ತೀರ್ಥಹಳ್ಳಿಯಲ್ಲಿ ಮತ್ತೊಂದು ಕರೋನ ಪಾಸಿಟಿವ್, ರಸ್ತೆ ಸೀಲ್ ಡೌನ್

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2020 ಬೆಂಗಳೂರಿನಿಂದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಬಡಾವಣೆಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ ಬಡಾವಣೆಯ 7ನೇ ಅಡ್ಡರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಪತ್ನಿಯ ಹೆರಿಗೆ ಸಲುವಾಗಿ ಮೂರು ದಿನದ ಹಿಂದೆ ಇವರು ಬೆಂಗಳೂರಿನಿಂದ ಬಂದಿದ್ದರು ಎಂದು ಹೇಳಲಾಗುತ್ತಿದೆ. ಸೊಪ್ಪುಗುಡ್ಡೆಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸ್ವ್ಯಾಬ್ ಟೆಸ್ಟ್ ಬಳಿಕ ಇವರಲ್ಲಿ ಸೋಂಕು ಇರುವುದು ದೃಢವಾಗಿದೆ. ತಕ್ಷಣ ಇವರನ್ನು … Read more

ಕರೋನ ವಾರಿಯರ್ ಕುಟುಂಬಕ್ಕೆ ಸೊಂಕು ಅಂತಾ ಸುಳ್ಳು ಸುದ್ದಿ, ಭದ್ರಾವತಿಯಲ್ಲಿ ಮೂವರ ವಿರುದ್ಧ ಕೇಸ್‌ಗೆ ಸೂಚನೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜುಲೈ 2020 ಕರೋನ ವಾರಿಯರ್‌ಗೆ ಸೋಂಕು ತಗುಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಪಿಡಿಒ ಒಬ್ಬರಿಗೆ ಸೂಚನೆ ನೀಡಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗುವ ಸಾದ್ಯತೆ ಇದೆ. ಯಾರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಯ್ತು? ಭದ್ರಾವತಿ ತಾಲೂಕು ಹನುಮಂತಾಪುರದ ನಿವಾಸಿ, ತಾಲೂಕು ನೇತ್ರಾಧಿಕಾರಿ ಡಾ.ರುದ್ರೇಶ್ ಅವರ ವಿರುದ್ಧ ಸುಳ್ಳು ಸುದ್ದಿ ಹಬ್ಬಸಿಲಾಗಿತ್ತು. ಡಾ.ರುದ್ರೇಶ್ ಮತ್ತು ಅವರ ಕುಟುಂಬಕ್ಕೆ ಕರೋನ … Read more

ಆಯನೂರು ಕೋಟೆ ಬಳಿ ವ್ಯಕ್ತಿಯೊಬ್ಬರಿಗೆ ಕರೋನ, ಮನೆಯಲ್ಲಿದ್ದವರಿಗೆ ಕ್ವಾರಂಟೈನ್

shivamogga graphics map

ಶಿವಮೊಗ್ಗ ಲೈವ್.ಕಾಂ | AYANUR NEWS | 11 ಜುಲೈ 2020 ಬೆಂಗಳೂರಿನಿಂದ ಬಂದಿದ್ದ ಕಾರ್ಪೆಂಟರ್ ಒಬ್ಬರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಕೋಟೆ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದಿದ್ದ 48 ವರ್ಷದ ಕಾರ್ಪೆಂಟರ್ ಒಬ್ಬರಿಗೆ ಸೋಂಕು ತಗುಲಿದೆ. ಇವರು ಪತ್ನಿ, ಮೂವರು ಮಕ್ಕಳೊಂದಿಗೆ ಬಂದಿದ್ದರು. ಆಯನೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಸೋಂಕು ದೃಢವಾಗುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಮನೆಯಲಿದ್ದ ಆರು ಮಂದಿಯನ್ನು ಕ್ವಾರಂಟೈನ್ಗೆ … Read more

ತೀರ್ಥಹಳ್ಳಿಯ ಕನ್ನಂಗಿ ಸಮೀಪದ ಹಳ್ಳಿಯೊಂದರಲ್ಲಿ ನಾಲ್ವರಿಗೆ ಕರೋನ, ಕಂಟೈನ್ಮೆಂಟ್ ಜೋನ್ ರಚನೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 ಜುಲೈ 2020 ತಿಥಿ ಕಾರ್ಯಕ್ಕೆ ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ಸೇರಿ ನಾಲ್ಕು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಗ್ರಾಮವೊಂದರಲ್ಲಿ ಸೀಲ್ ಡೌನ್ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಕನ್ನಂಗಿ ಸಮೀಪದ ಕಳ್ಳಿಗದ್ದೆಯಲ್ಲಿ ನಾಲ್ಕು ಮಂದಿಗೆ ಕರೋನ ದೃಢವಾಗಿದೆ. ಇತ್ತೀಚೆಗೆ ಮೃತರಾಗಿದ್ದ ಮಹಿಳೆಯೊಬ್ಬರ ತಿಥಿ ಕಾರ್ಯದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಇಬ್ಬರು ಬಂದಿದ್ದರು. ಇವರಲ್ಲಿ ಒಬ್ಬರಿಗೆ ಸೋಂಕು ತಗುಲಿರುವ ಸಾದ್ಯತೆ ಇದೆ. ಬೆಂಗಳೂರಿನಿಂದ ಬಂದ ವ್ಯಕ್ತಿಯಿಂದ ಉಳಿದ ಮೂವರಿಗೆ ಸೋಂಕು … Read more

ಸಾಗರ ಆಸ್ಪತ್ರೆಗೆ ಎರಡು ಆಂಬುಲೆನ್ಸ್, ಮೂರು ವೆಂಟಿಲೇಟರ್ ಸೇರಿ ಮತ್ತಷ್ಟು ಸೌಲಭ್ಯಕ್ಕೆ ಶಾಸಕರ ಡಿಮಾಂಡ್

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜುಲೈ 2020 ಸಾಗರದಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಆಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಇತರೆ ಸೌಲಭ್ಯಗಳನ್ನು ಹೆಚ್ಚಳ ಮಾಡುವಂತೆ ಶಾಸಕ ಹರತಾಳು ಹಾಲಪ್ಪ ಮನವಿ ಮಾಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರನ್ನು ಶಾಸಕ ಹರತಾಳು ಹಾಲಪ್ಪ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ, ಚರ್ಚೆ ನಡೆಸಿದರು. ಸಾಗರ, ಸೊರಬ, ಹೊಸನಗರದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿದೆ. ಈ … Read more

ಕಳ್ಳನಿಗೆ ಕರೋನ, ಹಿಡಿದು ತಂದ ಮೂವರು ಪೊಲೀಸರಿಗೆ ಕ್ವಾರಂಟೈನ್, ಪೊಲೀಸ್ ಠಾಣೆ ಸ್ಯಾನಿಟೈಸೇಷನ್

100720 Shikaripura Police Station Sanitization 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಜುಲೈ 2020 ಕಳ್ಳನೊಬ್ಬನಿಗೆ ಕರೋನ ಸೋಂಕು ತಗುಲಿದ್ದು ಆತನನ್ನು ಹಿಡಿದು ತಂದ ಮೂವರು ಪೊಲೀಸರು ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಕಳ್ಳನನ್ನು ಹೊನ್ನಾಳಿಯಿಂದ ಬಂಧಿಸಿ ಶಿಕಾರಿಪುರ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದರು. ಇದಕ್ಕೂ ಮೊದಲು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಕಳ್ಳನಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಮೂವರು ಪೊಲೀಸರನ್ನು ಕ್ವಾರಂಟೈನ್‍ಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ಸಾವು, ಏಳಕ್ಕೆ ಏರಿದ ಸಾವಿನ ಸಂಖ್ಯೆ

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಿಗೆ ಸೋಂಕಿತರು ಮೃತರಾಗುತ್ತಿರುವ ಸಂಖ್ಯೆಯು ಏರಿಕೆಯಾಗುತ್ತಿದೆ. ಕರೋನಾಗೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಗುರುವಾರ ಮೃತರಾಗಿದ್ದು ಒಟ್ಟು ಸೋಂಕಿತರ ಕೊನೆಯುಸಿರೆಳೆದ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈಗ ಮೃತರಾಗಿದ್ದು ಯಾರು? ಶಿಕಾರಿಪುರ ತಾಲೂಕಿನ ಖವಾಸಪುರ ಗ್ರಾಮದ ವೃದ್ಧರೊಬ್ಬರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದರು. ಇವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಇವರು ಮೊದಲು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. … Read more

ಆನಂದಪುರದಲ್ಲಿ ಅರ್ಧ ದಿನ ಮಾತ್ರ ವ್ಯಾಪಾರಕ್ಕೆ ಅವಕಾಶ ಕೊಡಿ, ಗ್ರಾಮಸ್ಥರಿಂದ ಮನವಿ

ಶಿವಮೊಗ್ಗ ಲೈವ್.ಕಾಂ | ANANDAPURA NEWS | 9 ಜುಲೈ 2020 ಅಕ್ಕಪಕ್ಕದ ಪಟ್ಟಣಗಳಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಅರ್ಧದಿನ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ. ಸಾಗರ, ರಿಪ್ಪನ್‍ಪೇಟೆ, ಶಿಕಾರಿಪುರ, ಸೊರಬ, ಹೊಸನಗರದಲ್ಲಿ ಪ್ರತಿನಿತ್ಯ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗಾಗಿ ಆನಂದಪುರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆವರೆಗೆ ಮಾತ್ರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು … Read more

ನಾಳೆಯಿಂದ ಒಂದು ವಾರ ಸಾಗರದ ಆಟೋ ಕಾಂಪ್ಲೆಕ್ಸ್ ಸ್ವಯಂ ಪ್ರೇರಿತ ಬಂದ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2020 ದಿನೇ ದಿನೇ ಕರೋನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ, ಒಂದು ವಾರ ಸಾಗರದ ಕೈಗಾರಿಕಾ ಸಂಕೀರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಜುಲೈ 9ರಿಂದ ಸಂಕೀರ್ಣ ಬಂದ್ ಆಗಲಿದೆ. ಸ್ವಯಂ ಪ್ರೇರಿತ ಬಂದ್ ಮಲೆನಾಡು ಸಣ್ಣ ಕೈಗಾರಿಕೆ ಮಾಲೀಕರು ಮತ್ತು ಕಾರ್ಮಿಕರ ಸಂಘದ ವತಿಯಂದ ಸ್ವಯಂ ಪ್ರೇರಿತ ಬಂದ್‍ಗೆ ನಿರ್ಧರಿಸಲಾಗಿದೆ. ಇಲ್ಲಿನ ಕೈಗಾರಿಕಾ ವಸಾಹತು, ಆಟೋ ಕಾಂಪ್ಲೆಕ್ಸ್, ಮಂಗಳಬೀಸು ಕೈಗಾರಿಕಾ ಪ್ರದೇಶದಲ್ಲಿ … Read more

ಹತ್ತು ದಿನ ರಿಪ್ಪನ್‌ಪೇಟೆಯಲ್ಲಿ ಸಲೂನ್‌ಗಳು ಬಂದ್, ಸ್ವಯಂ ನಿರ್ಬಂಧ ವಿಧಿಸಿಕೊಂಡ ಮಾಲೀಕರು

ಶಿವಮೊಗ್ಗ ಲೈವ್.ಕಾಂ | RIPPONPETE NEWS | 8 ಜುಲೈ 2020 ಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಹಲವರಿಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹತ್ತು ದಿನ ಸಲೂನ್‍ ಬಾಗಿಲು ತೆರೆಯದಿರಲು ನಿರ್ಧರಿಸಲಾಗಿದೆ. ರಿಪ್ಪನ್‍ಪೇಟೆ ಸುತ್ತಮುತ್ತಲು ಇನ್ನು ಹತ್ತು ದಿನ ಸಲೂನ್‍ಗಳು ಇರುವುದಿಲ್ಲ. ಸಿದ್ದಪ್ಪನ ಗುಡಿಯ ಸಭಾಂಗಣದಲ್ಲಿ ನಡೆದ ಭಂಡಾರಿ ಸಮಾಜ ಸಂಘ ರಿಪ್ಪನ್‍ಪೇಟೆ ಘಟಕದ ಸಲೂನ್‍ ಅಂಗಡಿ ಮಾಲೀಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 10 ದಿನ ಸಲೂನ್ ತೆಗೆಯದಿರಲು ಒಮ್ಮತದ ನಿರ್ಧಾರ ಮಾಡಲಾಗಿದೆ. ಸಂಘದ … Read more