10 ರೂ. ಕೋಳಿ ಮರಿಗೆ ಬಸ್ಸಲ್ಲಿ ಹಾಫ್ ಟಿಕೆಟ್, ಹೊಸನಗರದಲ್ಲಿ ಸ್ವಾರಸ್ಯಕರ ಪ್ರಕರಣ | ವಿಡಿಯೋ ನ್ಯೂಸ್

010121 Hosanagara Half Ticket for chicken

ಶಿವಮೊಗ್ಗದ ಲೈವ್.ಕಾಂ | HOSANAGARA NEWS |  1 ಜನವರಿ 2022 KSRTC ಬಸ್ಸಿನಲ್ಲಿ ಕೋಳಿ ಮರಿ ಒಂದಕ್ಕೆ ಹಾಫ್ ಟಿಕೆಟ್ ಚಾರ್ಜ್ ಮಾಡಲಾಗಿದೆ. ಈ ಸ್ವಾರಸ್ಯಕರ ಪ್ರಸಂಗ ಹೊಸಗರದಲ್ಲಿ ವರದಿಯಾಗಿದೆ. ಹೊಸನಗರದಿಂದ ಶಿರೂರಿಗೆ ಹೊರಟಿದ್ದ KSRTC ಬಸ್ಸಿನಲ್ಲಿ ಘಟನೆ ನಡೆದಿದೆ. ಈ ಬೆಳವಣಿಗೆ ಉಳಿದ ಪ್ರಯಾಣಿಕರನ್ನು ಅವಕ್ಕಾಗಿಸಿದೆ. ಏನಿದು ಹಾಫ್ ಟಿಕೆಟ್ ಕೇಸ್? ಅಲೆಮಾರಿ ಕುಟುಂಬವೊಂದು ಶಿರೂರಿಗೆ ತೆರಳುತ್ತಿತ್ತು. ಈ ಕುಟುಂಬ ಶಿರಸಿಯಲ್ಲಿ ಹತ್ತು ರುಪಾಯಿ ಕೊಟ್ಟು ಕೋಳಿ ಮರಿಯೊಂದನ್ನು ಖರೀದಿಸಿತ್ತು. ಖಾಸಗಿ ಬಸ್’ನಲ್ಲಿ ಹೊಸನಗರಕ್ಕೆ … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಬಂದ್ ಮಾಡಿದ ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು

311221 Malur Government School Students Protest against Forest Department

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  31 ಡಿಸೆಂಬರ್ 2021 ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸರ್ಕಾರಿ ಶಾಲೆ ಮಕ್ಕಳು ಆಕ್ರೋಶ ವ್ಯಕ್ತಪಡಿಸಿ, ದಿಢೀರ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಧ್ಯ ಪ್ರವೇಶ ಮಾಡಿದ್ದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯರು ಇವತ್ತು ಪ್ರತಿಭಟನೆ ನಡೆಸಿದರು. ತರಗತಿ … Read more

ಭದ್ರಾವತಿಯಲ್ಲಿ ಪೊಲೀಸರ ದಾಳಿ, ಮತ್ತೆ ಸಿಕ್ಕವು ರಾಶಿ ರಾಶಿ ಮೊಬೈಲ್’ಗಳು

311221 Bhadravathi Mobile Theft gang arrest

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  31 ಡಿಸೆಂಬರ್ 2021 ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ ಮೊಬೈಲ್ ಫೋನ್’ಗಳನ್ನು ಭದ್ರಾವತಿಯಲ್ಲಿ ಹಂಚಿಕೊಳ್ಳುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಭದ್ರಾವತಿ ಆನ್ವರ್ ಕಾಲೋನಿಯ ಸೈಯದ್ ಅಲ್ವಿ (25) ಬಂಧಿತ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಕದ್ದ ಮೊಬೈಲ್’ಗಳನ್ನು ಮೂವರು ಹಂಚಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ. ರಾಶಿ ರಾಶಿ ಮೊಬೈಲ್’ಗಳು ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್ ಅವರು … Read more

ಪಾರ್ಕಿಂಗ್ ವಿಚಾರದಲ್ಲಿ ಜಗಳವಾಡಿ ಕೊಲೆ ಮಾಡಿದವನಿಗೆ ಶಿವಮೊಗ್ಗ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

prison hand cuff image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಕ್ಷುಲಕ ವಿಚಾರಕ್ಕೆ ಜಗಳವಾಡಿ, ಚಾಕು ಚುಚ್ಚಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆಯಾಗಿದೆ. ಶಿವಮೊಗ್ಗ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಸೈಯದ್ ಜಾಫರ್ ಮುಲ್ಲಾ (26) ಎಂಬಾತನನ್ನು ಜಾವಿದ್ ಬೇಗ್ (20) ಎಂಬಾತ ಹತ್ಯೆಗೈದಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕಬ್ಬಿನ ಹಾಲು, ಪಾರ್ಕಿಂಗ್, ಜಗಳ ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಜಯ ಕರ್ನಾಟಕ ರೈಸ್ ಮಿಲ್ ಮುಂಭಾಗ … Read more

ಮೂರು ಗ್ರಾಮ ಪಂಚಾಯಿತಿಗಳ ಚುನಾವಣೆ ಫಲಿತಾಂಶ ಪ್ರಕಟ, ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಗೆದ್ದಿದ್ದಾರೆ?

301221 grama panchayath election counting in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಅವಧಿ ಮುಗಿದ ಮೂರು ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಇವತ್ತು ಮತ ಎಣಿಕೆ ಕಾರ್ಯ ನಡೆದಿದ್ದು, ಮೂರು ಗ್ರಾಮ ಪಂಚಾಯಿತಿಗಳ 39 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗದ ತಾಲೂಕು ಕುಂಸಿ ಗ್ರಾಮ ಪಂಚಾಯಿತಿ 16 ಸ್ಥಾನಕ್ಕೆ ಚುನಾವಣೆ ನಡೆದಿತ್ತು. 55 ಆಕಾಂಕ್ಷಿಗಳು ಸ್ಪರ್ಧೆ ಮಾಡಿದ್ದರು. ಕುಂಸಿ -1 ಕ್ಷೇತ್ರದಿಂದ –  ಕೆ.ಹೆಚ್.ಕೇಶವಮೂರ್ತಿ(ಬಿಸಿಎಂ – ಅ), ಸತ್ಯವತಿ (ಸಾಮಾನ್ಯ ಮಹಿಳೆ), ಕೆ.ಪಿ.ಶಾರದಾ (ಬಿಸಿಎಂ … Read more

ತೀರ್ಥಹಳ್ಳಿಯಿಂದ ವಿಧಾನಸೌಧಕ್ಕೆ ಪಾದಯಾತ್ರೆ, ನಾಳೆ ಶಿವಮೊಗ್ಗಕ್ಕೆ ಎಂಟ್ರಿ

301221 Guest Lecturers Padayatre from thirthahalli

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  30 ಡಿಸೆಂಬರ್ 2021 ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ತೀರ್ಥಹಳ್ಳಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಇವತ್ತು ಪಾದಯಾತ್ರೆ ಎರಡನೇ ದಿನ ಪೂರ್ಣಗೊಳಿಸಿದ್ದು, ನಾಳೆ ಶಿವಮೊಗ್ಗಕ್ಕೆ ಪ್ರವೇಶಿಸಲಿದೆ. ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಾದಯಾತ್ರೆಗೆ ಕಾರಣವೇನು? ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹಲವು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. … Read more

ಭದ್ರಾವತಿಯಲ್ಲಿ ಪೊಲೀಸರ ದಾಳಿ, 26 ಮಂದಿ ವಿರುದ್ಧ ಕೇಸ್

Bhadravathi News Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  30 ಡಿಸೆಂಬರ್ 2021 VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಭದ್ರಾವತಿ ನ್ಯೂಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 26 ಮಂದಿಯನ್ನು ಬಂಧಿಸಿ, ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿರುವ VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್’ನಲ್ಲಿ, ಅಂದರ್ ಬಾಹರ್ ಆಟವಾಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕ್ಲಬ್’ನಲ್ಲಿ 26 ಮಂದಿ ವಿವಿಧ ಟೇಬಲ್’ಗಳಲ್ಲಿ ಕುಳಿತು ಅಂದರ್ ಬಾಹರ್ … Read more

ಮಂಡಗದ್ದೆ ಸಮೀಪ ಲಾರಿ, ಬಸ್ ಮುಖಾಮುಖಿ ಡಿಕ್ಕಿ

301221 Bus Truck Accident Near Manadagadde

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಮಂಡಗದ್ದೆ ಸಮೀಪ ಬಸ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಮಂಡಗದ್ದೆ – ಸಕ್ರೆಬೈಲು ನಡುವೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತಿತ್ತು. ಕ್ಯಾಂಟರ್ ವಾಹನ ಅಡಕೆ ತುಂಬಿಕೊಂಡು ಶಿವಮೊಗ್ಗದ ಕಡೆಗೆ ಬರುತ್ತಿತು ಬಸ್ ಪ್ರಯಾಣಿಕರಿಗೆ ಗಾಯ ಘಟನೆಯಲ್ಲಿ ಬಸ್ಸಿನಲ್ಲಿದ್ದ … Read more

ವಾರ್ಡುಗಳ ಪುನರ್ ವಿಂಗಡಣೆ, ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ, ಯಾವೆಲ್ಲ ವಾರ್ಡ್ ಪುನರ್ ವಿಂಗಡಣೆಯಾಗಿದೆ?

DC Office 1

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ಪುನರ್ ವಿಂಗಡಣೆ ಮಾಡಿ, ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳು, ಸಲಹೆಗಳಿದ್ದರೆ ತಿಳಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯಿತಿ ವಾರ್ಡುಗಳ ಪುನರ್ ವಿಂಗಡನೆ ಮಾಡಲಾಗಿದೆ. ಡಿಸೆಂಬರ್ 27ರಂದು ರಾಜ್ಯ ಪತ್ರದಲ್ಲಿ ಪುನರ್ ವಿಂಗಡಣೆಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಪತ್ರದಲ್ಲಿ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಅಕ್ಷೇಪಣೆಗಳು, … Read more

ಸಿಗಂದೂರು ಸಮೀಪದ ಸರ್ಕಾರಿ ಶಾಲೆಗೆ ತಹಶೀಲ್ದಾರ್ ಭೇಟಿ, ಪರಿಶೀಲನೆ, ಭೂಮಿ ಮಂಜುರಾತಿ ಬಗ್ಗೆ ಮಹತ್ವದ ಚರ್ಚೆ

301221 Tahasildhar Visit tumari Govt School

ಶಿವಮೊಗ್ಗದ ಲೈವ್.ಕಾಂ | TUMARI NEWS |  30 ಡಿಸೆಂಬರ್ 2021 ಸಿಗಂದೂರು ಸಮೀಪದ ತುಮರಿ ಸರ್ಕಾರಿ ಶಾಲೆಯ ಭವಿಷ್ಯಕ್ಕೆ ಅಗತ್ಯವಾಗಿರುವ ಭೂಮಿ ಮಂಜೂರಾತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾಗರ ತಹಸೀಲ್ದಾರ್‌ ಚಂದ್ರಶೇಖರ ನಾಯ್ಕ ಹೇಳಿದರು. ಹಿರಿಯ ಪಾಥಮಿಕ ಶಾಲೆಯ ಜಾಗದ ಖಾತೆ ಬದಲಾವಣೆ ಹಿನ್ನೆಲೆಯಲ್ಲಿ ಜಾಗ ಮಂಜೂರಾತಿ ಭಾಗವಾಗಿ ಬುಧವಾರ ತುಮರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಹೋರಾಟ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರ ಜತೆ ಚರ್ಚೆ ನಡೆಸಿ ಮಾತನಾಡಿ, ಶಾಲಾ ಕಟ್ಟಡ ಮತ್ತು … Read more