ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ, ಉಕ್ಕಿ ಹರಿದ ಹಳ್ಳ, ಜಲಾಶಯಗಳ ಒಳ ಹರಿವು ಹೆಚ್ಚಳ

Maani-Dam-Hosanagara

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021 ಹೊಸನಗರ ತಾಲೂಕಿನಾದ್ಯಂತ ಮುಂಗಾರು ಜೋರಿದೆ. ಕಳೆದ 24 ಗಂಟೆ ಅವಧಿಯಲ್ಲಿ 169.6 ಮಿ.ಮೀ ಮಳೆಯಾಗಿದೆ. ಭಾರಿ ಮಳೆಗೆ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಂಡಗದೋದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಕಿ ಗ್ರಾಮದಲ್ಲಿ ಮಳೆಗೆ ಹಳ್ಳ ಉಕ್ಕಿ ಹರಿಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಚರ್ಚಿಸಿದರು. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾಣಿ … Read more

ಹುಲಿಕಲ್ ಘಾಟಿ ಸಂಚಾರಕ್ಕೆ ಮುಕ್ತ, ಎರಡು ಕೋಟಿ ವೆಚ್ಚದಲ್ಲಿ ಇನ್ನಷ್ಟು ಅಭಿವೃದ್ಧಿ

160621 Hulikal Ghat Inauguration in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021 ಹುಲಿಕಲ್ – ಬಾಳೆಬರೆ ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಹುಲಿಕಲ್ ಘಾಟಿಯ ಚಂಡಿಕೇಶ್ವರಿ ದೇಗುಲ ಆವರಣದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಿದರು. ನಾಲ್ಕು ಕೋಟಿ ರೂ. ವೆಚ್ಚ ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಹುಲಿಕಲ್ ಘಾಟಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಎರಡು ಕೋಟಿ ರೂ. ವೆಚ್ಚದಲ್ಲಿ ಸಾಯಿಲ್ ನೈಲಿಂಗ್ ಕಾಮಗಾರಿ ನಡೆಯಲಿದೆ. ಘಾಟಿ … Read more

ಆಲದ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Anandapura Sagara Graphics

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 15 JUNE 2021 ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮನೆ ಸಮೀಪದ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಸಮೀಪದ ಜೇಡಿಸರ ಗ್ರಾಮದ ಯುವಕ ದೇವರಾಜ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಮ್ಮ ಬಳಿಯ ಆಲದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಬಿಎ, ಬಿಇಡ್ ಪದವಿ ಪಡೆದಿದ್ದ ದೇವರಾಜ್ ಸರ್ಕಾರ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದರು. ಜೀವನ ನಿರ್ವಹಣೆಯಾಗಿ ಶಿವಮೊಗ್ಗದ ಖಾಸಗಿ ಫೈನಾನ್ಸ್ ಒಂದರಲ್ಲಿ ಕೆಲಸ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದ ಬೀಗ ಒಡೆದ ಖದೀಮರು, ದೇವರ ಆಭರಣಗಳು ಕಳುವು

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JUNE 2021 ಪ್ರಸಿದ್ಧ ಮುಜರಾಯಿ ದೇವಸ್ಥಾನವೊಂದರ ಬೀಗ ಒಡೆದ ಕಳ್ಳರು 3 ಕೆ.ಜಿ. ಪಂಚಲೋಹದ ಬಂಗಾರ ಲೇಪಿತ ಆಭರಣಗಳನ್ನು ಕದ್ದೊಯ್ದಿದ್ದಾರೆ. ಆತುರದಲ್ಲಿ 200 ಗ್ರಾಂ ತೂಕದ ವರದ ಹಸ್ತವನ್ನು ಅಲ್ಲಿಯೆ ಬೀಳಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗಿರಿಯಲ್ಲಿರುವ ಶ್ರೀ ವಂಕಟರಮಣ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಮುಖ್ಯ ದ್ವಾರ ಮತ್ತು ಮುಖ ಮಂಟಪದ ಬಾಗಿಲಿಗೆ ಹಾಕಲಾಗಿದ್ದ ಬೀಗಗಳನ್ನು ಒಡೆದು ಕಳ್ಳರು ಕೃತ್ಯ ಎಸಗಿದ್ದಾರೆ. ಏನೇನೆಲ್ಲ ಕದ್ದೊಯ್ದಿದ್ದಾರೆ ಕಳ್ಳರು? ತಲಾ … Read more

ತ್ಯಾಗರ್ತಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ತಾಲೂಕು ಆರೋಗ್ಯಾಧಿಕಾರಿಗೆ ಶಾಕ್, ಸ್ಥಿತಿ ಕಂಡು ಅಧಿಕಾರಿಗಳಿಗೆ ಕ್ಲಾಸ್

tyagarthi sagara graphics

ಶಿವಮೊಗ್ಗ ಲೈವ್.ಕಾಂ | TYAGARTHI NEWS | 14 JUNE 2021 ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸದೆ ಲಸಿಕೆ ನೀಡುತ್ತಿದ್ದ ಅಧಿಕಾರಿಗಳಿಗೆ ಸಾಗರ ತಾಲೂಕು ಆರೋಗ್ಯಾಧಿಕಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ತ್ಯಾಗರ್ತಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಆದರೂ ಲಸಿಕಾ ಕೇಂದ್ರದಲ್ಲಿ ಜನದಟ್ಟಣೆ ಇತ್ತು. ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಡಾ. ಕೆ.ಎಸ್.ಮೋಹನ್, ಜನರು ಗುಂಪುಗೂಡಿದ್ದನ್ನು ಕಂಡು ಸಿಟ್ಟಾದರು. ಲಸಿಕೆಗಾಗಿ ನಿಂತಿದ್ದವರು ಸಾಮಾಜಿಕ ಅಂತರ ಕಾಪಾಡಿರಲಿಲ್ಲ. … Read more

ನಡು ರಸ್ತೆಯಲ್ಲಿ ಬೈಕ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ

140621 Congress Workers Fire Bike At Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 14 JUNE 2021 ‘100 ನಾಟೌಟ್’ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬೈಕ್‍ಗೆ ಪೆಟ್ರೋಲ್‍ ಸುರಿದು, ಬೆಂಕಿ ಹಚ್ಚಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಸಾಗರ ತಾಲೂಕು ಆನಂದಪುರದಲ್ಲಿ ಇವತ್ತು ‘100 ನಾಟೌಟ್‍’ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾರ್ಯಕರ್ತರು ಬೈಕ್‍ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿಯನ್ನು ಬೈಕ್‍ … Read more

ಗಂಟೆ ಗಂಟೆಗೂ ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ, ಈಗೆಷ್ಟು ನೀರನ್ನು ಹೊಳೆಗೆ ಬಿಡಲಾಗುತ್ತಿದೆ?

140621 Tunga Dam Water Outflow 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JUNE 2021 ತುಂಗಾ ಜಲಾಶಯದ ಒಳ ಮತ್ತ  ಹೊರಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಲೆ ಇದೆ. ಈಗ 9500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಬೆಳಗ್ಗೆ 11.30ಕ್ಕೆ ತುಂಗಾ ಜಲಾಶಯಕ್ಕೆ 8375 ಕ್ಯೂಸೆಕ್ ಒಳ ಹರಿವು ಇತ್ತು. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಜಲಾಶಯದ 21 ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ. … Read more

ಸಚಿವರು, ಶಾಸಕರ ಮುಂದೆಯೇ ಸಭೆಯಲ್ಲಿ ಪಿಡಿಒಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

140621 Woman Verbal spat with PDO in Hosudi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಸಚಿವರ ಮುಂದೆಯೇ ಪಿಡಿಒಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು. ಈ ವೇಳೆ ಗ್ರಾಮದ ಮಹಿಳೆಯೊಬ್ಬರು ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಅಶೋಕ್ ನಾಯ್ಕ್‍ ಅವರ ಮುಂದೆಯೇ ಪಿಡಿಒಗೆ ತರಾಟೆ ತೆಗೆದುಕೊಂಡರು. ಮಹಿಳೆಯ ಆಕ್ಷೇಪಕ್ಕೆ ಕಾರಣವೇನು? ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಿದ್ದೇವೆ. ಟೆಸ್ಟ್‍ಗಳನ್ನು ಮಾಡಿಸಿದ್ದೇವೆ ಎಂದು ಪಿಡಿಒ … Read more

BREAKING NEWS | ಗಾಜನೂರಿನ ತುಂಗಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ನೀರು ಹೊರಬಿಡಲಾಗುತ್ತಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ಕ್ರಸ್ಟ್  ಗೇಟುಗಳನ್ನು ತೆಗೆದು ನೀರು ಹೊರಗೆ ಬಿಡಲಾಗಿದೆ. ಇವತ್ತು ಜಲಾಶಯದ 22 ಗೇಟುಗಳ ಪೈಕಿ 21 ಗೇಟುಗಳನ್ನು ಮೇಲೆತ್ತಲಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ಜಲಾಶಯದಿಂದ ನೇರವಾಗಿ ನದಿಗೆ ಒಟ್ಟು 7300 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಮೊದಲ ಮೂರು ಗೇಟುಗಳಲ್ಲಿ ಒಂದು ಅಡಿಯಷ್ಟು ಮೇಲೆತ್ತಲಾಗಿದೆ. ಉಳಿದ 18 ಗೇಟುಗಳನ್ನು ಒಂದು ಇಂಚ್‍ನಷ್ಟು ಮೇಲೆತ್ತಲಾಗಿದೆ. ತುಂಗಾ ಜಲಾಶಯಕ್ಕೆ … Read more

ದೇವಸ್ಥಾನದ ಹುಂಡಿ ಒಡೆದು ನೋಟುಗಳನ್ನಷ್ಟೆ ಕದ್ದೊಯ್ದ ಕಳ್ಳರು

ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021 ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ಮುಂದೆ ಕರೋನ ಪರೀಕ್ಷೆ … Read more