ರೈಲ್ವೆ ಟರ್ಮಿನಲ್’ಗಾಗಿ ಸಾಗರದಲ್ಲಿ ಉಪವಾಸ ಸತ್ಯಾಗ್ರಹ, ಕೋಟೆಗಂಗೂರಿಗೆ ಶಿಫ್ಟ್ ಮಾಡಿದ್ದೇಕೆ ಅಂತಾ ಪ್ರಶ್ನೆ

ಶಿವಮೊಗ್ಗ ಲೈವ್.ಕಾಂ | SAGARA | 15 ಜನವರಿ 2020 ತಾಳಗುಪ್ಪಕ್ಕೆ ಮಂಜೂರಾಗಿರುವ ರೈಲ್ವೆ ಟರ್ಮಿನಲ್ ಅನ್ನು ಏಕಾಏಕಿ ಶಿವಮೊಗ್ಗದ ಕೋಟೆಗಂಗೂರಿಗೆ ಸ್ಥಳಾಂತರಿಸಿರುವ ಸರ್ಕಾರದ ಕ್ರಮ ಖಂಡಿಸಿ ತಾಲೂಕು ಕಚೇರಿ ಆವರಣದಲ್ಲಿ ಮಲೆನಾಡು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ಉಪವಾಸ ಸತ್ಯಾಗ್ರಹ ನಡೆಸಿದರು. ಸಾಹಿತಿ ಡಾ. ನಾ.ಡಿಸೋಜ ಮಾತನಾಡಿ, ರೈಲ್ವೆ ಕೋಚಿಂಗ್ ಟರ್ಮಿನಲ್ ಅನ್ನು ಕೋಟಿಗಂಗೂರಿಗೆ ಸ್ಥಳಾಂತರಗೊಳ್ಳಲು ಕಾರಣ ಏನು? ಈ ಬಗ್ಗೆ ಸಾರ್ವಜನಿಕರೆದುರು ಸಾಗರ ಹಾಗೂ ಸೊರಬ ಶಾಸಕರು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಯೋಜನೆಯೊಂದನ್ನು ಮಂಜೂರು … Read more

ಮಂಗನ ಕಾಯಿಲೆಗೆ ಮೊದಲ ಬಲಿ, ಸಾಗರದ ಮಹಿಳೆ ಮಣಿಪಾಲದಲ್ಲಿ ಸಾವು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 12 ಜನವರಿ 2020 ಮಂಗನ ಕಾಯಿಲೆ(ಕೆಎಫ್‌ಡಿ)ಯಿಂದ ಬಳಲುತ್ತಿದ್ದ ತುಮರಿ ಗ್ರಾಪಂ ವ್ಯಾಪ್ತಿ ಸೀಗೆಮಕ್ಕಿಯ ಮಹಿಳೆಯೊಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಇದು ಈ ವರ್ಷ ಕೆಎಫ್‌ಡಿ ಪಡೆದ ಮೊದಲ ಬಲಿ. ಹೂವಮ್ಮ (58) ಮೃತರು. ಗುರುವಾರ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಹೂವಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸೇರಿಸಲಾಗಿತ್ತು. ನಾಲ್ಕು ತಿಂಗಳಿಂದ ಇದುವರೆಗೆ 69 ಮಂಗಗಳು ಮೃತಪಟ್ಟಿವೆ. ಆದರೆ ಯಾವುದೇ ಮಂಗದಲ್ಲಿ ಕೆಎಫ್‌ಡಿ ಸೋಂಕು ಕಂಡುಬಂದಿಲ್ಲ. ಹೂವಮ್ಮಗೆ … Read more

ಕೆರೆಗಿಳಿದು ಸ್ವಚ್ಛತೆ ಆರಂಭಿಸಿದ ಎಂಎಲ್ಎ, ಸಾಗರದ ಪ್ರಸಿದ್ಧ ಕೆರೆ ಇನ್ಮುಂದೆ ಕ್ಲೀನ್ ಕ್ಲೀನ್

ಶಿವಮೊಗ್ಗ ಲೈವ್.ಕಾಂ | SHIMOGA | 11 ಜನವರಿ 2020 ಗಣಪತಿ ಕೆರೆ ಪುನಶ್ಚೇತನದ ಹಿನ್ನೆಲೆ ಇವತ್ತಿನಿಂದ ಸ್ವಚ್ಛತಾ ಕಾರ್ಯ ಆರಂಭಿಸಲಾಗಿದೆ. ಶಾಸಕ ಹರತಾಳು ಹಾಲಪ್ಪ ಅವರೇ ಕೆರೆಗಿಳಿದು ಸ್ವಚ್ಛತೆ ಕಾರ್ಯಕ್ಕೆ ಚಾಲನೆ ನೀಡಿದರು. ಇವತ್ತಿಂದ ಎರಡು ದಿನ ಸ್ವಚ್ಛತಾ ಕಾರ್ಯ ನಡೆಯಲಿದೆ. ರಾಫ್ಟಿಂಗ್ ಬೋಟುಗಳನ್ನು ಬಳಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಶಾಸಕ ಹರತಾಳು ಹಾಲಪ್ಪ ಅವರು ರಾಫ್ಟಿಂಗ್ ಬೋಟ್ ಬಳಸಿ, ಕೆರೆ ಸ್ವಚ್ಛತಾ ಕಾರ್ಯ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 … Read more

ಸಾಗರ ಮಾರಿಕಾಂಬ ಜಾತ್ರೆಗೆ ಚಾಲನೆ, ನೆರವೇರಿತು ಮರ ಗುರುತಿಸುವ ಕಾರ್ಯ, ಏನಿದು ಸಂಪ್ರದಾಯ? ವಿಶೇಷತೆ ಏನು?

ಶಿವಮೊಗ್ಗ ಲೈವ್.ಕಾಂ | SAGARA | 31 ಡಿಸೆಂಬರ್ 2019 ಇತಿಹಾಸ ಪ್ರಸಿದ್ಧ ಮಾರಿಕಾಂಬ ಜಾತ್ರೆಗೆ ಸಾಗರದಲ್ಲಿ ವಿದ್ಯುಕ್ತ ಚಾಲನೆ ಸಿಕ್ಕಿದೆ. ಇವತ್ತು ಮರ ಗುರುತಿಸಿ, ಕಡಿಯುವ ಶಾಸ್ತ್ರ ನೆರವೇರಿಸಲಾಯಿತು. ಬೃಹತ್ ಹಲಸಿನ ಮರವನ್ನು ಗುರುತಿಸಲಾಗಿದೆ. ಏನಿದು ಮರ ಕಡಿಯುವ ಶಾಸ್ತ್ರ? ಮಾರಿಕಾಂಬ ಜಾತ್ರೆಗೂ ಮೊದಲು ಮರು ಗುರುತಿಸಿ, ಕಡಿಯಲಾಗುತ್ತದೆ. ರವಿ ಪೋತರಾಜ ಅವರು ಮರ ಗುರುತಿಸಿದರು. ಬಿ.ಹೆಚ್.ರಸ್ತೆಯ ಪೊಲೀಸ್ ವಸತಿ ಗೃಹದ ಬಳಿ ಇರುವ ಬೃಹತ್ ಹಲಸಿನ ಮರವನ್ನು ಗುರುತಿಸಲಾಗಿದೆ. ಮರ ಇರುವ ಮನೆ ಮಾಲೀಕರ … Read more

ತಾಳಗುಪ್ಪದಲ್ಲೇ ಆಗಬೇಕು ರೈಲ್ವೆ ಟರ್ಮಿನಲ್, ಕೊಂಕಣ ರೈಲ್ವೆಗೂ ಬೇಕು ಕನೆಕ್ಷನ್, ಸಾಗರ ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SAGARA | 31 ಡಿಸೆಂಬರ್ 2019 ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸಬೇಕು ಮತ್ತು ಕೊಂಕಣ ರೈಲ್ವೆ ಸಂಪರ್ಕ ಕಲ್ಪಿಸಬೇಕು ಎಂದು ಆಗ್ರಹಿಸಿ ಮಲೆನಾಡು ರೈಲ್ವೆ ಹೋರಾಟ ಸಮಿತಿ ನೇತೃತ್ವದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ಗಣಪತಿ ದೇವಸ್ಥಾನದಿಂದ ಸಾಗರ ರೈಲ್ವೆ ನಿಲ್ದಾಣದವರೆಗೆ ಮೆರವಣಿಗೆ ನಡೆಸಲಾಯಿತು. ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಾಗರ ತಾಲೂಕು ತಾಳಗುಪ್ಪದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಿಸಲಾಗತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ಟರ್ಮಿನಲ್ … Read more

ಜಿಲ್ಲಾ ಪಂಚಾಯಿತಿ ಸದಸ್ಯೆಯನ್ನು ಅರೆಸ್ಟ್ ಮಾಡಿದ ಪೊಲೀಸ್, ಆನಂದಪುರ ಆಹಾರ ಘಟಕದ ಮುಂದೆ ಹೈಡ್ರಾಮಾ

ಶಿವಮೊಗ್ಗ ಲೈವ್.ಕಾಂ | SHIMOGA | 30 ಡಿಸೆಂಬರ್ 2019 ಪೌಷ್ಠಿಕ ಆಹಾರ ಘಟಕ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಸಿದ ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರನ್ನು, ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಕೆಲಕಾಲ ಆನಂದಪುರದ ಆಹಾರ ಘಟಕದ ಮುಂದೆ ಹೈಡ್ರಾಮಾ ನಡೆಯಿತು. ಈ ವೇಳೆ, ತಮ್ಮ ಬಂಧನ ಕ್ರಮವೇ ತಪ್ಪು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಆರೋಪ ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರತಿಭಟಿಸಿದ್ದೇಕೆ? ಆನಂದಪುರದಲ್ಲಿ ಸಾಗರ ಮತ್ತು ಸೊರಬ ತಾಲೂಕು ಮಹಿಳಾ ಪೂರಕ ಪೌಷ್ಠಿಕ ಆಹಾರ ಉತ್ಪಾದನಾ ಘಟಕವಿದೆ. … Read more

SAGARA | ಖಾಸಗಿ ಮತ್ತು KSRTC ಬಸ್ ಮುಖಾಮುಖಿ ಡಿಕ್ಕಿ, ಗ್ಲಾಸ್ ಪೀಸ್ ಪೀಸ್, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಲೈವ್.ಕಾಂ | SAGARA | 14 ಡಿಸೆಂಬರ್ 2019 KSRTC ಮತ್ತು ಖಾಸಗಿ ಬಸ್ ಡಿಕ್ಕಿಯಾಗಿದ್ದು, ಬಸ್ಸುಗಳ ಗ್ಲಾಸ್ ಪೀಸ್ ಪೀಸ್ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಹೊಸನಗರದ ನಿಟ್ಟೂರು ಸಮೀಪದ ಚಂಗೊಳ್ಳಿ ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಸಿಗಂದೂರಿನಿಂದ ಹೊರಟಿದ್ದ KSRTC ಬಸ್ ಮತ್ತು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಸಿಕ್ಕಿಯಾಗಿದೆ. ಮಿನಿ ಬಸ್’ನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿವೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ರಸ್ತೆ ಕಿರಿದಾಗಿದ್ದು, ಅತಿ … Read more

SAGARA | ವಿದೇಶದಲ್ಲಿರುವ ಸ್ನೇಹಿತನನ್ನು ರಕ್ಷಿಸುವಂತೆ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಸಾಗರ ಯುವಕ

ಶಿವಮೊಗ್ಗ ಲೈವ್.ಕಾಂ | SAGARA | 12 ಡಿಸೆಂಬರ್ 2019 ಸೌದಿ ಅರೇಬಿಯಾದಲ್ಲಿ ಆರು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತನ್ನ ಸ್ನೇಹಿತನೊಬ್ಬನಿಗೆ ಸಹಾಯ ಕೋರಿ ಸಾಗರದ ಸಾಮಾಜಿಕ ಕಾರ್ಯಕರ್ತ ಜಮೀಲ್ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮಾಡಿದ್ದು, ಪ್ರಧಾನಿ ಕಚೇರಿ ಇದಕ್ಕೆ ಪ್ರತಿಕ್ರಿಯಿಸಿದೆ. ಉತ್ತರಪ್ರದೇಶದ ಲಖ್ನೋದ ಅಖ್ತರ್ ಅಹಮದ್ ಎಂಬಾತ ಜಮೀಲ್ ಅವರ ಸಹೋದರನ ಸ್ನೇಹಿತ. ಇಬ್ಬರೂ ಜತೆಗೆ ಕೆಲಸ ಮಾಡುತ್ತಿದ್ದಾರೆ, ಆರು ದಿನಗಳ ಹಿಂದೆ … Read more

SAGARA | ಜೋಗ್ ಬಸ್ ನಿಲ್ದಾಣದ ಹೊಟೇಲ್’ನಲ್ಲಿ ನೇಣು ಬಿಗಿದು ಆತ್ಮಹತ್ಯೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 10 ಡಿಸೆಂಬರ್ 2019 ಜೋಗ್ ಬಸ್ ನಿಲ್ದಾಣದಲ್ಲಿರುವ ತನ್ನ ಹೊಟೇಲ್’ನಲ್ಲೇ ಮಾಲೀಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯೆ ಆತ್ಮಹತ್ಯೆ ಕಾರಣ ಎಂದು ಹೇಳಲಾಗುತ್ತಿದೆ. ರವಿಕುಮಾರ್ (32) ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ರಾತ್ರಿ ನೇಣು ಬಿಗಿದುಕೊಂಡಿರುವ ಶಂಕೆ ಇದೆ. ಜೋಗ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ ಮೇಲ್ … Read more

SAGARA | ಸಾಗರದಲ್ಲಿ ಸಿಎಂ : ಕಾಂಗ್ರೆಸ್, ಜೆಡಿಎಸ್ ಅಕಸ್ಮಾತ್ ಒಂದೊಂದು ಸ್ಥಾನ ಗೆಲ್ಲಬಹುದು, ಉಳಿದಲ್ಲೆಲ್ಲ ಬಿಜೆಪಿಗೆ ಜಯ

ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ನಾಳೆ ಉಪ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ 13 ಸ್ಥಾನ, ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದು ಸ್ಥಾನ ಪಡೆಯಬಹುದು ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಾಗರದ ಮಂಕಳಲೆ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೆರೆಹಾನಿ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಮಾಡಿದ ಕೆಲಸ ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ … Read more