ಶರಾವತಿ ನದಿಗಾಗಿ ಹೊಸನಗರದಿಂದ ಶಿವಮೊಗ್ಗದವರೆಗೆ ಬೈಕ್ ಜಾಥಾ, ಸರ್ಕಾರ ನಡೆಗೆ ಸ್ವಾಮೀಜಿ ನೇತೃತ್ವದಲ್ಲಿ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 9 ಜುಲೈ 2019 ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ನಡೆಯನ್ನು ವಿರೋಧಿಸಿ ಇವತ್ತು ಹೊಸನಗರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಜಾಥಾ ಆಯೋಜಿಸಲಾಗಿದೆ. ಮೂಲೆಗದ್ದೆ ಮಠದ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ನಡೆಯಿತು. ಹೊಸನಗರದಿಂದ ಬೆಳಗ್ಗೆ ಹೊರಟ ಬೈಕ್ ಜಾಥಾಗೆ ದಾರಿ ಉದ್ದಕ್ಕೂ ಸಾರ್ವಜನಿಕರು ಸ್ವಾಗತ ನೀಡಿದರು. ಮಧ್ಯಾಹ್ನದ ವೇಳೆಗೆ ಬೈಕ್ ಜಾಥಾ ಶಿವಮೊಗ್ಗ ನಗರಕ್ಕೆ ಆಗಮಿಸಿತು. ನಗರದ ವಿವಿಧೆಡೆ ರಾಲಿ ನಡೆಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ … Read more

ಹೊಸನಗರ ವಿಧಾನಸಭೆ ಕ್ಷೇತ್ರ ಘೋಷಣೆಗೆ ಆಗ್ರಹ, ರಿಪ್ಪನ್’ಪೇಟೆಯಲ್ಲಿ ಒಬ್ಬಂಟಿಯಾಗಿ ಪ್ರತಿಭಟನೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 2 ಮೇ 2019 ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ. ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ … Read more

ರಿಪ್ಪನ್’ಪೇಟೆಯ ಉದ್ಯಮಿ ಮನೆ ಹಿಂಬಾಗಿಲು ಒಡೆದು ಕಳ್ಳತನ ಮಾಡಿದ್ದವರು ಅರೆಸ್ಟ್

theft case general image

ಶಿವಮೊಗ್ಗ ಲೈವ್.ಕಾಂ | 2 ಮೇ 2019 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಕಳ್ಳತ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಿಪ್ಪನ್’ಪೇಟೆಯ ಉದ್ಯಮಿಯೊಬ್ಬರ ಮನೆಯಲ್ಲಿ ಇವರು ಕಳ್ಳತನ ಮಾಡಿದ್ದರು. ಶಿವಮೊಗ್ಗದ ಸೀಗೆಹಟ್ಟಿಯ ಗಣೇಶ್ ಮತ್ತು ಹೊಳೆ ಬಸ್ ನಿಲ್ದಾಣ ಬಳಿಯ ಮಂಜುನಾಥ್ ಬಂಧಿತರು. ರಿಪ್ಪನ್’ಪೇಟೆಯ ಉದ್ಯಮಿ ಮಹಮದ್ ಫಾಜಿಲ್ ಅವರ ಮನೆಯ ಹಿಂಬಾಗಿಲನ್ನು ಒಡೆದು, ಕಳ್ಳತನ ಮಾಡಿದ್ದರು. ಉದ್ಯಮಿ ಫಾಜಿಲ್ ಅವರು ಕಾರ್ಯ ನಿಮಿತ್ತ ಕಾರವಾರಕ್ಕೆ ತೆರಳಿದ್ದರು. ಈ ವೇಳೆ ಘಟನೆ ನಡೆದಿತ್ತು. ಶಿವಮೊಗ್ಗ … Read more

ಮರ ಹತ್ತಿ ಕುಳಿತ ಗ್ರಾ. ಪಂ ಉಪಾಧ್ಯಕ್ಷ, ಬೇಡಿಕೆ ಈಡೇರಿಸೋವರೆಗೆ ಕಳೆಗಿಲಿಯಲ್ವಂತೆ, ಇವರ ಡಿಮಾಂಡ್ ಏನ್ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 25 ಮಾರ್ಚ್ 2019 ಹೊಸನಗರ ತಾಲೂಕಿನ ಗ್ರಾಮ ಪಂಚಾಯಿತಿ ಒಂದರ ಉಪಾಧ್ಯಕ್ಷರು, ಪಂಚಾಯಿತಿ ಕಚೇರಿ ಮುಂದಿರುವ ಮರವೇರಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರಿಗಳು, ಜನರು ಎಷ್ಟೇ ಮನವೊಲಿಸಿದರು, ಹಣ ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಅಂತಾ ತಿಳಿಸಿದ್ದಾರೆ. ತಾಲೂಕಿನ ಮೂಡುಗೊಪ್ಪ ನಗರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಮರವೇರಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಅನುದಾನ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಮರವೇರಿ ಕುಳಿತಿದ್ದಾರೆ. … Read more

ಸ್ಮಶಾನದಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ನೇಹಿತರು

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸ್ನೇಹಿತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರದ ಮಾರಿಗುಡ್ಡದ ಸ್ಮಶಾನದಲ್ಲಿ ಘಟನೆ ನಡೆದಿದೆ. ಶ್ರೀಕಾಂತ್ (29) ಮತ್ತು ಪ್ರಕಾಶ್ (30) ಮೃತರು. ಇಬ್ಬರೂ ಹೊಸನಗರದಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com

ಮುಂದುವರೆದ ಪೊಲೀಸ್ ರೇಡ್, ಹೊಸನಗರದಲ್ಲಿ 80 ಲೋಡ್ ಮರಳು ಸೀಜ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 9 ಮಾರ್ಚ್ 2019 ಹೊಸನಗರ ತಾಲೂಕಿನ ಹಲುಸಾಲೆ ಮಳವಳ್ಳಿ ಗ್ರಾಮದ ಬಳಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು 2.56 ಲಕ್ಷ ವೌಲ್ಯದ ಮರಳನ್ನು ವಶಕ್ಕೆ ಪಡೆಯಲಾಗಿದೆ. ಹಲುಸಾಲೆ ಮಳವಳ್ಳಿ ಗ್ರಾಮದ ದಿನೇಶ್‌ಗೌಡ ಎಂಬುವವರು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದ ಶರಾವತಿ ಹಿನ್ನೀರಿಗೆ ಸೇರಿದ ನೀರಿಲ್ಲದ ಹಳ್ಳದಲ್ಲಿ  ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್, ಸಿಬ್ಬಂದಿ ಭೇಟಿ ನೀಡಿ … Read more

ಮಂಗನ ಕಾಯಿಲೆ ಆತಂಕದ ಬೆನ್ನಿಗೆ ಹೊಸನಗರದಲ್ಲಿ ಪ್ರತ್ಯಕ್ಷವಾಯ್ತು ಹೆಚ್1ಎನ್1

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019 ಮಂಗನ ಕಾಯಿಲೆ ಆತಂಕ ದೂರಾಗುವ ಮೊದಲೇ, ಹೊಸನಗರದಲ್ಲಿ ಹೆಚ್1ಎನ್1 ಮಹಾಮಾರಿ ಪ್ರತ್ಯಕ್ಷವಾಗಿದೆ. ಈಗಾಗಲೇ ಇಬ್ಬರಲ್ಲಿ ಹೆಚ್1ಎನ್1 ಸೋಂಕು ಪತ್ತೆಯಾಗಿದೆ. ಸುಮಾರು 20 ಮಂದಿಗೆ ಸೋಂಕು ತಗುಲಿರುವ ಆತಂಕವಿದೆ. ನಗರ ಹೋಬಳಿಯಲ್ಲಿ ಸೋಂಕು ಪತ್ತೆಯಾಗಿದೆ. ಹಾಗಾಗಿ ತಾಲೂಕು ವೈದ್ಯಾಧಿಕಾರಿಗಳು ನಗರ ಹೋಬಳಿಗೆ ಭೇಟಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ತೆರಳಿ, ಚಿಕಿತ್ಸೆಯ ಕುರಿತು ಪರಿಶೀಲನೆ ನಡೆಸಿದ್ದಾರೆ. ‘ಹೆಚ್1ಎನ್1 ಭಯ ಬೇಡ’ ಹಂದಿ ಜ್ವರದ ಹಿನ್ನೆಲೆ, ತಾಲೂಕು ವೈದ್ಯಾಧಿಕಾರಿ ಡಾ.ಸುರೇಶ್ ನೇತೃತ್ವದಲ್ಲಿ, ಮೂಡುಗೊಪ್ಪ … Read more

ಹೊಸನಗರದಲ್ಲಿ ಕಾಳ್ಗಿಚ್ಚು, ಎಂಪಿಎಂ ನಡುತೋಪು ಭಸ್ಮ, ಧಗಧಗ ಉರಿದ ಅಡಕೆ, ತಾಳೆ ತೋಟ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಮತ್ತು ಹೊನ್ನೆಕೊಪ್ಪ ಗ್ರಾಮದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ಇದರಿಂದ ಎಂಪಿಎಂ ಆರಣ್ಯ ವ್ಯಾಪ್ತಿ ಮತ್ತು ಕೃಷಿ ಜಮೀನು ಬೆಂಕಿಗೆ ಆಹುತಿಯಾಗಿದೆ. ಗುರುವಾರ ಮಧ್ಯಾಹ್ನ ಸುತ್ತಾ ಗ್ರಾಮದ ವ್ಯಾಪ್ತಿಯಲ್ಲಿರುವ ಎಂಪಿಎಂ ಅರಣ್ಯದಲ್ಲಿ ಬೆಂಕಿ ಕಾಣಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದಾಗಿ ಎಂಪಿಎಂ ನೆಡುತೋಪಿಗೆ ಹಾನಿಯಾಗಿದೆ. ಇದಾದ ಕೆಲವೇ ಕ್ಷಣದಲ್ಲಿ ಹೊನ್ನೆಕೊಪ್ಪ ಗ್ರಾಮದಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಬಾಳೆಕೊಪ್ಪ … Read more

‘ಮಧು ಬಂಗಾರಪ್ಪ ಸೋಲಿಗೆ ಆರ್.ಎಂ.ಮಂಜುನಾಥಗೌಡ ಕಾರಣ, ಅನುಮಾನ ಹುಟ್ಟಿಸುತ್ತಿದೆ ಆರಗ ನಡೆ’

ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018 ಲೋಕಸಭೆ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಸೋಲಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಕಾರಣ ಅಂತಾ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ ಜನಸಾಮಾನ್ಯರಿಗೆ ಸಿಗುವುದಿಲ್ಲ. ಇನ್ನು, ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಮತ್ತು ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಮೂಲ ಮತ್ತು ವಲಸಿಗ ಕಾರ್ಯಕರ್ತರ ನಡುವಿನ ಬಿರುಕು ಕಡಿಮೆ ಮತ ಗಳಿಸಲು ಕಾರಣವಾಗಿದೆ ಎಂದರು. ಮತ್ತೆ ಶಂಕುಸ್ಥಾಪನೆ ಮಾಡುತ್ತಿರುವ ಆರಗ ತಾವು … Read more

ಸಾಲ, ಬಡ್ಡಿ, ಬ್ಲಾಂಕ್ ಚೆಕ್ಕುಗಳಿಗೆ ಹೆದರಿ ವಿಷ ಕುಡಿದ ಹೊಸನಗರದ ಯುವಕ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಸಾಲ ಕೊಟ್ಟವರು ಮನೆಗೆ ಬಾಗಿಲಿಗೆ ಬಂದು ಬೆದರಿಸಿ, ಕೋರ್ಟ್’ನಲ್ಲಿ ಪ್ರಕರಣ ದಾಖಲಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಕುಡಿದಿದ್ದ ಯುವಕನನ್ನು ಆತನ ಸ್ನೇಹಿತರೇ ಆಸ್ಪತ್ರೆಗೆ  ದಾಖಲಿಸಿದ್ದಾರೆ. ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಹೊಸನಗರ ತಾಲೂಕಿನ ಕಲ್ಲುಕೊಪ್ಪ ಗ್ರಾಮದ ನಾಗರಾಜ್ (20) ಆತ್ಮಹತ್ಯೆಗೆ ಯತ್ನಿಸಿದಾತ. ವಿಷಯ ಕುಡಿಯುವ ಮೊದಲು ನಾಗರಾಜ್ ಡೆತ್ ನೋಟ್ ಬರೆದಿದ್ದಾನೆ. ಏನಿದು ಘಟನೆ? ಗಲಾಟೆ ಮಾಡಿದ್ಯಾರು? ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್, ಸಾಗರದ … Read more