ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಮುದ್ದಾಡಿದ್ದ ಮರಿ ಆನೆಗೆ ಅವರದ್ದೇ ಹೆಸರು ನಾಮಕರಣ

101121 Elephant Named After Puneeth Rajkumar in Shimoga Sakrebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ನಟ ಪುನೀತ್ ಹೆಸರು ಇಟ್ಟಿದ್ದೇಕೆ? ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು … Read more

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021 ತಮ್ಮ ಪ್ರೀತಿಗೆ ಜಾತಿ ಅಡ್ಡಿಯಾದ ಹಿನ್ನೆಲೆ ಶಿವಮೊಗ್ಗ ತಾಲೂಕು ಚೋರಡಿಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ತಾಲೂಕು ರಾಮನಗರದ ಯುವಕ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ಇಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗುವ ಹಿನ್ನೆಲೆ ಪ್ರೇಮಿಗಳಿಬ್ಬರೂ ಚೋರಡಿ ಸಮೀಪದ ಕರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. (ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ … Read more

ಆಯನೂರು ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಯವಕನ ವಿರುದ್ಧ ಕೇಸ್

Ayanuru General Image Board 1

ಶಿವಮೊಗ್ಗ ಲೈವ್.ಕಾಂ | AYANUR NEWS | 8 ನವೆಂಬರ್ 2021 ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದ್ದಾರೆ. ಆತ ಗಾಂಜಾ ಸೇವನೆ ಮಾಡಿರುವುದು ತಿಳಿಯುತ್ತಿದ್ದಂತೆ ಪ್ರಕರಣ ದಾಖಲು ಮಾಡಲಾಗಿದೆ. ಆಯನೂರು ಬಸ್ ನಿಲ್ದಾಣದ ಬಳಿ ರುದ್ರೇಶ್ ನಾಯ್ಕ ಎಂಬಾತ ಅನಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಣೆ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರುದ್ರೇಶ್ ನಾಯ್ಕನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವನೆ … Read more

ರಾತ್ರೋರಾತ್ರಿ ಅಡಕೆ ಮರಗಳಿಂದ ಕೊನೆಗಳ ಕಳ್ಳತನ, ಮಾಲೀಕರನ್ನು ಕಂಡು ಕಳ್ಳ ಎಸ್ಕೇಪ್

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ನವೆಂಬರ್ 2021 ರಾತ್ರೋರಾತ್ರಿ ಅಡಕೆ ಮರಗಳಿಂದ ಕೊನೆಗಳನ್ನು ಕೊಯ್ದು ಕದ್ದೊಯ್ಯಲಾಗಿದೆ. ಸುಮಾರು ಒಂದು ಕ್ವಿಂಟಾಲ್’ನಷ್ಟು ಅಡಕೆ ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ತಾಲೂಕು ರಾಮನಗರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಲೋಕೇಶ್ವರಪ್ಪ ಎಂಬುವವರಿಗೆ ಸೇರಿದ ಅಡಕೆ ತೋಟದಲ್ಲಿ ನಿತ್ಯ ಅಡಕೆ ಕಳ್ಳತನವಾಗುತ್ತಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ರಾತ್ರಿ ವೇಳೆ ಲೋಕೇಶ್ವರಪ್ಪ ಅವರು ಪರಿಶೀಲನೆಗಾಗಿ ಅಡಕೆ ತೋಟಕ್ಕೆ ಹೋದಾಗ ಕಳ್ಳನೊಬ್ಬ ಕೊನೆ ಇಳಿಸುತ್ತಿರುವುದು ಕಂಡು ಬಂದಿದೆ. ಲೋಕೇಶ್ವರಪ್ಪ … Read more

ಶಿಕಾರಿಪುರದ ದೊಡ್ಡಕೇರಿಯಲ್ಲಿ ರೋಮಾಂಚಕ ಹೋರಿ ಹಬ್ಬ, ಹೇಗಿತ್ತು ವೈಭವ? ಇಲ್ಲಿದೆ ಫೋಟೊ ಆಲ್ಬಂ

081121 Shikaripura Doddakere Hori Habba

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 ನವೆಂಬರ್ 2021 ದೀಪಾವಳಿ ಬಳಿಕ ಜಿಲ್ಲೆಯ ವಿವಿಧೆಡೆ ಹೋರಿ ಬೆದರಿಸುವ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಶಿಕಾರಿಪುರದ ದೊಡ್ಡಕೇರಿಯಲ್ಲಿ ವಿಜೃಂಭಣೆಯಿಂದ ಹಬ್ಬ ನಡೆಯಿತು. ಅಕ್ಕಪಕ್ಕದ ಊರುಗಳಿಂದ ಸಾವಿರಾರು ಜನರು ಹಬ್ಬದಲ್ಲಿ ಪಾಲ್ಗೊಂಡಿದ್ದರು. ಹೋರಿಗಳ ಅಲಂಕಾರ, ಅವುಗಳ ಓಟ ಕಂಡು ಸಂತೋಷಪಟ್ಟರು. ದೊಡ್ಡಕೇರಿಯ ಗಿಡ್ಡೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹೋರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ರೈತಾಪಿ ವರ್ಗದ ಪ್ರಮುಖ ಹಬ್ಬ ಇದಾಗಿದೆ. ಹೋರಿಗಳಿಗೆ ಬಗೆಬಗೆ ಅಲಂಕಾರ ರೋಮಾಂಚಕ ಸ್ಪರ್ಧೆಯಲ್ಲಿ … Read more

ಭದ್ರಾವತಿ ರೈಲ್ವೆ ಸೇತುವೆ ಮುಂದಿರುವ ಡಾ.ಅಂಬೇಡ್ಕರ್ ಪ್ರತಿಮೆ ಬದಲಾವಣೆ ಆಗ್ರಹ

071121 Memorandum to Change Ambedkar Statue BDVT

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ನವೆಂಬರ್ 2021 ಭದ್ರಾವತಿಯಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಯನ್ನು ಬದಲಾಯಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈಗಿರುವ ಪ್ರತಿಮೆ ತೆರವು ಮಾಡಿ, ಹೊಸ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಡಿಎಸ್ಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಮನವಿ ಸಲ್ಲಿಸಿದ ಡಿಎಸ್ಎಸ್ ಕಾರ್ಯಕರ್ತರು, ಅತಿ ಶೀಘ್ರದಲ್ಲಿ ಹೊಸ ಪ್ರತಿಮೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಬದಲಾವಣೆ ಯಾಕೆ? ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 2007ರಲ್ಲಿ ರೈಲ್ವೆ ಸೇತುವೆ ಮುಂದೆ … Read more

ಭದ್ರಾವತಿಯಲ್ಲಿ ದರೋಡೆ ಮಾಡಿದ್ದವರು ಶಿವಮೊಗ್ಗದಲ್ಲಿ ಅರೆಸ್ಟ್, ಕೆಲವೇ ಗಂಟೆಯಲ್ಲಿ ನಾಲ್ಕು ಠಾಣೆಯಲ್ಲಿ ಏಳು ಕೇಸ್

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಬೆಳಗಿನ ಜಾವ ಭದ್ರಾವತಿಯಲ್ಲಿ ಮೂರು ಕಡೆ ದರೋಡೆ ಮಾಡಿದ್ದ ದುಷ್ಕರ್ಮಿಗಳನ್ನು ಶಿವಮೊಗ್ಗದಲ್ಲಿ ಅರೆಸ್ಟ್ ಮಾಡಲಾಗಿದೆ. ಅದೇ ದಿನ ಬೆಳಗ್ಗೆ ಈ ದುಷ್ಕರ್ಮಿಗಳು ಶಿವಮೊಗ್ಗದಲ್ಲೂ ದರೋಡೆ ಮಾಡಿದ್ದರು. ಇವರ ವಿರುದ್ಧ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಆಯನೂರು ಗೇಟ್’ನ ಗಗನ್ (19), ಬೊಮ್ಮನಕಟ್ಟೆಯ ಎಫ್ ಬ್ಲಾಕ್ ನಿವಾಸಿ ವಿಶಾಲ್ (19), ಬೊಮ್ಮನಕಟ್ಟೆಯ ಬಿ ಬ್ಲಾಕ್ ನಿವಾಸಿ ಪ್ರೀತಿಮ್ (19) ಬಂಧಿತರು. … Read more

ಭದ್ರಾವತಿಯ ಒಂದೇ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂರು ಕಡೆ ದರೋಡೆ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 ನವೆಂಬರ್ 2021 ಬೆಳಗಿನ ಜಾವ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆ 1 : ಬಸ್ ಇಳಿದವರ ಮೇಲೆ ದಾಳಿ ಬೆಂಗಳೂರಿನಿಂದ ಸರ್ಕಾರಿ ಬಸ್ಸಿನಲ್ಲಿ ಆಗಮಿಸಿದ ಪರಶುರಾಮ ಎಂಬುವವರು ಬೆಳಗ್ಗೆ 4 ಗಂಟೆ ಹೊತ್ತಿಗೆ ಭದ್ರಾವತಿ ನಗರಸಭೆ … Read more

ಹುಟ್ಟೂರಲ್ಲಿ ಮನೆ ಮನೆಗೂ ತೆರಳಿ ಸಿಹಿ ಹಂಚಿದ ಗೃಹ ಸಚಿವರು

051121 Home Minister Visit Houses in his village durng Deepavali

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 5 ನವೆಂಬರ್ 2021 ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮೂರಿನ ಪ್ರತಿ ಮನೆಗೂ ತೆರಳಿ ಸಿಹಿ ಹಂಚಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮೂರಿನಲ್ಲಿ ಎಲ್ಲರ ಮನೆಗೂ ಭೇಟಿ ನೀಡಿದ್ದರು. ಆರಗ ಜ್ಞಾನೇಂದ್ರ ಅವರು ತಮ್ಮ ಹುಟ್ಟೂರು ಹಿಸಣ ಹೊಸ್ಕೇರಿಯ ಪ್ರತಿ ಮನೆಗೂ ಇವತ್ತು ಭೇಟಿ ನೀಡಿದ್ದರು. ಎಲ್ಲರ ಮನೆಗೂ ತೆರಳಿ ಸಿಹಿ ವಿತರಣೆ ಮಾಡಿ, ಹಬ್ಬದ ಶುಭಾಶಯ ಕೋರಿದರು. ಈ ಕುರಿತು … Read more

ಕೂಡಲಿ ದೇಗುಲದಲ್ಲಿ ಗೋ ಪೂಜೆ, ಪ್ರಧಾನಿ ಮೋದಿ ಕಾರ್ಯಕ್ರಮದ ಲೈವ್ ವೀಕ್ಷಣೆ

051121 Gho Pooje at Kudli Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಶ್ರೀ ಕ್ಷೇತ್ರ ಕೂಡಲಿಯಲ್ಲಿ ಇವತ್ತು ಗೂ ಪೂಜೆ ಮತ್ತು ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಕಾರ್ಯಕ್ರಮದ ನೇರ ಪ್ರದರ್ಶನ ಆಯೋಜಿಸಲಾಗಿತ್ತು. ತಾಲೂಕು ಆಡಳಿತ, ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯಿತು. ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು. ಮೋದಿ ಕಾರ್ಯಕ್ರಮದ ಲೈವ್ ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ … Read more