ಸಾಗರ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಹೃದಯಾಘಾತ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 13 ಸೆಪ್ಟಂಬರ್ 2020 ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆಯಲ್ಲಿದ್ದ ವೇಳೆ ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿಲ್ ಕುಮಾರ್ ಅವರ ಆರೋಗ್ಯ ಸುಧಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದರೆ. ರಾತ್ರಿ ಇಡೀ ಡ್ಯೂಟಿ ಮಾಡಿದ್ದರು ಸಾಗರದ ಬ್ಯಾಕೋಡ್‍ನಲ್ಲಿ ವೃದ್ಧ ದಂಪತಿಯ ಮರ್ಡರ್ ಆಗಿತ್ತು. … Read more

ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ, ಚಿನ್ನಾಭರಣ ವ್ಯಾಪಾರಿಯ ಕೊಲೆಯಿಂದ ಆತಂಕ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಸೆಪ್ಟಂಬರ್ 2020 ಸಾಗರ ತಾಲೂಕು ಬ್ಯಾಕೋಡು ಗ್ರಾಮದಲ್ಲಿ ಶನಿವಾರ ರಾತ್ರಿ ದಂಪತಿಯ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಚಿನ್ನದ ವ್ಯಾಪಾರ ಮಾಡುತ್ತಿದ್ದ ಇವರ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬ್ಯಾಕೋಡಿನ ಸುಂದರ್ ಶೇಟ್ (88) ಮತ್ತು ಪತ್ನಿ ಸುಲೋಚನಾ ಶೇಟ್ (70) ಅವರ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಕರೂರು ಹೋಬಳಿ ಭಾಗದಲ್ಲಿ ಬಹು ವರ್ಷದಿಂದ ಸುಂದರ್ ಶೇಟ್ ಅವರು ಚಿನ್ನಾಭರಣದ ವ್ಯಾಪಾರ ನಡೆಸುತ್ತಿದ್ದರು. ಶನಿವಾರ … Read more

ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿಗೌಡ ಹೆಸರಿಡುವಂತೆ ಆಗ್ರಹ, ಸತ್ಯಾಗ್ರಹ ನಡೆಸಲು ನಿರ್ಧಾರ

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಭದ್ರಾವತಿ KSRTC ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂದೆ ಸೆಪ್ಟೆಂಬರ್ 14ರಂದು ಸತ್ಯಾಗ್ರಹ ನಡೆಸಲಾಗುತ್ತದೆ. ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಸತ್ಯಾಗ್ರಹಕ್ಕೆ ಚಾಲನೆ ನೀಡಲಿದ್ದಾರೆ. ಎಂ.ಜೆ.ಅಪ್ಪಾಜಿಗೌಡ ಅಭಿಮಾನಿಗಳ ಸಂಘದ ಅಧ್ಯಕ್ಷ ಕರುಣಾಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ … Read more

ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರ ದಾಳಿ, ಅಪಾರ ಪ್ರಮಾಣದ ಗಾಂಜಾ ವಶಕ್ಕೆ

110920 Ganja Seized in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಗಾಂಜಾ ಮಾರಾಟಗಾರರು, ಬೆಳಗಾರರ ವಿರುದ್ಧ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದಾರೆ. ಜಿಲ್ಲೆಯ ಮೂರು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ದಾಳಿಯಾಗಿದೆ? ಪ್ರಕರಣ 1 | ಭದ್ರಾವತಿ ಹಳೇನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸಗಾರ ಜಾಫರ್, ಸಾದಿಕ್, ಸಾದಿಕ್ ಪಾಷಾ ಎಂಬುವವರನ್ನು ಬಂಧಿಸಿದ್ದಾರೆ. ಇವರಿಂದ 1.250 ಕೆ.ಜಿ ಗಾಂಜಾ, ಎರಡು ಬೈಕ್‍ಗಳನ್ನು … Read more

ಬೈಕ್ ಕಳ್ಳತನ ಮಾಡ್ತಿದ್ದ ‘ಕಾಲುಕೇಜಿ’ ಅರೆಸ್ಟ್, ಲಕ್ಷ ಮೌಲ್ಯದ ಮೂರು ಬೈಕ್ ವಶಕ್ಕೆ

110920 Bike Thief Arrest in Shiralakoppa 1

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 11 ಸೆಪ್ಟಂಬರ್ 2020 ಮೂರು ಬೈಕುಗಳ ಕಳವು ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾಳಕೊಪ್ಪ ಪೊಲೀಸರು ಕಳ್ಳನನ್ನು ಅರೆಸ್ಟ್ ಮಾಡಿದ್ದು, ಈತನಿಂದ ಒಂದು ಲಕ್ಷ ಮೌಲ್ಯದ ಮೂರು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ತಡಗಣಿ ಗ್ರಾಮದ ಮಹೇಶ್ ಅಲಿಯಾಸ್ ಕಾಲುಕೇಜಿ (26) ಬಂಧಿತ. ಈತ ಮೂರು ಬೈಕುಗಳನ್ನು ಕಳವು ಮಾಡಿದ್ದ. ಶಿರಾಳಕೊಪ್ಪ ಪಶು ವೈದ್ಯಕೀಯ ಆಸ್ಪತ್ರೆ ಹೋಂಡಾ ಡೀಮ್ಸ್ ಯುಗ, ಚಿಕ್ಕೇರಿಗೆ ಹೊಗುವ ರಸ್ತೆಯ ಚೌಡಮ್ಮನಕೆರೆ ಬಳಿ ಹೀರೋ ಹೋಂಡಾ … Read more

ಜಿಂಕೆ ಬೇಟೆಯಾಡಿ, ಮಾಂಸ ಬೇಯಿಸಿ ಊಟ ಮಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ, ಇಬ್ಬರು ಅರೆಸ್ಟ್

110920 Forest Department Raid On Deer Hunters 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಜಿಂಕೆ ಬೇಟೆಯಾಡಿ ಅಡುಗೆ ಮಾಡಿ ಊಟ ಮಾಡುತ್ತಿರುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ತ್ಯಾವರೆಕೊಪ್ಪದಲ್ಲಿ ನಡೆದಿದೆ. ತ್ಯಾವರೆಕೊಪ್ಪದ ಉಮೇಶ್(೫೨) ಹಾಗೂ ವಿರೂಪಿನಕೊಪ್ಪದ ಈಶ್ವರ್(೩೦) ಬಂಧಿತ ಆರೋಪಿಗಳು. ವಿರೂಪಿನಕೊಪ್ಪದ ಏಳುಮಲೈ ಹಾಗೂ ಗೋವಿಂದ ಸ್ವಾಮಿ ಎಂಬ ಇಬ್ಬರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಶಂಕರ ವಲಯ ಅರಣ್ಯಾಧಿಕಾರಿಳ ತಂಡ ವಿರೂಪಿನಕೊಪ್ಪದ ಮನೆ ಮೇಲೆ ದಾಳಿ ನಡೆಸಿದಾಗ ಜಿಂಕೆಯ ಹಸಿ ಮಾಂಸ ಹಾಗೂ ಬೇಯಿಸಿದ … Read more

ಲಂಚ ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಎಂಟು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು  ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ, ಎಸಿಬಿ ಬಲೆಗೆ ಬಿದ್ದವರು. ಲಂಚ ಕೇಳಿದ್ದು ಏಕೆ? ನರೇಗಾ ಯೋಜನೆಯ 2.10 ಲಕ್ಷ ರೂ. ಹಣ ಬಿಡುಗಡೆ ಮಾಡಲು ಶಿವಪ್ಪ  8 ಸಾವಿರ ರೂ. ಲಂಚಕ್ಕೆ … Read more

ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ, ಒಳಹರಿವು ಎಷ್ಟಿದೆ? ಜಲಾಶಯ ನೀರಿನ ಮಟ್ಟ ಎಷ್ಟಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಬಾಳೆಹೊನ್ನೂರು, ಕಳಸ, ಮೂಡಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 184.4 ಅಡಿಗೆ ಏರಿಕೆಯಾಗಿದೆ. ಒಳಹರಿವು 4,786 ಕ್ಯೂಸೆಕ್ ಇದೆ. 1,186 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಒಳಹರಿವು ಪ್ರಮಾಣ ಹೀಗೆ ಮುಂದುವರೆದರೆ ಇನ್ನೊಂದೆರಡು ದಿನದಲ್ಲಿ ಜಲಾಶಯದ ಗರಿಷ್ಠ ಮಟ್ಟ 186 ಅಡಿಗೆ ತಲುಪಲಿದೆ. ಮಳೆ ಪ್ರಮಾಣ … Read more

ಭದ್ರಾವತಿಯಲ್ಲಿ ಆಯುಕ್ತರಿಗೆ ಕರೋನ ಪಾಸಿಟಿವ್, ಎರಡು ದಿನ ನಗರಸಭೆ ಬಂದ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020 ಆಯುಕ್ತರಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಭದ್ರಾವತಿ ನಗರಸಭೆಯನ್ನು ಎರಡು ದಿನ ಬಂದ್ ಮಾಡಲಾಗುತ್ತಿದೆ. ನಗರಸಭೆ ಆವರಣವನ್ನು ಸ್ಯಾನಿಟೈಸ್ ಮಾಡಿ, ಸೀಲ್‍ಡೌನ್ ಮಾಡಲಾಗಿದೆ. ಕೋವಿಡ್ ಪರೀಕ್ಷೆಗೆ ಒಳಗಾದಾಗ ಆಯುಕ್ತರಿಗೆ ಕರೋನ ಇರುವುದು ದೃಢವಾಗಿದೆ. ಅವರು ತಮ್ಮ ಮನೆಯಲ್ಲೇ 14 ದಿನ ಕ್ವಾರಂಟೈನ್‍ಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಸಭೆಯನ್ನು ಎರಡು ದಿನ ಬಂದ್ ಮಾಡಲಾಗಿದೆ. ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. … Read more

ಹೊಸನಗರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಬೀದಿ ಅಂಗಡಿ, ತೆರವಿಗೆ ಒತ್ತಾಯ

100920 Hosanagara Pattana Panchayat Members Memorandum 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 10 ಸೆಪ್ಟಂಬರ್ 2020 ಹೆದ್ದಾರಿ ಪಕ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಬೀದಿ ಹೊಟೇಲ್ ತೆರವುಗೊಳಿಸುವಂತೆ ಪಟ್ಟಣ ಪಂಚಾಯಿತಿ ಸದಸ್ಯರು ಒತ್ತಾಯಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ ರಾಜೀವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹೊಸನಗರ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬಲ ಭಾಗದಲ್ಲಿ ಬೀದಿ ಅಂಗಡಿ ಮತ್ತು ಕ್ಯಾಂಟೀನ್ ತೆರೆಯಲು ಪಟ್ಟಣ ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆ. ಆದರೆ ಎಡ ಭಾಗದಲ್ಲಿ ಶೆಡ್ ನಿರ್ಮಿಸಲಾಗಿದ್ದು, ಬೀದಿ ಅಂಗಡಿ ಹೆಸರಲ್ಲಿ ಹೊಟೇಲ್ ತೆರೆಯಲಾಗುತ್ತಿದೆ. ಅನುಮತಿ … Read more