GOOD NEWS | ಹುಟ್ಟುಹಬ್ಬದಂದು ತಮ್ಮೂರಿನ ಸರ್ಕಾರಿ ಶಾಲೆ ಮಕ್ಕಳಿಗೆ ಉಡುಗೊರೆ ಕೊಟ್ಟ ಪೇಟಿಯಂ ಉದ್ಯೋಗಿ

110221 PayTm Employee Gift To School Children 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. … Read more

RAILWAY | ತಾಳಗುಪ್ಪದಿಂದಲೂ ಶುರು ರೈಲ್ವೆ ಪಾರ್ಸಲ್ ಸರ್ವಿಸ್, ಯಾವೆಲ್ಲ ರೈಲಲ್ಲಿದೆ ಸೇವೆ? ಏನೆಲ್ಲ ಕಳುಹಿಸಬಹುದು?

Talaguppa Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ತಾಳಗುಪ್ಪದ ರೈಲ್ವೆ ನಿಲ್ದಾಣದಲ್ಲಿಯೂ ರೈಲ್ವೆ ಪಾರ್ಸಲ್ ಸರ್ವಿಸ್ ಆರಂಭವಾಗಿದೆ. ಈ ಸಂಬಂಧ ನೈಋತ್ಯ ರೈಲ್ವೆ ವಿಭಾಗದ ಸೀನಿಯರ್ ಡಿವಿಷನಲ್ ಕಮರ್ಷಿಯಲ್ ಮ್ಯಾನೇಜರ್ ಡಾ. ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದೆ ಯಾವೆಲ್ಲ ರೈಲಿನಲ್ಲಿ ಪಾರ್ಸಲ್ ಸೇವೆ ಇದೆ? ರೈಲು ಸಂಖ್ಯೆ  06529 / 06530 ಬೆಂಗಳೂರು – ತಾಳಗುಪ್ಪ – ಬೆಂಗಳೂರು (ಪ್ರತಿ ದಿನ) ರೈಲು ಸಂಖ್ಯೆ 06227 / 06228 ಮೈಸೂರು – ತಾಳಗುಪ್ಪ … Read more

AYANUR | ಸೂರ್ಯ ಮುಳುಗುತ್ತಿದ್ದಂತೆ ಊರು ಬಿಡ್ತಾರೆ, ಗಡಿ ದಾಟಿಸುವ ಪದ್ಧತಿ ಮುಗಿಯೋತನಕ ಒಬ್ಬರೂ ಮನೆಗೆ ಬರಲ್ಲ

100221 Ayanur Kote Tanda Gadi Pooje 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಆಯನೂರು ಸಮೀಪ ರಾತ್ರಿ ವೇಳೆ ಗ್ರಾಮ ತೊರೆದು, ವಿಶೇಷ ಪೂಜೆ ಸಲ್ಲಿಸುವ ಆಚರಣೆ ನಡೆಯಿತು. ಬಂಜಾರ ಸಮುದಾಯದವರು ಒಂದೆಡೆ ಸೇರಿ ಈ ವಿಶೇಷ ಆಚರಣೆ ಮಾಡಿದರು. ಆಯನೂರು ಸಮೀಪದ ಕೋಟೆ ತಾಂಡದವರು ಊರ ಹೊರಗೆ ಈ ಸಂಪ್ರದಾಯ ನೆರವೇರಿಸಿದರು. ಊರಿನ ಹೊರಗೆ ಗದ್ದೆ ಬಯಲಿನಲ್ಲಿ ಅಡುಗೆ ಮಾಡಿ, ಎಲ್ಲರೂ ಒಟ್ಟಿಗೆ ಊಟ ಮಾಡಿದರು. ಮಂಗಳವಾರ ರಾತ್ರಿ ಈ ವಿಶೇಷ ಆಚರಣೆ … Read more

SHIMOGA | ಊರಿಗೂರೆ ಖಾಲಿ, ಗ್ರಾಮದ ಸುತ್ತಲು ಬೇಲಿ, ಇಡೀ ದಿನ ಯಾರೂ ಇಲ್ಲಿ ಕಾಲಿಡುವಂತಿಲ್ಲ, ಏನಿದು? ಯಾಕಿಂಗೆ?

100221 Mandagatta Horabidu Jathre in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಮೂರು ವರ್ಷಕ್ಕೊಮ್ಮೆ ಗ್ರಾಮಸ್ಥರೆಲ್ಲ ಊರು ಬಿಡ್ತಾರೆ. ಇಡೀ ಗ್ರಾಮಕ್ಕೆ ಬೇಲಿ ಹಾಕ್ತಾರೆ. ದನಕರು, ನಾಯಿ, ಕೋಳಿಗಳನ್ನು ಕೂಡ ಊರಲ್ಲಿ ಬಿಡದೆ ತಮ್ಮೊಂದಿಗೆ ಕರೆದೊಯ್ಯುತ್ತಾರೆ. ಇದು ಹೊರಬೀಡು ಜಾತ್ರೆಯ ವಿಶೇಷ. ಶಿವಮೊಗ್ಗ ತಾಲೂಕು ಮಂಡಘಟ್ಟ ಗ್ರಾಮದಲ್ಲಿ ಈ ಜಾತ್ರೆ ನಡೆಯಲಿದೆ. ಗ್ರಾಮಸ್ಥರೆಲ್ಲ ಊರಾಚೆಗೆ ಇದ್ದು ಒಟ್ಟಿಗೆ ಬೆರೆತು, ಊಟ, ತಿಂಡಿ ಮಾಡಿ ಸಾಮಾರಸ್ಯದಿಂದ ಹಬ್ಬ ಆಚರಿಸುತ್ತಾರೆ. ಮಂಗಳವಾರ ಹೊರಬೀಡು ಜಾತ್ರೆ ನಡೆಯಿತು. ಹೇಗಿರುತ್ತೆ ಹೊರಬೀಡು ಜಾತ್ರೆ … Read more

SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನೆಗೆ ದಿಢೀರ್ ಭೇಟಿ ನೀಡಿದ ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ

100221 HD Revanna Visit Kagodu Thimmappa House 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 FEBRUARY 2021 ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ದಿಢೀರ್ ಭೇಟಿ ನೀಡಿ, ಬಹು ಹೊತ್ತು ಚರ್ಚೆ ನಡೆಸಿದರು. ರೇವಣ್ಣ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಒಂದು ಗಂಟೆಗೂ ಹೆಚ್ಚು  ಹೊತ್ತು ಚರ್ಚೆ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್‍.ಡಿ.ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ … Read more

SAGARA | ಸೈಕಲ್, ಬೈಕ್ ಡಿಕ್ಕಿ, ಸೈಕಲ್ ಸವಾರ ಸಾವು, ಬೈಕ್ ಸವಾರನಿಗೆ ಗಂಭೀರ ಗಾಯ

090221 Accident at Talaguppar Maraturu 1

ಶಿವಮೊಗ್ಗ ಲೈವ್.ಕಾಂ | SAGARA NEWS | 09 FEBRUARY 2021 ಸೈಕಲ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ತಾಳಗುಪ್ಪದ ಮರತ್ತೂರು ಗ್ರಾಮದ ಸಮೀಪದ ತಿರುವಿನಲ್ಲಿ ಸಂಭವಿಸಿದೆ. ಸೈಕಲ್ ಸವಾರ ಮರತ್ತೂರಿನ ಅಣ್ಣಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿದ್ದಾಪುರ ತಾಲೂಕು ನೆಜ್ಜೂರಿನ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಬೈಕ್ ಸವಾರನಿಗೂ ಗಾಯವಾಗಿದೆ. ಮರತ್ತೂರು ಕ್ರಾಸ್‍ನಲ್ಲಿ ವಿದ್ಯುತ್ ದೀಪವಿರದ ಕಾರಣ ಎದುರಿಗಿದ್ದವರು ಕಾಣಿಸದೆ ಅಪಘಾತ ಸಂಭವಿಸಿರುವ … Read more

SAGARA | ಮೋದಿ ಮಾಡಿದ ರೀತಿಯಲ್ಲಿ ಬ್ರಿಟೀಷರೂ ನಡೆದುಕೊಂಡಿರಲಿಲ್ಲ, ಪ್ರತಿಭಟನೆಯಲ್ಲಿ ಕಾಗೋಡು ಆಕ್ರೋಶ

080221 Congess Protest Against BJP Modi in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡಸಿ ಸಾಗರ ಹೊಟೇಲ್ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಎತ್ತಿನಗಾಡಿ, ಸೈಕಲ್ ಸವಾರಿ, ಗ್ಯಾಸ್ ಸಿಲಿಂಡರ್ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು. ಸಭೆಯಲ್ಲಿ … Read more

THIRTHAHALLI | ಆಗುಂಬೆಗೆ ಬರುವ ಪ್ರವಾಸಿಗರ ಗಮನಕ್ಕೆ, ಸ್ವಲ್ಪ ಯಾಮಾರಿದರೂ ಬೀಳುತ್ತೆ ದಂಡ

080221 Agumbe Sun Set Point 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 FEBRUARY 2021 ಆಗುಂಬೆಯಲ್ಲಿ  ಇನ್ಮುಂದೆ ಪ್ರಾಣಿಗಳಿಗೆ ಆಹಾರ ನೀಡಿದರೆ ದಂಡ ಫಿಕ್ಸ್. ಕಸ ಎಸೆದರೂ ಬೀಳುತ್ತೆ ಫೈನ್. ಘಾಟಿಯ ಉದ್ದಕ್ಕೂ ಅರಣ್ಯ ಇಲಾಖೆ ಕಾರ್ಯಾಚರಣೆ. ಸೋಮೇಶ್ವರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರಿಸರ ಮತ್ತು ಕಾಡು ಪ್ರಾಣಿ, ಪಕ್ಷಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಬಂದವರೆಲ್ಲ ಆಹಾರ ಕೊಡುತ್ತಿದ್ದರು ತೀರ್ಥಹಳ್ಳಿ – ಉಡುಪಿ ನಡುವೆ ಸಂಪರ್ಕ ಕಲ್ಪಿಸುವ ಆಗುಂಬೆ … Read more

SAGARA | 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧ, ಅದ್ಧೂರಿ ಸ್ವಾಗತ

080221 Retired Soldier Mahesh Welcomed at village sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಮರಳಿದ ಬಿ.ಮಹೇಶ್ ಅವರಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದ್ದಾರೆ. ಸಾಗರ ತಾಲೂಕು ಕರೂರು ಹೋಬಳಿಯ ಎಸ್.ಎಸ್.ಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿಕೇರಿ ಗ್ರಾಮದ ಬಿ.ಮಹೇಶ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2004ರಲ್ಲಿ ಸೇನೆಗೆ ಸೇರಿದ ಮಹೇಶ್ ಅವರು ಜಮ್ಮು ಕಾಶ್ಮೀರ, ಪಂಜಾಬ್, ಮೈಸೂರು, ಲಡಾಕ್, ಛತ್ತೀಸ್‍ಗಢ, ದೆಹಲಿ, ಅಸ್ಸಾಂ, … Read more

BHADRAVATHI | ಅರಹತೊಳಲು ಕೈಮರದಲ್ಲಿ ರಸ್ತೆ ತಡೆ, ಕಾಯ್ದೆ ಹಿಂಪಡೆಯುವಂತೆ ಅಗ್ರಹ

060221 Raitha Sanga Protest in Shimoga 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 FEBRUARY 2021 ದೇಶಾದ್ಯಂತ ರೈತರು ನಡೆಸುತ್ತಿರುವ ಹೆದ್ದಾರಿ ಬಂದ್‍ ಹಿನ್ನೆಲೆ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ರೈತ ಸಂಘದ ವತಿಯಿಂದ ಹೆದ್ದಾರಿ ತಡೆ ನಡೆಸಲಾಯಿತು. ಭದ್ರಾವತಿ ತಾಲೂಕು ಅರಹತೊಳಲು ಕೈಮರದ ಎನ್‍.ಡಿ.ಸುಂದರೇಶ್ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಆಗ್ರಹಿಸಿದರು. ರೈತ ಸಂಘಟನೆ ಪ್ರಮುಖ ವಿರೇಶ್ ಸೇರಿದಂತ ಹಲವರು ಹೆದ್ದಾರಿ ತಡೆಯಲ್ಲಿ ಪಾಲ್ಗೊಂಡಿದ್ದರು. ಶಿವಮೊಗ್ಗ ಲೈವ್‍ಗೆ ಸುದ್ದಿ … Read more