ಭದ್ರಾವತಿ ಕಾರೇಹಳ್ಳಿ ಸರ್ಕಲ್’ನಲ್ಲಿ ಹಿಟ್ ಅಂಡ್ ರನ್ ಪ್ರಕರಣ, ಪಾದಚಾರಿಗೆ ಹಿಂದಿನಿಂದ ಗುದ್ದಿದ ವಾಹನ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲು, ತಲೆಗೆ ಗಾಯವಾಗಿದೆ. ವಾಹನ ನಿಲ್ಲಿಸದೆ ಪರಾರಿ ಯೇಸುದಾಸ್ ಅವರಿಗೆ ಗುದ್ದಿದ ವಾಹನ ಸ್ಥಳದಿಂದ … Read more

ಬಾರಂದೂರು ಬಳಿ ಭೀಕರ ಅಪಘಾತ, ಸೀಟ್’ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು

260821 Accident Between Two Cars at barandur in Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೊ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹೇಗಾಯ್ತು ಆಪಘಾತ? ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು … Read more

ಭದ್ರಾ ನಾಲೆಗೆ ಬಿತ್ತು ಕಾರು, ಭದ್ರಾವತಿಯ ಒಂದೇ ಕುಟುಂಬದ ನಾಲ್ವರ ಪೈಕಿ ಇಬ್ಬರು ಪಾರು, ಘಟನೆಗೆ ಟ್ವಿಸ್ಟ್ ಕೊಟ್ಟಿದೆ ಆಡಿಯೋ

260821 car falls to Bhadra Channel At MC Halli in Tarikere

ಶಿವಮೊಗ್ಗ ಲೈವ್.ಕಾಂ | TARIKERE NEWS | 26 ಆಗಸ್ಟ್ 2021 ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಭದ್ರಾ ನಾಲೆಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಇನ್ನಿಬ್ಬರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕರೆ ತಾಲೂಕು ಎಂ.ಸಿ.ಹಳ್ಳಿ ಬಳಿ ಘಟನೆ ಸಂಭವಿಸಿದೆ. ಬೆಳಗಿನ ಜಾವ ಕಾರು ನಾಲೆಗೆ ಬಿದ್ದಿದೆ. ಇವರು ಭದ್ರಾವತಿ ತಾಲೂಕು ಹಳೆ ಜೇಡಿಕಟ್ಟೆ ವಾಸಿಗಳು ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಬೆಂಗಳೂರಿನಿಂದ ಭದ್ರಾವತಿಗೆ ಮರಳುತ್ತಿದ್ದಾಗ ಎಂ.ಸಿ.ಹಳ್ಳಿ … Read more

BREAKING NEWS | ಯುವತಿ ಅನುಮಾನಾಸ್ಪದ ಸಾವು, ರಿಪ್ಪನ್ ಪೇಟೆ ಬಳಿ ಸಿಕ್ತು ಮೃತದೇಹ

breaking news graphics

ಶಿವಮೊಗ್ಗ ಲೈವ್.ಕಾಂ | RIPPONPETE NEWS | 26 ಆಗಸ್ಟ್ 2021 ಕಾಡಿನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಹಲವು ಅನುಮಾನ ಉಂಟಾಗಿದೆ. ರಿಪ್ಪನ್’ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಳಗಿ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಹೊಸಕೆರೆ ಕೆರೆ ಬಳಿ ಯುವತಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರದು ಯುವತಿ? ಸಾವಿಗೇನು ಕಾರಣ? ಮೃತ ಯುವತಿ ಭಟ್ಕಳ ಮೂಲದವಳು ಎಂದು ಹೇಳಲಾಗುತ್ತಿದೆ. ಈಕೆ ಸಾವಿಗೆ ನಿಖರ ಕಾರಣ ತಿಳಿದು … Read more

ಸಿಗಂದೂರು ಸೇತುವೆ ಕಾಮಗಾರಿ ಸ್ಥಳಕ್ಕೆ ಸಚಿವರ ಭೇಟಿ, ಯಾವಾಗ ರೆಡಿಯಾಗುತ್ತೆ? ಈಗೆಷ್ಟಾಗಿದೆ ಕೆಲಸ?

Siganduru Bridge Plan 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2021 ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಸಿಗಂದೂರು ಸೇತುವೆ 2023ಕ್ಕೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕಳಸವಳ್ಳಿ- ಅಂಬಾರಗೊಡ್ಲುಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಲಾಂಚ್‌ನಲ್ಲಿ ಸಂಚರಿಸಿ ಸೇತುವೆ ಕಾಮಗಾರಿ ಪರಿಶೀಲಿಸಿದರು. ಈಗಾಗಲೇ ಶೇ.30ರಷ್ಟು ಕಾಮಗಾರಿ ಪೂರ್ಣವಾಗಿದ್ದು ಈ ಸೇತುವೆ ಮೂಲಕ ಶರಾವತಿ ಕಣಿವೆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣ ಗೊಳಿಸುವಂತೆ ಇಂಜಿನಿಯರ್‌ಗಳಿಗೆ … Read more

ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಗೃಹ ಸಚಿವರ ಪ್ರತಿಕ್ರಿಯೆ, ರಸ್ತೆಯಲ್ಲಿ ಸಸಿ ನೆಟ್ಟವರಿಗೆ ಖುಷಿ ಸುದ್ದಿ

Home Minister Araga jnanendra

ಶಿವಮೊಗ್ಗ ಲೈವ್.ಕಾಂ | BANGALORE / SHIMOGA NEWS | 25 ಆಗಸ್ಟ್ 2021 ಕೆಸರುಮಯ ರಸ್ತೆಯಲ್ಲಿ ಸಸಿ ನೆಟ್ಟು ದುರವಸ್ಥೆ ವಿರುದ್ಧ ಬೊಂಬಳಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಬೊಂಬಳಿಗೆ ಮೇಲುಕೊಪ್ಪದ ಮೂಲಕ ಒಂದು ರಸ್ತೆ ಇದೆ. ಕಾಲು ಸಂಕವನ್ನು ಕೂಡ ಮಾಡಿಸಿದ್ದೇವೆ. ಆದಷ್ಟು ಬೇಗ ಗ್ರಾಮಕ್ಕೆ ರಸ್ತೆ ಮಾಡಿಸುತ್ತೇವೆ ಎಂದು … Read more

ರಸ್ತೆಯಲ್ಲೇ ನಾಟಿ ಮಾಡಿದ ಗ್ರಾಮಸ್ಥರು, ಇಲ್ಲಿಂದ ‘ಸ್ವರ್ಗಕ್ಕೆ ಮೂರೇ ಗೇಣು’, ಗೃಹ ಸಚಿವರ ತವರಲ್ಲಿ ಕೇಳೋರಿಲ್ವಾ ಇವರ ಗೋಳು?

250821 Thirthahalli Bombale Villagers Protest for Road

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2021 ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರು ಸಸಿ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಷ್ಟೆ ಅಲ್ಲ, ಗ್ರಾಮಸ್ಥರನ್ನು ಸಂಕಷ್ಟಕ್ಕೆ ದೂಡಿದ ಆಡಳಿತದ ವಿರುದ್ಧ ಆಕ್ರೋಶವು ವ್ಯಕ್ತವಾಗುತ್ತಿದೆ. ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಂಬಳಿಗೆ ಗ್ರಾಮದ ಸಂಪರ್ಕ ರಸ್ತೆ ಹದಗೆಟ್ಟು ಹೋಗಿದೆ. ರಸ್ತೆಗಳಲ್ಲಿ ಗುಂಡಿಗಳಿವೆಯೋ, ಗುಂಡಿಯ ನಡುವೆ ರಸ್ತೆ ನಿರ್ಮಾಣವಾಗಿದೆಯೋ ಅನ್ನುವುದು ಗೊತ್ತಾಗುವುದಿಲ್ಲ. ಅಷ್ಟೇ … Read more

ಸೊರಬ ತಾಲೂಕಿನಲ್ಲಿ ಮರ ಕಡಿತಲೆಗೆ ಜಿಲ್ಲಾಧಿಕಾರಿಯಿಂದ ತಾತ್ಕಾಲಿಕ ನಿಷೇಧ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವ ಸಂದರ್ಭ ಮತ್ತು ಮಳೆ ಬಿದ್ದ ನಂತರದ ಎರಡು ದಿನ ಭಾರಿ ವಾಹನಗಳ ಮೂಲಕ ಮರ, ನಾಟಾ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ. ಆಗಸ್ಟ್ 16ರಿಂದ ಅಕ್ಟೋಬರ್ 31ರವರೆಗೆ ಈ ನಿರ್ಬಂಧವಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಾಗರ ಅರಣ್ಯ ವಿಭಾಗದ ಸೊರಬ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಹಿಡುವಳಿ, ಖಾಸಗಿ, ಖಾನೇಷುಮಾರಿ ಜಮೀನಿನ ಪ್ರದೇಶದಲ್ಲಿರುವ ಮರಗಳನ್ನು … Read more

ಆಗುಂಬೆ ಘಾಟಿಯ ತಿರುವಿನ ತಡೆಗೋಡೆ ಹತ್ತಿ ನಿಂತ ಲಾರಿ, ಈ ತಿಂಗಳಲ್ಲಿ ಎರಡನೇ ಕೇಸ್

240821 Truck Accident at Agumbe Ghat Turn number 8

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಆಗಸ್ಟ್ 2021 ಆಗುಂಬೆ ಘಾಟಿಯಲ್ಲಿ ಮತ್ತೊಂದು ಲಾರಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಆಗುಂಬೆ ಘಾಟಿಯ ಎಂಟನೇ ತಿರುವಿನಲ್ಲಿ ಕೆಳಗೆ ಜಾರಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದ ಕಡೆಗೆ ಮುಖ ಮಾಡಿ ನಿಂತಿದೆ. ಸೋಮವಾರ ಘಟನೆ ಸಂಭವಿಸಿದ್ದು, ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಲಾಜಿಸ್ಟಿಕ್ಸ್ ಕಂಪನಿಯೊಂದಕ್ಕೆ ಸೇರಿದ್ದ ಲಾರಿ ಅಪಘಾತಕ್ಕಿಡಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ … Read more

ಅನ್ನ ಮಾಡುವ ವಿಚಾರದಲ್ಲಿ ಜಗಳ, ಬಿಸಿ ಬಿಸಿ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದ ಸೊಸೆ

ಶಿವಮೊಗ್ಗ ಲೈವ್.ಕಾಂ | SAGARA NEWS | 24 ಆಗಸ್ಟ್ 2021 ಅನ್ನ ಮಾಡುವ ವಿಚಾರವಾಗಿ ಅತ್ತೆ, ಸೊಸೆ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ಬಿಸಿ ಬಿಸಿ ಅನ್ನದ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದಿದ್ದಾಳೆ. ಸುಟ್ಟ ಗಾಯಗಳಿಂದಾಗಿ ಅತ್ತೆ ಆಸ್ಪತ್ರೆ ಸೇರಿದ್ದು, ಸೊಸೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಗರ ತಾಲೂಕು ಮುಳಕೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪಾರ್ವತಮ್ಮ (58) ಅವರು ಸುಟ್ಟ ಗಾಯಗಳಿಂದಾಗಿ ಸಾಗರ … Read more