ಮನೆಯ ಕಬೋರ್ಡ್ ಕೆಳಗಿತ್ತು ಸೀಕ್ರೆಟ್ ಜಾಗ, ಒಳಗಿತ್ತು ಲೀಟರ್‌ಗಟ್ಟಲೆ ಮದ್ಯ, ಹೊಸನಗರದಲ್ಲಿ ದಾಳಿ

211220 Hosanagara Mattimane Liquor Seized 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 DECEMBER 2020 ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಪಾಟಿನ ಕೆಳಗೆ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಹೊಸನಗರ ತಾಲೂಕು ಮತ್ತಿಮನೆ ಗ್ರಾಮದ ಗಣೇಶ್ ಎಂಬುವವರ ಮನೆಯಲ್ಲಿ ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 24 ಸಾವಿರ ಮೌಲ್ಯದ 52 ಲೀಟರ್ ಮದ್ಯವನ್ನು … Read more

ಶಿವಮೊಗ್ಗ ಜಿಲ್ಲೆಯ 271 ಗ್ರಾ.ಪಂಗಳ ಪೈಕಿ 244ರಲ್ಲಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಗ್ರಾ.ಪಂಗೆ ಎಲೆಕ್ಷನ್?

011220 DC KB Shivakumar Press Meet About GP Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಶಿವಮೊಗ್ಗದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಪೈಕಿ 244 ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಧಿಸೂಚನೆ ಪ್ರಕಟ ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 7ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 11ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು … Read more

ಮುಡುಬ ಸೇತುವೆ ಬಳಿ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಾಯ, ಜನರ ಆಕ್ರೋಶ

211120 Bike Accident Near Battemallappa Hosanagara 1

ಶಿವಮೊಗ್ಗ ಲೈವ್.ಕಾಂ |HOSANAGARA NEWS | 21 NOVEMBER 2020 ಹೊಸನಗರ – ಬಟ್ಟೆಮಲ್ಲಪ್ಪ ಮಾರ್ಗದ ಮುಡುಬ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಓರ್ವ ಸವಾರ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಗಾಯ್ತು ಘಟನೆ? ಬೈಕ್ ಸವಾರರು ಹಾವೇರಿಯಿಂದ ಹೆಬ್ರಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಮುಡುಬ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಹಾವೇರಿಯ ರೆಹಮಾನ್ ಸಾಬ್ (22) ಮೃತಪಟ್ಟಿದ್ದಾರೆ. ಅನ್ವರ್ ಬಾಷಾ … Read more

ಜಾತಿಗೊಂದು ಪ್ರಾಧಿಕಾರ, ಇದು ಮತ ಖರೀದಿಯ ವ್ಯವಹಾರ, ಬಿಜೆಪಿ ವಿರುದ್ಧ ಮಾಜಿ ಮಿನಿಸ್ಟರ್ ಆಕ್ರೋಶ

250620 Kimmane Rathnakar in Press meet 1

ಶಿವಮೊಗ್ಗ ಲೈವ್.ಕಾಂ |HOSANAGARA NEWS | 19 NOVEMBER 2020 ಜಾತಿಗೊಂದು ಅಭಿವೃದ್ಧಿ ಪ್ರಾಧಿಕಾರ ರಚಿಸುತ್ತಿರುವುದು ಬಿಜೆಪಿಯ ಚುನಾವಣಾ ಗಿಮಿಕ್. ಇದು ಪರೋಕ್ಷವಾಗಿ ಮತ ಖರೀದಿಯ ವ್ಯವಹಾರವಾಗಿದೆ ಎಂದು ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಆರೋಪಿಸಿದರು. ಹೊಸನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಮುಂಬರುವ ಲೋಕಸಭೆ ಮತ್ತು ಎರಡು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು, ಅಭಿವೃದ್ಧಿ ಪ್ರಧಿಕಾರ ರಚಿಸಲಾಗಿದೆ. ಬಹು ಸಂಖ್ಯಾತ ಸಮುದಾಯಗಳಿಗೆ ತುರ್ತಾಗಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದು ಆರೋಪಿಸಿದರು. ಬಿಜೆಪಿಯವರಿಗೆ ಅಭಿವೃದ್ಧಿ ಆಧಾರದಲ್ಲಿ ಮತ … Read more

ಐತಿಹಾಸಿಕ ಬಿದನೂರು ಕೋಟೆಯಲ್ಲಿ ನಿರ್ಮಾಣವಾಗುತ್ತೆ ಶೌಚಾಲಯ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಅಕ್ಟೋಬರ್ 2020 ಐತಿಹಾಸಿಕ ಬಿದನೂರು ಕೋಟೆ ಬಳಿ ಶೌಚಗೃಹ ನಿರ್ಮಾಣಕ್ಕೆ  ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿದೆ. ಶೀಘ್ರದಲ್ಲಿ ಶೌಚಗೃಹ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್ ತಿಳಿಸಿದ್ದಾರೆ. ಮೂಡುಗೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಸ್ವಚ್ಛ ಸಂಕೀರ್ಣ ಘಟಕದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಬಿದನೂರು ಕೋಟೆಗೆ ಬರುತ್ತಿದ್ದ ಪ್ರವಾಸಿಗರು ಶೌಚಾಲಯವಿಲ್ಲದೆ ಪರದಾಡುತ್ತಿದ್ದರು. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ, ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಹೊಸನಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ, ಶುಂಠಿ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳು ವಶಕ್ಕೆ

211020 Ganja Seized in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 ಅಕ್ಟೋಬರ್ 2020 ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ತೀರ್ಥಹಳ್ಳಿ ಮತ್ತು ಹೊಸನಗರ ವಲಯ ಅಧಿಕಾರಿಗಳು ದಾಳಿ ನಡೆಸಿ, ಶುಂಠಿ ಗಿಡಗಳ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡು ಕಡೆ ದಾಳಿ ನಡೆಸಿ, 67 ಹಸಿ ಗಾಂಜಾ ಗಿಡಗಳನ್ನು ಸೀಜ್ ಮಾಡಲಾಗಿದೆ. ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿಯ ನಾಗರಾಜ್ ಎಂಬುವವರ ಶುಂಠಿ ಹೊಲದಲ್ಲಿ 31 ಗಾಂಜಾ ಗಿಡ ಪತ್ತೆಯಾಗಿದೆ. ಶೇಖರಪ್ಪ … Read more

ಹೆಲ್ಮೆಟ್ ಧರಿಸಿ ಮನೆಯೊಳಗೆ ನುಗ್ಗಿದರು, ಮಹಿಳೆಯ ಮಾಂಗಲ್ಯ ಸರ ಕಿತ್ತೊಯ್ದರು

police jeep

ಶಿವಮೊಗ್ಗ ಲೈವ್.ಕಾಂ | RIPPONPETE NEWS | 17 ಅಕ್ಟೋಬರ್ 2020 ಹಾಡಹಗಲು ಮನೆಯೊಳಗೆ ನುಗ್ಗಿದ ಇಬ್ಬರು ಅಪರಿಚಿತರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಬೀಡಿನಲ್ಲಿ ಘಟನೆ ಸಂಭವಿಸಿದೆ. ಜಯಲಕ್ಷ್ಮಿ (73) ಎಂಬುವವರು ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ. ಮಾಂಗಲ್ಯ ಸರದ ಮೌಲ್ಯ 1.10 ಲಕ್ಷ ಎಂದು ಅಂದಾಜಿಸಲಾಗಿದೆ. ವ್ಯಾಪಾರಕ್ಕೆ ಬಂದವರದ್ದೇ ಕೃತ್ಯಾನಾ? ಒಂದೆರಡು ದಿನದ ಹಿಂದೆ ಮನೆಗೆ ಬಂದಿದ್ದ ಇಬ್ಬರು ಅಪರಿಚಿತರನ್ನು ತಮ್ಮನ್ನು ವ್ಯಾಪಾರಿಗಳು ಎಂದು ಪರಿಚಯಿಸಿಕೊಂಡಿದ್ದರು. ಅವರೆ ಈ … Read more

ಹುಲಿಕಲ್ ಘಾಟಿಯಲ್ಲಿ 400 ಅಡಿ ಪ್ರಪಾತಕ್ಕೆ ಉರುಳಿದ ಲಾರಿ

011020 Lorry Fallen To Hulikal Ghat 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 1 ಅಕ್ಟೋಬರ್ 2020 ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸುಮಾರು 400 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಬದುಕುಳಿದಿದ್ದಾನೆ. ಹೇಗಾಯ್ತು ಘಟನೆ? ಮಂಗಳೂರಿನಿಂದ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೋಕ್ ತುಂಬಿಕೊಂಡು ಲಾರಿ ಬರುತ್ತಿತ್ತು. ಬೆಳಗಿನ ಜಾವ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿ ಪ್ರಪಾತಕ್ಕೆ ಉರುಳಿದೆ. ಲಾರಿ ಚಾಲಕ ಪಾರು ಅಪಘಾತದ ದೃಶ್ಯ ಗಮನಿಸಿದರೆ ಒಳಗಿದ್ದವರು ಬದುಕುವ ಸಾಧ್ಯತೆ ಕಡಿಮೆ. … Read more

ಮಾಸ್ಕ್ ಧರಿಸಿಲ್ಲ ಅಂತಾ ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೆ ಕದ್ದು ಪರಾರಿ

Hosanagara Police Station General Image 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಸೆಪ್ಟಂಬರ್ 2020 ಮಾಸ್ಕ್ ಹಾಕಿಲ್ಲ ಅಂತಾ ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೆ ಕಳ್ಳತನ ಮಾಡಿ ಯುವಕನೊಬ್ಬ ಪರಾರಿಯಾಗಿದ್ದಾನೆ. ಎರಡು ದಿನದ ಹಿಂದೆ ಹೊಸನಗರ ಪೊಲೀಸ್ ಠಾಣೆ ಮುಂಭಾಗ ಘಟನೆ ಸಂಭವಿಸಿದೆ. ಮಾಸ್ಕ್ ಕಾರ್ಯಾಚರಣೆ ಜಿಲ್ಲೆಯಾದ್ಯಂತ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಯುತ್ತಿದೆ. ಮಾಸ್ಕ್ ಧರಿಸದೆ ಓಡಾಡುವವರನ್ನು ಹಿಡಿದು ಪೊಲೀಸರು ದಂಡ ಹಾಕುತ್ತಿದ್ದಾರೆ. ಈ ಕಾರ್ಯಾಚರಣೆ ವೇಳೆ ಹೊಸನಗರದಲ್ಲಿ ಯುವಕನೊಬ್ಬನ್ನು ಹಿಡಿದು ದಂಡ ವಿಧಿಸಿದ್ದರು. ದಂಡ ಕಟ್ಟಿ ಠಾಣೆಯಿಂದ ಹಿಂತಿರುಗುವ … Read more

ರಿಪ್ಪನ್‌ಪೇಟೆ, ಸೊರಬ ಪೊಲೀಸರ ದಾಳಿ, ಗಾಂಜಾ ಗಿಡಗಳು ವಶಕ್ಕೆ, ಒಬ್ಬ ಅರೆಸ್ಟ್, ಮತ್ತೊಬ್ಬ ಎಸ್ಕೇಪ್

260920 Soraba Police Raid On Ganja 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020 ಸೊರಬ ಮತ್ತು ಹೊಸನಗರ ತಾಲೂಕು ರಿಪ್ಪನ್‍ಪೇಟೆಯಲ್ಲಿ ಪೊಲೀಸರು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಸೊರಬ ರಿಪೋರ್ಟ್ ಹೆಚ್ಚೆ ಗ್ರಾಮದಲ್ಲಿ ಜಯಪ್ಪ ಎಂಬಾತ ಶುಂಠಿ ಬೆಳೆಯ ನಡುವೆ ಗಾಂಜಾ ಬೆಳೆದಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿ 20 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯಪ್ಪ ಪರಾರಿಯಾಗಿದ್ದು, ಈತನ ಪತ್ತೆ ಕಾರ್ಯ ನಡೆಯುತ್ತಿದೆ. ಎಎಸ್‍ಪಿ ಶ್ರೀನಿವಾಸಲು, … Read more