ವಾಸ್ತವ್ಯಕ್ಕೆ ಬಂದ ಶಿವಮೊಗ್ಗ ಡಿಸಿಗೆ ಪೂರ್ಣ ಕುಂಭ ಸ್ವಾಗತ

200321 Aladahalli DC Vastavya in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021 ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು, ಹೊಳಲೂರು ಹೋಬಳಿಯ ಆಲದಹಳ್ಳಿಯಲ್ಲಿ ವಾಸ್ತವ ಮಾಡಲಿದ್ದಾರೆ. ಆಲದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು. ಆರೋಗ್ಯ ಕೇಂದ್ರ, ಅಂಗನವಾಡಿಗೆ ಭೇಟಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಲ್ಲಿನ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿಗೆ ಭೇಟಿ ನೀಡಿದರು. ವ್ಯವಸ್ಥೆಯ ಕುರಿತು ಪರಿಶೀಲನೆ … Read more

ದಿಢೀರ್ ನೈಟ್ ರೌಂಡ್ಸ್ ಕೈಗೊಂಡ ಅಧಿಕಾರಿಗಳು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಟ್ಟಿದ ಬಿಸಿ

200321 Sagara Nagarasabhe Officials Night Rounds 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 MARCH 2021 ವಾಹನಕ್ಕೆ ಕಸ ನೀಡದೆ, ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿದ್ದವರಿಗೆ ನಗರಸಭೆ ಸಿಬ್ಬಂದಿಗಳು ಬಿಸಿ ಮುಟ್ಟಿಸಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇನ್ಮುಂದೆ ರಸ್ತೆ ಬದಿಯಲ್ಲಿ ಕಸ ಬಿಸಾಡಿದರೆ ದಂಡ ಹಾಕುವ ಎಚ್ಚರಿಕೆ ನೀಡಿದ್ದಾರೆ. ಸಾಗರ ನಗರಸಭೆಯ ಪರಿಸರ ಅಭಿಯಂತರರಾದ ಮದನ್ ಅವರ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿಗಳು ನೈಟ್ ರೌಂಡ್ಸ್  ಮಾಡಿದರು. ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಎಸೆಯುವರನ್ನು ಪತ್ತೆ ಹಚ್ಚಿ, ಬುದ್ದಿ ಮಾತು ಹೇಳಿದರು. ನಗರಸಭೆ … Read more

ಶಿವಮೊಗ್ಗದ ಹಾರನಹಳ್ಳಿಯಲ್ಲಿ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ, ಬೃಹತ್ ಪ್ರತಿಭಟನೆ, ಕಾರಣವೇನು?

190221 Haranahalli Bandh for Railway Junction 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ರೈಲ್ವೆ ಮಾರ್ಗ ಮತ್ತು ಜಂಕ್ಷನ್‍ಗಾಗಿ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಹಾರನಹಳ್ಳಿಯಲ್ಲಿ, ಇವತ್ತು ಬಂದ್ ಆಚರಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡಿ, ವ್ಯಾಪಾರ ವಹಿವಾಟ ಸ್ಥಗಿತಗೊಳಿಸಲಾಗಿತ್ತು. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದೆ. ಹಾರನಹಳ್ಳಿಯಲ್ಲಿ ರೈಲ್ವೆ ಜಂಕ್ಷನ್ ನಿರ್ಮಿಸಬೇಕು. ಇದಕ್ಕೆ ಬಿಎಸ್‍ವೈ ಜಂಕ್ಷನ್ ಎಂದು ನಾಮಕರಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಪ್ರತಿಭಟನೆ, ಮೆರವಣಿಗೆ, ಮನವಿ ಹಾರನಹಳ್ಳಿ ರೈಲ್ವೆ ಜಂಕ್ಷನ್ … Read more

ಶಿಕಾರಿಪುರದಲ್ಲಿ ಬೈಕಲ್ಲಿ ಗಾಂಜಾ ಸಾಗಿಸುತ್ತಿದ್ದವರು ಅರ್ಧ ದಾರಿಯಲ್ಲೇ ಅರೆಸ್ಟ್, ಎಷ್ಟಿತ್ತು ಗಾಂಜಾ?

170321 Ganja Peddlers Arrest in Shikaripura Eesuru 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 MARCH 2021 ಗಾಂಜಾ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ರಸ್ತೆಯಲ್ಲಿ ತಪಾಸಣೆ ನಡೆಸಿದಾಗ ಬೈಕ್‍ನಲ್ಲಿ ಒಣ ಗಾಂಜಾ ಸಾಗಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಗಾಂಜಾ, ವಾಹನ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ರಜಾಕ್ ಮತ್ತು ಖಲೀದ್ ಎಂಬುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಶಿಕಾರಿಪುರದ ಈಸೂರು – ಗಾಮ ರಸ್ತೆಯಲ್ಲಿ ತಪಾಸಣೆ ನಡೆಸುವಾಗ, 580 ಗ್ರಾಮ್ ಒಣ ಗಾಂಜಾದ ಜೊತೆಗೆ … Read more

ಭದ್ರಾವತಿ ಕೋರ್ಟ್‍ನಲ್ಲಿ ನ್ಯಾಯಾಧೀಶರ ಎದುರಲ್ಲೇ ಸೆಲ್ಫಿ, ಸಿಕ್ಕಿಬಿದ್ದ ವ್ಯಕ್ತಿ, ಮುಂದೇನಾಯ್ತು?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 MARCH 2021 ಭದ್ರಾವತಿ ಕೋರ್ಟ್‍ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬರಿಗೆ ಎರಡು ಸಾವಿರ ದಂಡ ವಿಧಿಸಿ, ಎಚ್ಚರಿಕೆ ನೀಡಲಾಗಿದೆ. ಕಲಾಪ ನಡೆಯುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಗಮನಿಸಿದ 4ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಅವರು ದಂಡ ವಿಧಿಸಿದ್ದಾರೆ. ಬ್ಯಾಂಕ್‍ ಒಂದರ ಕ್ರೆಡಿಟ್ ಕಾರ್ಡ್‍ ಪ್ರಮೋಷನ್ ಮಾಡುವ ಸಲುವಾಗಿ ವ್ಯಕ್ತಿ ತನ್ನ ಸಹೋದ್ಯೋಗಿ ಜೊತೆಗೆ ಕೋರ್ಟ್‍ ಆವರಣದಲ್ಲಿ ಸೆಲ್ಫಿ ಕ್ಲಿಕ್ಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. … Read more

ಚಂದ್ರಗುತ್ತಿ ಜಾತ್ರೆಗೆ ಕ್ಷಣಗಣನೆ, ಹೊರಬಿತ್ತು ಮಹತ್ವದ ಆದೇಶ, ಎಲ್ಲರಿಗೂ ಇಲ್ಲ ಜಾತ್ರೆಯಲ್ಲಿ ಭಾಗವಹಿಸುವ ಅವಕಾಶ

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 17 MARCH 2021 ಕರೋನ ಸೋಂಕು ಹರಡದಂತೆ ತಡೆಗಟ್ಟಬೇಕಿರುವುದರಿಂದ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ. ಸ್ಥಳೀಯರು ಮಾತ್ರ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಾರ್ಚ್‍ 19ರಿಂದ 24ರವರೆಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ ನಡೆಯಲಿದೆ. ಈಗಾಗಲೇ ಜಾತ್ರೆಗೆ ಸಿದ್ಧತೆ ಆರಂಭವಾಗಿದೆ. ವಿವಿಧ ಜಿಲ್ಲೆ, ಹೊರ ರಾಜ್ಯದಿಂದ ದೊಡ್ಡ ಸಂಖ್ಯೆಯ … Read more

ಶಿಕಾರಿಪುರದ ನಡೆದಾಡುವ ದೇವರು, ಶಿವಯೋಗ ಮಂದಿರದ ಸ್ವಾಮೀಜಿ ಲಿಂಗೈಕ್ಯ, ಸಿಎಂ ಸೇರಿ ಹಲವರ ಸಂತಾಪ

160321 Shikaripura Shivayogi Mandira Swamiji No More 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 MARCH 2021 ಶಿಕಾರಿಪುರದ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅವರು ದೊಡ್ಡ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಭಕ್ತರು ಮಠದ ಬಳಿಗೆ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್ ಸೇರಿದಂತೆ ಹಲವು ರಾಜಕೀಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಶಿಕಾರಿಪುರದ ನಡೆದಾಡುವ ದೇವರು ಶ್ರೀ … Read more

ಹೊಸನಗರ ವಿಧಾನಸಭೆ ಕ್ಷೇತ್ರ ಹೋರಾಟಕ್ಕೆ ಮೊಳಗಿದ ಕಹಳೆ, ಹತ್ತು ಸಾವಿರ ಜನರಿಂದ ಪಾದಯಾತ್ರೆಗೆ ಪ್ಲಾನ್

160321 Hosanagara Assembly Protest in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 MARCH 2021 ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಕಹಳ ಮೊಳಗಿದೆ. ಧರ್ಮಗುರುಗಳು, ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರ ನೇತೃತ್ವದಲ್ಲಿ ಪ್ರತಿಭಟನೆ ಶುರು ಮಾಡಲಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವೇ ಅವೈಜ್ಞಾನಿಕವಾಗಿದೆ. ರಾಜ್ಯಕ್ಕೆ ಹಲವು ಯೋಜನೆಗಳು ಕೊಟ್ಟ ತಾಲೂಕನ್ನು ಪುನರ್ ವಿಂಗಡಣೆ ವೇಳೆ ಕೈಬಿಟ್ಟಿರುವುದು ಸರಿಯಲ್ಲ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಯಾರೆಲ್ಲ … Read more

ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿಯೇ ಇಂಟರ್ಸಿಟಿ ರೈಲಿಗೆ ಸಿಲುಕಿದ ಯುವಕ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 MARCH 2021 ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿಯೇ ಯುವಕನೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಯುವಕನ ಗುರುತು ಪತ್ತೆಯಾಗಿಲ್ಲ. ಬೆಂಗಳೂರು – ಶಿವಮೊಗ್ಗ ಇಂಟರ್‍ಸಿಟಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ರಾತ್ರಿ ಇಂಟರ್‍ಸಿಟಿ ರೈಲು ಭದ್ರಾವತಿಗೆ ಬಂದಾಗ ಘಟನೆ ಸಂಭವಿಸಿದೆ. ನಿಲ್ದಾಣದಿಂದ ರೈಲು ಹೊರಟ ಬಳಿಕ ಘಟನೆ ಬೆಳಕಿಗೆ ಬಂದಿದೆ. ಯುವಕ ಆಕಸ್ಮಿಕವಾಗಿ ರೈಲಿಗೆ ಸಿಲುಕಿದನೋ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ತನಿಖೆಯಿಂದ ತಿಳಿದು ಬರಬೇಕಿದೆ. ಯುವಕನಿಗೆ 25 ವರ್ಷ ಎಂದು ಆಂದಾಜಿಸಲಾಗಿದೆ. … Read more

ಭದ್ರಾವತಿ ಗಲಾಟೆ ಕೇಸ್, ಹಸಿ ಸುಳ್ಳು ಹೇಳ್ತಿದೆ ಕಾಂಗ್ರೆಸ್, ಜೈ ಶ್ರೀರಾಮ್ ಅಂದರೆ ಶಾಸಕರಿಗೆ ಸಿಟ್ಯಾಕೆ?

120321 Bhadravathi BJP Press Meet At shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮಾರ್ಚ್‌ 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಕಾಂಗ್ರೆಸ್ ಪಕ್ಷ ಹಸಿ ಸುಳ್ಳನ್ನು ಪ್ರಚಾರ ಮಾಡುತ್ತಿದೆ. ಸದನದಲ್ಲೂ ಇದೆ ಸುಳ್ಳುಗಳನ್ನು ಹೇಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಪ್ರಸಾದ್, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ನಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಿಂದೆ ಸುರಗಿತೋಪು ಚೌಡೇಶ್ವರಿ ದೇವಸ್ಥಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದಾಗಲೂ ಸಂಗಮೇಶ್ವರ್ ಅವರು ಸಿಟ್ಟಾಗಿದ್ದರು … Read more