‘ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಯಲ್ಲೆ ಕ್ಲಿಯರ್, ಟೆಂಡರ್ ಪ್ರಕ್ರಿಯೆ ಇನ್ನು ಸುಗಮ’

Sigandur Launch with people 1

ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019 ಅಂಬರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಗಂದೂರು ಸೇತುವೆಗೆ ಕೇಂದ್ರ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ತುಮರಿಯಲ್ಲಿ ಡಿಜಿಟಲ್ ಗ್ರಾಮಕ್ಕೆ ಚಾಲನೆ ನೀಡಿದ ರಾಘವೇಂದ್ರ, ಕಳೆದ ವರ್ಷ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, 470 ಕೋಟಿಯ ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವನ್ಯಜೀವಿ ಸಂರಕ್ಷಣಾ ಇಲಾಖೆ ಮತ್ತು ಕೆಪಿಸಿ ಅಡ್ಡಗಾಲು ಹಾಕಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. … Read more

ಶಿರಾಳಕೊಪ್ಪದಲ್ಲಿ ಮೂರು ದಿನ ಕನ್ನಡದಲ್ಲಿ ಕುರಾನ್ ಪ್ರವಚನ, ಭಾಗವಹಿಸಲಿದ್ದಾರೆ ಪ್ರಮುಖ ಸ್ವಾಮೀಜಿಗಳು

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಜಮಾಅತೆ ಇಸ್ಲಾಮೀ ಹಿಂದ್ ಶಿರಾಳಕೊಪ್ಪ ಶಾಖೆ ವತಿಯಿಂದ ಶಿರಾಳಕೊಪ್ಪದ ಬಿ.ಎಂ.ಮಹದೇವಯ್ಯ ಬಯಲು ರಂಗಮಂದಿರದಲ್ಲಿ ಫೆಬ್ರವರಿ 27 ರಿಂದ ಮೂರು ದಿನ  ಪ್ರತಿದಿನ ಸಂಜೆ 7.20 ರಿಂದ 9.30ರವರೆಗೆ ನೆಮ್ಮದಿಯ ಬದುಕಿಗಾಗಿ ಕನ್ನಡದಲ್ಲಿ ಕುರಾನ್ ಪ್ರವಚನ ನಡೆಸಲಾಗುತ್ತದೆ. ಇನ್ನು, ಪೊಲೀಸ್ ಠಾಣೆಯ ಮುಂಭಾಗದ ಖಾಲಿ ಜಾಗದಲ್ಲಿ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ಮಾನವೀಯ ಮೌಲ್ಯಗಳ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಸದಸ್ಯ ಅಬ್ದುಲ್ ವಾಹಿಬ್ … Read more

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more

ಶಿಕಾರಿಪುರ ಪುರಸಭೆಯಿಂದ ದಿಟ್ಟ ಹೆಜ್ಜೆ, ಇನ್ಮುಂದೆ ಪಟ್ಟಣದಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಶಿಕಾರಿಪುರ ಪಟ್ಟಣದಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್, ಕೈಚೀಲಗಳನ್ನು ಮಾರಾಟ ಮಾಡದಂತೆ ಪುರಸಭೆ ಪ್ರಕಟಣೆ ಹೊರಡಿಸಿದೆ. ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸಲುವಾಗಿ, ಪುರಸಭೆ ಈ ಸೂಚನೆ ನೀಡಿದೆ. ಇದರಂತೆ ಪಟ್ಟಣಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಪ್ಲಾಸ್ಟಿಕ್ ಕವರ್ ಬದಲು ಬಟ್ಟೆ ಬ್ಯಾಗ್ ಬಳಸುವಂತೆ, ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರಿಗೆ ಪುರಸಭೆ ಮನವಿ ಮಾಡಿದೆ. ಇನ್ನು, ಬೇಸಿಗೆ ಕಾಲವಾಗಿರುವುದರಿಂದ ನೀರನ್ನು ಮಿತವಾಗಿ ಉಪಯೋಗಿಸಬೇಕು. ಒಂದು ವೇಳೆ, … Read more

ಭದ್ರಾವತಿಯ ವಿಐಎಸ್ಎಲ್’ಗೆ ಮರುಜೀವ, ಕೊನೆಗೂ ಮಂಜೂರಾಯ್ತು 150 ಎಕರೆಯ ಗಣಿ

VISL Bhadravathi 1

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಮುಚ್ಚುವ ಹಂತ ತಲುಪಿದ್ದ ವಿಐಎಸ್ಎಲ್ ಕಾರ್ಖಾನೆಗೆ ಮರುಜೀವ ಸಿಕ್ಕಂತಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 150 ಎಕರೆ ಗಣಿ ಮಂಜೂರಾಗಿದೆ. ಈ ಸಂಬಂಧ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಸಂಡೂರಿನ ರಮಣದುರ್ಗದ ಬ್ಲಾಕ್ ನಂಬರ್ 13/1ರಲ್ಲಿ 150 ಎಕರೆ ಭೂಮಿಯನ್ನು ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 10 ವರ್ಷಗಳವರೆಗೆ  ಮಂಜೂರು ಮಾಡಲಾಗಿದೆ. ಹತ್ತು ವರ್ಷದ ಬಳಿಕ ನವೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿಐಎಸ್ಎಲ್ ಕಾರ್ಮಿಕರು ನಿಟ್ಟುಸಿರು ಬಿಡುವಂತಾಗಿದೆ. ಸಿದ್ದರಾಮಯ್ಯ ಅವರು ಸಿಎಂ … Read more

ಮಾರ್ಚ್ 1ರಿಂದ ಒಂದು ತಿಂಗಳು ಆಗುಂಬೆ ಘಾಟಿ ಬಂದ್, ಪರ್ಯಾಯ ಮಾರ್ಗ ಯಾವುದು?

Agumbe Ghat 1

ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019 ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಸ್ಥಳದಲ್ಲಿ ಶಾಶ್ವತ ದುರಸ್ಥಿ ಕಾರ್ಯ ಕೈಗೊಳ್ಳಲುವ ಹಿನ್ನೆಲೆ, ಒಂದು ತಿಂಗಳು ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್ 1 ರಿಂದ 31ರವರೆಗೆ ದುರಸ್ಥಿ ಕಾರ್ಯ ನಡೆಸಲಿದೆ. ಈ ಅವಧಿಯಲ್ಲಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕು ಎಂದು ಸೂಚಿಸಲಾಗಿದೆ. ಎಲ್ಲೆಲ್ಲಿ ದುರಸ್ಥಿ ಕಾರ್ಯ ನಡೆಯಲಿದೆ? ಭಾರೀ ಮಳೆಗೆ ಜುಲೈ ತಿಂಗಳಲ್ಲಿ ಆಗುಂಬೆ ಘಾಟಿಯ 7ನೇ ಮತ್ತು … Read more

ಮಂಗನ ಕಾಯಿಲೆ ಆತಂಕದ ಬೆನ್ನಿಗೆ ಹೊಸನಗರದಲ್ಲಿ ಪ್ರತ್ಯಕ್ಷವಾಯ್ತು ಹೆಚ್1ಎನ್1

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019 ಮಂಗನ ಕಾಯಿಲೆ ಆತಂಕ ದೂರಾಗುವ ಮೊದಲೇ, ಹೊಸನಗರದಲ್ಲಿ ಹೆಚ್1ಎನ್1 ಮಹಾಮಾರಿ ಪ್ರತ್ಯಕ್ಷವಾಗಿದೆ. ಈಗಾಗಲೇ ಇಬ್ಬರಲ್ಲಿ ಹೆಚ್1ಎನ್1 ಸೋಂಕು ಪತ್ತೆಯಾಗಿದೆ. ಸುಮಾರು 20 ಮಂದಿಗೆ ಸೋಂಕು ತಗುಲಿರುವ ಆತಂಕವಿದೆ. ನಗರ ಹೋಬಳಿಯಲ್ಲಿ ಸೋಂಕು ಪತ್ತೆಯಾಗಿದೆ. ಹಾಗಾಗಿ ತಾಲೂಕು ವೈದ್ಯಾಧಿಕಾರಿಗಳು ನಗರ ಹೋಬಳಿಗೆ ಭೇಟಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ತೆರಳಿ, ಚಿಕಿತ್ಸೆಯ ಕುರಿತು ಪರಿಶೀಲನೆ ನಡೆಸಿದ್ದಾರೆ. ‘ಹೆಚ್1ಎನ್1 ಭಯ ಬೇಡ’ ಹಂದಿ ಜ್ವರದ ಹಿನ್ನೆಲೆ, ತಾಲೂಕು ವೈದ್ಯಾಧಿಕಾರಿ ಡಾ.ಸುರೇಶ್ ನೇತೃತ್ವದಲ್ಲಿ, ಮೂಡುಗೊಪ್ಪ … Read more

ಹೊಸನಗರದಲ್ಲಿ ಕಾಳ್ಗಿಚ್ಚು, ಎಂಪಿಎಂ ನಡುತೋಪು ಭಸ್ಮ, ಧಗಧಗ ಉರಿದ ಅಡಕೆ, ತಾಳೆ ತೋಟ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಮತ್ತು ಹೊನ್ನೆಕೊಪ್ಪ ಗ್ರಾಮದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ಇದರಿಂದ ಎಂಪಿಎಂ ಆರಣ್ಯ ವ್ಯಾಪ್ತಿ ಮತ್ತು ಕೃಷಿ ಜಮೀನು ಬೆಂಕಿಗೆ ಆಹುತಿಯಾಗಿದೆ. ಗುರುವಾರ ಮಧ್ಯಾಹ್ನ ಸುತ್ತಾ ಗ್ರಾಮದ ವ್ಯಾಪ್ತಿಯಲ್ಲಿರುವ ಎಂಪಿಎಂ ಅರಣ್ಯದಲ್ಲಿ ಬೆಂಕಿ ಕಾಣಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದಾಗಿ ಎಂಪಿಎಂ ನೆಡುತೋಪಿಗೆ ಹಾನಿಯಾಗಿದೆ. ಇದಾದ ಕೆಲವೇ ಕ್ಷಣದಲ್ಲಿ ಹೊನ್ನೆಕೊಪ್ಪ ಗ್ರಾಮದಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಬಾಳೆಕೊಪ್ಪ … Read more

ಇನ್ನೋವಾ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡರು, ಹಣವನ್ನೇ ಕೊಡದೆ ಪರಾರಿಯಾದರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು, ಹಣವನ್ನೇ ಕೊಡದೇ, ನಾಲ್ವರು ಪರಾರಿಯಾಗಿದ್ದಾರೆ. ತೀರ್ಥಹಳ್ಳಿಯ ಸಹ್ಯಾದ್ರಿ ಪೆಟ್ರೋಲ್ ಬಂಕ್’ನಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಗಿನ ಜಾವ ಗ್ರೇ ಕಲರ್ ಇನ್ನೋವಾ ಕಾರಿನಲ್ಲಿ ಬಂದ ನಾಲ್ವರು, ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಸೂಚಿಸಿದ್ದಾರೆ. ಪೆಟ್ರೋಲ್ ಭರ್ತಿಯಾಗುತ್ತಿದ್ದಂತೆ, ಏಕಾಏಕಿ ಕಾರು ಚಲಾಯಿಸಿಕೊಂಡು ತೆರಳಿದ್ದಾರೆ. ತೀರ್ಥಹಳ್ಳಿಯ ಕುವೆಂಪು ಸರ್ಕಲ್’ವರೆಗೂ ತೆರಳಿದ ಕಾರು, ನಂತರ ವಾಪಸ್ ತಿರುಗಿ ವೇಗವಾಗಿ ಶಿವಮೊಗ್ಗದ ಕಡೆಗೆ ತೆರಳಿದೆ. ಕಾರಿನ ಹಿಂಭಾಗದಲ್ಲಿ … Read more

ಪುನಿತ್ ರಾಜ್’ಕುಮಾರ್ ಸಿನಿಮಾದಲ್ಲಿ ಮಾಡಿದ್ದನ್ನು, ಭದ್ರಾವತಿಯ ಯುವಕ ರಿಯಲ್ ಲೈಫ್’ನಲ್ಲಿ ಮಾಡಿ ತೋರಿಸಿದ

ಶಿವಮೊಗ್ಗ ಲೈವ್.ಕಾಂ | 20 ಫೆಬ್ರವರಿ 2019 ಪವರ್ ಸ್ಟಾರ್ ಸಿನಿಮಾದಲ್ಲಿ ಮಾಡಿದ್ದನ್ನ, ಭದ್ರಾವತಿ ಯುವಕ, ರಿಯಲ್ ಲೈಫ್’ನಲ್ಲಿ ಮಾಡಿದ್ದಾನೆ. ಈತನ ಕೆಲಸಕ್ಕೆ ಭಾರೀ ಮೆಚ್ಚುಗೆ ಸಿಕ್ಕಿದೆ. ಈ ಹುಡುಗನ ವಿಡಿಯೋ ವೈರಲ್ ಆಗಿದೆ. ಈ ಸುದ್ದಿ ಓದುವ ಮೊದಲು ಪುನಿತ್ ರಾಜ್’ಕುಮಾರ್ ಅವರ ಈ ಹಾಡನ್ನು ಒಮ್ಮೆ ನೋಡಿಬಿಡಿ. ಯಾರೇ ಕೂಗಾಡಲಿ ಸಿನಿಮಾದ ಈ ಹಾಡಿನಲ್ಲಿ, ಪುನಿತ್ ರಾಜ್’ಕುಮಾರ್ ಅವರು ಭಿಕ್ಷುಕನೊಬ್ಬನಿಗೆ ಹೊಸ ರೂಪ ನೀಡ, ನೂತನ ಬದುಕು ಕಲ್ಪಿಸುತ್ತಾರೆ. ಇದು ರೀಲ್ ಸ್ಟೋರಿ. ಆದರೆ … Read more