‘ಕಾಂಗ್ರೆಸ್ ಧೂಳಿಪಟವಾಗಲಿದೆ’, ಯಡಿಯೂರಪ್ಪ ಭವಿಷ್ಯ, ಪರಿಷತ್ ಚುನಾವಣೆ ಬಗ್ಗೆ ಮಾಜಿ ಸಿಎಂ ಹೇಳಿಕೆಯ ಪ್ರಮುಖಾಂಶ ಇಲ್ಲಿದೆ

101221 Yedyurappa Visit to Purasabhe in Shikaripura for voting

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರ ಪುರಸಭೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳಿಗೆ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಪ್ರತಿಕ್ರಿಯೆಯ ಪ್ರಮುಖಾಂಶಗಳು ‘ನಾನು ಈಗಾಗಲೆ ಹೇಳಿದ್ದೇನೆ ಕನಿಷ್ಠ 15 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ.’ ‘ಶಿವಮೊಗ್ಗದಲ್ಲಿ … Read more

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ ಮತದಾನ

101221 Yedyurappa and Raghavendra voting in shikaripura

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಒಟ್ಟಿಗೆ ಬಂದು ಮತದಾನ ಮಾಡಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಮತದಾನಕ್ಕೂ ಮೊದಲು ಯಡಿಯೂರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಡಿ.ಎಸ್.ಅರುಣ್ ಅವರೊಂದಿಗೆ ವಿಶೇಷ … Read more

ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ, ಬೆದರಿಕೆ, ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡವೆಷ್ಟು?

Sagara-Court-General-Image.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 9 ಡಿಸೆಂಬರ್ 2021 ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 2017ರಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಸಾಗರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆ, ಇವತ್ತು ಶಿಕ್ಷೆ ಅವಧಿಯನ್ನು ಪ್ರಕಟಿಸಲಾಯಿತು. ಏನಿದು ಪ್ರಕರಣ? 2017ರ ಏಪ್ರಿಲ್ 17ರಂದು ಸಾಗರ ರಾಮನಗರದ ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ … Read more

ಭದ್ರಾವತಿಯಲ್ಲಿ ಕರೋನ ಆತಂಕ, ಖಾಸಗಿ ಆಸ್ಪತ್ರೆ, ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್

091221 Covid Case Hospital Seal Down

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಡಿಸೆಂಬರ್ 2021 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಭದ್ರಾವತಿಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಆಸ್ಪತ್ರೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭ 24 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ಮೇರೆಗೆ ಆಸ್ಪತ್ರೆಯ ಒಪಿಡಿ ಮತ್ತು ನರ್ಸಿಂಗ್ ಹಾಸ್ಟೆಲ್ ಬಂದ್ ಮಾಡಲಾಗಿದೆ. ‘ನರ್ಸಿಂಗ್ ಕಾಲೇಜಿನಲ್ಲಿ 24 … Read more

ಹೊಸ ಟ್ರಾಕ್ಟರ್ ಟ್ರಯಲ್ ನೋಡುವಾಗ ಪಲ್ಟಿ, ಯುವಕ ಸಾವು

091221 Tractor Accident at Hosakoppa

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಡಿಸೆಂಬರ್ 2021 ಹೊಸ ಟ್ರಾಕ್ಟರ್ ಇಂಜಿನ್ ಟ್ರಯಲ್ ನೋಡುವಾಗ ಪಲ್ಟಿಯಾಗಿ ಯುವಕನೊಬ್ಬ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಹೊಸಕೊಪ್ಪ ತಾಂಡಾದ ಚಾನೆಲ್ ಬಳಿ ಘಟನೆ ಸಂಭವಿಸಿದೆ. ಹೊಸಕೊಪ್ಪ ತಾಂಡಾದ ಶಶಿನಾಯ್ಕ (30) ಮೃತ ಯುವಕ. ಹೊಸಾ ಟ್ರಾಕ್ಟರ್ ಖರೀದಿಸಿದ್ದು ಟ್ರಯಲ್ ನೋಡುವಾಗ ರಸ್ತೆಯಲ್ಲಿ ಎದುರಿಗೆ ಬಂದ ವಾಹನ ತಪ್ಪಿಸುವಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಈ ವೇಳೆ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ ಟ್ರಾಕ್ಟರ್ ಅಡಿ ಸಿಲುಕಿಕೊಂಡು ಮೃತಪಟ್ಟಿದ್ದಾನೆ. … Read more

ಸಾಗರದಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆಗೆ ಎಎಪಿ ಪ್ಲಾನ್, ಸಭೆಯಲ್ಲಿ ಮೂರು ಪ್ರಮಖ ನಿರ್ಧಾರ

081221 Aam Admi Party Meeting at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಡಿಸೆಂಬರ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಾಗರ ತಾಲೂಕಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಾರ್ಟಿ (ಎಎಪಿ) ನಿರ್ಧರಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಅಮೃತ್ ರಾಸ್ ತಿಳಿಸಿದ್ದಾರೆ. ಸಾಗರದ ಹೊಟೇಲ್ ಒಂದರಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ನಡೆಸಿದ ತಾಲೂಕು ಅಧ್ಯಕ್ಷ ಅಮೃತ್ ರಾಸ್, ನಂತರ ನಿರ್ಧಾರ ಪ್ರಟಿಸಿದರು. ಏನೆಲ್ಲ ಸಮಾಲೋಚನೆ ಮಾಡಲಾಯ್ತು? ನಿರ್ಧಾರ 1 … Read more

ಗ್ರಾಮ ಪಂಚಾಯಿತಿ ಕಚೇರಿಗೆ ನುಗ್ಗಿ ಪಿಡಿಒಗೆ ನಿಂದನೆ, ದಾಖಲೆಗಳು ಚೆಲ್ಲಾಪಿಲ್ಲಿ ಮಾಡಿದ ಆರೋಪ, ವ್ಯಕ್ತಿ ವಿರುದ್ಧ ಕೇಸ್

crime name image

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಡಿಸೆಂಬರ್ 2021 ಏಕಾಏಕಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ನಿಂದಿಸಿ, ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ ಹಿನ್ನೆಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲೂಕು ಹಾದಿಗಲ್ಲು ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಪಿಡಿಒ ಸುಂದರೇಶ ಅವರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದ ಗುರುರಾಜ ಎಂಬುವವರು, ಪಿಡಿಒ ವಿರುದ್ಧ ಅವಾಚ್ಯ … Read more

ಆನಂದಪುರ ಬಳಿ ಬಸ್ ಹತ್ತುವಾಗ ಕೆಳಗೆ ಬಿದ್ದು ವಿದ್ಯಾರ್ಥಿನಿಗೆ ಗಾಯ, ಸಾಗರದಲ್ಲಿ ಬಸ್ ತಡೆದು ಆಕ್ರೋಶ

071221 Students Protest Against Bus driver at sagara

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ವಿದ್ಯಾರ್ಥಿಗಳು ಹತ್ತುವಾಗ ಚಾಲಕ ಏಕಾಏಕಿ ಬಸನ್ನು ಮುಂದಕ್ಕೆ ಚಲಾಯಿಸಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹೇಗಾಯ್ತು ಘಟನೆ? ಶಿವಮೊಗ್ಗ – ಸಾಗರ ಕೆಎಸ್ಆರ್ ಟಿಸಿ ಬಸ್ ಹತ್ತುವಾಗ ಸ್ವಾತಿ ಎಂಬ ವಿದ್ಯಾರ್ಥಿನಿ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಆನಂದಪುರ ಸಮೀಪ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಬಸ್ ಹತ್ತುವಾಗ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದಾನೆ. ಆಯಾತಪ್ಪಿ ವಿದ್ಯಾರ್ಥಿನಿಯಬ್ಬಳು ಕೆಳಗೆ … Read more

ರಸ್ತೆಗೆ ನಟ ಪುನೀತ್ ರಾಜಕುಮಾರ್ ಹೆಸರಿಡುವಂತೆ ಪುರಸಭೆಗೆ ಆಗ್ರಹ

071221 Puneeth Rajkumar Name to be named in Shikaripura

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 7 ಡಿಸೆಂಬರ್ 2021 ಪಟ್ಟಣದ ಬಸ್ ನಿಲ್ದಾಣ ಪಕ್ಕದ ಪೆಟ್ರೋಲ್ ಬಂಕ್ ರಸ್ತೆಗೆ ಕರ್ನಾಟಕರತ್ನ ಪುನೀತ್ ರಾಜ್‌ಕುಮಾರ್ ಹೆಸರಿಡುವಂತೆ ಆಗ್ರಹಿಸಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಸದಸ್ಯರು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದರು. ಚಲನಚಿತ್ರ ನಿರ್ದೇಶಕ ಇ.ಬಸವರಾಜ್ ಮಾತನಾಡಿ, ಪುನೀತ್ ರಾಜ್‌ಕುಮಾರ್‌ ಕೇವಲ ನಟರಾಗಿರದೆ ಸಾಮಾಜಿಕ ಕಳಕಳಿಯ ದ್ಯೋತಕವಾಗಿದ್ದರು. ಅವರ ಸಹೃದಯತೆಯೇ ಅವರನ್ನು ಜನಪ್ರಿಯತೆಯ ಉತ್ತುಂಗಕ್ಕೇರಿಸಿತ್ತು. ಅವರ ದೇಹ ನಮ್ಮಿಂದ ದೂರವಾಗಿದ್ದರೂ ಅವರ ಮಾನಸಿಕವಾಗಿ ನಮ್ಮೊಂದಿಗಿದ್ದಾರೆ. … Read more

ಸಾಗರದ ಹೆದ್ದಾರಿಯಲ್ಲಿ ಹಂಪ್’ಗಾಗಿ ವಿದ್ಯಾರ್ಥಿಗಳ ಆಗ್ರಹ

071221 Student Protest For Hump at NH in Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಶಾಲಾ, ಕಾಲೇಜು ಎದುರು ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನದಿಂದ ದಿನಕ್ಕೆ ಅಪಘಾತದ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಲಾ, ಕಾಲೇಜುಗಳಿಗೆ ಹೋಗಲು ರಸ್ತೆ ದಾಟಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು … Read more