ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 MAY 2021 ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾಗರ ತಾಲೂಕು ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್‍ ಡೌನ್ ಮಾಡಲು ನಿರ್ಧರಿಸಲಾಗಿದೆ. ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೇ 25ರಿಂದು ಒಂದು ವಾರ ಸಂಪೂರ್ಣ ಲಾಕ್‍ ಡೌನ್ ಮಾಡಲಾಗುತ್ತಿದೆ. ಲಾಕ್‍ ಡೌನ್ ಅವಧಿಯಲ್ಲಿ ಜನರು ಅನಗತ್ಯವಾಗಿ ರಸ್ತಗಿಳಿಯುವಂತಿಲ್ಲ. ವ್ಯಾಪಾರ, ವಹಿವಾಟಿಗೂ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ … Read more

‘ಗ್ರಾಮ ಸಭೆ ಕರೆದು ಜನರ ಮುಂದೆ ರಾಜೀನಾಮೆ ಕೊಡ್ತೀನಿ’

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 MAY 2021 ಪಂಚಾಯಿತಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರದಿಂದ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ರಾಜೀನಾಮೆಯ ನಿರ್ಧಾರ ಮಾಡಿದ್ದಾರೆ. ರಾಮಚಂದ್ರಾಪುರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಓ ಸೇರಿಕೊಂಡು ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆಗೆ ನಿರ್ಧರಿಸಿದ್ದೇನೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶಾಹಬುದೀನ್ ಆದೀಲ್ ತಿಳಿಸಿದ್ದಾರೆ. ರಾಮಚಂದ್ರಾಪುರ ಗ್ರಾಮ ಪಂಚಾಯಿತಿಯಲ್ಲಿ ಐವರು ಬಿಜೆಪಿ ಸದಸ್ಯರಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ತಾವೊಬ್ಬರೆ ಆಯ್ಕೆಯಾಗಿದ್ದೇನೆ. ಗ್ರಾಮ … Read more

ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದಾಗ ತೀರ್ಥಹಳ್ಳಿಯಲ್ಲಿ ಜಾಗ ಗುರುತು, ಇನ್ನೂ ಶುರುವಾಗದ ಕ್ಯಾಂಟೀನ್, ಆಕ್ರೋಶ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021 ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ. ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ. ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು ಕಿಮ್ಮನೆ … Read more

ಕೋಣಂದೂರು ಸಂಪೂರ್ಣ ಲಾಕ್, ಸುಖಾಸುಮ್ಮನೆ ಮನೆಯಿಂದ ಹೊರ ಬಂದರೆ ಲಾಠಿ ರುಚಿ ಫಿಕ್ಸ್

230521 Konandur Lockdown for One Week 1

ಶಿವಮೊಗ್ಗ ಲೈವ್.ಕಾಂ | KONANDURU NEWS | 23 MAY 2021 ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ತೀರ್ಥಹಳ್ಳಿ ತಾಲೂಕು ಕೋಣಂದೂರಿನಲ್ಲಿ ಕಠಿಣ ಲಾಕ್‍ ಡೌನ್ ಜಾರಿಯಾಗಿದೆ. ಒಂದು ವಾರ ಕೋಣಂದೂರನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಮೇ 29ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ. ಬೆಳಗ್ಗ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ತರಕಾರಿ, ಹಣ್ಣು ವ್ಯಾಪಾರಕ್ಕೆ ಅವಕಾಶವಿದೆ. ಆದರೆ ತಳ್ಳುಗಾಡಿಯಲ್ಲಿ ಮನೆ ಬಳಿಗೆ ಹೋಗಿ ವ್ಯಾಪಾರ … Read more

ಕರೋನಾ ಭೀತಿಯಲ್ಲಿ ಕಾಲುವೆಗೆ ಹಾರಿದ ವ್ಯಕ್ತಿ, ಚೈನಾ ಗೇಟ್ ಬಳಿ ಮಧ್ಯಾಹ್ನ ಸಿಕ್ತು ಮೃತದೇಹ

Kargal Police Station Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 22 MAY 2021 ಕರೋನ ಭೀತಿಯಲ್ಲಿ ವ್ಯಕ್ತಿಯೊಬ್ಬರು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಲಿಂಗೇಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಇಲ್ಲಿನ ಚೈನಾ ಗೇಟ್ ಬಳಿ ಕಾಲುವೆಗೆ ಹಾರಿದ್ದಾರೆ. ಲಿಂಗೇಗೌಡ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದ್ದು, ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗೇಗೌಡ ಅವರಿಗೆ ಕಳೆದ ಮೂರ್ನಾಲ್ಕು ದಿನದಿಂದ ಆರೋಗ್ಯ ಸರಿ ಇರಲಿಲ್ಲ.  ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುವಂತೆ … Read more

ಹೊಸನಗರದಲ್ಲಿ ಪಿಡಿಒಗೆ ಸಂಕಷ್ಟ ತಂದ ಮದುವೆ ಮನೆ ಬಾಡೂಟ

ಶಿವಮೊಗ್ಗ ಲೈವ್.ಕಾಂ | HOSANAGARA / RIPPONPETE NEWS | 22 MAY 2021 ಮದುವೆ ಬಳಿಕ ನಡೆದ ಬಾಡೂಟ ಕಾರ್ಯಕ್ರಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರ ಅಮಾನತಿಗೆ ಕಾರಣವಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆದರೂ ತಡೆಯುವಲ್ಲಿ ವಿಫಲವಾದ ಆರೋಪದ ಮೇಲೆ ಪಿಡಿಒ ಅವರನ್ನು ಅಮಾನತುಪಡಿಸಲಾಗಿದೆ. ರಿಪ್ಪನ್‍ ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಾಡೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ ಹಿನ್ನೆಲೆ ಪಿಡಿಒ ಹೆಚ್‍.ರಾಘವೇಂದ್ರ ಅವರು ಸಿಬ್ಬಂದಿಯೊಬ್ಬರನ್ನು ಕಳುಹಿಸಿ, ಪರಿಶೀಲನೆ ನಡೆಸಿದ್ದರು. … Read more

ಕುಂಚೇನಹಳ್ಳಿಯಲ್ಲಿ ಶಿವಮೊಗ್ಗ ಸಂಸದರಿಂದ ಕರೋನ ಜಾಗೃತಿ

210521 Kunchenahalli MP Raghavendra Corona Jagruthi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021 ಜಿಲ್ಲೆಯಲ್ಲಿ ಕೊರೋನ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗೆಂದು ಮೈಮರೆಯದೆ ಸದಾ ಎಚ್ಚರವಾಗಿದ್ದು, ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ  ತಾಲೂಕಿನ ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕರೋನ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಮಾತನಾಡಿದರು. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮಿಸುತ್ತಿದ್ದಾರೆ. ಈ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ … Read more

ಕರೋನದಿಂದ ಮೃತಪಟ್ಟ ಮಹಿಳೆ ಶವ ರಸ್ತೆಯಲ್ಲಿ ಇರಿಸಿ ಗ್ರಾಮಸ್ಥರ ಪ್ರತಿಭಟನೆ

210521 Corona Dead Body Protest Near Antaragange in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 MAY 2021 ಕರೋನ ಸೋಂಕಿನಿಂದ ಮೃತಳಾದ ಮಹಿಳೆಯ ಶವ ಇರಿಸಿಕೊಂಡು ಗ್ರಾಮಸ್ಥರು ಪ್ರತಿಭಟನೆ ನಡಸಿದ್ದಾರೆ. ಸ್ಮಶಾನಕ್ಕೆ ಭೂಮಿ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಭದ್ರಾವತಿ ತಾಲೂಕು ಅಂತರಗಂಗೆ ಬಳಿಯ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಕೋವಿಡ್‍ನಿಂದ ಮೃತಳಾದ ಜವರಮ್ಮ (70) ಎಂಬುವವರ ಮೃತದೇಹವನ್ನು ರಸ್ತೆಯಲ್ಲಿ ಇರಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ಸ್ಮಶಾನಕ್ಕೆ ಜಾಗ ನೀಡುವಂತೆ ಬಹು ಸಮಯದಿಂದ ಗ್ರಾಮಸ್ಥರು ಆಗ್ರಹಿಸುತ್ತಿದ್ದರು. ಆದರೆ ಇದಕ್ಕೆ ಅಧಿಕಾರಿಗಳು … Read more

ಸೊರಬದ ಆನವಟ್ಟಿ ಸಂಪೂರ್ಣ ಲಾಕ್ ಡೌನ್, ಮೇ 24ರವರೆಗೆ ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SORABA NEWS | 21 MAY 2021 ಕರೋನ ಸೋಂಕಿತರ ಪ್ರಕರಣ ಹೆಚ್ಚಾದ ಹಿನ್ನೆಲೆ ಸೊರಬ ತಾಲೂಕು ಆನವಟ್ಟಿಯಲ್ಲಿ ಕಠಿಣ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಮೇ 24ರವರೆಗೆ ಜನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಆನವಟ್ಟಿ ಪಟ್ಟಣದಲ್ಲಿ 150ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 18 ಮಂದಿಯನ್ನು ಕರೋನ ಬಲಿ ಪಡೆದಿದೆ. ಇದೆ ಕಾರಣಕ್ಕೆ ಪಟ್ಟಣದಲ್ಲಿ ಕಠಿಣ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಪಟ್ಟಣದಲ್ಲಿ ಏನಿರುತ್ತೆ? ಏನಿರಲ್ಲ? ಅಧಿಕೃತ ಡೈರಿಗಳಲ್ಲಿ ಸಂಜೆ 6 ಗಂಟೆವರೆಗೆ ಹಾಲು ಮಾರಾಟಕ್ಕೆ … Read more

ಭದ್ರಾವತಿಯಲ್ಲಿ ಹೆಚ್ಚಾಗ್ತಿದೆ ಕರೋನ ಕೇಸ್, ಒಂದೇ ದಿನ ಇನ್ನೂರು ಮಂದಿಗೆ ಪಾಸಿಟಿವ್, ಸಾವಿನ ಸಂಖ್ಯೆಯೂ ಏರಿಕೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 MAY 2021 ಭದ್ರಾವತಿ ತಾಲೂಕಿನಲ್ಲಿ ಕರೋನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಿಸಿದೆ. ಲಾಕ್‍ ಡೌನ್ ಅವಧಿ ಮುಗಿಯುತ್ತಿದ್ದರೂ ಸೋಂಕಿತರ ಸಂಖ್ಯೆ ಇಳಿಕೆಯಾಗದಿರುವುದು ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ. ಗುರುವಾರ ಭದ್ರಾವತಿಯಲ್ಲಿ 379 ಮಂದಿಯ ಕರೋನ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 123 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೇ 20ರಂದು ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ. ಇದರಿಂದ ಭದ್ರಾವತಿ ತಾಲೂಕಿನಲ್ಲಿ ಈತನಕ ಕರೋನದಿಂದ … Read more