ಸಾಗರದಲ್ಲಿ ಗಂಡನ ಮನೆ ಸೇರಿದ ಮಾರಿಕಾಂಬೆ, ದರ್ಶನಕ್ಕೆ ಜನವೊ ಜನ, ವಸ್ತು ಪ್ರದರ್ಶನಕ್ಕೆ ಚಾಲನೆ, ಸರ್ಕಸ್ ಉದ್ಘಾಟಿಸಿದ್ರು ಮಾಜಿ ಮಿನಿಸ್ಟರ್

ಶಿವಮೊಗ್ಗ ಲೈವ್.ಕಾಂ | SAGARA | 19 ಫೆಬ್ರವರಿ 2020 ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಮಾರಿಕಾಂಬ ದೇವಿ ಮೂರ್ತಿಯನ್ನು ಗಂಡನ ಮನೆಗೆ ತರಲಾಗಿದೆ. ಈ ವೇಳೆ ಅದ್ಧೂರಿಯಾದ ರಾಜಬೀದಿ ಉತ್ಸವದ ನಡೆಯಿತು. ಮಂಗಳವಾರ ರಾತ್ರಿ 10ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ಹಾಗೂ ಹೆಣ್ಣು ಒಪ್ಪಿಸುವ ವಿಧಿವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಉತ್ಸವದಲ್ಲಿ ಭಾಗಿಯಾದರು. ಶ್ರೀ ದೇವಿಯ ದಂಡಿನ ಮೆರವಣಿಗೆ ಹಾಗೂ ರಾಜಬೀದಿ ಉತ್ಸವ ಜನರನ್ನು ಆಕರ್ಷಿಸಿತು. ಕಣ್ಸೆಳೆದ ಸಾಂಸ್ಕೃತಿಕ ಕಲಾ ತಂಡಗಳು … Read more

ಕುಂಸಿ ಮೂಲದ ಯುವತಿಯ ಕಿಡ್ನಾಪ್ ಕೇಸ್, 19 ವರ್ಷದ ಬಳಿಕ ಜೋಗ ಪೊಲೀಸರ ಬಲೆಗೆ ಬಿದ್ದ ಆರೋಪಿ, ಈವರೆಗೂ ಎಲ್ಲಿದ್ದ ಗೊತ್ತಾ?

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020 ಯುವತಿಯ ಅಪರಹಣಕ್ಕೆ ಸಂಬಂಧಿಸಿ 19 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಶಮಿ ಅಲಿಯಾಸ್ ಮೊಹಮದ್ ಅಲಿಯನ್ನು ಕೇರಳದಲ್ಲಿ ಬಂಧಿಸುವಲ್ಲಿ ಜೋಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶಮಿ ಕಾರ್ಗಲ್‌ನವನು. 2001ರಲ್ಲಿ ಕುಂಸಿ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಕೆಲ ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿಟ್ಟ ಆರೋಪ ಈತನ ಮೇಲಿತ್ತು. ಪ್ರಕರಣದಲ್ಲಿ ಐವರನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. ನಾಲ್ವರನ್ನು ಈಗಾಗಲೇ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಶಮಿ ಮಾತ್ರ ಪ್ರಕರಣ ನಡೆದ … Read more

ಬಾರ್ ಅಂಡ್ ರೆಸ್ಟೋರೆಂಟ್ ವಿರುದ್ಧ ರೊಚ್ಚಿಗೆದ್ದ ಮಹಿಳೆಯರು, ಮಕ್ಕಳು, ಬೀದಿಗಿಳಿದು ಪ್ರತಿಭಟಿಸಿದ ಗ್ರಾಮಸ್ಥರು

ಶಿವಮೊಗ್ಗ ಲೈವ್.ಕಾಂ | SHIMOGA | 18 ಫೆಬ್ರವರಿ 2020 ತಾಳಗುಪ್ಪ ಗ್ರಾಮದಲ್ಲಿ ಆರಂಭಿಸಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರವುಗೊಳಿಸುವಂತೆ ಆಗ್ರಹಿಸಿ ಸ್ತ್ರೀಶಕ್ತಿ ಸಂಘ, ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಗ್ರಾಮದ ವಸತಿ ಪ್ರದೇಶದಲ್ಲಿ ಶಿವಮೊಗ್ಗದ ವ್ಯಕ್ತಿಯೊಬ್ಬರು ಸ್ಥಳೀಯರ ವಿರೋಧದ ನಡುವೆಯೂ ಮದ್ಯದಂಗಡಿಆರಂಭಿಸಿದ್ದಾರೆ. ಬಾರ್ ಲೈಸನ್ಸ್ ರದ್ದು ಮಾಡುವಂತೆ ಈ ಹಿಂದೆ ಡಿಸಿಗೆ ಗ್ರಾಪಂ ಮೂಲಕ ಮನವಿ ಸಲ್ಲಿಸಲಾಗಿತ್ತು. ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಅಬಕಾರಿ ಇಲಾಖೆ ಪರವಾನಗಿ ನೀಡಿದೆ ಎಂದು ಪ್ರತಿಭಟನಾಕಾರರು ದೂರಿದರು. ಜನವಸತಿ ಪ್ರದೇಶದಲ್ಲಿ … Read more

ಸಾಗರ ಮಾರಿಕಾಂಬೆ ಜಾತ್ರೆಗೆ ಅದ್ಧೂರಿ ಚಾಲನೆ, ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ, ಏನೇನೆಲ್ಲ ಪೂಜೆ ಮಾಡಲಾಗಿದೆ ಗೊತ್ತಾ?

180220 Sagara Marikamba Jathre Inauguration 1

ಶಿವಮೊಗ್ಗ ಲೈವ್.ಕಾಂ | SAGARA | 18 ಫೆಬ್ರವರಿ 2020 ಶಕ್ತಿದೇವತೆ ಶ್ರೀ ಮಾರಿಕಾಂಬೆ ಜಾತ್ರೆಗೆ ಇವತ್ತು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 9 ದಿನಗಳ ಜರುಗುವ ತಾಯಿಯ ಜಾತ್ರೆಗೆ, ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ಸಾಂಪ್ರಾದಾಯಿಕ ವಿಧಿ ವಿಧಾನಗಳು ನಡೆಯಿತು. ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಿ ವಿಧಿವಿಧಾನ ನೇರವೇರಿಸಲಾಯಿತು. ನಂತರ … Read more

ಭದ್ರಾವತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ, 5.50 ಕೋಟಿ ಹಣ ಕೂಡಲೇ ಬಿಡುಗಡೆಗೆ ಆಗ್ರಹ

170220 Bhadravathi Ambedkar Bhavana Protest 1

ಶಿವಮೊಗ್ಗ ಲೈವ್.ಕಾಂ | BHADRAVATHI | 17 ಫೆಬ್ರವರಿ 2020 ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭದ್ರಾವತಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿದೆ. 2017ರಲ್ಲಿ ಆರಂಭವಾದ ಕಾಮಗಾರಿ ನಿಧಾನಗತಿಯಲ್ಲಿದ್ದು, ಹೆಚ್ಚುವರಿಯಾಗಿ 5.50 ಕೋಟಿ ರೂ. ಅಗತ್ಯವಿದೆ. ಇದನ್ನು ಬಿಡುಗಡೆ ಮಾಡಲು ಮಿನಮೇಷ ಎಣಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು … Read more

ಇತಿಹಾಸ ಪ್ರಸಿದ್ಧ ಸಾಗರ ಮಾರಿ ಜಾತ್ರೆಗೆ ಕ್ಷಣಗಣನೆ, ಬೆಳಗಿನ ಜಾವ ಶುರುವಾಗಲಿದೆ ಪೂಜೆ, ಏನೇನು ಶಾಸ್ತ್ರ ನಡೆಯಲಿದೆ ಗೊತ್ತಾ?

170220 Sagara Marikamba Jathre 1

ಶಿವಮೊಗ್ಗ ಲೈವ್.ಕಾಂ | SAGARA | 17 ಫೆಬ್ರವರಿ 2020 ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಫೆ.18ರಿಂದ ಆರಂಭವಾಗಲಿದೆ. ಒಂಭತ್ತು ದಿನ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ. ಇವತ್ತು ರಾತ್ರಿ ಚಿಕ್ಕಮ್ಮನನ್ನು ಹೊರಡಿಸುವ ಕಾರ್ಯ ನಡೆಯಲಿದೆ. ಬಳಿಕ 9 ಮನೆಯಿಂದ ಘಟೆವು ತರಲಾಗುತ್ತದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ. ಮಂಗಳವಾರ ಬೆಳಗ್ಗೆ ಗಣಪತಿ ದೇವಸ್ಥಾನದಲ್ಲಿ ತಾಳಿಪೂಜೆ ನೆರವೇರಲಿದೆ. ನಂತರ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜೆ ಸಲ್ಲಿಸಿ, ಮಂಗಳವಾದ್ಯದೊಂದಿಗೆ ತಾಯಿಯ ಮನೆ ದೇವಸ್ಥಾನದ … Read more

ಶ್ರೀಗಂಧ ಮರ ಕಡಿದ ಹೊಸನಗರದ ಇಬ್ಬರಿಗೆ ಐದು ವರ್ಷ ಜೈಲು, ಮರ ಕಡಿದಿದ್ದೆಲ್ಲಿ? ದಂಡದ ಮೊತ್ತ ಎಷ್ಟು ಗೊತ್ತಾ?

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020 ಶ್ರೀಗಂಧ ಮರ ಕಡಿತಲೆಗೆ ಸಂಬಂಧಿಸಿ ಹೊಸನಗರ ತಾಲೂಕಿನ ಇಬ್ಬರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಸಾದಾ ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2017ರ ಜೂ.19ರಂದು ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದ ಕೇಶವ ಮತ್ತು ಸೋನಲೆ ಗ್ರಾಮದ ವಿರೂಪಾಕ್ಷ ಎಂಬುವವರು ವಸುವೆ ಗ್ರಾಮದ ಸರ್ವೇ ನಂ. 66ರ ಸರ್ಕಾರಿ ಜಾಗದಲ್ಲಿದ್ದ ಶ್ರೀಗಂಧ ಮರವನ್ನು ಕಡಿತಲೆ … Read more

ಹೊಳೆಹೊನ್ನುರು ಬಳಿ ಭೀಕರ ಅಪಘಾತ, ಬೈಕ್, ಮದುವೆ ದಿಬ್ಬಣದ ಬಸ್ ಮುಖಾಮುಖಿ ಡಿಕ್ಕಿ, ಗರ್ಭಿಣಿ ಸೇರಿ ಮೂವರು ಸಾವು

ಶಿವಮೊಗ್ಗ ಲೈವ್.ಕಾಂ | BHADRAVATHI | 16 ಫೆಬ್ರವರಿ 2020 ಮದುವೆ ದಿಬ್ಬಣದ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಡಲ ವಿಠಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಹನುಂತಾಪುರದ ಈರಪ್ಪ (45), ಆಶಾ (34), ಹೇಮಂತ್ (7) ಮೃತ ದುರ್ದೈವಿಗಳು. ಹೊಳೆಹೊನ್ನೂರು ಆಸ್ಪತ್ರೆಗೆ ತೆರಳುವಾಗ ದುರ್ಘಟನೆ ಸಂಭಿವಿಸಿದೆ. ಜವರಾಯನಾದ ದಿಬ್ಬಣದ ಬಸ್ ಆರೋಗ್ಯ ತಪಾಸಣೆಗಾಗಿ ಗರ್ಭಿಣಿ ಪತ್ನಿಯನ್ನು ಈರಪ್ಪ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. … Read more

ತಾಳಗುಪ್ಪ ಸಮೀಪ ಟವೇರಾ, ಕ್ಯಾಂಟರ್ ಮುಖಾಮುಖಿ ಡಿಕ್ಕಿ

ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020 ಟವೆರಾ ಕಾರು ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ತಾಳಗುಪ್ಪ ಬಳಿ ಎರಡು ವಾಹನಗಳು ಇವತ್ತು ಬೆಳಗ್ಗೆ ಮುಖಾಮುಖಿ ಡಿಕ್ಕಿಯಾಗಿವೆ. ಕಾನ್ಲೆ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಆರು ಜನರಿಗೆ ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕಾರು ಮತ್ತು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಕಾರಿನಲ್ಲಿದ್ದವರು ತುಮಕೂರು ಮೂಲದವರು ಹೇಳಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಸಾಗರ ಮೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ, ಶಾಸಕರ ವಿರುದ್ಧ ಮಾಜಿ ಎಂಎಲ್ಎ ಆಕ್ರೋಶ

150220 Farmers Protest Against Power Cut in Sagara 1

ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020 ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ತಾಲೂಕು ಘಟಕ ನಗರದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕಬೇಳೂರು ಗೋಪಾಲಕೃಷ್ಣ, ರೈತರು ಸಂಕಷ್ಟದಲ್ಲಿರುವ ಈ ಹೊತ್ತಿನಲ್ಲಿ ಶಾಸಕರು ಡಾನ್ಸ್, ಕೆರೆಹಬ್ಬ ಬಿಟ್ಟು ಕೃಷಿಕರ ಸಮಸ್ಯೆಗೆ ಸ್ಪಂದಿಸಲಿ. ರೈತರು ಸಮೃದ್ದಿ ಆಗಿದ್ದಾಗ ನೀವು ರಾಜ್ಯಾದ್ಯಂತ ಕೆರೆಹಬ್ಬ ಆಚರಿಸಿಕೊಳ್ಳಿ ಎಂದು ಕುಟುಕಿದರು. ಕಳೆದ ಸಾಲಿನಲ್ಲಿ … Read more