SAGARA | ವಿದೇಶದಲ್ಲಿರುವ ಸ್ನೇಹಿತನನ್ನು ರಕ್ಷಿಸುವಂತೆ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಸಾಗರ ಯುವಕ

ಶಿವಮೊಗ್ಗ ಲೈವ್.ಕಾಂ | SAGARA | 12 ಡಿಸೆಂಬರ್ 2019 ಸೌದಿ ಅರೇಬಿಯಾದಲ್ಲಿ ಆರು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತನ್ನ ಸ್ನೇಹಿತನೊಬ್ಬನಿಗೆ ಸಹಾಯ ಕೋರಿ ಸಾಗರದ ಸಾಮಾಜಿಕ ಕಾರ್ಯಕರ್ತ ಜಮೀಲ್ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮಾಡಿದ್ದು, ಪ್ರಧಾನಿ ಕಚೇರಿ ಇದಕ್ಕೆ ಪ್ರತಿಕ್ರಿಯಿಸಿದೆ. ಉತ್ತರಪ್ರದೇಶದ ಲಖ್ನೋದ ಅಖ್ತರ್ ಅಹಮದ್ ಎಂಬಾತ ಜಮೀಲ್ ಅವರ ಸಹೋದರನ ಸ್ನೇಹಿತ. ಇಬ್ಬರೂ ಜತೆಗೆ ಕೆಲಸ ಮಾಡುತ್ತಿದ್ದಾರೆ, ಆರು ದಿನಗಳ ಹಿಂದೆ … Read more

HOSANAGARA | ಮತ್ತೆ 50ಕ್ಕೂ ಹೆಚ್ಚು ಲಾರಿ ತಡೆದು ಆಕ್ರೋಶ, ಲಾರಿ ಸಂಚಾರ್ ಬಂದ್’ಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | HOSANAGARA | 11 ಡಿಸೆಂಬರ್ 2019 ಗಣಿ ಲಾರಿಗಳ ವಿರುದ್ಧ ಹೊಸನಗರದ ಕುಂಬತ್ತಿ ಗ್ರಾಮಸ್ಥರು ಪುನಃ ಧ್ವನಿ ಏರಿಸಿದ್ದಾರೆ. ಮತ್ತೆ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಲಾರಿಗಳಿಂದಾಗಿ ಕುಂಬತ್ತಿಯಲ್ಲಿ ಜನ, ಜಾನುವಾರುಗಳ ಓಡಾಟ ಕಷ್ಟಕರವಾಗಿದೆ. ಮನೆಯಿಂದ ಹೊರಗೆ ಕಾಲಿಡಲು ಕುಂಬತ್ತಿ ಗ್ರಾಮಸ್ಥರು ಹೆದರುವಂತಾಗಿದ ಎಂದು ಆರೋಪಿಸಿ ಇವತ್ತು ದಿಢೀರ್ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಕುಂಬತ್ತಿ ಗ್ರಾಮದಲ್ಲಿ ಲಾರಿಗಳಿಂದಾಗಿ ಪ್ರತಿದಿನ ಒಂದಿಲ್ಲೊಂದು ಅವಾಂತರ ಸೃಷ್ಟಿಯಾಗುತ್ತಿದೆ. ಇದರಿಂದ ಜನರು ತ್ತತರಿಸಿ ಹೋಗಿದ್ದಾರೆ. ಹಾಗಾಗಿ ಈ … Read more

SORABA | ಮತ್ತೆ ಪ್ರತ್ಯಕ್ಷವಾದ ಆನೆ ಹಿಂಡು, ಗ್ರಾಮಸ್ಥರಲ್ಲಿ ಢವಢವ, ಕಾಡಾನೆಗಳನ್ನು ಓಡಿಸಲು ಹರಸಾಹಸ

ಶಿವಮೊಗ್ಗ ಲೈವ್.ಕಾಂ | SORABA | 11 ಡಿಸೆಂಬರ್ 2019 ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವ ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಹರಸಾಹಸ ಪಡುತ್ತಿದ್ದಾರೆ. ಆನೆ ಹಿಂಡಿನಿಂದಾಗಿ ಜನರು ಆತಂಕಕ್ಕೀಡಾಗಿದ್ದಾರೆ. ಸೊರಬ ತಾಲೂಕು ತಲಗಡ್ಡೆ ಕಿರು ಅರಣ್ಯದಲ್ಲಿ ನಾಲ್ಕು ಕಾಡಾನೆಗಳು ಬೀಡು ಬಿಟ್ಟಿವೆ. ಅರಣ್ಯದ ಅಕ್ಕಪಕ್ಕದ ಬಂಕಸಾಣ, ಕಚವಿ, ತಲಗಡ್ಡೆ ಗ್ರಾಮಗಳ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಇDU ರೈತರಿಗೆ ಸಂಕಷ್ಟ ತಂದೊಡ್ಡಿದೆ. ಆನೆಗಳು ಪ್ರತ್ಯಕ್ಷವಾದ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ … Read more

THIRTHAHALLI | ತಾಲೂಕು ಪಂಚಾಯ್ತಿ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಅಧ್ಯಕ್ಷೆ ಮೇಲಿನ ಹಲ್ಲೆಗೆ ಖಂಡನೆ, ಅರೆಸ್ಟ್’ಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | THIRTHAHALLI | 10 ಡಿಸೆಂಬರ್ 2019 ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೇಲೆ ಬಿಜೆಪಿ ಮುಖಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನಾ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು, ಸಭೆಯೊಂದರಲ್ಲಿ ಕೋಣಂದರೂ ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ ಪೂರ್ಣೇಶ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾ ಪ್ರಫುಲ್ಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ … Read more

SAGARA | ಜೋಗ್ ಬಸ್ ನಿಲ್ದಾಣದ ಹೊಟೇಲ್’ನಲ್ಲಿ ನೇಣು ಬಿಗಿದು ಆತ್ಮಹತ್ಯೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 10 ಡಿಸೆಂಬರ್ 2019 ಜೋಗ್ ಬಸ್ ನಿಲ್ದಾಣದಲ್ಲಿರುವ ತನ್ನ ಹೊಟೇಲ್’ನಲ್ಲೇ ಮಾಲೀಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯೆ ಆತ್ಮಹತ್ಯೆ ಕಾರಣ ಎಂದು ಹೇಳಲಾಗುತ್ತಿದೆ. ರವಿಕುಮಾರ್ (32) ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ರಾತ್ರಿ ನೇಣು ಬಿಗಿದುಕೊಂಡಿರುವ ಶಂಕೆ ಇದೆ. ಜೋಗ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ ಮೇಲ್ … Read more

ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ, ಯಾವ್ಯಾವ ತಾಲೂಕಲ್ಲಿ ಹೇಗಿತ್ತು ಸಂಭ್ರಮ?

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಗೆ ಗೆಲುವು ಸಾಧಿಸಿದ ಹಿನ್ನೆಲೆ, ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಭದ್ರಾವತಿಯಲ್ಲಿ ಸಂಭ್ರಮ ಜೋರು ರಂಗಪ್ಪ ಸರ್ಕಲ್’ನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಸಿಎಂ ಯಡಿಯೂರಪ್ಪ ಮತ್ತು ಪಕ್ಷದ ಚಿಹ್ನೆಗೆ ಹಾರ ಹಾಕಿದರು. ತಾಲೂಕು ಅಧ್ಯಕ್ಷ ಪ್ರಭಾಕರ್, ಪ್ರಮುಖರಾದ ಕದಿರೇಶ್, ರಾಮಚಂದ್ರ, ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಬಿ.ಕೆ.ಶ್ರೀನಾಥ್, ಶೋಭಾ, ಅನ್ನಪೂರ್ಣ ಸೇರಿದಂತೆ ಹಲವರು ಈ … Read more

SORABA | ಪೊಲೀಸ್ ಠಾಣೆಗೆ ತೆರಳಿ ಸಿಬ್ಬಂದಿಗೆ ಸ್ವೀಟ್ ಹಂಚಿ, ಗುಲಾಬಿ ಕೊಟ್ಟು ಸಂಭ್ರಮ, ಯಾಕೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ತೆಲಂಗಾಣದಲ್ಲಿ ಪಶು ವೈದ್ಯೆಯ ಅತ್ಯಾಚಾರಿಗಳನ್ನು ಪೊಲೀಸರು ಎನ್’ಕೌಂಟರ್ ಮಾಡಿದ್ದನ್ನು ಸೊರಬದಲ್ಲಿ ವಿವಿಧ ಸಂಘಟನೆಗಳು ವಿಭಿನ್ನವಾಗಿ ಸಂಭ್ರಮಿಸಿವೆ. ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಸಿಹಿ ಹಂಚಲಾಯಿತು. ಈ ಸಂದರ್ಭ ಮಾತನಾಡಿದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಜನಪದ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ತೆಲಂಗಾಣದಲ್ಲಿ ಪಶು ವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆಯಾಗಿದೆ. ದೇಶದ ಮೂಲೆ … Read more

SAGARA | ಸಾಗರದಲ್ಲಿ ಸಿಎಂ : ಕಾಂಗ್ರೆಸ್, ಜೆಡಿಎಸ್ ಅಕಸ್ಮಾತ್ ಒಂದೊಂದು ಸ್ಥಾನ ಗೆಲ್ಲಬಹುದು, ಉಳಿದಲ್ಲೆಲ್ಲ ಬಿಜೆಪಿಗೆ ಜಯ

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ನಾಳೆ ಉಪ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ 13 ಸ್ಥಾನ, ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದು ಸ್ಥಾನ ಪಡೆಯಬಹುದು ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಾಗರದ ಮಂಕಳಲೆ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೆರೆಹಾನಿ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಮಾಡಿದ ಕೆಲಸ ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ … Read more

SAGARA | ಸಾಗರಕ್ಕೆ ಸಿಎಂ ಯಡಿಯೂರಪ್ಪ ಭೇಟಿ, ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ, ಯುವಕರ ಬಂಧನ

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ತೋರಿಸಲು ಯತ್ನಿಸಿದ ಯುವಕರ ಗುಂಪನ್ನು ಸಾಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕಾಗಿ ಇವತ್ತು ಸಿಎಂ ಯಡಿಯೂರಪ್ಪ ಸಾಗರಕ್ಕೆ ಭೇಟಿ ನೀಡಿದ್ದಾರೆ. ಸಾಗರ ಪಟ್ಟಣದಲ್ಲಿ ಸಿಎಂ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ತೋರಿಸಲು ಯುವಕರ ಗುಂಪು ಸಿದ್ಧವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲಿಸರು ಯುವಕರನ್ನು ಬಂಧಿಸಿದ್ದಾರೆ. ಕಪ್ಪು ಬಾವುಟ ಪ್ರದರ್ಶನಕ್ಕೆ ಕಾರಣವೇನು? ಬಂಧಿತ ಯುವಕರು ಟಿಪ್ಪು ಸಹಾರ ಕಮಿಟಿ ಸದಸ್ಯರಾಗಿದ್ದಾರೆ. ರಾಜ್ಯದಲ್ಲಿ … Read more

SAGARA | ‘ಸಾಗರದಲ್ಲಿ ಸಂಶೋಧನಾ ಕೇಂದ್ರ ಸೂಕ್ತ, ಜಾತ್ರೆ ಬಳಿಕ ಸೊರಬ ರಸ್ತೆ ಅಗಲೀಕರಣ’

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ಮಂಗನ ಕಾಯಿಲೆ ಸಂಶೋಧನೆಗೆ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಸಂಶೋಧನ ಕೇಂದ್ರವನ್ನು ಸಾಗರದಲ್ಲೇ ಸ್ಥಾಪಿಸುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಾಗರ ಶಾಸಕ ಹಾಲಪ್ಪ ಅವರ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಾಗರ ತಾಲೂಕಿನಲ್ಲಿ ಕೆಎಫ್’ಡಿಯಿಂದ ಜನರು ತತ್ತರಿಸಿದ್ದಾರೆ. ಹಾಗಾಗಿ ಇಲ್ಲಿಯೇ ಸಂಶೋಧನ ಕೇಂದ್ರ ತೆರೆಯುವುದು ಸೂಕ್ತ ಎಂದರು. ಜಾತ್ರೆ ಬಳಿಕ ರಸ್ತೆ ಅಗಲೀಕರಣ ಸೊರಬ … Read more