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಹೊಸನಗರದ ನಗರ ಮತ್ತು ಚಿಕ್ಕಪೇಟೆ ನಡುವೆ ಇರುವ ಸೇತುವೆ ಕುಸಿದಿದೆ. ಇತ್ತ ತೀರ್ಥಹಳ್ಳಿಯ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ. ಆದ್ದರಿಂದ  ಈ ಮಾರ್ಗಗಳಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಹೊಸನಗರದಿಂದ ನಗರ – ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಸಿ) ರಲ್ಲಿ ಸೇತುವೆ ಕುಸಿದಿದೆ. ನಗರ – ಚಿಕ್ಕಪೇಟೆ ರಸ್ತೆಯಲ್ಲಿ ಈ … Read more

ಸಾವೇಹಕ್ಲು ಜಲಾಶಯ ಭರ್ತಿ, ನೀರು ಹೊರ ಹೋಗುವ ದೃಶ್ಯ ಕಣ್ತುಂಬಿಕೊಳ್ಳಲು ಜನವೋ ಜನ

260721 Savehaklu Dam in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಜುಲೈ 2021 ಹೊಸನಗರ ತಾಲೂಕಿನ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ. ಡ್ಯಾಂ ತುಂಬಿ ನೀರು ಹೊರ ಹೋಗುತ್ತಿರುವ ದೃಶ್ಯ ಆಕರ್ಷಣೀಯವಾಗಿದೆ. ಸಾವೇಹಕ್ಲು ಜಲಾಶಯ 582 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ ನೀರು ತುಂಬಿ ಹೊರ ಹೋಗಿ, ಲಿಂಗನಮಕ್ಕಿ ಜಲಾಶಯ ಸೇರಲಿದೆ. ಸೆಲ್ಫಿ, ಪೋಟೊ ಶೂಟ್‍ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಊರುಗಳ ಜನರು ಭೇಟಿ ನೀಡಿ, ನೀರು ಹೊರಗೆ … Read more

ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?

rain in shimoga

ಶಿವಮೊಗ್ಗ ಲೈವ್.ಕಾಂ | HOSANGARA NEWS | 24 ಜುಲೈ 2021 ಹೊಸನಗರ ತಾಲೂಕು ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಇದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ದಾಖಲಾಗಿದೆ. ತಾಲೂಕಿನಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 175.6 ಮಿ.ಮೀ ಮಳೆಯಾಗಿದೆ. ಮಾಣಿ ವ್ಯಾಪ್ತಿಯಲ್ಲಿ 135 ಮಿ.ಮೀ, ಯಡೂರಿನಲ್ಲಿ 162 ಮಿ.ಮೀ, ಹುಲಿಕಲ್‍ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 215 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 401 ಮಿ.ಮೀ, ಸಾವೇಹಕ್ಕಲು 308 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ … Read more

ಹೊಸನಗರದಲ್ಲಿ ಬಿಡುವು ಕೊಡದ ಮಳೆ, ಸಾವೇಹಕ್ಕಲಿನಲ್ಲಿ ಅತಿ ಹೆಚ್ಚು, ಹುಲಿಕಲ್ನಲ್ಲಿ ಕಡಿಮೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

230721 Hosanagara Rain Level Increases 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 23 ಜುಲೈ 2021 ಹೊಸನಗರ ತಾಲೂಕಿನಲ್ಲಿ ದಾಖಲೆ ಮಳೆಯಾಗುತ್ತಿದೆ. ಕ್ಷಣ ಹೊತ್ತು ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 210.2 ಮಿ.ಮೀ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಾಲೂಕಿನ ಹಳ್ಳ,ಕೊಳ್ಳಗಳು ಸಂಪೂರ್ಣ ಭರ್ತಿಯಾಗಿವೆ. ಹೊಳೆಯಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಇನ್ನು, ಹೊಲ, ಗದ್ದೆಗಳಲ್ಲಿ ನೀರು ನಿಂತಿರುವುದರಿಂದ ಬೆಳೆ ಹಾನಿ ಭೀತಿ ಎದುರಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ತಾಲೂಕಿನ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 192 ಮಿ.ಮೀ … Read more

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು, ಮೂವರಿಗೆ ಗಾಯ

150721 Car Accident Near Ripponpete 1

ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 ಜುಲೈ 2021 ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರು, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗೊಂಡಿದ್ದಾರೆ. ರಿಪ್ಪನ್‍ಪೇಟೆ ಸಮೀಪದ ವರನಹೊಂಡದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಸುಮೊ ಪಲ್ಟಿಯಾಗಿದೆ. ಘಟನೆಯಲ್ಲಿ ನೀಲಮ್ಮ (60) ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‍ಪೇಟೆಗೆ ತೆರಳುತ್ತಿತು. ಈ … Read more

ಗದ್ದೆ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ, ಮೂರು ದಿನದ ಬಳಿಕ ಪೊಲೀಸರು ಕರೆ ಮಾಡಿದಾಗ ಕುಟುಂಬದವರಿಗೆ ಆಘಾತ

HOSANAGARA-TALUK-NEWS-1.jpg

ಶಿವಮೊಗ್ಗ ಲೈವ್.ಕಾಂ | RIPPONPETE NEWS | 14 ಜುಲೈ 2021 ಗದ್ದೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಕುಮದ್ವತಿ ನದಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಜಿನಗೋಡು ಗ್ರಾಮದ ಕೊಲ್ಲಪ್ಪ (62) ಮೃತರು. ಶನಿವಾರ ಕೊಲ್ಲಪ್ಪ ಅವರು ಗದ್ದೆ ಕೆಲಸಕ್ಕೆ ತೆರಳಿದ್ದರು. ಆದರೆ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮನೆಯವರು ಸಂಬಂಧಿಕರು, ಸ್ನೇಹಿತರು, ಊರ ಮನೆಯಲ್ಲಿ ವಿಚಾರಿಸಿದ್ದರು. ಮೂರು ದಿನದ ಬಳಿಕ ಶವ ಪತ್ತೆ … Read more

ಕಾರುಗಳು ಮುಖಾಮುಖಿ ಡಿಕ್ಕಿ, ಗಾಯಾಳುಗಳಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

130721 MLA helps car Accident injured near mastikatte 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 ಜುಲೈ 2021 ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಆರಗ ಜ್ಞಾನೇಂದ್ರ ನೆರವಾಗಿದ್ದಾರೆ. ಮಾಸ್ತಿಕಟ್ಟೆ ಸಮೀಪ ಘಟನೆ ಸಂಭವಿಸಿದೆ. ತಿರುವಿನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇದೆ ವೇಳೆ ಅಲ್ಲಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು. ಇದನ್ನೂ ಓದಿ | ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ … Read more