ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಮೊದಲ ದಿನದ ವೀಕೆಂಡ್ ಕರ್ಫ್ಯೂ? ತಾಲೂಕುವಾರು ರಿಪೋರ್ಟ್

175578819 1373910869636996 6771968949187943387 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021 ವೀಕೆಂಡ್ ಕರ್ಫ್ಯೂಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದೆ. ಬಹುತೇಕ ಜನರು ಮನೆಯಿಂದ ಹೊರಬಾರದೆ ಮೊದಲ ದಿನ ಕರ್ಫ್ಯೂಗೆ ಸ್ಪಂದಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಕರ್ಫ್ಯೂ? ಶಿವಮೊಗ್ಗ ತಾಲೂಕು ಶಿವಮೊಗ್ಗ ನಗರ ಮತ್ತು ಹೊರ ವಲಯದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದರು. ಗಸ್ತು ಹೆಚ್ಚಿಸಿದ್ದರು. ಅಗತ್ಯ ವಸ್ತುಗಳ ಖರೀದಿಗೆ ಆಗಮಿಸಿದ್ದ ಜನರು ಬಳಿಕ ಮನೆ ಸೇರಿದ್ದರು. ನಡುವೆ ಹೊರ ಬರುತ್ತಿದ್ದವರಿಗೆ ಪೊಲೀಸರು … Read more

ವ್ಯಾಪಾರಿಗಳಿಗೆ ನಿರ್ಬಂಧ, ಚನಾವಣಾ ಪ್ರಚಾರಕ್ಕೆ ಗುಂಪು ಗುಂಪು ಜನ, ಭದ್ರಾವತಿ ನಾಗರಿಕರಲ್ಲಿ ಕರೋನ ಭಯ

Bhadravathi Nagarasabhe File Image 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 23 APRIL 2021 ನಿರ್ಬಂಧ ವ್ಯಾಪಾರಿಗಳಿಗೆ ಮಾತ್ರ. ರಾಜಕೀಯ ಪ್ರಚಾರಕ್ಕಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ನಡೆಯುತ್ತಿರುವ ಚುನಾವಣೆಗೆ ಭರ್ಜರಿ ಪ್ರಚಾರ ನಡೆಯುತ್ತಿದೆ. ಇದು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಈ ನಡುವೆ ವ್ಯಾಪಾರಿಗಳಲ್ಲಿ ಆಕ್ರೋಶವನ್ನು ಹೆಚ್ಚಿಸಿದೆ. ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಿಗದಿಯಾಗಿದೆ. ಕೋವಿಡ್ ನಿರ್ಬಂಧ ಇರುವುದರಿಂದ ಬಹಿರಂಗ ಸಭೆ, ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿದೆ. ಗುಂಪು ಗುಂಪಾಗಿ ಮನೆ ಬರ್ತಾರೆ ಮತದಾನದ … Read more

ಶಿರಾಳಕೊಪ್ಪ ಪುರಸಭೆ ಸದಸ್ಯನಿಗೆ ಕರೋನ, ಕಚೇರಿ ಬಂದ್

Shiralakoppa-Purasabhe-Office

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 23 APRIL 2021 ಪುರಸಭೆ ಸದಸ್ಯರೊಬ್ಬರಿಗೆ ಕರೋನ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಿರಾಳಕೊಪ್ಪ ಪುರಸಭೆ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಸೋಂಕಿತ ಸದಸ್ಯ ಪುರಸಭೆ ಕಚೇರಿಗೆ ಬಂದಿದ್ದು, ಹಲವು ಕಡೆ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಪುರಸಭೆ ಕಚೇರಿಯನ್ನು ಬಂದ್ ಮಾಡಲಾಗಿದ್ದು, ಸ್ಯಾನಿಸಟೈಸ್ ಮಾಡಿಸಲಾಗುತ್ತಿದೆ. ಆ ಬಳಿಕ ಕಚೇರಿಯ ಕೆಲಸಗಳು ನಡೆಯಲಿವೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 … Read more

ಮಾಜಿ ಶಾಸಕ ಮಧು ಬಂಗಾರಪ್ಪಗೆ ಕರೋನ ಪಾಸಿಟಿವ್

020321 Madhu Bangarappa About joining Congress 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021 ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಕರೋನ ದೃಢಪಟ್ಟಿದೆ. ಬೆಂಗಳೂರಿನ ಮನೆಯಲ್ಲಿ ಐಸೊಲೇಷನ್‍ನಲ್ಲಿ ಇರುವ ಮಧು ಬಂಗಾರಪ್ಪ, ತಮ್ಮೊಂದಿಗೆ ಸಂಪರ್ಕಕ್ಕೆ  ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಸೋಂಕು ತಗುಲಿರುವ ಕುರಿತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿರುವ ಮಧು ಬಂಗಾರಪ್ಪ ಅವರು, ಸೋಂಕಿನ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ ಲೈವ್ … Read more

ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅರ್ಚಕರು, ಆಗಮಿಕರಿಗೆ ಮಾತ್ರ ಅವಕಾಶ

ಶಿವಮೊಗ್ಗ ಲೈವ್.ಕಾಂ | TOGARSI NEWS | 23 APRIL 2021 ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿಕಾರಿಪುರ ತಹಶೀಲ್ದಾರ್ ಎಂ.ಪಿ.ಕವಿರಾಜ್ ಆದೇಶ ಹೊರಡಿಸಿದ್ದಾರೆ. ದೇವಸ್ಥಾನಕ್ಕೆ ಅರ್ಚಕರು ಮತ್ತು ಆಗಮಿಕರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿರ್ಬಂಧವಿರಲಿದೆ. ಯಾರಾದರೂ ಈ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಎಚ್ಚರಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ … Read more

ಹೊಂಬುಜದಲ್ಲಿ ಪ್ರವೇಶ ನಿಷೇಧ, ಆನ್ಲೈನ್ನಲ್ಲಿ ಪೂಜೆ ವೀಕ್ಷಣೆಗೆ ಅವಕಾಶ

161020 Hombuja Temple Hosanagara 1

ಶಿವಮೊಗ್ಗ ಲೈವ್.ಕಾಂ | HOMBUJA NEWS | 23 APRIL 2021 ಹೊಂಬುಜ ಜೈನ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೇ 4ರವರೆಗೆ ಮಠಕ್ಕೆ ಭಕ್ತರ ಪ್ರವೇಶ, ದೇವರ ದರ್ಶನವನ್ನು ನಿಷೇಧಿಸಲಾಗಿದೆ. ಮಠದಲ್ಲಿ  ವಸತಿ, ಭೋಜನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಆನ್‍ಲೈನ್‍ ಮೂಲಕ ಅಭಿಷೇಕ ಮಾಡಿಸುವ ಅವಕಾಶವಿದೆ. ಫೇಸ್‍ಬುಕ್‍ನಲ್ಲಿ ಹೊಂಬುಜ ಪದ್ಮಾವತಿ ಪೇಜ್‍ ಮೂಲಕ ವೀಕ್ಷಿಸಬಹುದಾಗಿದೆ ಎಂದು ಮಠದ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ … Read more

ಸಿಗಂದೂರು ದೇವಸ್ಥಾನ ಬಂದ್, ನಿತ್ಯ ಪೂಜೆಗೂ ಭಕ್ತರಿಗಿಲ್ಲ ಅವಕಾಶ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 23 APRIL 2021 ಕರೋನ ಮಾರ್ಗಸೂಚಿ ಹಿನ್ನೆಲೆ ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಭಕ್ತರಿಗೆ ದೇವರ ದರ್ಶನ, ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಪ್ರತಿ ದಿನ ಬೆಳಗ್ಗ 4 ಗಂಟೆಗೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ನಡೆಯಲಿದೆ. ಪ್ರಧಾನ ಅರ್ಚಕರಾದ ಶೇಷಗಿರಿ ಭಟ್ ಅವರು ಪೂಜೆ ನಡೆಸಲಿದ್ದಾರೆ. ಆಗಲು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ  ಎಂದು ದೇವಾಲಯದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಅವರು … Read more

ರಿಪ್ಪನ್​ಪೇಟೆ ಸುತ್ತಮುತ್ತ ಆಲಿಕಲ್ಲು ಮಳೆ, ಮರ ಬಿದ್ದು ಹೆದ್ದಾರಿ ತಾತ್ಕಾಲಿಕ ಬಂದ್

200421 Rain At Anandapuram 1

ಶಿವಮೊಗ್ಗ ಲೈವ್.ಕಾಂ | RIPPONPETE NEWS | 20 APRIL 2021 ರಿಪ್ಪನ್‍ಪೇಟೆ ಸುತ್ತಮುತ್ತ ಇವತ್ತು ಆಲಿಕಲ್ಲು ಮಳೆಯಾಗಿದೆ. ಜೋರು ಮಳೆ ಮತ್ತು ಗಾಳಿಯ ರಭಸಕ್ಕೆ ವಿವಿಧೆಡೆ ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಇಲ್ಲಿನ ಸಾಗರ ರಸ್ತೆಯ ಪದವಿ ಪೂರ್ವ ಕಾಲೇಜು ಸಮೀಪ ಮರ ಬುಡಮೇಲಾಗಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ. ಇದರಿಂದ ತೀರ್ಥಹಳ್ಳಿ – ಸಾಗರ ಹೆದ್ದಾರಿ ತಾತ್ಕಾಲಿಕವಾಗಿ ಬಂದ್ ಆಗಿದೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಅಲ್ಲಿಯವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. … Read more

ಆನಂದಪುರದಲ್ಲಿ ಉರುಳಿದ ಮರ, ವಾಹನ ಸಂಚಾರ ಬಂದ್, ಗೌತಮಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು

200421 Rain At Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 20 APRIL 2021 ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಇನ್ನು, ಸಿಡಿಲು ಬಡಿದು ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮರ ಬಿದ್ದಿರುವುದರಿಂದ ರಿಪ್ಪನ್‍ಪೇಟೆ – ಸಾಗರ ನಡುವೆ ಸಂಚಾರ ಸ್ಥಗಿತವಾಗಿದೆ. ವಾಹನ ಸಂಚಾರ ಬಂದ್ ಆಗಿದೆ. ಘಟನೆಯಲ್ಲಿ ಕೆಲವು ವಾಹನಗಳಿಗೂ ಹಾನಿಯಾಗಿದೆ. ಮತ್ತೊಂದೆಡೆ ಗೌತಮಪುರದಲ್ಲಿ ಸಿಡಿಲು ಬಡಿದು ಮನೆಯೊಂದರ ಮುಂದಿದ್ದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. … Read more

ನಡುರಾತ್ರಿ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿಗೆ ಕೈ ಹಾಕಿದ ಖದೀಮರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 APRIL 2021 ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನದ ಯತ್ನ ನಡೆದಿದೆ. ಹುಂಡಿ ಒಡೆದು ಹಣ ದೋಚಲು ಕಳ್ಳಲು ಯತ್ನಿಸಿದ್ದಾರೆ. ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು, ಕಳ್ಳರು ಹುಂಡಿಯನ್ನು ಕದ್ದೊಯ್ದಿದ್ದಾರೆ. ದೇಗುಲದ ಹಿಂಭಾಗ ನಿರ್ಜನ ಪ್ರದೇಶದಲ್ಲಿ ಹುಂಡಿಯ ಬೀಗ ಒಡೆಯಲು ಯತ್ನಿಸಿದ್ದಾರೆ. ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಬಂದಾಗ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಕಳ್ಳರು ಈ ಕೃತ್ಯದಲ್ಲಿ … Read more