ಮರದ ದಿಮ್ಮಿಗಳು ಉರುಳಿ ಬಿದ್ದು ಬಾಲಕಿಗೆ ಗಂಭೀರ ಗಾಯ, ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021 ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ. ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು … Read more

ತುಂಗಾ ನಗರ ಠಾಣೆ ಪೊಲೀಸರ ದಾಳಿ, ಬಳ್ಳಾರಿಯ ಇಬ್ಬರು, ಟಿಪ್ಪುನಗರದ ಇಬ್ಬರು ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 2 ಡಿಸೆಂಬರ್ 2021 ಗಾಂಜಾ ದಂಧೆಕೋರರ ವಿರುದ್ಧ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎನ್.ಆರ್.ಪುರ ರಸ್ತೆಯಲ್ಲಿ ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ. ಮಾರಾಟಕ್ಕೆ ತಂದಿದ್ದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಎನ್.ಆರ್.ಪುರ ರಸ್ತೆಯ ಪುಟ್ಟಪ್ಪ ಕ್ಯಾಂಪ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಲೇಔಟ್’ನಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ನಾಲ್ವರು ಯುವಕರು … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more

BREAKING NEWS |ಗ್ರಾಮ ಪಂಚಾಯಿತಿ ಸದಸ್ಯರಿಂದ ಪರಿಷತ್ ಮತದಾನ ಬಹಿಷ್ಕಾರದ ನಿರ್ಧಾರ, ಕಾರಣವೇನು?

291121 Naluru Village Election bahishkar vidhana parishad

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 29 ನವೆಂಬರ್ 2021 ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಅನುದಾನವಿಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೆ ಕೆಲಸಗಳನ್ನು ಮಾಡಲಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿಯ ಏಳು ಸದಸ್ಯರು ಈ ಭಾರಿ ವಿಧಾನ ಪರಿಷತ್ ಚುನಾವಣೆಗೆ ಮತ ಹಾಕದಿರಲು ನಿರ್ಧರಿಸಿದ್ದಾರೆ. … Read more

ಪಾನಿಪೂರಿ ತಿಂದು ಮಕ್ಕಳು ಸೇರಿ ಹಲವರು ಅಸ್ವಸ್ಥ, ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಅಧಿಕಾರಿಗಳು ಸ್ಥಳಕ್ಕೆ ದೌಡು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 ನವೆಂಬರ್ 2021 ಪಾನಿಪೂರಿ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆದವರ ಕುರಿತು ಮಾಹಿತಿ ಸಂಗ್ರಹಿಸಿ, ಪರಿಶೀಲನೆ ನಡೆಸಿ, ತಿಳಿವಳಿಕೆ ನೀಡಲು ಭದ್ರಾವತಿ ನಗರಸಭೆ ಅಧಿಕಾರಿಗಳು ಇವತ್ತು ಅಪ್ಪರ್ ಹುತ್ತಾ ಬಡಾವಣೆಗೆ ಭೇಟಿ ನೀಡಿದ್ದರು. ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ ಅಧಿಕಾರಿಗಳು ಅಪ್ಪರ್ ಹುತ್ತಾಗೆ ತೆರಳಿದ್ದಾರೆ. ನಗರಸಭೆ ಆರೋಗ್ಯಾಧಿಕಾರಿ ಸತೀಶ್, ಆಶಾಲತಾ, ಆಶ್ರಯ ಸಮಿತಿ ಸದಸ್ಯ ಸತೀಶ್ ಅವರು ಬಡಾವಣೆಯಲ್ಲಿ ಪರಿಶೀಲನೆ ನಡೆಸಿದರು. ತೆರೆದುಕೊಂಡಿತು ಪಾನಿಪೂರಿಯ ಕಾರಳತೆ ಪಾನಿಪೂರಿ ಸೇವಿಸಿ … Read more

ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

281121 Milk Van Accident at Rechikoppa near Kumsi

ಶಿವಮೊಗ್ಗ ಲೈವ್.ಕಾಂ | KUMSI NEWS | 28 ನವೆಂಬರ್ 2021 ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ. ಹಾಲು ತುಂಬಿಸಿಕೊಂಡು ಹೋಗಲು ಬಂದಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಶೆಟ್ಟಿಕೆರೆಯಿಂದ ರೇಚಿಕೊಪ್ಪ ಗ್ರಾಮಕ್ಕೆ ವಾಹನ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಫೋಟೊ, ಮಾಹಿತಿ : ಈಶ್ವರ್ ರೇಚಿಕೊಪ್ಪ

ಕೂಡಲಿಯ ತುಂಗಭದ್ರಾ ಸಂಗಮ ಸ್ಥಳದಲ್ಲಿ ಮೊಸಳೆ ಪ್ರತ್ಯಕ್ಷ, ಫೋಟೊ ವೈರಲ್

281121 Crocodile found at Kudli TungaBhadra River

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 28 ನವೆಂಬರ್ 2021 ಪುಣ್ಯ ಸ್ನಾನಕ್ಕೆ ಹೆಸರಾದ ಕೂಡಲಿಯಲ್ಲಿ ಮೊಸಳೆ ಆತಂಕ ಶುರುವಾಗಿದೆ. ತುಂಗಾ, ಭದ್ರಾ ನದಿಗಳ ಸಂಗಮ ಸ್ಥಳದಲ್ಲಿ ಮೊಳಸೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ಹೊಳೆ ದಂಡೆ ಮೇಲೆ ಮೊಸಳೆಯೊಂದು ಬಹುಹೊತ್ತು ಕುಳಿತಿತ್ತು. ಸ್ಥಳೀಯರು ಇದರ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೊ ವೈರಲ್ ಆಗಿದೆ. ಮಳೆ ಮತ್ತು ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಮೊಸಳೆಗಳು ನೀರಿನ ಜೊತೆಗೆ ತೇಲಿ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೂಡಲಿ … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021 ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more

ಸಾಗರದಲ್ಲಿ ಮನೆ ಕಳ್ಳತನ ಕೇಸ್, ಹೊಳೆಹೊನ್ನೂರಿನಲ್ಲಿ ಕಳ್ಳ ಅರೆಸ್ಟ್

271121 Sagara Thief Arrest by Police

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಮನೆ ಹೆಂಚು ಇಳಿಸಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ಆರು ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರಿನ ಸುರೇಶ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಸಾಗರದ ಬೆಳಲಿಮಕ್ಕಿಯ ಮೊದಲ ಅಡ್ಡರಸ್ತೆಯ ಕಮಲಾಕರ ಎಂಬುವವರ ಮನೆ ಕಳ್ಳತನವಾಗಿತ್ತು. ಮನೆ … Read more

ಪಾನಿಪೂರಿ ತಿಂದ ಹಲವರು ಅಸ್ವಸ್ಥ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ, ದೂರು ನೀಡಲು ಹಿಂದೇಟು

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 27 ನವೆಂಬರ್ 2021 ಪಾನಿಪೂರಿ ಸೇವಿಸಿ ಮಕ್ಕಳು ಸೇರಿ ಹಲವರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿಯ ಅಪ್ಪರ್ ಹುತ್ತಾದಲ್ಲಿ ಘಟನೆ ಸಂಭವಿಸಿದೆ. ನಿತ್ಯ ಗಾಡಿಯಲ್ಲಿ ವ್ಯಕ್ತಿಯೊಬ್ಬ ಮನೆ ಬಳಿಗೆ ಪಾನಿಪೂರಿ ಮಾರಾಟ ಮಾಡಿಕೊಂಡು ಬರುತ್ತದ್ದ. ಆತನ ಬಳಿ ಮಕ್ಕಳು, ಮಹಿಳೆಯರು ಸೇರಿ ಹಲವರು ಆತನಿಂದ ಪಾನಿಪೂರಿ ಖರೀದಿಸಿ ಸೇವಿಸಿದ್ದಾರೆ. ಶುಕ್ರವಾರ ಘಟನೆ ಸಂಭವಿಸಿದೆ. ದೂರು ನೀಡಲು … Read more