ಮರದ ದಿಮ್ಮಿಗಳು ಉರುಳಿ ಬಿದ್ದು ಬಾಲಕಿಗೆ ಗಂಭೀರ ಗಾಯ, ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು
ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021 ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ. ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು … Read more