‘ಸಿಗಂದೂರು 108 ಆಂಬುಲೆನ್ಸ್’ ಕಣ್ಮರೆ, ಹೊರಜಗತ್ತಿಗೆ ಗೊತ್ತಾಗಬೇಕಿರುವ ಐದು ಸಂಗತಿ ಇಲ್ಲಿದೆ

Tumari Ambulance in Near Sigandur

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಡಿಸೆಂಬರ್ 2021 ಶರಾವತಿ ಹಿನ್ನೀರು ಭಾಗದ ದ್ವೀಪದ ಜನರ ಆರೋಗ್ಯದ ವಿಚಾರದಲ್ಲಿ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರ ಪರಿಣಾಮ ಕಳೆದ 24 ಗಂಟೆಯಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಆಂಬುಲೆನ್ಸ್ ಸೇವೆ ಇಲ್ಲದಿರುವುದಕ್ಕೆ ಇಬ್ಬರು ಬಲಿಯಾಗಿದ್ದಾರೆ. ಸಿಗಂದೂರು ಸಮೀಪದ ತುಮರಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಸರ್ಕಾರ ಇದಕ್ಕೆ 108 ಆಂಬುಲೆನ್ಸ್ ಒದಗಿಸಿತ್ತು. ಅದನ್ನು ‘ಸಿಗಂದೂರು 108 ಆಂಬುಲೆನ್ಸ್’ ಎಂದೇ ಆರೋಗ್ಯ ಇಲಾಖೆ ಸಿಬ್ಬಂದಿ ಬಣ್ಣಿಸುತ್ತಿದ್ದರು. ಆದರೆ, ಜನರ … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ವಿಜೃಂಭಣೆಯ ರಥೋತ್ಸವ

171221 Bhadravathi Hutta colony veeranjaneya rathotsava

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ … Read more

‘ಸಿಗಂದೂರು 108’ ಆಂಬುಲೆನ್ಸ್ ಸಿಗದೆ ಮತ್ತೊಂದು ಸಾವು, 24 ಗಂಟೆಯಲ್ಲಿ ಹಾರಿ ಹೋಯ್ತು ಇಬ್ಬರ ಪ್ರಾಣ ಪಕ್ಷಿ

161221 Sigandur Launch Baby girl death

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಡಿಸೆಂಬರ್ 2021 ತುರ್ತು ಸಂದರ್ಭ ಆಂಬುಲೆನ್ಸ್ ಸಿಗದೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ. ತುಮರಿ ಭಾಗದಲ್ಲಿ ಆಂಬುಲೆನ್ಸ್ ಇಲ್ಲದಿರುವುದರಿಂದ ಕಳೆದ 24 ಗಂಟೆ ಅವಧಿಯಲ್ಲಿ ಇಬ್ಬರು ಜೀವ ಕಳೆದುಕೊಂಡಂತಾಗಿದೆ. ಬೈಕ್ ಅಪಘಾತಕ್ಕೀಡಾಗಿ ತಲೆಗೆ ತೀವ್ರ ಪೆಟ್ಟಾಗಿದ್ದ ನಾರಾಯಣ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕಿತ್ಸೆ ಫಲಿಸದೆ ನಾರಾಯಣ ಅವರು ಸಂಜೆ ಮೃತಪಟ್ಟಿದ್ದಾರೆ. ಆಂಬುಲೆನ್ಸ್ ಸಿಗದೆ ನರಳಾಡಿದ್ದರು ನಾರಾಯಣ ಅವರು ಬುಧವಾರ  ರಾತ್ರಿ ಬೈಕ್’ನಲ್ಲಿ ತುಮರಿಯಿಂದ ಕಳಸವಳ್ಳಿಯಲ್ಲಿರುವ ಮನೆಗೆ ತೆರಳುತ್ತಿದ್ದರು. ಈ … Read more

ಸ್ನಾನ ಮಾಡಲು ಕೆರೆಗೆ ಇಳಿದಿದ್ದ ಯುವಕ ನಾಪತ್ತೆ, ಶೋಧ ಕಾರ್ಯದ ಬಳಿಕ ಸಿಕ್ತು ಮೃತದೇಹ

soraba map graphics

ಶಿವಮೊಗ್ಗ ಲೈವ್.ಕಾಂ | SORABA NEWS | 16 ಡಿಸೆಂಬರ್ 2021 ಕೆರೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಯುವಕನ ಮೃತದೇಹ ಪತ್ತೆ ಮಾಡಿದ್ದಾರೆ. ಸೊರಬ ತಾಲೂಕು ಹಿರೇಶಕುನ ಕೆರೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸೊರಬಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಶಂಕರ ವೆಂಕಟೇಶಪ್ಪ (30) ಮೃತ ದುರ್ದೈವಿ. ಸ್ನಾನ ಮಾಡಲು ಕೆರೆಗೆ ಇಳಿದಿದ್ದ ಶಂಕರ ವೆಂಕಟೇಶಪ್ಪ ನೀರಿನಲ್ಲಿ ಮುಳುಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. … Read more

ಶರಾವತಿ ಹಿನ್ನೀರು, ಸಿಗಂದೂರು ಲಾಂಚ್ ಪ್ರವಾಸಿಗರಿಗಷ್ಟೇ ಸ್ವರ್ಗ, ಕಳೆದ ರಾತ್ರಿಯ ಘಟನೆ ತುಮರಿ ಜನರಲ್ಲಿ ಹೆಚ್ಚಿಸಿದೆ ಆತಂಕ

161221 Sigandur Launch Baby girl death

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ಘಟನೆ 1 : ಹೆರಿಗೆ ನೋವಿನಿಂದ ಬಳಲಿಕೆ ಸಂಜೆ 6 ಗಂಟೆಗೆ ಚದರವಳ್ಳಿ ಗ್ರಾಮದ ಚೈತ್ರಾ ಅವರಿಗೆ ಹೆರಿಗೆ ನೋವು ಶುರುವಾಯ್ತು. ಕುಟುಂಬದವರು 108 ಆಂಬುಲೆನ್ಸ್’ಗೆ ಕರೆ ಮಾಡಿದರು. ರಾತ್ರಿಯಾದರೂ ಆಂಬುಲೆನ್ಸ್ ಸುಳಿವಿಲ್ಲ. ಹೆರಿಗೆ ನೋವಿನಿಂದ ನರಳುತ್ತಿದ್ದ ಚೈತ್ರಾ ಅವರನ್ನು ಕಾರೊಂದರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ರಾತ್ರಿ ಹೆರಿಗೆಯಾಯ್ತು. ಹೆಚ್ಚಿನ ಚಿಕಿತ್ಸೆಗೆ ನಡುರಾತ್ರಿ ಹೊತ್ತಿಗೆ ಸಾಗರದ ಆಸ್ಪತ್ರೆಗೆ ಕಳುಹಿಸಲಾಯಿತು. ಬೆಳಗಾಗುವುದರಲ್ಲಿ ಮಗು ಸಾವನ್ನಪ್ಪಿದೆ. … Read more

ಒಕ್ಕಲಿಗರ ಸಂಘದ ಚುನಾವಣೆ, ಧರ್ಮೇಶ್’ಗೆ ಭರ್ಜರಿ ಗೆಲುವು, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತ ಬಂದಿದೆ?

151221 Dharmesh Wins in Okkaliga Election

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಡಿಸೆಂಬರ್ 2021 ತೀವ್ರ ಕುತೂಹಲ ಕೆರಳಿಸಿದ್ದ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ತೀರ್ಥಹಳ್ಳಿಯ ಧರ್ಮೇಶ್ ಸಿರಿಬೈಲು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಭದ್ರಾವತಿಯ ಕುಮಾರ್ ಅವರಿಗಿಂತಲೂ ಎರಡು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಧರ್ಮೇಶ್ ಅವರು 5808 ಮತಗಳನ್ನು ಪಡೆದಿದ್ದಾರೆ. ಕುಮಾರ್ ಅವರು 3486 ಮತಗಳನ್ನು ಗಳಿಸಿದ್ದಾರೆ. ಬಹುಮತ ಪಡೆದ ಧರ್ಮೇಶ್ ಅವರನ್ನು ಜಯಶಾಲಿ ಎಂದು ಘೋಷಿಸಲಾಯಿತು. ಬೆಂಬಲಿಗರಿಂದ ಸಂಭ್ರಮಾಚಾರಣೆ ಧರ್ಮೇಶ್ … Read more

ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ರಾತ್ರಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ, ಆಕ್ರೋಶಗೊಂಡ ಜನರಿಂದ ರಸ್ತೆತಡೆ

131221 Road Block Protest in Hosasiddapura at Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಡಿಸೆಂಬರ್ 2021 ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯ ಹೊಸಸಿದ್ಧಾಪುರ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಹೊಸಸಿದ್ಧಾಪುರದಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಬಿಡಿಸಲು ಹೋದ ಸ್ಥಳೀಯರ ಮೇಲೂ ದಾಳಿ ಮಾಡಿದೆ. ನಶೆಯಲ್ಲಿದ್ದವರಿಂದ ಏಕಾಏಕಿ ಅಟ್ಯಾಕ್ ರಾತ್ರಿ ಹೊಸ ಸಿದ್ಧಾಪುರದಲ್ಲಿ ಸುಮಾರು ಎಂಟು … Read more

ಎತ್ತುಗಳ ಮೈತೊಳೆಯಲು ಹೋದ ರೈತ ನೀರುಪಾಲು

131221 Soraba Varada River Famer Drowned

ಶಿವಮೊಗ್ಗ ಲೈವ್.ಕಾಂ | SORABA NEWS | 13 ಡಿಸೆಂಬರ್ 2021 ಎತ್ತುಗಳ ಮೈ ತೊಳೆಯಲು ಹೋಗಿದ್ದ ರೈತ ಕಾಲ ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಮೂಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೂಡಿ ಗ್ರಾಮದ ರೈತ ಶಶಿಧರ ಗೊಳೇರ್ (42) ಮೃತ ರೈತ. ಭಾನುವಾರ ಬೆಳಗ್ಗೆ ಎತ್ತುಗಳ ಮೈ ತೊಳೆಯಲು ಶಶಿಧರ ವರದಾ ನದಿ ಕಡೆಗೆ ಬಂದಿದ್ದರು. ಈ ಸಂದರ್ಭ ಕಾಲು ಜಾರಿಗೆ ನದಿಯಲ್ಲಿ ಮುಳುಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸೊರಬ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ … Read more

ಶರಾವತಿ ನದಿಯಲ್ಲಿ ಮುಳುಗಿತು ಅಡಕೆ ಚೀಲ ತುಂಬಿದ್ದ ತೆಪ್ಪ, ಒಬ್ಬ ನೀರುಪಾಲು

131221 Nittur Teppa Drowned in Sharavathi River

ಶಿವಮೊಗ್ಗ ಲೈವ್.ಕಾಂ | HOSANGARA NEWS | 13 ಡಿಸೆಂಬರ್ 2021 ಅಡಕೆ ತುಂಬಿದ್ದ ಚೀಲ ಸಾಗಿಸುವಾಗ ಉಕ್ಕಡ ಮಗುಚಿ ಶರಾವತಿ ನದಿಯಲ್ಲಿ ಮುಳುಗಿ, ಇಬ್ಬರ ಪೈಕಿ ಒಬ್ಬ ನೀರು ಪಾಲಾಗಿದ್ದಾರೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಕೋಸ್ನಾಡಿ ಬಳಿ ಘಟನೆ ಸಂಭವಿಸಿದೆ. ನಿಟ್ಟೂರಿನ ಮಾವಿನಗುಡ್ಡೆಯ ಸ್ವಾಮಿ ಮತ್ತು ಚಂಗೊಳ್ಳಿ ನಾರಾಯಣ ಅವರು ಭಾನುವಾರ ಮಧ್ಯಾಹ್ನ ಅಡಕೆ ಚೀಲಗಳನ್ನು ಉಕ್ಕಡಕ್ಕೆ ತುಂಬಿಕೊಂಡು ಹೊಳೆ ದಾಟುತ್ತಿದ್ದರು. ಈ ಸಂದರ್ಭ ಉಕ್ಕಡ ಮುಳುಗಿದೆ. ಈಜಲಾಗದ ಮುಳುಗಿದರು ನಾರಾಯಣ ತಕ್ಷಣ ಈಜಿ … Read more

ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದ ಸದಸ್ಯರ ಪೈಕಿ ಇಬ್ಬರ ಹೊರತು ಉಳಿದವರಿಂದ ವೋಟಿಂಗ್

291121 Naluru Village Election bahishkar vidhana parishad

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 10 ಡಿಸೆಂಬರ್ 2021 ಮತದಾನ ಬಹಿಷ್ಕಾರದ ನಿರ್ಧಾರ ಪ್ರಕಟಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ ಇಬ್ಬರ ಹೊರತು ಉಳಿದವರು ಮತದಾನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಲಾಗಿತ್ತು. ಮರಳು ಕ್ವಾರಿಗಳ ರಾಜಧನ ಬಿಡುಗಡೆ ಮಾಡಲು, ಸರ್ಕಾರ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿಯ ಏಳು ಸದಸ್ಯರು ನಿರ್ಧರಿಸಿದ್ದರು. ಐವರು ಮತದಾನ ಮಾಡಿದರು … Read more