ಆಗುಂಬೆಯಲ್ಲಿ ಮದ್ಯದಂಗಡಿ ತೆರೆಯಲು ಗ್ರಾಮಸ್ಥರ ವಿರೋಧ, ವಾತಾವರಣ ಹಾಳುಗೆಡವದಂತೆ ಆಗ್ರಹ

Agumbe-Board-General

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 16 ಜುಲೈ 2019 ಪ್ರಕೃತಿ ಸೌಂದರ್ಯ, ಸೂರ್ಯಾಸ್ತಮಾನ ವೀಕ್ಷಣೆಗೆ ಪ್ರಖ್ಯಾತಿ ಪಡೆದಿರುವ ಆಗುಂಬೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ, ಗ್ರಾಮಸ್ಥರು ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ. ಆಗುಂಬೆಯಲ್ಲಿ ಅಭಯಾರಣ್ಯ, ನಕ್ಸಲ್ ಬಾಧಿತ ಪ್ರದೇಶವೆಂಬ ಕಾರಣಕ್ಕೆ ನಲುಗಿ ಹೋಗಿದ್ದೇವೆ. ಈಗ ಮದ್ಯದಂಗಡಿ ತೆರೆದರೆ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಸದ್ಯ ಇಲ್ಲಿಗೆ ದೇಶ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಪ್ರಕೃತಿ ಸೌಂದರ್ಯ ಸವಿಯಲು ಪ್ರಶಸ್ತ ಸ್ಥಳವಾಗಿದೆ. ಉದ್ದೇಶಿತ ಮದ್ಯದಂಗಡಿ ತೆರೆದರೆ, ಇಡೀ … Read more

ವಿಐಎಸ್ಎಲ್ ಉಳಿವಿಗೆ ಟ್ವಿಟರ್’ನಲ್ಲಿ ಅಭಿಯಾನ, ಕೇಂದ್ರ ಗೃಹ ಸಚಿವರ ಭೇಟಿಯಾದ್ರು ಸಂಸದ ರಾಘವೇಂದ್ರ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 16 ಜುಲೈ 2019 ವಿಐಎಸ್ಎಲ್ ಕಾರ್ಖಾನೆ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಟೆಂಡರ್ ಕರೆದಿರುವ ಹಿನ್ನೆಲೆ, ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ವಿಐಎಸ್ಎಲ್ ಉಳಿಸುವಂತೆ ನಡೆಯುತ್ತಿರುವ ಹ್ಯಾಷ್ ಟ್ಯಾಗ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಅಮಿತ್ ಷಾ ಭೇಟಿಯಾದ ರಾಘವೇಂದ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಗೃಹ ಸಚಿವ … Read more

ಹಾಸ್ಟೆಲ್’ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು, ಕೊಲೆ ಶಂಕೆ

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸೊರಬ | 15 ಜುಲೈ 2019 ಸೊರಬ ಪಟ್ಟಣದ ಕಾನಕೇರಿಯಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಈ ಯುವತಿ, ಹಾಸ್ಟೆಲ್ ಒಂದರಲ್ಲಿ ಸುಮಾರು ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು. ಅಶ್ವಿನಿ ಕಲ್ಲಹಳ್ಳಿ (21) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ. ಇವತ್ತು ಬೆಳಗ್ಗೆ ಕಾನಕೇರಿಯಲ್ಲಿ, ಅಶ್ವಿನಿ ಮೃತದೇಹ ಪತ್ತೆಯಾಗಿದೆ. ಈಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮಹಳ್ಳಿಯ ಅಶ್ವಿನಿ ಕಲ್ಲಹಳ್ಳಿ, ಒಂದೂವರೆ ವರ್ಷದಿಂದ ಶ್ರೀ ರಂಗನಾಥ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿರುವ ಹಿಂದುಳಿದ ವರ್ಗಗಳ … Read more

ಭದ್ರಾವತಿ ಅಂಬೇಡ್ಕರ್ ಸರ್ಕಲ್’ನಲ್ಲಿ ವಿಐಎಸ್ಎಲ್ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 13 ಜುಲೈ 2019 ಭದ್ರಾವತಿ ವಿಐಎಸ್ಎಲ್ ಖಾಸಗೀಕರಣ ಮಾಡಬಾರದು ಹಾಗೂ ಮುಚ್ಚಬಾರದು ಅಂತಾ, ಕಾರ್ಖಾನೆಯ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು ಭದ್ರಾವತಿಯಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ, ಪ್ರತಿಭಟಿಸಿದರು. ಅಂಬೇಡ್ಕರ್ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾರ್ಮಿಕರು, ರಸ್ತೆ ತಡೆ ಮಾಡಿದರು. ಕೇಂದ್ರ ಸರ್ಕಾರ, ಬಿಜೆಪಿ ಮುಖಂಡರು, ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಈಗಾಗಲೆ … Read more

ತೀರ್ಥಹಳ್ಳಿಯ ಕನ್ನಂಗಿ ಸೊಸೈಟಿಯಲ್ಲಿ ಕಳ್ಳರ ಕೈ ಚಳಕ, ಕಿಟಕಿ ಮುರಿದು ಹಣ ಕಳವು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 13 ಜುಲೈ 2019 ಗ್ಯಾಸ್ ಕಟಿಂಗ್ ಮಿಷನ್ ಬಳಸಿ ಕಬ್ಬಿಣದ ಕಿಟಕಿಯ ಸರಳುಗಳನ್ನು ಮುರಿದು, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ಕನ್ನಂಗಿಯಲ್ಲಿರುವ ಸಂಘದಲ್ಲಿ ಘಟನೆ ನಡೆದಿದೆ. ಮಂಡಗದ್ದೆ ಹೋಬಳಿಯ ಕನ್ನಂಗಿ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಹಿಂಭಾಗದ ಕಬ್ಬಿಣದ ಕಿಟಕಿಯನ್ನು, ಗ್ಯಾಸ್ ಕಟಿಂಗ್ ಬಳಸಿ ಮುರಿಯಲಾಗಿದೆ. ಒಳಗೆ ನುಗ್ಗಿರುವ ಕಳ್ಳರು ಕ್ಯಾಶ್ ಕೌಂಟರ್’ನಲ್ಲಿದ್ದ 13,700 ರೂ. ಹಣವನ್ನು ಕಳ್ಳತನ ಮಾಡಿದ್ದಾರೆ. ಗುರುವಾರ … Read more

ಆನಂದಪುರ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ

ಶಿವಮೊಗ್ಗ ಲೈವ್.ಕಾಂ | ಆನಂದಪುರ | 13 ಜುಲೈ 2019 ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ರಸ್ತೆಗೆ ದಿಢೀರ್ ಬಂದ ದನಗಳಿಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋಗಿ, ಅಪಘಾತ ಸಂಭವಿಸಿದೆ. ಆನಂದಪುರ ಬಳಿಯ ಮುಂಬಾಳುವಿನಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ಬಸ್ಸಿನಿಂದ ಹೊರಗೆ ಕರೆತರಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ … Read more

ತೀರ್ಥಹಳ್ಳಿಯಲ್ಲಿ ಪ್ಲಾಸ್ಟಿಕ್ ನಿಷೇಧ, ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ, ಸ್ವಚ್ಛ ಪಟ್ಟಣ ಗಲೀಜು ಮಾಡಿದ್ರೆ ಬೀಳುತ್ತೆ ದಂಡ

Thirthahalli V

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 11 ಜುಲೈ 2019 ಇನ್ಮುಂದೆ ತೀರ್ಥಹಳ್ಳಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಮೂತ್ರ ಮಾಡುವಂತಿಲ್ಲ. ಹಸಿ ಮತ್ತು ಒಣ ಕಸವನ್ನು ವಿಂಗಡಿಸದೆ ಕಸದ ವಾಹನಕ್ಕೆ ಕೊಡುವಂತಿಲ್ಲ. ಹೀಗೆಲ್ಲ ಮಾಡಿದರೆ ದಂಡ ಮತ್ತು ಕಠಿಣ ಕ್ರಮ ಗ್ಯಾರಂಟಿ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಆಡಳಿತಾಧಿಕಾರಿ, ತಹಶೀಲ್ದಾರ್ ಆನಂದಪ್ಪ ನಾಯ್ಕ್, ಕಸದ ಉತ್ಪಾದರೆ ಅದರ ನಿರ್ವಾಹಕರು. ಆದ್ದರಿಂದ ಕಸದ ವಿಂಗಡನೆ ವಿಚಾರದಲ್ಲಿ ಜಾಗೃತಿ ವಹಿಸಬೇಕು ಎಂದು ಎಚ್ಚರಿಸಿದರು. ಹಸಿ, ಒಣ … Read more

ಹೊಳೆಹೊನ್ನೂರು ಪೊಲೀಸರ ಮಿಂಚಿನ ಕಾರ್ಯಾಚರಣೆ, 85 ಸಾವಿರ ಹಣ ದೋಚಿದ್ದವರು ಎರಡೇ ದಿನದಲ್ಲಿ ಅರೆಸ್ಟ್

ಶಿವಮೊಗ್ಗ ಲೈವ್.ಕಾಂ | ಹೊಳೆಹೊನ್ನೂರು | 11 ಜುಲೈ 2019 ಬಾರ್ ಕ್ಯಾಶಿಯರ್’ನನ್ನು ಅಡ್ಡಗಟ್ಟಿ ಹಣ ದೋಚಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರ ಪೈಕಿ ಅದೇ ಮದ್ಯದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವನು ಸೇರಿದ್ದಾನೆ. ಜಂಬರಘಟ್ಟ ಗ್ರಾಮದ ಬಸವರಾಜ್ (38), ಶ್ರೀನಿವಾಸ್ ಅಲಿಯಾಸ್ ಗೋವಾ (24), ನವೀನ್ (23), ಅವಿನಾಶ್ (24) ಬಂಧಿತರು. ಬಾರ್ ಕ್ಯಾಶಿಯರ್ ವೆಂಕಟೇಶ್, ಸೋಮವಾರ ರಾತ್ರಿ 85 ಸಾವಿರ ಹಣ ತೆಗೆದುಕೊಂಡು ಜಂಬರಘಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ವೆಂಕಟೇಶ್ ಅವರನ್ನು ಅಡ್ಡಗಟ್ಟಿದ ಮುಸುಕುಧಾರಿಗಳು, … Read more

ತೀರ್ಥಹಳ್ಳಿಯ ಬೆಜ್ಜವಳ್ಳಿಯಲ್ಲಿ ಆಟೋ ಮೇಲೆ ಉರುಳಿಬಿದ್ದ ಮರ, ಚಾಲಕನಿಗೆ ಗಂಭೀರ ಗಾಯ, ಜನರಿಂದ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 11 ಜುಲೈ 2019 ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಇದ್ದ ಭಾರಿ ಗಾತ್ರದ ಅಕೇಶಿಯಾ ಮರ ಆಟೋರಿಕ್ಷಾ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಆಟೋ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಸುಜಯ್ (45) ಗಾಯಗೊಂಡಿರುವ ಚಾಲಕ. ಮರ ಬಿದ್ದ ಪರಿಣಾಮ ಸುಜಯ್ ಅವರ ತಲೆಗೆ ಗಂಭೀರ ಗಾಯವಾಗಿದೆ. ಆಟೋ ರಿಕ್ಷ ನುಜ್ಜುಗುಜ್ಜಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ … Read more

ಶರಾವತಿ ನದಿಗಾಗಿ ಭದ್ರಾವತಿಯಲ್ಲೂ ಬಂದ್, ವಿಐಎಸ್ಎಲ್ ಉಳಿವಿಗಾಗಿ ಶರಾವತಿ ಮಾದರಿ ಹೋರಾಟಕ್ಕೆ ಮನವಿ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 10 ಜುಲೈ 2019 ಶರಾವತಿ ನದಿಗಾಗಿ ಜಿಲ್ಲೆಯಾದ್ಯಂತ ಬಂದ್’ಗೆ ಭದ್ರಾವತಿಯಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಈ ನಡುವೆ ವಿಐಎಸ್ಎಲ್ ಉಳಿವಿಗಾಗಿ, ಇಡೀ ಜಿಲ್ಲೆ ಭದ್ರಾವತಿಯನ್ನು ಬೆಂಬಲಿಬಸಬೇಕಿದೆ ಎಂಬ ಬೇಡಿಕೆ ಮೊಳಕೆಯೊಡೆದಿದೆ. ಶಿವಮೊಗ್ಗ ಜಿಲ್ಲೆ ಬಂದ್’ಗೆ ಭದ್ರಾವತಿಯಲ್ಲಿ ಬೆಂಬಲ ವ್ಯಕ್ತವಾಯಿತು. ಅಂಗಡಿಗಳು ಬಂದ್ ಆಗಿದ್ದವು. ಶಾಲೆಗಳಿಗೆ ರಜೆ ಘೋಷಸಿಲಾಗಿತ್ತು. ಇನ್ನು, ಶರಾವತಿ ನದಿಗಾಗಿ ಹಲವು ಸಂಘಟನೆಗಳು ಭದ್ರಾವತಿಯ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದವು. ಈ ನಡುವೆ, ಶರಾವತಿ ನದಿಗಾಗಿ ನಡೆಯುತ್ತಿರುವ ಹೋರಾಟದ … Read more