HOSANAGARA | ಅರಣ್ಯ ಇಲಾಖೆ ಕಟ್ಟಡದ ಹಂಚಿನ ಮೇಲೆ ಹತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಡಿಫರೆಂಟ್ ಪ್ರತಿಭಟನೆ, ಕಾರಣವೇನು ಗೊತ್ತಾ?

041219 Karunakara Shetty Protest in RFO office Nagara 1

ಶಿವಮೊಗ್ಗ ಲೈವ್.ಕಾಂ | SHIMOGA | 04 ಡಿಸೆಂಬರ್ 2019 ಹಕ್ಕುಪತ್ರ ನೀಡಲು ತಾರತಮ್ಯ ಮಾಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಟ್ಟಡದ ಮೇಲೆ ಹತ್ತಿ ಕುಳಿತು ಪ್ರತಿಭಟಿಸುತ್ತಿದ್ದಾರೆ. ಹೊಸನಗರದ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ಹತ್ತಿ ಕುಳಿತು ಪ್ರತಿಭಟನೆ ಆರಂಭಿಸಿದ್ದಾರೆ. ಇವರನ್ನು ಕೆಳಗಿಳಿಸಲು ಅರಣ್ಯಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಪ್ರತಿಭಟನೆಗೆ … Read more

HOSANAGARA | ಅಪಘಾತಕ್ಕೆ ಪತ್ನಿಯೇ ಕಾರಣ, ಕಾನೂನು ಕ್ರಮ ಕೈಗೊಳ್ಳಿ ಅಂತಾ ಪತಿಯಿಂದಲೇ ಪೊಲೀಸ್ ಕಂಪ್ಲೇಂಟ್

ಶಿವಮೊಗ್ಗ ಲೈವ್.ಕಾಂ | HOSANAGARA | 27 ನವೆಂಬರ್ 2019 ಪತ್ನಿಯ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಅಪಘಾತ ಸಂಭವಿಸಿದೆ. ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊಸನಗರದ ರಾಮಚಂದ್ರಾಪುರ ಗ್ರಾಮದ ಬಳಿ ಮಂಗಳವಾರ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾರು ಫುಲ್ ಜಖಂ ಕಾರು ಸೇತುವೆಯಿಂದ ಕೆಳಗೆ ಪಲ್ಟಿಯಾಗಿ ಬಿದ್ದಿದೆ. ಕಾರಿನ ಮುಂಭಾಗ, ಹಿಂಬದಿ … Read more

GOOD NEWS | ಈ ಯುವಕರ ಹುಟ್ಟುಹಬ್ಬದ ಪಾರ್ಟಿಯೇ ಡಿಫರೆಂಟ್, ಇದಕ್ಕೆ ಕಾರಣ ಫೇಸ್’ಬುಕ್, ಹೊಸನಗರ ಜನರಿಂದ ಸಿಗ್ತಿದೆ ಶಹಬ್ಬಾಸ್

191119 Hosanagara Youth New Type Birthday 1

ಶಿವಮೊಗ್ಗ ಲೈವ್.ಕಾಂ | SHIMOGA | 19 ನವೆಂಬರ್ 2019 ಹುಟ್ಟುಹಬ್ಬದ ಆಚರಣೆ ಅಂದರೆ ಪಾರ್ಟಿ ಮಾಡುವುದು. ಪಟಾಕಿ ಹೊಡೆದು ಸಂಭ್ರಮಿಸುವುದು. ಡಾನ್ಸ್ ಮಾಡಿ ಖುಷಿ ಪಡುವುದು. ಇದೆಲ್ಲ ಈಗಿನ ಟ್ರೆಂಡ್. ಆದರೆ ಹೊಸನಗರದ ಯುವಕರ ಗುಂಪೊಂದು ಡಿಫರೆಂಟ್ ರೀತಿಯಲ್ಲಿ ಹುಟ್ಟುಹಬ್ಬಗಳನ್ನು ಆಚರಿಸುತ್ತಿದೆ. ಇದು ಇಡೀ ತಾಲೂಕಿಗೆ ಕುತೂಹಲ ಮೂಡಿಸಿದೆ. ಜನರು ಭೇಷ್ ಅನ್ನುವಂತೆ ಮಾಡಿದೆ. ಆದರೆ ಇದೆಲ್ಲ ಶುರುವಾಗಿದ್ದು ಫೇಸ್’ಬುಕ್’ನಿಂದ. ಯುವಕರ ಗುಂಪೊಂದು ತಮ್ಮ ಪರಿಚಿತರ ಹುಟ್ಟುಹಬ್ಬಗಳಿದ್ದರೆ ತಾಲೂಕಿನ ವಿವಿಧೆಡೆ ಶ್ರಮದಾನ ಮಾಡುತ್ತಿದೆ. ನಿಗದಿತ ಸ್ಥಳವನ್ನು … Read more

50 ಲಾರಿಗಳನ್ನು ತಡೆದ ಗ್ರಾಮಸ್ಥರು, ಗುಂಡಿ ಮುಚ್ಚುವಂತೆ ಪಟ್ಟು, ಹೊಸನಗರದ ಗ್ರಾಮದಲ್ಲಿ ಮತ್ತೆ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA | 14 ನವೆಂಬರ್ 2019 ಹೊಸನಗರ ಕುಂಬತ್ತಿ ಗ್ರಾಮದಲ್ಲಿ ಸುಮಾರು 50 ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗ್ಗೆಯಿಂದಲೆ ರಸ್ತೆಗಿಳಿದ ಗ್ರಾಮಸ್ಥರು ಲಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿಗಳ ಓಡಾಟದಿಂದಾಗಿ ಕುಂಬತ್ತಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಹಾಗಾಗಿ ಈ ರಸ್ತೆಯಲ್ಲಿ ಓಡಾಡುವುದೆ ಕಷ್ಟವಾಗಿದೆ. ಇತ್ತೀಚೆಗಷ್ಟೆ ಗುಂಡಿಯಿಂದಾಗಿ ರಸ್ತೆಯಲ್ಲಿ ಬಿದ್ದು ಗ್ರಾಮಸ್ಥರೊಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ. ಅಲ್ಲದೆ ಈ ಭಾಗದ ಮಕ್ಕಳು ಶಾಲೆಗೆ ತೆರಳುವುದೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆ ತಡೆ … Read more

ಇದು ಶಿವಮೊಗ್ಗದ ಅತ್ಯಂತ ಕೋಲ್ಡ್ ಜಾಗ, ಜಿಲ್ಲೆಯ ರೈತರಿಗೆ ತರಲಿದೆ ಲಾಭ, ರಿಪ್ಪನ್’ಪೇಟೆಯಲ್ಲಿ ಹೈಟೆಕ್ ಕೋಲ್ಡ್ ಸ್ಟೋರೇಜ್

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ರೈತರ ಬೆಳೆಗೆ ಸರಿಯಾದ ಬೆಲೆ ಸಿಕ್ಕಾಗ ಮಾತ್ರ ಆತ ಆರ್ಥಿಕವಾಗಿ ಬಲಗೊಳ್ಳಲು ಸಾಧ್ಯ. ಆದರೆ, ಬಹಳಷ್ಟು ಸಮಯದಲ್ಲಿ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ರೈತರ ಇನ್ನೂ ಆರ್ಥಿಕವಾಗಿ ದುರ್ಬಲನಾಗಿದ್ದಾನೆ. ಫಸಲು ಕೈಗೆ ಬಂದು ಇನನ್ನೇನು ಮಾರಾಟ ಮಾಡಬೇಕು ಎನ್ನುವ ಸಂದರ್ಭದಲ್ಲಿ ಧಾರಣೆ ಕುಸಿದಿರುತ್ತದೆ. ಆಗ ಅನಿವಾರ್ಯವಾಗಿ ಆತ ಕಡಿಮೆ ಬೆಲೆಗೆ ಬೆಳೆ ಮಾರಾಟ ಮಾಡಬೇಕಾದ ಪರಿಸ್ಥಿತಿ ರೈತರನ್ನು ಬಾಧಿಸತೊಡಗಿದೆ. ರೈತರ ಸಮಸ್ಯೆಗೆ ಪರಿಹರಿಸಿದ ಸಹಕಾರಿ … Read more

ಕಲ್ಲು ಗಣಿಗಾರಿಕೆಗೆ ಭಾರೀ ವಿರೋಧ, ಗಣಿ ಪ್ರದೇಶಕ್ಕೆ ಸಾಗರ ಎಸಿ ನೇತೃತ್ವದ ಟೀಂ ಭೇಟಿ

ಶಿವಮೊಗ್ಗ ಲೈವ್.ಕಾಂ | RIPPONPETE | 26 ಅಕ್ಟೋಬರ್ 2019 ಹುಂಚಾ ಸರ್ವೇ ನಂ. 69ರಲ್ಲಿ ನಡೆಸಲು ಉದ್ದೇಶಿಸಿರುವ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಾಗರ ಉಪವಿಭಾಗಾಧಿಕರಿ ಡಾ.ಎಲ್.ನಾಗರಾಜ್ ಅವರು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾಗರ ಅರಣ್ಯ ಇಲಾಖೆ ಅಧಿಕಾರಿಗಳು, ಹೊಸನಗರ ತಹಸೀಲ್ದಾರ್‌ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಗಣಿಗಾರಿಕೆ ನಡೆಸದಂತೆ ಒತ್ತಾಯಿಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ ಜಿಲ್ಲಾಧಿಕಾರಿಗೆ ಸೂಕ್ತ ವರದಿ ನೀಡುವಂತೆ ಒತ್ತಾಯಿಸಿದರು. ಗಣಿಗಾರಿಕೆ ವಿರೋಧಿಸಿ ಕಳೆದ … Read more

ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಶರಾವತಿ ಹಿನ್ನೀರಿನ ಕಲ್ಲುಹಳ್ಳಕ್ಕೆ ಪಲ್ಟಿ

ಶಿವಮೊಗ್ಗ ಲೈವ್.ಕಾಂ | HOSANAGARA | 25 ಅಕ್ಟೋಬರ್ 2019 ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಶರಾವತಿ ಹಿನ್ನೀರಿನ ಕಲ್ಲುಹಳ್ಳಕೆ ಉರುಳಿ ಬಿದ್ದಿದೆ. ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ. ಕಲ್ಲಿದ್ದಲು ತುಂಬಿದ್ದ ಲಾರಿ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಚಾಲಕ ಮತ್ತು ಕ್ಲೀನರ್ ಇಬ್ಬರಿಗು ಗಾಯವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ … Read more

ಮಡೋಡಿ ಸೇತುವೆ ಕುಸಿತದ ಪರಿಣಾಮ, ಪರ್ಯಾಯ ಮಾರ್ಗದಲ್ಲಿ ವಾಹನ ಓಡಿಸೋದು ಕಷ್ಟ ಕಷ್ಟ

ಶಿವಮೊಗ್ಗ ಲೈವ್.ಕಾಂ | HOSANAGARA | 17 ಅಕ್ಟೋಬರ್ 2019 ಮಡೋಡಿ ಸೇತುವೆ ಕುಸಿದ ಬಳಿಕ ಬೈಂದೂರು, ರಾಣೆಬೆನ್ನೂರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆ ಸಂಪರ್ಣ ಹಾಳಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ. ಸೇತುವೆ ಕುಸಿದ ಹಿನ್ನೆಲೆ, ಮತ್ತಿಕೈ – ಮಡೋಡಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಭಾರಿ ಸಂಖ್ಯೆಯ ವಾಹನ ಸಂಚಾರದಿಂದಾಗಿ ಈ ರಸ್ತೆ ಗುಂಡಿಮಯವಾಗಿದೆ. ಹಲವು ಮಜರೆ ಹಳ್ಳಿಗಳಿಗೆ ಈ ರಸ್ತೆ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಗುಂಡಿಮಯವಾಗಿದೆ. ಇದರಿಂದ … Read more

ಸಿನಿಮೀಯ ರೀತಿಯಲ್ಲಿ ಯುವತಿ ಕಿಡ್ನಾಪ್, ನಡುದಾರಿಯಲ್ಲೆ ಕಾರು, ಯುವತಿ ಬಿಟ್ಟು ಎಸ್ಕೇಪ್, ಅಪಹರಣಕಾರರು ಯಾರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | HOSANAGARA | 4 ಅಕ್ಟೋಬರ್ 2019 ಸಿನಿಮೀಯ ರೀತಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಿದ ಯುವಕ, ಆಕೆಯನ್ನು ನಡುದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಲಾಂಗ್ ತೋರಿಸಿ, ಯುವತಿಯನ್ನು ಬೆದರಿಸಿ ಅಪಹರಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತೀರ್ಥಹಳ್ಳಿಯ ಕುರುವಳ್ಳಿ ನಾಗರಾಜ್ ಮತ್ತು ಆತನ ಮೂವರು ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಹೊಸನಗರ ಯಡೂರಿನಲ್ಲಿ ಯುವತಿ ಮನೆ ಬಳಿ ದೇವಸ್ಥಾನಕ್ಕೆ ತೆರಳಿದ್ದಾಗ ಅಪಹರಣ ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಯುವತಿಯ ಮನೆಯವರು ಅಪಹರಣಕಾರರ ಕಾರನ್ನು ಹಿಂಬಾಲಿಸಿದ್ದಾರೆ. ಭಯಗೊಂಡ ಅಪಹೃತರು … Read more

ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು, ನಾಪತ್ತೆಯಾಗಿ ಮೂರು ದಿನದ ಬಳಿಕ ಮನೆ ಹತ್ತಿರದ ಬಾವಿಯಲ್ಲಿ ಶವ

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 26 ಸೆಪ್ಟೆಂಬರ್ 2019 ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯ ಮೃತದೇಹ ಊರಿನ ಬಾವಿಯಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿನಿಯನ್ನು ಕೊಲೆಗೈದು ಮೃತದೇಹವನ್ನು ಬಾವಿಗೆ ತಂದು ಹಾಕಿರುವ ಕುರಿತು ಶಂಕೆ ವ್ಯಕ್ತವಾಗಿದೆ. ರಿಪ್ಪನ್’ಪೇಟೆ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಾದಾಪುರ ಗ್ರಾಮದ ಪೂಜಾ (17) ಮೃತಳು. ಭಾನುವಾರ ಸಂಜೆಯಿಂದ ಪೂಜಾ ಕಾಣೆಯಾಗಿದ್ದಳು. ಮನೆಯವರು ಎಲ್ಲಿಯೆ ಹುಡುಕಾಡಿದರು ಪೂಜಾ ಕುರಿತು ಸುಳಿವು ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೂಜಾಳ ಸಹೋದರ ಗೋಪಾಲಕೃಷ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more