ಎಲ್.ಬಿ.ಕಾಲೇಜು ವಿದ್ಯಾರ್ಥಿಯಲ್ಲಿ ಅತ್ಯಂತ ಅಪರೂಪದ ರಕ್ತ, ಬೆಂಗಳೂರಿನಿಂದ ಹುಡುಕಿ ಬಂತು ರೋಗಿಯ ಕುಟುಂಬ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 23 ಅಕ್ಟೋಬರ್ 2019 ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸಾಗರದ ಎಲ್.ಬಿ.ಕಾಲೇಜು ವಿದ್ಯಾರ್ಥಿಯೊಬ್ಬರು ಅತ್ಯಂತ ಅಪರೂಪದ ಬಾಂಬೆ ಗ್ರೂಪ್ ರಕ್ತವನ್ನು ದಾನ ಮಾಡಿದ್ದಾರೆ. ಈ ಗ್ರೂಪ್’ನ ರಕ್ತ ತುಂಬಾನೆ ಅಪರೂಪ ಎಂದು ವೈದ್ಯರು ತಿಳಿಸಿದ್ದಾರೆ. ಸಾಗರದ ಎಲ್.ಬಿ.ಕಾಲೇಜಿನಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ನಡೆದಾಗ ಬಿಎಸ್ಸಿ ವಿದ್ಯಾರ್ಥಿ ಉದಯ್ ಕುಮಾರ್ ಅವರ ರಕ್ತದ ಮಾದರಿ ಅತ್ಯಂತ ಅಪರೂಪದ್ದು ಎಂದು ತಿಳಿದು ಬಂದಿದೆ. ಇದರ ಮಾಹಿತಿಯನ್ನು ಸಂಕಲ್ಪ ಆನ್’ಲೈನ್ ಎಂಬ ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿತ್ತು. ಈ ಮಾಹಿತಿ … Read more

ಶರಾವತಿ ಕೊಳ್ಳ ಭೂಗರ್ಭ ಯೋಜನೆಗೆ ವಿರೋಧ, ಸಾಗರದಲ್ಲಿ ಮಹತ್ವದ ಸಭೆ, ಏನೆಲ್ಲ ನಿರ್ಣಯವಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019 ಶರಾವತಿ ಭೂಗರ್ಭ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಸಂಸದ ಮತ್ತು ಶಾಸಕರ ಮೇಲೆ ಒತ್ತಡ ಹೇರಲು ಶರಾವತಿ ಉಳಿಸಿ ಹೋರಾಟ ಸಮಿತಿ ತೀರ್ಮಾನಿಸಿದೆ. ಹೋರಾಟ ಸಮಿತಿ ಗೌರವ ಅಧ್ಯಕ್ಷರಾದ ನಾ.ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಸಾಗರದ ಸರ್ಕಾರಿ ನೌಕರರ ಭವನದಲ್ಲಿ ಇವತ್ತು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರ ಶರಾವತಿ ಭೂಗರ್ಭ ಯೋಜನೆ ಕೈಗೆತ್ತಿಕೊಳ್ಳಲು ಚಿಂತಿಸಿದೆ. ಯೋಜನೆಯನ್ನು ಕೂಡಲೆ ಕೈಬಿಡಬೇಕು. ಇದಕ್ಕಾಗಿ ಸಾಗರ ಶಾಸಕ ಮತ್ತು … Read more

ಶಿವಮೊಗ್ಗ, ಶಿಕಾರಿಪುರದಲ್ಲಿ ಸ್ಪೀಡ್, ಸಾಗರದಲ್ಲಿ ಬಹಳ ಸ್ಲೋ, ನೆರೆ ಪರಿಹಾರ ವಿಳಂಬಕ್ಕೆ ತಾಲೂಕು ಪಂಚಾಯಿ ಅಧ್ಯಕ್ಷರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019 ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಿಗೆ ಹೋಲಿಸಿದೆ ಸಾಗರದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದ್ದಾರೆ. ತ್ಯಾಗರ್ತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಜನಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ನೀಡದೆ ಇರುವುದೆ ಪರಿಹಾರ ವಿತರಣೆ ವಿಳಂಬಕ್ಕೆ ಕಾರಣ ಎಂದು ಆರೋಪಿಸಿದರು. ಕೆಲವು ಕಡೆ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ … Read more

ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ, ಬಸ್ ಸ್ಟಾಂಡ್’ನಲ್ಲೇ ಯುವಕನಿಗೆ ಬಿತ್ತು ಧರ್ಮದೇಟು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದೆ. ಬಸ್ಸಿನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಕಿರುಕುಳ ನೀಡಿದ್ದಾನೆ. ಸಾಗರದಿಂದ ಆನಂದಪುರಕ್ಕೆ ಬರುವ ಬಸ್ಸಿನಲ್ಲಿ ಘಟನೆ ನಡೆದಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆನಂದಪುರದಲ್ಲಿ ಯುವಕನನ್ನು ಬಸ್ಸಿನಿಂದ ಕೆಳಗಿಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಯುವಕ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು, … Read more

ರೈತರ ಜೊತೆ ಪ್ರತಿಭಟನೆಗಿಳಿದ ಶಾಸಕ ಹಾಲಪ್ಪ, ಡಿಸಿ ಬರುವವರೆಗೂ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಧರಣಿ

ಶಿವಮೊಗ್ಗ ಲೈವ್.ಕಾಂ | SAGARA | 21 ಅಕ್ಟೋಬರ್ 2019 ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಶಾಸಕ ಹರತಾಳು ನೇತೃತ್ವದಲ್ಲಿ ರೈತರು ದಿಢೀರ್ ಪ್ರತಿಬಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ತಾಲೂಕಿನ ಇರುವಕ್ಕಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ನಿರ್ಮಿಸಲಾಗುತ್ತಿದೆ. ವಿವಿ ಆವರಣದ ಪಕ್ಕದಲ್ಲಿರುವ ಜಮೀನುಗಳಿಗೆ ಜಮೀನುಗಳಿಗೆ ಇತ್ತೀಚೆಗೆ ಕಳೆನಾಶಕ ಸಿಂಪಡಿಸಲಾಗಿದೆ. ವಿವಿ ಸಿಬ್ಬಂದಿಯೆ ಇದನ್ನು ಸಿಂಪಡಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ರೈತರನ್ನು ಒಕ್ಕಲೆಬ್ಬಿಸಬೇಕು ಎಂಬ ದುರುದ್ದೇಶದಿಂದಲೇ ಈ ಕೃತ್ಯ … Read more

ಲಿಂಗನಮಕ್ಕಿ ಡ್ಯಾಂನ 9 ಗೇಟ್ ಓಪನ್, ಮತ್ತೆ ನಳನಳಿಸುತ್ತಿದೆ ಜೋಗ್ ಫಾಲ್ಸ್

191019 Jog Falls Full 1

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದರಿಂದ, ಒಂಭತ್ತು ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 20,869 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಒಂಭತ್ತು ಗೇಟುಗಳನ್ನು ತೆಗೆದು 15 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡುತ್ತಿರುವುದಿರಂದ ಜೋಗ ಜಲಪಾತ ಮತ್ತೆ ನಳನಳಿಸುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ವೀಕೆಂಡ್ ಆಗಿದ್ದರಿಂದ ಪ್ರವಾಸಿಗರ ಸಂಖ್ಯೆ … Read more

ನೇಣು ಬಿಗಿದು SBI ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಒಬ್ಬರು ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದಿನಂತೆ ಬೆಳಗ್ಗೆ ಬ್ಯಾಂಕಿಗೆ ಹೋಗಿದ್ದ ಮ್ಯಾನೇಜರ್ ಸ್ವಲ್ಪ ಸಮಯದ ಬಳಿಕ ಮನೆಗೆ ಹಿಂತಿರುಗಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ಜೋಗ್ ಫಾಲ್ಸ್ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಅನಿಲ್ ಕುಮಾರ್ (30) ಆತ್ಮಹತ್ಯೆಗೆ ಶರಣಾದವರು. ಪತ್ನಿಯನ್ನು ಹೊರಗೆ ಕಳುಹಿಸಿ ಅನಿಲ್ ಕುಮಾರ್ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನದಿಂದ ಅನಿಲ್ … Read more

ರಾತ್ರಿ ಕದ್ದುಮುಚ್ಚಿ ಕಸ ಹಾಕ್ತಿದ್ದವರ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳು, ಯಾಕೆ? ಮುಂದೇನಾಯ್ತು ಗೊತ್ತಾ?

161019 Kasa Story in Sagara 1

ಶಿವಮೊಗ್ಗ ಲೈವ್.ಕಾಂ | SAGARA | 17 ಅಕ್ಟೋಬರ್ 2019 ಖಾಲಿ ಸೈಟು, ಕೆರೆ ಅಂಗಳ, ರಸ್ತೆ ಪಕ್ಕದಲೆಲ್ಲೋ ಹೋಗಿ ಕದ್ದು ಮುಚ್ಚಿ ಕಸ ಹಾಕುತ್ತಿದ್ದವರಿಗೆ ಸಾಗರ ನಗರಸಭೆ ಶಾಕ್ ನೀಡಿದೆ. ಇನ್ಮುಂದೆ ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ರಾತ್ರಿ ವೇಳೆ ಕಸ ಹಾಕುವವರಿಗೆ ಬುದ್ದಿ ಕಲಿಸುವ ಸಲುವಾಗಿ ಸಾಗರ ನಗರಸಭೆ ಅಧಿಕಾರಿಗಳು ನೈಟ್ ಬೀಟ್ ಶುರು ಮಾಡಿದ್ದಾರೆ. ಎಲ್ಲೆಂದರಲ್ಲಿ ಕಸ ಹಾಕುವವರನ್ನು ಹಿಡಿದು ಬುದ್ದಿ ಮಾತು ಹೇಳುತ್ತಿದ್ದಾರೆ. … Read more

ಶಿವಮೊಗ್ಗ ಸಾಗರ ರಸ್ತೆಯಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತ, ಪ್ರಯಾಣಿಕರು ಸೇಫ್

ಶಿವಮೊಗ್ಗ ಲೈವ್.ಕಾಂ | SAGARA | 16 ಅಕ್ಟೋಬರ್ 2019 ಶಿವಮೊಗ್ಗ ಸಾಗರ ರಸ್ತೆಯಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಆನಂದಪುರ ಬಳಿಯ ಹೊಸೂರು ರೈಲ್ವೆ ಗೇಟ್ ಬಳಿ ರೈಲ್ವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಹೋಗಿದೆ. ಬಸ್ಸಿನಿಂದ ಕೆಳಗಿಳಿಯಲು ಪ್ರಯಾಣಿಕರ ಹರಸಾಹಸ ರೈಲ್ವೆ ತಡೆಗೋಡೆಗೆ ಡಿಕ್ಕಿಯಾಗಿದ್ದರಿಂದ ಬಸ್ಸಿನ … Read more

ಆಯತಪ್ಪಿ ಕೆರೆಗೆ ಬಿದ್ದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ಕೊನೆಯುಸಿರು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 14 ಅಕ್ಟೋಬರ್ 2019 ಆಯತಪ್ಪಿ ಕೆರೆ ಬಿದ್ದು ಯುವಕನೊಬ್ಬ ಕೊನೆಯುಸಿರೆಳೆದಿದ್ದಾನೆ. ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಮ್ (21) ಮೃತ ಯುವಕ. ಗೆಳೆಯರೊಂದಿಗೆ ಭಾನುವಾರ ಮಧ್ಯಾಹ್ನ ಗುಮ್ಮನಹಳ್ಳಿ ಕೆರೆಗೆ ಹೋಗಿದ್ದಾಗ ಘಟನೆ ನಡೆದಿದೆ. ಆಯತಪ್ಪಿ ನೀರಿಗೆ ಬಿದ್ದಿರುವ ಶಂಕೆ ಇದೆ. ಗೌತಮ್, ಗೌತಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ರೇವಪ್ಪ ಅವರ ಪುತ್ರ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.   ಶಿವಮೊಗ್ಗ ಲೈವ್.ಕಾಂ … Read more