BREAKING NEWS | ಸೊರಬ ಪುರಸಭೆ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವು, ಎಲೆಕ್ಷನ್ ಡೇಟ್ ಫಿಕ್ಸ್

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | 13 ಮೇ 2019 ಸೊರಬ ಪಟ್ಟಣ ಪಂಚಾಯಿತಿ 14 ವಾರ್ಡ್’ಗಳ ಚುನಾವಣೆಗೆ ತಂದಿದ್ದ ತಡೆಯಾಜ್ಞೆ ವಜಾಗೊಂಡಿದ್ದು ಮೇ 14ರಿಂದ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ. ಮೇ 8ರಂದು ವಾರ್ಡ್ ವರ್ಗೀಕರಣ ಸಂಬಂಧ ಚುನಾವಣಾ ಪ್ರಕ್ರಿಯೆಗೆ ನಾಲ್ಕು ವಾರಗಳ ಕಾಲ ಹೈಕೋರ್ಟ್ ತಡೆ ನೀಡಿತ್ತು. ಮೇ 13ರಂದು ಹೈಕೋರ್ಟ್ ಈ ಅರ್ಜಿಗಳನ್ನು ಮರು ಪರಿಶೀಲಿಸಿ ನೆಲಮಂಗಲ ಪುರಸಭೆ ಹಾಗೂ ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ನೀಡಿದ್ದ ತಡೆಯಾಜ್ಞೆಯನ್ನು ವಜಾಗೊಳಿಸಿದೆ. ಮೇ14ರಿಂದ ಸೊರಬ ಪಟ್ಟಣ ಪಂಚಾಯಿತಿಗೆ ಅಧಿಸೂಚನೆ … Read more

ಸಾಗರದ ಸಮೋಸ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ, ಮಾರಾಟಗಾರರಿಗೆ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | 11 ಮೇ 2019 ನಗರಸಭೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಸಮೋಸ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಸಾಗರದ ಮೀನು ಮಾರುಕಟ್ಟೆ ಬಳಿ ಇರುವ ಸಮೋಸ ಮಾರಾಟ ಮಳಿಗೆಗಳ ಮೇಲೆ ರೇಡ್ ಮಾಡಿದ್ದರು. ದಾಳಿ ವೇಳೆ, ಸಮೋಸ ಮಾರಾಟ ಮಾಡುವವರು ಸ್ವಚ್ಛತೆ ಕಾಪಾಡದೆ ಇರುವುದು, ಒಮ್ಮೆ ಬಾಣಲೆಗೆ ಎಣ್ಣೆ ಹಾಕಿದರೆ ಅದು ಬತ್ತುವವರೆಗೂ ಸಮೋಸ ಮಾಡುವುದು, ಎರಡ್ಮೂರು ದಿನದ ಹಿಂದೆ ಕತ್ತರಿಸಿದ ತರಕಾರಿ ಬಳಕೆ ಮಾಡುವುದು, ರುಚಿ ಹೆಚ್ಚಿಸಲು ಟೇಸ್ಟಿಂಗ್ ಪೌಡರ್ … Read more

ಶಿಕಾರಿಪುರ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ, ಸ್ಟೇಷನ್ ಎದುರಿಗೆ ಧರಣಿ

ಶಿವಮೊಗ್ಗ ಲೈವ್.ಕಾಂ | 11 ಮೇ 2019 ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಶಿಕಾರಿಪುರ ಪೊಲೀಸ್ ಠಾಣೆ ಮುಂಭಾಗ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡ ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು, ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ರಾಜು ಎಂಬುವವರ ಮೇಲೆ, ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಅರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು … Read more

ಭದ್ರಾವತಿಯ VISLಗೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಏನೆಲ್ಲ ಪರಿಶೀಲಿಸಿದರು, ಯಾರನ್ನೆಲ್ಲ ಭೇಟಿಯಾದರು?

VISL Bhadravathi 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL), ಮತ್ತೊಮ್ಮೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉಕ್ಕು ಪ್ರಾಧಿಕಾರದ ಕಾರ್ಯದರ್ಶಿ ಬಿನಯ್ ಕುಮಾರ್, ಜಂಟಿ ಕಾರ್ಯದರ್ಶಿ ಪುನಿತ್ ಕನ್ಸಲ್, ಸೈಲ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ ನೇತೃತ್ವದ ತಂಡ VISLಗೆ ಭೇಟಿ ನೀಡಿತ್ತು. VISL ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಖಾನೆಯ ವಿವಿಧೆಡೆ ಪರಿಶೀಲನೆ ನಡೆಸಿದರು. ಬ್ಲಾಸ್ಟ್ ಫರ್ನೇಸ್, ಸ್ಟೀಲ್ … Read more

ಶಿಕಾರಿಪುರದಲ್ಲಿ ಯಡಿಯೂರಪ್ಪ ಮಹತ್ವದ ಸಭೆ, ಗೆಲ್ಲುವ ಅಭ್ಯರ್ಥಿ ಅರ್ಜಿ ಸಲ್ಲಿಸದಿದ್ದರೂ ಮನೆಗೆ ಹೋಗಿ ಟಿಕೆಟ್ ನೀಡುವಂತೆ ಸೂಚನೆ

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | 10 ಮೇ 2019 ಗೆಲ್ಲುವ ಅಭ್ಯರ್ಥಿ ಟಿಕೆಟ್’ಗಾಗಿ ಅರ್ಜಿ ಸಲ್ಲಿಸದಿದ್ದರೂ, ಅವರ ಮನೆಗೆ ಹೋಗಿ ಕರೆತರುವ ಕೆಲಸ ಆಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಚಾರ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಮೇಲೆ ಇಡೀ ರಾಜ್ಯದ ಜನರ ಗಮನವಿದೆ. ಕಾರ್ಯಕರ್ತರು ನಿಷ್ಠೆಯಿಂದ … Read more

ಫಲಿತಾಂಶಕ್ಕೂ ಮೊದಲೇ ಮತದಾರರಿಗೆ ಅಭಿನಂದನೆ, ಶಿಕಾರಿಪುರದಿಂದಲೇ ಗೆಲುವಿನ ಶಿಕಾರಿ ಅಂದ್ರು ಮೈತ್ರಿ ಅಭ್ಯರ್ಥಿ

ಶಿವಮೊಗ್ಗ ಲೈವ್.ಕಾಂ | 10 ಮೇ 2019 ನನಗೆ ಶಿಕಾರಿಪುರ ಮತ್ತು ಸೊರಬ ಎರಡು ಕಣ್ಣುಗಳಿದ್ದಂತೆ. ಶಿಕಾರಿಪುರದಿಂದಲೇ ನನ್ನ ಗೆಲುವಿನ ಶಿಕಾರಿ ಆರಂಭವಾಗಿದೆ. ಹಾಗಾಗಿಯೇ ಫಲಿತಾಂಶಕ್ಕೂ ಮೊದಲೇ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಶಿಕಾರಿಪುರದ ಗುರುಭವನದಲ್ಲಿ ಜೆಡಿಎಸ್, ಕಾಂಗ್ರೆಸ್ ಆಯೋಜಿಸಿದ್ದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಸುಳ್ಳು ಹೇಳುವವರು ಸೋಲುತ್ತಾರೆ. ಸತ್ಯ ಗೆಲ್ಲುತ್ತದೆ. ಇವರ ಸರ್ವಾಧಿಕಾರಿ ಧೋರಣೆ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹಾಗಾಗಿ ಅವೆಲ್ಲ ನನಗೆ ಮತಗಳಾಗಿವೆ … Read more

ಶುಂಠಿ ಬೆಳೆ ಮಧ್ಯೆ ಗಾಂಜಾ ಬೆಳೆದವನಿಗೆ ಶಿವಮೊಗ್ಗ ಕೋರ್ಟ್’ನಿಂದ ಕಠಿಣ ಶಿಕ್ಷೆ, ದಂಡ

prison hand cuff image

ಶಿವಮೊಗ್ಗ ಲೈವ್.ಕಾಂ | 10 ಮೇ 2019 ಶುಂಠಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿದ್ದನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿದೆ. ಶಿಕಾರಿಪುರದ ಹುಣಸೆಕಟ್ಟೆಯ ತಾಳಗುಪ್ಪದವರ ಮನೆ ಈಶ್ವರ (44) ಶಿಕ್ಷೆಗೊಳಗಾದ ವ್ಯಕ್ತಿ. ಗುಡ್ಡದ ಹೊಸಳ್ಳಿಯ ತನ್ನ ಜಮೀನಿನಲ್ಲಿ ಶುಂಠಿ ಬೆಳೆ ಮಧ್ಯದಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಶಿಕಾರಿಪುರದ ಡಿವೈಎಸ್’ಪಿ ಸುಧಾಕರ್.ಎಸ್.ನಾಯಕ್ ಮತ್ತು ಸಿಬ್ಬಂದಿ ದಾಳಿ ಮಾಡಿ, 71 … Read more

BREAKING NEWS | ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ತಡೆ, ಪ್ರಕ್ರಿಯೆ ನಾಲ್ಕು ವಾರ ಮುಂದಕ್ಕೆ

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | 9 ಮೇ 2019 ಸೊರಬ ಪಟ್ಟಣ ಪಂಚಾಯಿತಿಗೆ, ಮೇ 29ಕ್ಕೆ ನಿಗದಿಯಾಗಿದ್ದ ಚುನಾವಣೆಗೆ, ಹೈಕೋರ್ಟ್ ತಡೆ ನೀಡಿದೆ. ನಾಲ್ಕು ವಾರ ಚುನಾವಣೆಯನ್ನು ಮುಂದೂಡುವಂತೆ, ನ್ಯಾಯಾಲಯ ಆದೇಶ ನೀಡಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮೇ 8ರಂದು ನ್ಯಾಯಾಲಯ ಆದೇಶ ನೀಡಿದ್ದು, ಅದರಂತೆ ಇವತ್ತು ರಾಜ್ಯ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಸೂಚನೆ ನೀಡಿದೆ. ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ, ಹೈಕೋರ್ಟ್’ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಇದರ … Read more

ಶಿವಮೊಗ್ಗ – ಭದ್ರಾವತಿ KSRTC ಬಸ್ ದಿಢೀರ್ ತಪಾಸಣೆ, ಮಹಿಳೆ ಬಳಿಯಿದ್ದ ಖಾಕಿ ಪ್ಯಾಕೆಟ್ ತೆರದ ಪೊಲೀಸರಿಗೆ ಶಾಕ್

ಶಿವಮೊಗ್ಗ ಲೈವ್.ಕಾಂ | 9 ಮೇ 2019 ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುವ ಕೆಎಸ್ಆರ್’ಟಿಸಿ ಬಸ್’ನಲ್ಲಿ ಏಳು ಕೆ.ಜಿ. ಗಾಂಜಾ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಸಿಐಬಿ ಪೊಲೀಸರು, ಗಾಂಜಾ ಸಾಗಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಲಭ್ಯವಾಗಿದ್ದ ಮಾಹಿತಿ ಮೇರೆಗೆ, ಭದ್ರಾವತಿ ಬೈಪಾಸ್ ಬಳಿಯ ಬಿಳಕಿಯಲ್ಲಿ KSRTC ಬಸ್ ತಡೆದಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಹಿಳೆಯೊಬ್ಬರ ಬಳಿ ಇದ್ದ ಪ್ಯಾಕೆಟನ್ನು ವಶಕ್ಕೆ ಪಡೆದು, ಪ್ರಶ್ನಿಸಿದ್ದಾರೆ. … Read more

ಹೊಸನಗರ ವಿಧಾನಸಭೆ ಕ್ಷೇತ್ರ ಘೋಷಣೆಗೆ ಆಗ್ರಹ, ರಿಪ್ಪನ್’ಪೇಟೆಯಲ್ಲಿ ಒಬ್ಬಂಟಿಯಾಗಿ ಪ್ರತಿಭಟನೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 2 ಮೇ 2019 ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ. ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ … Read more