ತಾಳಗುಪ್ಪ ಸಮೀಪ ಟವೇರಾ, ಕ್ಯಾಂಟರ್ ಮುಖಾಮುಖಿ ಡಿಕ್ಕಿ

ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020 ಟವೆರಾ ಕಾರು ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ತಾಳಗುಪ್ಪ ಬಳಿ ಎರಡು ವಾಹನಗಳು ಇವತ್ತು ಬೆಳಗ್ಗೆ ಮುಖಾಮುಖಿ ಡಿಕ್ಕಿಯಾಗಿವೆ. ಕಾನ್ಲೆ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಆರು ಜನರಿಗೆ ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕಾರು ಮತ್ತು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಕಾರಿನಲ್ಲಿದ್ದವರು ತುಮಕೂರು ಮೂಲದವರು ಹೇಳಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಸಾಗರ ಮೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ, ಶಾಸಕರ ವಿರುದ್ಧ ಮಾಜಿ ಎಂಎಲ್ಎ ಆಕ್ರೋಶ

150220 Farmers Protest Against Power Cut in Sagara 1

ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020 ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ತಾಲೂಕು ಘಟಕ ನಗರದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕಬೇಳೂರು ಗೋಪಾಲಕೃಷ್ಣ, ರೈತರು ಸಂಕಷ್ಟದಲ್ಲಿರುವ ಈ ಹೊತ್ತಿನಲ್ಲಿ ಶಾಸಕರು ಡಾನ್ಸ್, ಕೆರೆಹಬ್ಬ ಬಿಟ್ಟು ಕೃಷಿಕರ ಸಮಸ್ಯೆಗೆ ಸ್ಪಂದಿಸಲಿ. ರೈತರು ಸಮೃದ್ದಿ ಆಗಿದ್ದಾಗ ನೀವು ರಾಜ್ಯಾದ್ಯಂತ ಕೆರೆಹಬ್ಬ ಆಚರಿಸಿಕೊಳ್ಳಿ ಎಂದು ಕುಟುಕಿದರು. ಕಳೆದ ಸಾಲಿನಲ್ಲಿ … Read more

ಸಾಗರ ಮಾರಿಕಾಂಬ ಜಾತ್ರೆ, ತಾಯಿಯ ಬೃಹತ್ ಮೂರ್ತಿಗೆ ಅಂತಿಮ ಸ್ಪರ್ಶ, ಏನೆಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SAGARA | 14 ಫೆಬ್ರವರಿ 2020 ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಜಾತ್ರೆಯ ಅಂಗವಾಗಿ 16 ಅಡಿ ಎತ್ತರದ ಆಕರ್ಷಕ ಮೂರ್ತಿ ಸಿದ್ಧಪಡಿಸಲಾಗುತ್ತಿದ್ದು, ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಸಾಗರ ಪಟ್ಟಣದ ಜಡೆ ಮಂಜಪ್ಪ ಗುಡಿಗಾರ್ ಕುಟುಂಬದವರು, ಮೂರ್ತಿ ಸಿದ್ಧತೆಯ ಕಾರ್ಯದಲ್ಲಿ ತೊಡಿದ್ದಾರೆ. ಮೂರ್ತಿ ಸಿದ್ಧವಾಗಿದ್ದು, ಅಲಂಕಾರ ಮಾಡಲಾಗುತ್ತಿದೆ. ಸಾಗರ ಮಾರಿಕಾಂಬ ದೇವಿ ಜಾತ್ರೆಗೆ ಇದೇ ಮನೆತನದವರು ಮುಂಚಿನಿಂದಲೂ ಮೂರ್ತಿ ಸಿದ್ಧಪಡಿಸುತ್ತಿದ್ದಾರೆ. ಫೆಬ್ರವರಿ 16ರಿಂದ ಒಂಭತ್ತು … Read more

ಸಾಗರ ಪಟ್ಟಣದಲ್ಲಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ, ಕೂಡಲೇ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020 ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್’ಟಾಪ್ ವಿತರಿಸುವಂತೆ ಆಗ್ರಹಿಸಿ ಸಾಗರ ಪಟ್ಟಣದಲ್ಲಿ  ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಎರಡು ವರ್ಷದಿಂದ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಆಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಾಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಉಪ ವಿಭಾಗಾಧಿಕಾರಿ ಮತ್ತು ಶಾಸಕ ಹರತಾಳು ಹಾಲಪ್ಪ ಅವರಿಗೆ ಮನವಿ ಸಲ್ಲಿಸಿದರು. 2017ರಿಂದ ರಾಜ್ಯ ಸರ್ಕಾರ … Read more

ತೋಟದ ಮನೆಗೆ ಆಕಸ್ಮಿಕ ಬೆಂಕಿ, ಧಗಧಗ ಉರಿದು ಹೋದ ವಸ್ತುಗಳು

ಶಿವಮೊಗ್ಗ ಲೈವ್.ಕಾಂ | SAGARA | 3 ಫೆಬ್ರವರಿ 2020 ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ. ಸಾಗರ ತಾಲೂಕು ಆವಿನಹಳ್ಳಿ ಗ್ರಾಮದ ಸಿಗಂದೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನಾರಾಯಣಪ್ಪ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೈಕ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. ಜಿಲ್ಲಾ ಪಂಚಾಯಿತಿ ಸದಸ್ಯ ಭೀಮನೇರಿ ಶಿವಪ್ಪ, ಮಾಜಿ … Read more

ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ವಿರುದ್ಧ ಅವಿಶ್ವಾಸದ ನೊಟೀಸ್, ಕೂಡಲೇ ಸಭೆ ಕರೆಯುವಂತೆ ಸದಸ್ಯರ ಆಗ್ರಹ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 1 ಫೆಬ್ರವರಿ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಲು ಹನ್ನೊಂದು ಸದಸ್ಯರು ಜಿಲ್ಲಾಧಿಕಾರಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ನೋಟಿಸ್ ನೀಡಿದ್ದಾರೆ. ನಾಲ್ಕು ತಿಂಗಳಿನಿಂದ ಸಭೆಯನ್ನೇ ಕರೆದಿಲ್ಲ. ಅಧ್ಯಕ್ಷರ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಬೇಕು ಎಂದು ಮನವಿ ಮಾಡಿದ್ದಾರೆ. ಬಿಜೆಪಿಯ 6, ಕಾಂಗ್ರೆಸ್ ಮತ್ತು ಜೆಡಿಎಸ್‌ನ ತಲಾ ಒಬ್ಬರು, ಮೂವರು ಪಕ್ಷೇತರರು … Read more

ಕೆಲಸದಿಂದ ಹೊರಟವಳು ಮನೆ ತಲುಪಲಿಲ್ಲ, ಬೆಳಗ್ಗೆ ಬಾವಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಯುವತಿ ಮೃತದೇಹ

280120 girl suspicious death 1

ಶಿವಮೊಗ್ಗ ಲೈವ್.ಕಾಂ | SHIMOGA | 28 ಜನವರಿ 2020 ಬಾವಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸಾಗರದ  ತಿಲಕ ರಸ್ತೆಯ ಮನೆಯೊಂದರ ಕಾಂಪೌಂಡ್’ನಲ್ಲಿರುವ ಬಾವಿಯಲ್ಲಿ, ಯುವತಿಯ ಮೃತದೇಹ ಪತ್ತೆಯಾಗಿದೆ. ಮೃತಳನ್ನು ಸುಚಿತ್ರಾ ಶೆಟ್ಟಿ (25) ಎಂದು ಗುರುತಿಸಲಾಗಿದೆ. ತಿಲಕ ನಗರದ  ಆಭರಣದ ಅಂಗಡಿಯೊಂದರಲ್ಲಿ ಸುಚಿತ್ರಾ ಶೆಟ್ಟಿ ಕೆಲಸ ಮಾಡುತ್ತಿದ್ದಳು. ಸೋಮವಾರ ಕೆಲಸ ಮುಗಿಸಿ ಅಂಗಡಿಯಿಂದ ತೆರಳಿದ್ದ ಈಕೆ ಮನೆಗೆ ತಲುಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಇವತ್ತು ಬೆಳಗ್ಗೆ ಬಾವಿಯೊಳಗೆ ಸುಚಿತ್ರಾ … Read more

ಲೈಸೆನ್ಸ್ ಇಲ್ಲ, ಇನ್ಷುರೆನ್ಸ್ ಮಾಡಿಸಿಲ್ಲ, ಫೈನ್ ಬದಲು ಲಡ್ಡು, ಗುಲಾಬಿ ಕೊಡಲು ಪೊಲೀಸರ ನಿರ್ಧಾರ

Sagar City Road General Image 1

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020 ಸಾಗರದಲ್ಲಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ಪೊಲೀಸ್ ಅಧಿಕಾರಿಗಳು ದಂಡ ಹಾಕಲ್ಲ, ಬದಲಾಗಿ ಲಾಡು ಕೈಗಿಡ್ತಾರೆ, ಗುಲಾಬಿ ಹೂ ಕೊಡ್ತಾರೆ..! ಎಲ್ಲ ಸಂದರ್ಭಗಳಲ್ಲೂ ಕಾನೂನು ಮೂಲಕವೇ ಜಾಗೃತಿ ಅಸಾಧ್ಯ ಎನ್ನುವ ಕಾರಣಕ್ಕೆ ಮೊದಲ ಬಾರಿಗೆ, ಈ ರೀತಿ ಪ್ರೀತಿಯಿಂದ ತಿಳಿ ಹೇಳುವ ಪ್ರಯತ್ನ ನಡೆಯುತ್ತಿದೆ. ಹಾಗೆಂದು ಮತ್ತೆ ಮತ್ತೆ ಅದೇ ಚಾಳಿ ಮುಂದುವರೆದರೆ ದಂಡ ತಪ್ಪಿದ್ದಲ್ಲ. ಇದು ನೂತನ ಡಿವೈಎಸ್ಪಿ ಜಿ. ರಘು ಅವರ ಐಡಿಯಾ. ವಾಹನ … Read more

ತಾಳಗುಪ್ಪ ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆ ಸಾವು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020 ತಾಳಗುಪ್ಪ – ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಈ ಮಹಿಳೆ ರಾತ್ರಿ ಬೆಂಗಳೂರು ತಾಳಗುಪ್ಪ ಇಂಟರ್’ಸಿಟಿ  ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು ಎಂದು ಹೇಳಲಾಗುತ್ತಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ವೇದಿಕೆಯಲ್ಲೇ ಇಂಜೆಕ್ಷನ್ ಚುಚ್ಚಿಸಿಕೊಂಡರು ಸಾಗರ ಎಂಎಲ್ಎ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SAGARA | 18 ಜನವರಿ 2020 ಕೆಎಫ್‌ಡಿ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸಲು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮತ್ತು ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಅವರು ಚುಚ್ಚುಮದ್ದು ಕಾರ್ಯಕ್ರಮದ ವೇದಿಕೆಯಲ್ಲೇ ಲಸಿಕೆ ಹಾಕಿಸಿಕೊಂಡರು. ಸಾಗರ ತಾಲೂಕಿನಲ್ಲಿ ಈ ವರ್ಷ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ರೋಗ ನಿರೋಧಕ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆರೋಗ್ಯ … Read more