ಸಬ್ ಇನ್ಸ್’ಪೆಕ್ಟರ್ ಅಮಾನತಿಗೆ ಆಗ್ರಹ, ಭದ್ರಾವತಿಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಶಿವಮೊಗ್ಗ ಲೈವ್.ಕಾಂ | BHADRAVATHI | 25 ಜನವರಿ 2020 ಗ್ರಾಮಾಂತರ ಪಿಎಸ್‌ಐ ಸುನಿಲ್ ಕುಮಾರ್ ಅಮಾನತಿಗೆ ಒತ್ತಾಯಿಸಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ನೇತೃತ್ವದಲ್ಲಿ ಮಿನಿವಿಧಾನಸೌಧ ಮುಂಭಾಗ ಅಹೋರಾತ್ರಿ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ನಡೆದಿದೆ. ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಕೂಡ್ಲಿಗೆರೆ, ಜಿಪಂ ವ್ಯಾಪ್ತಿಯ ಅರಳಿಹಳ್ಳಿಯಲ್ಲಿ ಜಿಪಂ ಸದಸ್ಯ ಎಸ್.ಮಣಿಶೇಖರ್ ಸಹಸ್ರಾರು ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಬಳಸೋಕೆರೆ ಅಭಿವೃದ್ಧಿಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಕೆರೆಪಕ್ಕದ, ಅದೇ ಗ್ರಾಮದ ಮಲ್ಲಿಕಾರ್ಜುನ, ಚಂದ್ರ, ಹೇಮಕುಮಾರ್, ನಾಗರಾಜ್ ಎಂಬ ಸಹೋದರರು … Read more

ಅಕ್ರಮವೋ, ಸಕ್ರಮವೋ ಒಟ್ಟಿನಲ್ಲಿ ಇಲ್ಲಿ ಮರಳು ಗಣಿಗಾರಿಕೆ ಅವಕಾಶ ಬೇಡ, ಸಚಿವರಿಗೆ ಗ್ರಾಮಸ್ಥರ ಒತ್ತಾಯ

ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020 ಶ್ರೀ ಕ್ಷೇತ್ರ ಕೂಡಲಿಯಲ್ಲಿ ಮರಳು ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಕೂಡಲಿ ಗ್ರಾಮಸ್ಥರು ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೂಡಲಿ ಪುರಾಣ ಪ್ರಸಿದ್ಧ ಮತ್ತು ಐತಿಹಾಸಿಕ ಗ್ರಾಮವಾಗಿದ್ದು ಇತ್ತೀಚೆಗೆ ಮರಳುಗಾರಿಕೆಯಿಂದ ಈ ಗ್ರಾಮ ಅಳಿವಿನ ಅಂಚಿಗೆ ಸಾಗುತ್ತಿದೆ ಎಂದು ಆರೋಪಿಸಿದರು.   ಮರಳು ಗಣಿಗಾರಿಕೆಯಿಂದ ಇಡೀ ಗ್ರಾಮವೇ ನಶಿಸಿ ಹೋಗುವಂತಹ ಸ್ಥಿತಿಗೆ ತಲುಪಿದೆ. ಕೂಡಲಿ ಶ್ರೀ ಕ್ಷೇತ್ರ ಶಂಕರಾಚಾರ್ಯರ ಸ್ಥಾಪಿತ ಮೂಲ ಶಾರದಾಂಬೆಯ ಮಹಾಸಂಸ್ಥಾನ, ಆರ್ಯ … Read more

ನ್ಯೂಟ್ರಿಷನ್ ಕ್ಲಬ್ ಹೆಸರಲ್ಲಿ ಮಹಾ ದಂಧೆ, ಇಲ್ಲದ ಕಾಯಿಲೆ ಹೆಸರಲ್ಲಿ ಹಣ ವಸೂಲಿ ಆರೋಪ, ವಕೀಲರಿಂದ ತನಿಖೆಗೆ ಒತ್ತಾಯ

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020 ತಾಲೂಕಿನಾದ್ಯಂತ ತಲೆ ಎತ್ತಿರುವ ಹರ್ಬಲ್ ನ್ಯೂಟ್ರಿಷನ್ ಕ್ಲಬ್’ಗಳ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ವಕೀಲ ಜಿ. ರಾಜಕುಮಾರ್ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ. ಇತ್ತೀಚಿಗೆ ತಾಲೂಕಿನಾದ್ಯಂತ ಹರ್ಬಲ್ ನ್ಯೂಟ್ರಿಷನ್ ಕ್ಲಬ್ ಎಂಬ ಹೆಸರಿನಲ್ಲಿ ಹಲವಾರು ಕ್ಲಬ್‌ಗಳು ತಲೆ ಎತ್ತಿವೆ. ಇಲ್ಲಿನ ಸಿಬ್ಬಂದಿ ಜನರ ಬಳಿ ಹೋಗಿ ಆರೋಗ್ಯ ಪರಿಶೀಲಿಸುತ್ತಾರೆ. ತಾವೇ ಒಂದು ಯಂತ್ರ ಇಟ್ಟುಕೊಂಡಿದ್ದು ಆ ಯಂತ್ರದಿಂದ ಜನರಿಗೆ ಚೆಕ್‌ಕಪ್ ಮಾಡಿ ನಿಮಗೆ ಬಿಪಿ ಇದೆ, … Read more

ಭದ್ರಾವತಿ ತಾಲೂಕು ಪಂಚಾಯಿತಿಯಲ್ಲಿ ಆಮಂತ್ರಣ ಪತ್ರಿಕೆ ಕಿರಿಕ್, ಅರ್ಧಕ್ಕೆ ನಿಂತು ಹೋಯ್ತು ಮೀಟಿಂಗ್

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಜನವರಿ 2020 ಸಮಾಜ ಕಲ್ಯಾಣ ಇಲಾಖೆಯ ನೂತನ ಕಟ್ಟಡ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಾಪಂ ಸ್ಥಾಯಿ ಸಮಿತಿ ಸದಸ್ಯರು ಆಶಾ ಶ್ರೀಧರ್ ನೇತೃತ್ವದಲ್ಲಿ ಸಭೆಯಿಂದ ಹೊರ ನಡೆದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್ ಜ.27ರಂದು ನಿಗದಿಪಡಿಸಿರುವ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕೊಟ್ಟಾಗ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಲು ಮುಂದಾದ ದೂದ್‌ಪೀರ್ ಜತೆ … Read more

ಲೈಸೆನ್ಸ್ ಇಲ್ಲ, ಇನ್ಷುರೆನ್ಸ್ ಮಾಡಿಸಿಲ್ಲ, ಫೈನ್ ಬದಲು ಲಡ್ಡು, ಗುಲಾಬಿ ಕೊಡಲು ಪೊಲೀಸರ ನಿರ್ಧಾರ

Sagar City Road General Image 1

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020 ಸಾಗರದಲ್ಲಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ಪೊಲೀಸ್ ಅಧಿಕಾರಿಗಳು ದಂಡ ಹಾಕಲ್ಲ, ಬದಲಾಗಿ ಲಾಡು ಕೈಗಿಡ್ತಾರೆ, ಗುಲಾಬಿ ಹೂ ಕೊಡ್ತಾರೆ..! ಎಲ್ಲ ಸಂದರ್ಭಗಳಲ್ಲೂ ಕಾನೂನು ಮೂಲಕವೇ ಜಾಗೃತಿ ಅಸಾಧ್ಯ ಎನ್ನುವ ಕಾರಣಕ್ಕೆ ಮೊದಲ ಬಾರಿಗೆ, ಈ ರೀತಿ ಪ್ರೀತಿಯಿಂದ ತಿಳಿ ಹೇಳುವ ಪ್ರಯತ್ನ ನಡೆಯುತ್ತಿದೆ. ಹಾಗೆಂದು ಮತ್ತೆ ಮತ್ತೆ ಅದೇ ಚಾಳಿ ಮುಂದುವರೆದರೆ ದಂಡ ತಪ್ಪಿದ್ದಲ್ಲ. ಇದು ನೂತನ ಡಿವೈಎಸ್ಪಿ ಜಿ. ರಘು ಅವರ ಐಡಿಯಾ. ವಾಹನ … Read more

ತಾಳಗುಪ್ಪ ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆ ಸಾವು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020 ತಾಳಗುಪ್ಪ – ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಈ ಮಹಿಳೆ ರಾತ್ರಿ ಬೆಂಗಳೂರು ತಾಳಗುಪ್ಪ ಇಂಟರ್’ಸಿಟಿ  ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು ಎಂದು ಹೇಳಲಾಗುತ್ತಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಪಿಳ್ಳಂಗೆರೆ ಬಳಿ 52 ಪ್ರಯಾಣಿಕರಿದ್ದ ಖಾಸಗಿ ಬಸ್ ಪಲ್ಟಿ, ಭಾರೀ ಅನಾಹುತ ಜಸ್ಟ್ ಮಿಸ್

ಶಿವಮೊಗ್ಗ ಲೈವ್.ಕಾಂ | SHIMOGA | 21 ಜನವರಿ 2020 ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ 52 ಪ್ರಯಾಣಿಕರಿದ್ದರು. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ಶಿವಮೊಗ್ಗದ ಪಿಳ್ಳಂಗೆರೆ ಬಳಿ ಘಟನೆ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ಬಸ್ಸು, ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಪ್ರಯಾಣಿಕರ ರಕ್ಷಣೆ ಮಾಡಲಾಯಿತು. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

‘ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿದ ಸಂಘಟನೆಗಳು ಶಾಶ್ವತವಾಗಿ ಬ್ಯಾನ್ ಮಾಡಬೇಕು’

ಶಿವಮೊಗ್ಗ ಲೈವ್.ಕಾಂ | SHIKARIPURA | 18 ಜನವರಿ 2020 ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ SDPI ಸಂಘಟನೆ ಸಂಚು ರೂಪಿಸಿದೆ ಎಂಬುದು ಸಾಬೀತಾಗಿದೆ. ಇಂತಹ ದೇಶದ್ರೋಹಿ ಸಂಘಟನೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು. ಮುಂದೆ ಈ ಸಂಘಟನೆ ತಲೆ ಎತ್ತದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕಾರಿಪುರ ತಾಲೂಕು ಚಿಕ್ಕಮಾಗಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, SDPI ಮತ್ತು ಪಿಎಫ್ಐ ಸಂಘಟನೆಗಳ ಕುರಿತು ಹಿಂದಿನಿಂದಲು ಹೇಳುತ್ತಿದ್ದೇವೆ. … Read more

ಹುಲಿ, ಸಿಂಹಧಾಮದಲ್ಲಿ ಸಂಸದ ರಾಘವೇಂದ್ರ ಸಫಾರಿ, ಮೈಸೂರು ಮಾದರಿಯಲ್ಲಿ ಆಗಲಿದೆ ಅಭಿವೃದ್ಧಿ, ಏನೇನು ಪ್ಲಾನ್ ಇದೆ ಗೊತ್ತಾ?

180120 Shimoga MP Safari Tyavarekoppa 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಜನವರಿ 2020 ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದ್ದರು. ಅಲ್ಲದೆ ಹಿರಿಯ ಅಧಿಕಾರಿಗಳ ಜೊತೆಗೆ ಸಫಾರಿಗೆ ತೆರಳಿ, ಪ್ರಾಣಿಗಳು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು. ವಿಸ್ತರಣೆಯ ಹೊಸ ಪ್ಲಾನ್ ಹುಲಿ, ಸಿಂಹಧಾಮಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ ಮಾಡುವ ಸಲುವಾಗಿ ಹೊಸ ಪ್ಲಾನ್’ಗಳನ್ನು ಸಿದ್ಧಪಡಿಸಲಾಗಿದೆ. ಇದರ ಕುರಿತು ಅಧಿಕಾರಿಗಳ ಜೊತೆಗೆ ಸಂಸದ ರಾಘವೇಂದ್ರ ಚರ್ಚಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸದ ಸಂಸದ ಬಿ.ವೈ.ರಾಘವೇಂದ್ರ, … Read more

ವೇದಿಕೆಯಲ್ಲೇ ಇಂಜೆಕ್ಷನ್ ಚುಚ್ಚಿಸಿಕೊಂಡರು ಸಾಗರ ಎಂಎಲ್ಎ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SAGARA | 18 ಜನವರಿ 2020 ಕೆಎಫ್‌ಡಿ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸಲು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮತ್ತು ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಅವರು ಚುಚ್ಚುಮದ್ದು ಕಾರ್ಯಕ್ರಮದ ವೇದಿಕೆಯಲ್ಲೇ ಲಸಿಕೆ ಹಾಕಿಸಿಕೊಂಡರು. ಸಾಗರ ತಾಲೂಕಿನಲ್ಲಿ ಈ ವರ್ಷ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ರೋಗ ನಿರೋಧಕ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆರೋಗ್ಯ … Read more