ತಾಲೂಕು ಕಚೇರಿ ಮುಂದೆ ಕೊಳೆರೋಗಕ್ಕೆ ತುತ್ತಾದ ಅಡಕೆ ಸುರಿದು ಬೆಳೆಗಾರರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಸೊರಬ | 17 ಸೆಪ್ಟೆಂಬರ್ 2019 ಅಡಕೆ ಕೊಳೆರೋಗದಿಂದ ಸಂಕಷ್ಟಕ್ಕೀಡಾದ ಬೆಳೆಗಾರರಿಗೆ ತುರ್ತಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೊರಬದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ತಾಲೂಕು ಕಚೇರಿ ಮುಂದೆ ಕೊಳೆರೋಗಕ್ಕೆ ತುತ್ತಾದ ಅಡಕೆ ಸುರಿದು ಆಕ್ರೋಶ ವ್ಯಕ್ತಪಡಿಸಲಾಯಿತು. ಸಾರ್ವಜನಿಕರ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಭಾರಿ ಬಿಸಿಲಿಗೆ ಅಡಕೆ ಉದುರಿದ್ದರು. ಆ ಬಳಿಕ ಸುರಿ ಜೋರು ಮಳೆಗೆ ಕೊಳೆ ರೋಗ ಬಂದಿದೆ. … Read more

ಭದ್ರಾವತಿಯ ಬ್ಯಾಂಕ್’ನಲ್ಲಿ ಬೆಂಕಿ, ಧಗಧಗ ಉರಿದು ಹೋದ ವಸ್ತುಗಳು

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 17 ಸೆಪ್ಟೆಂಬರ್ 2019 ಭದ್ರಾವತಿ ನಗರದ ಬ್ಯಾಂಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ದಾಖಲೆಗಳು, ಹಣ ಸುಟ್ಟು ಭಸ್ಮವಾಗಿರುವ ಸಂಭವವಿದೆ. ಬಿ.ಹೆಚ್.ರಸ್ತೆಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಪಟ್ಟರು. ಬ್ಯಾಂಕ್ ಶಾಖೆ ಒಳಗಿರುವ ದಾಖಲೆಗಳು, ಹಣ ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. … Read more

ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಕಟ್ಟಡಕ್ಕೆ ಬರಲು ಜನರಿಗೆ ಭಯ, ಅಧಿಕಾರಿಗಳಿಗೆ ಢವಢವ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 17 ಸೆಪ್ಟೆಂಬರ್ 2019 ತೀರ್ಥಹಳ್ಳಿ ತಾಲೂಕು ಕಚೇರಿಗೆ ಭೇಟಿ ನೀಡಲು ಅಧಿಕಾರಿಗಳು ಭಯ ಪಡ್ತಿದ್ದಾರೆ. ಜನರು ಹೆದರುತ್ತಿದ್ದಾರೆ. ಜನ ಪ್ರತಿನಿಧಿಗಳಿಗು ಢವಢವ ಶುರುವಾಗಿದೆ. ಇದಕ್ಕೆ ಕಾರಣ, ತಾಲೂಕು ಪಂಚಾಯಿತಿ ಕಟ್ಟಡದ ದುಸ್ಥಿತಿ. ತಾಲೂಕು ಪಂಚಾಯಿತಿ ಕಟ್ಟಡದ ಒಂದು ಭಾಗ ಕುಸಿಯುವ ಭೀತಿ ಎದುರಾಗಿದೆ. ಅಡಕೆ ಮರಗಳ ತುಂಡುಗಳನ್ನು ಆಸರೆಗೆ ಇರಿಸಲಾಗಿದೆ. ಇದೆ ಕಾರಣಕ್ಕೆ ಜನರು, ಅಧಿಕಾರಿಗಳು, ಜನಪ್ರತಿನಿಧಿಗಳು ಇಲ್ಲಿ ಓಡಾಡಲು ಹೆದರುತ್ತಿದ್ದಾರೆ. ಈ ಕಟ್ಟಡದ ಕಾರಿಡಾರ್ ಮೂಲಕವೆ ತಾಲೂಕು ಪಂಚಾಯಿತಿ … Read more

ಸಿಗಂದೂರಿಗೆ ತೆರಳುತ್ತಿದ್ದ ಲಾಂಚುಗಳ ಮುಖಾಮುಖಿ ಡಿಕ್ಕಿ, ಶರಾವತಿ ಹೊಳೆ ಮಧ್ಯೆ ತಪ್ಪಿದ ಭಾರಿ ದುರಂತ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 11 ಸೆಪ್ಟೆಂಬರ್ 2019 ಸಿಗಂದೂರಿಗೆ ತೆರಳುತ್ತಿದ್ದ ಎರಡು ಲಾಂಚ್‌ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಶರಾವತಿ ಹೊಳೆ ಮಧ್ಯದಲ್ಲಿ ಘಟನೆ ಸಂಭವಿಸಿದ್ದು, ಸ್ವಲ್ಪದರಲ್ಲೆ ಭಾರಿ ಅನಾಹುತ ತಪ್ಪಿದೆ. ಶರಾವತಿ – 1 ಮತ್ತು ಶರಾವತಿ – 2 ಲಾಂಚ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ‌. ಒಂದು ಲಾಂಚ್ ಹೊಳೆಬಾಗಿಲಿನಿಂದ ಕಳಸವಳ್ಳಿಗೆ ತೆರಳುತ್ತಿತ್ತು. ಮತ್ತೊಂದು ಲಾಂಚ್ ಕಳಸವಳ್ಳಿಯಿಂದ ಹೊಳೆಬಾಗಿಲು ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕರ ಅಜಾಗರುಕತೆಯಿಂದಾಗಿ ಘಟನೆ ಸಂಭವಿಸಿದೆ. ಎರಡು ಲಾಂಚ್’ನಲ್ಲಿ ಸುಮಾರು … Read more

ಕ್ಷುಲಕ ಕಾರಣಕ್ಕೆ ರಿಪ್ಪನ್’ಪೇಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ, ಗಂಭೀರ ಗಾಯ

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 10 ಸೆಪ್ಟೆಂಬರ್ 2019 ಗಣಪತಿ ಮೆರವಣಿಗೆಯಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆಯಾಗಿ, ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂರ್ಯ ಮತ್ತು ಕುಮಾರ್ ಎಂಬುವವರಿಗೆ ಚಾಕು ಇರಿತಕ್ಕೆ ಒಳಗಾದವರು. ರಿಪ್ಪನ್’ಪೇಟೆಯಲ್ಲಿ ಇಂದು ಸಂಜೆ ಗಣಪತಿ ವಿಸರ್ಜನೆ ವೇಳೆ ಹೆಣ್ಣು ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಕೆಲವು ಯುವಕರು ಅವರ ನಡುವೆ ಡಾನ್ಸ್ ಮಾಡಲು ಮುಂದಾಗಿದ್ದಾರೆ. ಸೂರ್ಯ ಮತ್ತು ಕುಮಾರ್ ಅವರು … Read more

ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, ಭಾರಿ ಬಂದೋಬಸ್ತ್, ಪೊಲೀಸರಿಂದ ಪಥಸಂಚಲನ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019 ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಭದ್ರಾವತಿ ನಗರದ ಕನಕ ಮಂಟಪದಿಂದ ರಂಗಪ್ಪ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ಶಿವಾಜಿ ಸರ್ಕಲ್, ಸಿ.ಎನ್. ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಪಥಸಂಚಲನ ನಡೆಯಿತು. ಭದ್ರಾವತಿ ಡಿವೈಎಸ್ಪಿ ನೇತೃತ್ವದಲ್ಲಿ ಕೆ.ಎಸ್.ಆರ್.ಪಿ., ಆರ್.ಎ.ಎಪ್., ಡಿ.ಎ.ಆರ್. ಮತ್ತು ಸಿವಿಲ್ ಪೊಲೀಸ್ ಮತ್ತು ಅಧಿಕಾರಿಗಳಿಂದ ಪಥಸಂಚಲನ ನಡೆಸಲಾಯಿತು. ಗಣಪತಿ ವಿಸರ್ಜನಾ ಮೆರವಣಿಗೆಯ ಪ್ರಯುಕ್ತ ಭದ್ರಾವತಿ … Read more

ಭದ್ರಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಮೇಲೆ ಗಂಭೀರ ಹಲ್ಲೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019 ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಭದ್ರಾ ಕಾಲೋನಿಯಲ್ಲಿ ಸಂಜೆ ಘಟನೆ ನಡೆದಿದೆ. ಮಣೆ ಮತ್ತು ವಿದ್ಯಾರಾಜ್ ಎಂಬುವವರು ಹಲ್ಲೆಗೊಳಗಾದವರು. ಕುತ್ತಿಗೆ ಭಾಗದಲ್ಲಿ ಮಾರಕಾಸ್ತ್ರಗಳಿಂದ ಗಂಭೀರ ಸ್ವರೂಪದ ಹಲ್ಲೆ ನಡೆಸಲಾಗಿದೆ. ಕೂಡಲೆ ಇಬ್ಬರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಕೂಡಲೆ ಇಬ್ಬರನ್ನು ಮಣಿಪಾಲದ … Read more

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ KSRTC ಬಸ್

ಶಿವಮೊಗ್ಗ ಲೈವ್.ಕಾಂ | ಹೊಸನಗರ | 8 ಸೆಪ್ಟೆಂಬರ್ 2019 ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಗದ್ದೆ ಉರುಳಿ ಬಿದ್ದಿದೆ. ಹೊಸನಗರದ ಮುಂಬಾರು ಗ್ರಾಮ ಬಳಿ ಘಟನೆ ನಡೆದಿದೆ. ಭಟ್ಕಳದಿಂದ ತಿರುಪತಿಗೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿಗೆ ಗೆದ್ದೆಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more

ಭದ್ರಾವತಿ ಹೊಸ ಸಿದ್ದಾಪುರದಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಸಾವು, ಮೂವರು ಆಸ್ಪತ್ರೆಗೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 8 ಸೆಪ್ಟೆಂಬರ್ 2019 ಮನೆ ಒಳಗಿನ ಗೋಡೆ ಕುಸಿದು ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಭದ್ರಾವತಿಯ ಹೊಸ ಸಿದ್ದಾಪುರ ಗ್ರಾಮದ ನಂಜಾಪುರ ರಸ್ತೆಯಲ್ಲಿರುವ ಮನೆಯೊಂದರ ಒಳಗಿನ ಗೋಡೆ ಕುಸಿದು ಗುರು (40) ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ಮನೆಯಲ್ಲಿದ್ದ ಎಲ್ಲರು ಮಲಗಿದ್ದ ವೇಳೆ ಗೋಡೆ ಕುಸಿದು, ಗುರು ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಗುರು ಸ್ಥಳದಲ್ಲೆ ಅಸುನೀಗಿದ್ದಾರೆ. ಹೆಂಡತಿ, ಮಕ್ಕಳಿಗೆ ಗಾಯ ಗೋಡೆ ಕುಸಿತದಿಂದ ಗುರು ಅವರ ಪತ್ನಿ … Read more

ಭಾರಿ ಮಳೆಗೆ ಕುಸಿದ ಗೋಡೆ, ಮಹಿಳೆ ಸಾವು, ಪತಿಯ ಕಾಲಿಗೆ ಗಾಯ, ಪವಾಡ ಸದೃಷ ಪಾರಾದ ಮಕ್ಕಳು

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 7 ಸೆಪ್ಟೆಂಬರ್ 2019 ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮಹಿಳೆಯ ಪತಿಯ ಕಾಲು ಮುರಿದಿದೆ. ಘಟನೆಯಲ್ಲಿ ಮೂರು ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಇವತ್ತು ಬೆಳಗಿನ ಜಾವದ ವೇಳೆಗೆ ಗೋಡೆ ಕುಸಿದಿದೆ. ಘಟನೆಯಲ್ಲಿ ಉಮೇರಾ ಅಂಜುಮ್ ಮೃತಪಟ್ಟಿದ್ದಾರೆ. ಗೋಡೆ ಕುಸಿದು ಅವರ ತಲೆ ಮೇಲೆ ಬಿದ್ದಿದ್ದರಿಂದ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ … Read more