ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಡಿ.27ರಂದು ಕೆಲವು ಶಾಲೆ, ಕಾಲೇಜುಗಳಿಗೆ ರಜೆ

DC Office 1

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಶಾಲೆ, ಕಾಲೇಜುಗಳಲ್ಲಿ ಮತದಾನ ಕೇಂದ್ರ ಇರಲಿದೆ. ಮತಗಟ್ಟೆಗಳು ಇರುವ ಶಾಲೆ, ಕಾಲೇಜುಗಳಿಗೆ ಆ ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವಧಿ ಮುಗಿದ ಗ್ರಾಮ ಪಂಚಾಯಿತಿಗಳು ಮತ್ತು ವಿವಿಧ ಕಾರಣಕ್ಕೆ ತೆರವಾಗಿರುವ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಡಿ.27ರಂದು ಉಪ ಚುನಾವಣೆ ನಡೆಯಲಿದೆ. ಶಾಲೆ, ಕಾಲೇಜುಗಳಲ್ಲಿ ಮತಗಟ್ಟೆ … Read more

ಉಪಾಧ್ಯಕ್ಷೆ ವಿರುದ್ಧ ಆಕ್ರೋಶ, ಗ್ರಾಮ ಸಭೆ ಬಹಿಷ್ಕಾರ, ಮತ್ತೊಮ್ಮೆ ಚುನಾವಣೆ ಎದುರಿಸುವಂತೆ ಸವಾಲು

221221 Ripponpete GP Members Protest in GP

ಶಿವಮೊಗ್ಗದ ಲೈವ್.ಕಾಂ |  RIPPONPETE NEWS |  22 ಡಿಸೆಂಬರ್ 2021 ಉಪಾಧ್ಯಕ್ಷೆಯ ರಾಜೀನಾಮೆಗೆ ಆಗ್ರಹಿಸಿ ಗ್ರಾಮ ಸಭೆಯನ್ನು ಬಹಿಷ್ಕರಿಸಿದ ಸದಸ್ಯರು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಇವತ್ತು ನಿಗದಿಯಾಗಿದ್ದ ಗ್ರಾಮ ಸಭೆಯನ್ನು ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಹಿಷ್ಕಾರ ಮಾಡಿದರು. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. … Read more

ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ, ಸಚಿವರ ಮಹತ್ವದ ಸಭೆ, ಏನೆಲ್ಲ ನಿರ್ಣಯ ಕೈಗೊಳ್ಳಲಾಯ್ತು?

Kodachadri-Road-Problem

ಶಿವಮೊಗ್ಗದ ಲೈವ್.ಕಾಂ |  BELAGAVI NEWS |  22 ಡಿಸೆಂಬರ್ 2021 ಬೆಳಗಾವಿ ಅಧಿವೇಶನದ ಸಂದರ್ಭ ಕೊಡಚಾದ್ರಿ ಬೆಟ್ಟದ ರಸ್ತೆ ಅಭಿವೃದ್ಧಿ ಕುರಿತು ಮಹತ್ವದ ಸಭೆ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಅರಣ್ಯ ಸಚಿವ ಉಮೇಶ್ ಕತ್ತಿ, ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಕೊಡಚಾದ್ರಿ ಬೆಟ್ಟ ರಸ್ತೆ ಕಾಮಗಾರಿ ಪ್ರಾರಂಭಿಸಲು ಇರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಬೇಕು. ರಸ್ತೆ ನಿರ್ಮಿಸುವ ಯೋಜನೆ ಕಾರ್ಯಕ್ಕೆ ಮುಂದಾಗಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು. ಅರಣ್ಯ ಇಲಾಖೆಯ … Read more

ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

221221 Indira Gandhi College Students Protest at Sagara

ಶಿವಮೊಗ್ಗದ ಲೈವ್.ಕಾಂ | SAGARA NEWS |  22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಮೇಲೆ ಹಲ್ಲೆ, ಒಂದು ಲಕ್ಷ ಮೌಲ್ಯದ ಕನ್ನಡಕ ಹಾನಿ, ಕೇಸ್ ದಾಖಲು

SHIRALAKOPPA-SHIKARIPURA-NEWS

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರ್ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ಒಂದು ಲಕ್ಷ ರೂ. ಮೌಲ್ಯದ ಕನ್ನಡಕ ಹಾಳು ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏನಿದು ಪ್ರಕರಣ? ವೀರಭದ್ರಪ್ಪ ಪೂಜಾರ್ ಅವರ ಮೇಲೆ ಅವರ ಸಂಬಂಧಿಯೇ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಹಳೆ ದ್ವೇಷದ ಮೇಲೆ ಹಲ್ಲೆಯಾಗಿದೆ … Read more

ಇವತ್ತು ರಾತ್ರಿವರೆಗೂ ಕುಂಸಿ ರೈಲ್ವೆ ಗೇಟ್ ಬಂದ್, ಪರ್ಯಾಯ ಮಾರ್ಗ ಯಾವುದು ಗೊತ್ತಾ?

KUMSI-NEWS

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ನೈಋತ್ಯ ರೈಲ್ವೆಯ ಶಿವಮೊಗ್ಗ ವಿಭಾಗದ ರೈಲ್ವೆ ಲೆವೆಲ್ ಕ್ರಾಸ್-79(ಕುಂಸಿ ರೈಲ್ವೆ ಗೇಟ್)ರಲ್ಲಿ ತಾಂತ್ರಿಕ ಪರಿಶೀಲನೆ ನಿಮಿತ್ತ ಡಿ.22ರ ರಾತ್ರಿ 7ರವರೆಗೆ ಗೇಟ್ ಬಂದ್ ಮಾಡಲಾಗಿದೆ. ಕುಂಸಿ – ಆನಂದಪುರ ನಡುವೆ ಲಘು ಮತ್ತು ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದು ಪರ್ಯಾಯ ಮಾರ್ಗ? ಶಿವಮೊಗ್ಗದಿಂದ ತೆರಳುವ ಭಾರಿ ವಾಹನಗಳು ಆಯನೂರು, 5ನೇ ಮೈಲಿಗಲ್ಲು, ಸೂಡೂರು, … Read more

BREAKING NEWS | ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟ ಓಮಿಕ್ರಾನ್ ಸೋಂಕು

breaking news graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯಲ್ಲೂ ಕರೋನ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಡಿ.ಸುಧಾಕರ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಭದ್ರಾತಿಯಲ್ಲಿ 20 ವರ್ಷ ಯುವತಿಯೊಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ 7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಈ ಪೈಕಿ … Read more

ಕುವೆಂಪು ವಿವಿ ಕ್ಯಾಂಪಸ್’ನಲ್ಲಿ ಪ್ರೊಫೆಸರ್, ವಿದ್ಯಾರ್ಥಿ ಸೇರಿ ಮೂವರ ಮೇಲೆ ಹೆಜ್ಜೇನು ದಾಳಿ

Kuvempu University General Image 1

ಶಿವಮೊಗ್ಗ ಲೈವ್.ಕಾಂ | SHANKARAGHATTA NEWS | 17 ಡಿಸೆಂಬರ್ 2021 ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್’ನಲ್ಲಿ ಹೆಜ್ಜೇನು ದಾಳಿಗೆ ತುತ್ತಾಗಿ ವಿದ್ಯಾರ್ಥಿಯೊಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ದಾಖಲು ಮಾಡಲಾಗಿದೆ. ಇವತ್ತು ಸಂಜೆ ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್’ನ ಕಲಾ ವಿಭಾಗದ ಕಟ್ಟಡದ ಮುಂದೆ ಘಟನೆ ಸಂಭವಿಸಿದೆ. ಪತ್ರಿಕೋದ್ಯಮ ವಿಭಾಗದ ಪ್ರೊ. ಡಿ.ಎಸ್.ಪೂರ್ಣಾನಂದ, ಕಚೇರಿ ಸಹಾಯಕ ನಾಗರಾಜ್, ಸಂಶೋಧನಾ ವಿದ್ಯಾರ್ಥಿ ಪ್ರವೀಣ್ ಎಂಬುವವರ ಮೇಲೆ ಹೆಜ್ಜೇನುಗಳು ದಾಳಿ ಮಾಡಿವೆ. ಕಲಾ … Read more

ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

171221 Mobile Theft Case Arrest at Bhadravathi Old Town

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಬೈಕ್ ಸವಾರರನ್ನು ಹಿಡಿದು, ಕೈಯಲ್ಲಿದ್ದ ಬ್ಯಾಗ್ ತಪಾಸಣೆಗೆ ಒಳಪಡಿಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿವೆ. ಕಳ್ಳರನ್ನು ಬಂಧಿಸಿದ ಪೊಲೀಸರು ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಹೊಸಮನೆ ಬಡಾವಣೆಯ ಸಿ.ಶ್ರೀನಿವಾಸ್ (26) ಮತ್ತು ದುರ್ಗಿನಗರದ ಅಜಾಮ್ ಅಲಿಯಾಸ್ ಬಾಬು (38) ಬಂಧಿತರು. ಬ್ಯಾಗ್’ನಲ್ಲಿತ್ತು ರಾಶಿ ರಾಶಿ ಮೊಬೈಲ್ ಮೊಬೈಲ್ ಕಳ್ಳರ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಭದ್ರಾವತಿಯ ಸೀಗೆಬಾಗಿ … Read more

ಸವಳಂಗ ಬಳಿ ಭೀಕರ ಅಪಘಾತ, ಭದ್ರಾವತಿಯ ಮೂವರು ಮಹಿಳೆಯರು ಸೇರಿ ನಾಲ್ವರು ಸಾವು, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

171221 Car Bus Accident Near Savalanga

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 ಡಿಸೆಂಬರ್ 2021 ಸವಳಂಗ ಸಮೀಪ KSRTC ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ KSRTC ಬಸ್’ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ. ಸವಳಂಗ ಸಮೀಪದ ಕಲ್ಲಾಪುರ ಬಳಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಚಾಲಕ ಮತ್ತು ಮತ್ತೊಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ … Read more