ಬೆಳಗ್ಗೆ ತೋಟಕ್ಕೆ ಬಂದ ಮಾಲೀಕನಿಗೆ ಶಾಕ್, 68 ಮರಗಳಲ್ಲಿದ್ದ ಅಡಕೆ ಕೊನೆಗಳು ನಾಪತ್ತೆ

ARECA-TREE-GENERAL-IMAGE

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 4 ಸೆಪ್ಟೆಂಬರ್ 2021 ಒಂದೆಡೆ ಅಡಕೆ ಬೆಲೆ ಗಗನಮುಖಿಯಾಗುತ್ತಿದೆ. ಬೆಳಗಾರರಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದೆಡೆ ಅಡಕೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ರಾತ್ರೋರಾತ್ರಿ ತೋಟವೊಂದರಿಂದ ಅಡಕೆ ಕೊನೆಗಳನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಶಿಕಾರಿಪುರ ತಾಲೂಕು ಉಡುಗಣಿ ಹೋಬಳಿಯ ಕೊಡಿಕೊಪ್ಪ ಗ್ರಾಮದ ತೋಟವೊಂದರಲ್ಲಿ ಅಡಕೆ ಕೊನೆಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಜಯಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ರಾತ್ರಿ ಕಳ್ಳರು ಅಡಕೆ ಕೊನೆಗಳನ್ನು ಕೊಯ್ದುಕೊಂಡು ಹೋಗಿದ್ದಾರೆ. 68 ಮರಗಳಿಂದ ಕೊನೆ ಕಳವು ಮಾಡಲಾಗಿದೆ. … Read more

ಲಂಚ ಪಡೆಯುತ್ತಿದ್ದಾಗಲೇ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಅರಣ್ಯಾಧಿಕಾರಿ ಅರೆಸ್ಟ್

breaking news graphics

ಶಿವಮೊಗ್ಗ ಲೈವ್.ಕಾಂ | 3 SEPTEMBER 2021 | ಶಿಕಾರಿಪುರ ಲಂಚ ಪಡೆಯುತ್ತಿದ್ದಾಗಲೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪ ವಲಯ ಅರಣ್ಯ ಇಲಾಖೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ. ಡಿಆರ್‌ಎಫ್‌ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಪ್ರಕರಣವೊಂದರ ಆರೋಪಿಯಿಂದ ಏಳು ಸಾವಿರ ರೂ. ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಏನಿದು ಪ್ರಕರಣ? ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ಸೊರಬ ತಾಲೂಕು ಇಂಡುವಳ್ಳಿ … Read more

ಭದ್ರಾವತಿ 29ನೇ ವಾರ್ಡ್ ಚುನಾವಣೆ ಮುಕ್ತಾಯ, ಎಷ್ಟಾಗಿದೆ ಗೊತ್ತಾ ಮತದಾನ?

030921 Bhadravathi Election 29th Ward

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಭದ್ರಾವತಿ ನಗರಸಭೆ 29ನೇ ವಾರ್ಡ್ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾವಾಗಿದೆ. ಶೇ.64.27 ರಷ್ಟು ಮತದಾನವಾಗಿದೆ. ನಾಲ್ಕು ಮತಗಟ್ಟೆಯಲ್ಲಿ ಸಂಜೆವರೆಗೂ ಮತದಾನ ಪ್ರಕ್ರಿಯೆ ನಡೆಯಿತು. ಕೊನೆ ಹಂತದವರೆಗೂ ಮತದಾನ ಮಾಡಲು ಬಂದವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ | ಜಯಶ್ರೀ ಸರ್ಕಲ್ ಮತಗಟ್ಟೆ ಮುಂದೆ ಜೈ ಶ್ರೀರಾಮ್ ಘೋಷಣೆ, ಕಾಂಗ್ರೆಸ್’ನಿಂದಲೂ ಜೈಕಾರ, ಕೆಲಕ್ಷಣ ಗೊಂದಲ ಒಟ್ಟು … Read more

ಜಯಶ್ರೀ ಸರ್ಕಲ್ ಮತಗಟ್ಟೆ ಮುಂದೆ ಜೈ ಶ್ರೀರಾಮ್ ಘೋಷಣೆ, ಕಾಂಗ್ರೆಸ್’ನಿಂದಲೂ ಜೈಕಾರ, ಕೆಲಕ್ಷಣ ಗೊಂದಲ

030921 Bhadravathi Nagara Sabhe Election ghoshane

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆ ನಡೆಯುತ್ತರುವ ಬೂತ್ ಮುಂದೆ ಮೂರು ಪಕ್ಷಗಳು ಮುಖಂಡರು, ಕಾರ್ಯಕರ್ತರು ಘೋಷಣೆ ಕೂಗಿರುವ ಘಟನೆ ನಡೆದಿದೆ. ಇದರಿಂದ ಕೆಲ ನಿಮಿಷ ಬೂತ್ ಮುಂದೆ ಗೊಂದಲದ ವಾತಾವರಣ ನಿರ್ಮಾಣವಾಯಿತು. ಜಯಶ್ರೀ ಸರ್ಕಲ್’ನಲ್ಲಿರುವ ಮತಗಟ್ಟೆ ಬಳಿ ಘಟನೆ ಸಂಭವಿಸಿದೆ. ಮೂರು ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದರಿಂದ ಕೆಲಕಾಲ ಗೊಂದಲ ನಿರ್ಮಾಣವಾಯಿತು. ಯಾವುದೆ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಬಂದೋಬಸ್ತ್ ಮಾಡಿದರು. ಮೊಳಗಿದ … Read more

ಭದ್ರಾವತಿ 29ನೇ ವಾರ್ಡ್’ನಲ್ಲಿ ಮತದಾನ ಚುರುಕು, ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

030921 Bhadravathi Election 29th Ward

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಕಾಂಗ್ರೆಸ್ ಅಭ್ಯರ್ಥಿ ನಿಧನದಿಂದಾಗಿ ಭದ್ರಾವತಿ ನಗರಸಭೆಯ 29ನೇ ವಾರ್ಡ್’ನಲ್ಲಿ ಸ್ಥಗಿತವಾಗಿದ್ದ ಮತದಾನ ಇವತ್ತು ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಸಾಲುಗಟ್ಟಿ ನಿಂತಿದ್ದಾರೆ. ಬೆಳಗ್ಗೆ 7 ಗಂಟೆ ಯಿಂದ ಸಂಜೆ 6 ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಒಟ್ಟು 3423 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1716 ಮಹಿಳಾ ಮತದಾರರು, 1707 ಪುರುಷ ಮತದಾರರಿದ್ದಾರೆ. ಶಾಂತಿಯುತವಾಗಿ ಮತದಾನ … Read more

ಗ್ರಾಮ ಪಂಚಾಯಿತಿ ಬೀಗ ಒಡೆದು ಪಿಡಿಒ ಕೊಠಡಿಯಲ್ಲಿ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SORABA NEWS | 3 ಸೆಪ್ಟೆಂಬರ್ 2021 ಗ್ರಾಮ ಪಂಚಾಯಿತಿ ಕಟ್ಟಡವೊಂದರ ಬೀಗ ಒಡೆದ ಕಳ್ಳರು, ಕಂಪ್ಯೂಟರ್ ಉಪಕರಣಗಳನ್ನು ಕದ್ದೊಯ್ದಿದ್ದಾರೆ. ಸೊರಬ ತಾಲೂಕು ಮುಟಗುಪ್ಪೆ ಗ್ರಾಮ ಪಂಚಾಯಿತಯಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಪಿಡಿಒ ಕಚೇರಿಯಲ್ಲಿದ್ದ ಕಂಪ್ಯೂಟರ್ ಮಾನಿಟರ್, ಕೀ ಬೋರ್ಡ್, ಮೌಸ್, ಕಬೋರ್ಡ್’ನಲ್ಲಿದ್ದ ವೆಬ್ ಕ್ಯಾಮರಾ, ಡಿಜಿ ಕ್ಯಾಮರಾ, ಆಡಳಿತಾಧಿಕಾರಿ ಕೊಠಡಿಯಲ್ಲಿದ್ದ ಕಂಪ್ಯೂಟರ್ ಮಾನಿಟರ್, ಕೀ ಬೋರ್ಡ್, ಮೌಸ್, ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಲಾಗಿದೆ. ಕಳುವಾದ ವಸ್ತುಗಳ ಅಂದಾಜು ಮೌಲ್ಯ 50 … Read more

ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂದೆ ನಿಲ್ಲಸಿದ್ದ ಶಿಕ್ಷಕರ ಪಲ್ಸರ್ ಬೈಕ್ ನಾಪತ್ತೆ

SHIRALAKOPPA-SHIKARIPURA-NEWS

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 2 ಸೆಪ್ಟೆಂಬರ್ 2021 ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಶಿಕ್ಷಕರೊಬ್ಬರ ಬೈಕನ್ನು ಖದೀಮರು ಕದ್ದೊಯ್ದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ಮಲ್ಲೇಶ್ ಅವರ ಪಲ್ಸರ್ ಬೈಕನ್ನು ಕಳುವು ಮಾಡಲಾಗಿದೆ. ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂದೆ ನಿಲ್ಲಿಸಿ ಕರ್ತವ್ಯ ನಿಮಿತ್ತ ಶಾಲೆಗೆ ಹೋಗಿದ್ದರು. ಸಂಜೆ ಬಂದು ನೋಡಿದಾಗ ಬಸ್ ನಿಲ್ದಾಣದ ಬಳಿ ಬೈಕ್ ನಾಪತ್ತೆಯಾಗಿತ್ತು. ಪಲ್ಸರ್ ಬೈಕ್ ಕಣ್ಮರೆಯಾಗಿರುವ ಕುರಿತು ಮಲ್ಲೇಶ್ ಅವರು ಶಿರಾಳಕೊಪ್ಪ … Read more

ದೇವಸ್ಥಾನದ ಬೀಗ ಒಡೆದು ಆರತಿ ತಟ್ಟೆ, ಗಂಟೆ, ಕಾಣಿಕೆ ಹಣ ಸಹಿತ ಹಲವು ವಸ್ತುಗಳ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ದೇವಸ್ಥಾನದ ಬೀಗ ಒಡೆದ ಕಳ್ಳರು ಕಾಣಿಕೆ ಹಣ ಮತ್ತು ಪೂಜಾ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ದೊಡ್ಡಮತಲಿ ಗ್ರಾಮದ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ಮಂಗಳವಾರ ಮಾತ್ರ ಪೂಜೆ ಶ್ರೀ ಹುಲಿಯಾಂಬಿಕ ದೇವಸ್ಥಾನದಲ್ಲಿ ವಾರಕ್ಕೆ ಒಮ್ಮೆ ಮಾತ್ರ ಪೂಜೆ ಸಲ್ಲಿಸಲಾಗುತ್ತದೆ. ಮಂಗಳವಾರದಂದು ಮಾತ್ರ ಅರ್ಚಕರು ಬಂದ ಪೂಜೆ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದರು. … Read more

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಏಳನೆ ತರಗತಿ ವಿದ್ಯಾರ್ಥಿನಿ ಅತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. … Read more

ಹೊಟ್ಟೆನೋವು ತಾಳಲಾರದೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 2 ಸೆಪ್ಟೆಂಬರ್ 2021 ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬರು ನೆಡುತೋಪಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಪತ್ಯಪ್ಪ (60) ಎಂಬುವವರು ಮೃತರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಗಣಪತ್ಯಪ್ಪ ಅವರ ಇತ್ತೀಚೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೂ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ನ್ಯಾರ್ಸಿ ಗ್ರಾಮದ ಹೊರವಲಯದ ನೆಡುತೋಪಿನಲ್ಲಿ ಗಣಪತ್ಯಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೊರಬ ಠಾಣೆಯಲ್ಲಿ … Read more