ಕಾಡು ಹಂದಿ ಬೇಟೆಯಾಡಿದ್ದ ಇಬ್ಬರು ಅರೆಸ್ಟ್, ಮತ್ತೊಬ್ಬ ಎಸ್ಕೇಪ್, ತೀರ್ಥಹಳ್ಳಿಯಲ್ಲಿ ಘಟನೆ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 05 ಜುಲೈ 2019 ಕಾಡು ಹಂದಿ ಬೇಟೆ ಮಾಡಿದ ಇಬ್ಬರನ್ನು ವನ್ಯಜೀವಿ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮರಹಳ್ಳಿ – ಹೊರಬೈಲು ಅರಣ್ಯ ವ್ಯಾಪ್ತಿಯಲ್ಲಿ ಕಾಡು ಹಂದಿ ಬೇಟೆಯಾಡಿದ್ದರು. ಹೊರಬೈಲು ತಿಮ್ಮಪ್ಪ, ಸುರೇಂದ್ರ ಬಂಧಿತರು. ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 21ರಂದು ಹೊರಬೈಲು ಅರಣ್ಯ ವ್ಯಾಪ್ತಿಯಲ್ಲಿ ಹಂದಿ ಬೇಟೆಯಾಡಿದ್ದರು. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಇಬ್ಬರನ್ನು ಬಂಧಿಸಿ, ಜೆಎಂಎಫ್’ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ತನಿಖೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ … Read more

ಭದ್ರಾವತಿಯ VISL ಮಾರಾಟಕ್ಕಿದೆ, ಖರೀದಿಗೆ 25 ದಿನವಷ್ಟೇ ಅವಕಾಶ, ಕಾರ್ಖಾನೆಯನ್ನು ಯಾರು ಕೊಳ್ಳಬಹುದು ಗೊತ್ತಾ?

VISL Bhadravathi 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ಜುಲೈ 2019 ತೀವ್ರ ವಿರೋಧದ ನಡುವೆಯೂ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಭಾರತೀಯ ಉಕ್ಕು ಪ್ರಾಧಿಕಾರ (SAIL) ಜಾಗತಿಕ ಟೆಂಡರ್ ಕರೆದಿದೆ. ಇದರ ಜಾಹೀರಾತನ್ನು ರಾಷ್ಟ್ರೀಯ ಪತ್ರಿಕೆಗಳು ಮತ್ತು SAIL ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿದೆ. 25 ದಿನದ ಅವಕಾಶ VISL ಜೊತೆಗೆ ಇನ್ನೆರಡು ಕಾರ್ಖಾನೆಗಳನ್ನು ಮಾರಟ ಮಾಡುತ್ತಿರುವುದಾಗಿ SAIL ಪ್ರಕಟಿಸಿದೆ. ಸೇಲಂ ಮತ್ತು ದುರ್ಗಾಪುರದಲ್ಲಿರುವ ಕಾರ್ಖಾನೆಗಳನ್ನು … Read more

ತೀರ್ಥಹಳ್ಳಿಯ ಹಣಗೆರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಅಂಗಡಿ ಮಾಲೀಕರಿಗೆ ವಾರ್ನಿಂಗ್, ಅರಣ್ಯಕ್ಕೆ ಫೆನ್ಸಿಂಗ್ ಹಾಕಲು ಸೂಚನೆ

ಶಿವಮೊಗ್ಗ ಲೈವ್.ಕಾಂ | 1 ಜುಲೈ 2019 ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆಗೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ, ಪ್ಲಾಸ್ಟಿಕ್ ಕವರ್ ಬಳಕೆ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ನೀಡಿದರು. ಅಂಗಡಿ ಬಂದ್ ಮಾಡಿಸಬೇಕಾಗುತ್ತೆ ಹಣಗೆರೆಯ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಪ್ಲಾಸ್ಟಿಕ್ ಚೀಲದ ಬದಲು, ಮರುಬಳಕೆ ಕೈ ಚೀಲ ಬಳಸುವಂತೆ ಸೂಚಿಸಿದರು. ಪ್ರತಿ ಅಂಗಡಿಯವರು ಪ್ರತ್ಯೇಕ ಕಸದ ಬುಟ್ಟಿಯಲ್ಲಿ … Read more

ಸಕ್ರೆಬೈಲು ಬಿಡಾರದಲ್ಲಿ ರಕ್ತವಾಂತಿ ಮಾಡಿಕೊಂಡು ಮರಿ ಆನೆ ಸಾವು

ಶಿವಮೊಗ್ಗ ಲೈವ್.ಕಾಂ | 1 ಜುಲೈ 2019 ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆ ಸಾವನ್ನಪ್ಪಿದೆ. ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಿ ಆನೆ, ರಕ್ತವಾಂತಿ ಮಾಡಿಕೊಳ್ಳುತ್ತಿತ್ತು. ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೆ, ಆನೆ ಸಾವನ್ನಪ್ಪಿದೆ. ಶಾರದ, ಮೃತ ಮರಿ ಆನೆ. ಕಳೆದ ವರ್ಷ ಹಾಸನದಲ್ಲಿ ಸೆರೆ ಹಿಡಿಯಲಾಗಿದ್ದ ಆನೆಯನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ಸಾಕಲಾಗುತ್ತಿತ್ತು. ‘ಆನೆಗೆ ಬಿಡಾರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ, ಫಲಕಾರಿಯಾಗದೆ ಮೃತಪಟ್ಟಿದೆ. ಆನೆಯ ಅಂಗಾಂಗಗಳನ್ನು ಪರೀಕ್ಷೆಗೆ ಒಳಪಡಿಸಲು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ ಮತ್ತು ಕೇರಳದ ಪಶು … Read more

ಆನಂದಪುರದಲ್ಲಿ ಟ್ರೇನಿಂಗ್ ಪಡೆದವರು ಭಾರತೀಯ ಸೇನೆಗೆ ಆಯ್ಕೆ, ಎಷ್ಟು ಯುವಕರಿಗೆ ಅವಕಾಶ ಸಿಕ್ಕಿದೆ ಗೊತ್ತಾ?

Indian-Army-Training-at-Anandapuram

ಶಿವಮೊಗ್ಗ ಲೈವ್.ಕಾಂ | 12 ಜೂನ್ 2019 ಸಾಗರ ತಾಲೂಕು ಆನಂದಪುರ ಮುರುಘಾಮಠದ ಆವರಣದಲ್ಲಿ, ಸೈನಿಕ ತರಬೇತಿ ಪಡೆದ ಮಲೆನಾಡಿನ 26 ಯುವಕರು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮಾಜಿ ಯೋಧರ ಕಠಿಣ ಪರಿಶ್ರಮ, ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರಕ್ಕೆ ಫಲ ಸಿಕ್ಕಂತಾಗಿದೆ. ಮಾಜಿ ಯೋಧರು ಸ್ಥಾಪಿಸಿದ ಮಲ್ನಾಡ್ ಸೋಲ್ಜರ್ ಅಕಾಡೆಮಿಯಲ್ಲಿ 65 ಯುವಕರು 15 ದಿನ ಕಠಿಣ ತರಬೇತಿ ಪಡೆದಿದ್ದರು. ಈ ಪೈಕಿ 26 ಯುವಕರು, ಗದಗದಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಾರೆ. ಮೂವರ … Read more

ತೀರ್ಥಹಳ್ಳಿ ಗುಡ್ಡೇಕೇರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ, ಸಿಎಂಗೆ ವಿದ್ಯಾರ್ಥಿನಿ ಮನವಿ, ಏನಂದ್ರು ಗೊತ್ತಾ ಮುಖ್ಯಮಂತ್ರಿ?

ಶಿವಮೊಗ್ಗ ಲೈವ್.ಕಾಂ | 11 ಜೂನ್ 2019 ಶಾಲಾ ಸಂಪರ್ಕ ಸೇತು ಯೋಜನೆ ಕುರಿತು, ಮುಖ್ಯಮಂತ್ರಿ ಕುಮಾರಸ್ವಾಮಿ ಇವತ್ತು ವಿದ್ಯಾರ್ಥಿಗಳು, ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ವೇಳೆ, ತೀರ್ಥಹಳ್ಳಿಯ ವಿದ್ಯಾರ್ಥಿಯೊಬ್ಬಳು, ತಮ್ಮ ಶಾಲೆಗೆ ಬಂದು ವಾಸ್ತವ್ಯ ಮಾಡುವಂತೆ ಸಿಎಂಗೆ ಆಹ್ವಾನ ನೀಡಿದ್ದಾಳೆ. ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್’ನಲ್ಲಿ, ತೀರ್ಥಹಳ್ಳಿಯ ನಾಲ್ವರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಹೊಸೂರು ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶ್ವೀಜಾ, ತಮ್ಮ ಶಾಲೆಗೆ ಬಂದು ಗ್ರಾಮ ವಾಸ್ತವ್ಯ … Read more

ತಾಳಗುಪ್ಪ – ಬೆಂಗಳೂರು ರೈಲು ಎಂಜಿನ್’ನಲ್ಲಿ ಬೆಂಕಿ, ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಎರಡು ಗಂಟೆ ನಿಂತ ರೈಲು

ಶಿವಮೊಗ್ಗ ಲೈವ್.ಕಾಂ | 21 ಮೇ 2019 ತಾಳಗುಪ್ಪ ಬೆಂಗಳೂರು ರೈಲಿನ ಎಂಜಿನ್’ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ರೈಲು ಪ್ರಯಾಣ ಸುಮಾರು ಎರಡೂವರೆ ಗಂಟೆ ವಿಳಂಬವಾಗಿದೆ. ಇನ್ನು ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. | VIDEO REPORT | ನಿನ್ನೆ ರಾತ್ರಿ ರೈಲು ಭದ್ರಾವತಿ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ, ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಎಂಜಿನ್’ನ ಒಳಗೆ ಕಾಣಿಸಿಕೊಂಡಿದ್ದ … Read more

‘ಮೂವರ ವಿರುದ್ಧವೂ ರಾಷ್ಟ್ರದ್ರೋಹದ ಕೇಸ್ ಹಾಕಿ, ಬಿಜೆಪಿಯಿಂದ ಉಚ್ಛಾಟಿಸಿ’ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | 20 ಮೇ 2019 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಅವಮಾನ ಮಾಡಿದ ಬಿಜೆಪಿಯ ಸಾಧ್ವಿ ಪ್ರಜ್ಞಾಸಿಂಗ್, ಸಂಸದರಾದ ಅನಂತ ಕುಮಾರ್ ಹೆಗ್ಡೆ, ನಳೀನ್ ಕುಮಾರ್ ಅವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಿಸಿ, ಬಂಧಿಸಬೇಕು. ಈ ಮೂವರನ್ನು ಬಿಜೆಪಿಯಿಂದ ಉಚ್ಛಾಟಿಸಬೇಕು ಅಂತಾ ಗಾಂಧಿ ಚಿಂತನೆ ವೇದಿಕೆಯ ಸಂಚಾಲಕ ನೆಂಪೆ ದೇವರಾಜ್ ಆಗ್ರಹಿಸಿದ್ದಾರೆ. ತೀರ್ಥಹಳ್ಳಿಯ ತಾಲೂಕು ಕಚೇರಿ ಮುಂದೆ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ನೆಂಪೆ ದೇವರಾಜ್ ಮಾತನಾಡಿದರು. ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ … Read more

ಭದ್ರಾವತಿ ಎಂಪಿಎಂ ಉಳಿಸುವಂತೆ ಸಾಲು ಸಾಲು ಟ್ವೀಟ್, ಆನ್’ಲೈನ್’ನಲ್ಲಿ ಶುರುವಾಯ್ತು ಅಭಿಯಾನ

MPM Factory Bhadravathi

ಶಿವಮೊಗ್ಗ ಲೈವ್.ಕಾಂ | 17 ಮೇ 2019 ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿವೆ. ಈಗ ಈ ಹೋರಾಟ ಆನ್’ಲೈನ್ ರೂಪ ಪಡೆದಿದೆ. ಎಂಪಿಎಂ ಪುನಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ. ಕಾರ್ಖಾನೆ ಪುನಾರಂಭ ಮಾಡುವಂತೆ, ಭದ್ರಾವತಿಯ ಯುವಕರು ಟ್ವಿಟರ್’ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. … Read more

ಸಾಗರದಲ್ಲಿ ಪ್ರಧಾನಿ ಮೋದಿ ಫೋಟೊ ಮುಂದೆ ಕೈ ಮುಗಿದು ಅಳಲು ತೋಡಿಕೊಂಡ ಬಿಜೆಪಿ ಕಾರ್ಯಕರ್ತ, ವಿಡಿಯೋ ವೈರಲ್

ಶಿವಮೊಗ್ಗ ಲೈವ್.ಕಾಂ | 14 ಮೇ 2019 ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರದ ಮುಂದೆ ನಿಂತು ಅಳಲು ತೋಡಿಕೊಂಡಿದ್ದಾರೆ. ಆ ವಿಡಿಯೊ ಈಗ ಫುಲ್ ವೈರಲ್ ಆಗಿದ್ದು, ಸಾಗರ ಬಿಜೆಪಿಯೊಳಗೆ ಚರ್ಚೆಗೆ ಕಾರಣವಾಗಿದೆ. ಗಣೇಶ್ ಗಟ್ಟಿ, ಅಳಲು ತೋಡಿಕೊಂಡ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ. ಜಾತಿ ಬಲವಿಲ್ಲ, ಹಣ ಬಲವಿಲ್ಲ ಎಂಬ ಕಾರಣಕ್ಕೆ ತಮಗೆ ಟಿಕೆಟ್ ತಪ್ಪಿಸಲಾಗಿದೆ ಅಂತಾ ಗಣೇಶ್ … Read more