ಬೆಜ್ಜವಳ್ಳಿ ಸಮೀಪ ನಾಯಿ ದಾಳಿಗೆ ತುತ್ತಾಗಿದ್ದ ಜಿಂಕೆ ರಕ್ಷಣೆ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಸೆಪ್ಟಂಬರ್ 2020 ನಾಯಿ ದಾಳಿಗೆ ತುತ್ತಾಗಿದ್ದ ಜಿಂಕೆಯೊಂದನ್ನು ರಕ್ಷಿಸಿ ವಾಪಸ್ ಕಾಡಿಗೆ ಬಿಡಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬೈನುಸರದ ಪಾರ್ವತಿ ಎಂಬುವವರ ತೋಟದಲ್ಲಿ ನಾಯಿಗಳ ದಾಳಿಗೆ ಸಿಲುಕಿದ್ದ ಜಿಂಕೆಯನ್ನು ರಕ್ಷಿಸಲಾಗಿದೆ. ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚೈತನ್ಯ, ಸುಧಾಕರ ಶೆಟ್ಟಿ, ದಿವಾಕರ ಶೆಟ್ಟಿ, ಶ್ರೀಮತಿ ಪಾರ್ವತಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more