ಲಾರಿ, ಬೈಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು

ಶಿವಮೊಗ್ಗ ಲೈವ್.ಕಾಂ | ಸಾಗರ | 6 ಸೆಪ್ಟೆಂಬರ್ 2019 ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪದ ಚೂರಿಕಟ್ಟೆ ಬಳಿ ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೊಸೂರು ಗ್ರಾಮದ ಹರೀಶ್ ನಾಯ್ಕ (22) ಮತ್ತು ವಿನಾಯಕ (25) ಮೃತ ಯುವಕರು. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more

ಮೈದುಂಬಿದ ಜೋಗ ಜಲಪಾತ, ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ ಭಾರಿ ಜನ, ಹೇಗಿದೆ ಗೊತ್ತಾ ಜಗದ್ವಿಖ್ಯಾತ ಫಾಲ್ಸ್?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 3 ಸೆಪ್ಟೆಂಬರ್ 2019 ಲಿಂಗನಮಕ್ಕಿ ಜಲಾಶಯದ ಹನ್ನೊಂದು ಕ್ರಸ್ಟ್  ಗೇಟುಗಳ ಮೂಲಕ ಶರಾವತಿ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಸುತ್ತಮುತ್ತಲ ಊರಿನ ಜನರು ಈ ವೈಭವ ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಜಲಪಾತದ ಬಳಿ ಬರುತ್ತಿದ್ದಾರೆ. (ವಿಡಿಯೋ ಮತ್ತು ಫೋಟೊಗಳು : ಅಶೋಕ್ ಹೆಗಡೆ ಮಾವಿನಗುಂಡಿ ಅವರ ಫೇಸ್’ಬುಕ್’ನಿಂದ) ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ … Read more

ಯುವತಿ ಕೆನ್ನೆಗೆ ಚಾಕುವಿನಿಂದ ಇರಿದು ಪಾಗಲ್ ಪ್ರೇಮಿ ಎಸ್ಕೇಪ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸಾಗರ | 2 ಸೆಪ್ಟೆಂಬರ್ 2019 ಪ್ರೀತಿಸಲು ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಕೆನ್ನೆ ಮೇಲೆ ಇರಿದು ಪರಾರಿಯಾಗಿದ್ದಾನೆ. ಯುವತಿಗೆ ಸಾಗರದ ಆಸ್ಪತ್ರೆಗೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಖಿ ಕಟ್ಟಿಸಿಕೊಳ್ಳಲು ಕರೆಸಿ ಕೆನ್ನೆಗೆ ಇರಿದ ರಾಕೇಶ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಹಿನ್ನೆಲೆ, ಅಣ್ಣ, ತಂಗಿಯಂತೆ ಇರೋಣ ಎಂದಿದ್ದ. ಅದರಂತೆ ಯುವತಿ ಮನೆ ಬಳಿ ಬಂದು ಇವತ್ತು ರಾಖಿ ಕಟ್ಟಿಸಿಕೊಳ್ಳುವುದಾಗಿ ಹೇಳಿ ಕರೆಸಿಕೊಂಡು, … Read more

BREAKING NEWS | ಲಿಂಗನಮಕ್ಕಿ ಜಲಾಶಯದ ಗೇಟುಗಳು ಓಪನ್, ಎಷ್ಟು ಪ್ರಮಾಣದ ನೀರು ಹೊರ ಬಿಡಲಾಗ್ತಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಸಾಗರ | 2 ಸೆಪ್ಟೆಂಬರ್ 2019 ಲಿಂಗನಮಕ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆ ಮೂರು ಕ್ರಸ್ಟ್  ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಸಂಜೆ 6.30ಕ್ಕೆ ಮೂರು ಕ್ರಸ್ಟ್ ಗೇಟುಗಳನ್ನು ಒಂದು ಅಡಿಯಷ್ಟು ಮೇಲಕ್ಕೆತ್ತಲಾಗಿದೆ. ಮೂರು ಗೇಟುಗಳ ಮೂಲಕ 4800 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಸದ್ಯ ನೀರಿನ ಮಟ್ಟ 1818.40 ಅಡಿಗೆ ತಲುಪಿದೆ. ಪೂರ್ಣ ಭರ್ತಿಗೆ ಇನ್ನು ಅರ್ಧ ಅಡಿಯಷ್ಟು ಬಾಕಿ ಇದೆ. ಒಳಹರಿವು 25 ಸಾವಿರ ಕ್ಯೂಸೆಕ್ ಇದೆ. ಮಳೆ ಹೆಚ್ಚಾದರೆ ಮತ್ತಷ್ಟು ನೀರು … Read more

ಕಲ್ಲೊಡ್ಡು ಹಳ್ಳ ಯೋಜನೆ ವಿರುದ್ಧ ಸಿಡಿದೆದ್ದ ಜನ, ಸಾಗರದಲ್ಲಿ ಭಾರಿ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಆಗಸ್ಟ್ 2019 ಕಲ್ಲೊಡ್ಡು ಹಳ್ಳ ಯೋಜನೆ ವಿರೋಧಿಸಿ ಸಾಗರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಾಗರದ ಗಣಪತಿ ದೇವಸ್ಥಾನದಿಂದ ಶುರುವಾದ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಯೋಜನೆ ವಿರುದ್ಧ ಘೋಷಣೆ ಕೂಗಿದರು. ಯೋಜನೆ ಜಾರಿಯಾದರೆ ಸಾಗರ ತಾಲೂಕಿನಲ್ಲಿ ಮತ್ತೊಮ್ಮೆ ಮುಳುಗಡೆ ಸಮಸ್ಯೆ ಎದುರಾಗಲಿದೆ ಎಂದು ಆಕ್ರೋಶ … Read more

‘ಶರಾವತಿ ನದಿಗಾಗಿ’ ಮಾದರಿಯಲ್ಲೇ ಸಾಗರ ತಾಲೂಕಲ್ಲಿ ಮತ್ತೊಂದು ಹೋರಾಟಕ್ಕೆ ಸಿದ್ಧತೆ, ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಆಗಸ್ಟ್ 2019 ‘ಶರಾವತಿ ನದಿಗಾಗಿ’ ಹೋರಾಟದ ಮಾದರಿಯಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಹೋರಾಟ ಸಮಿತಿಯು ಅಸ್ಥಿತ್ವಕ್ಕೆ ಬಂದಿದೆ. ಕಲ್ಲೊಡ್ಡು ಜಲಾಶಯ ನಿರ್ಮಾಣ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧವಾಗುತ್ತಿದೆ. ಕಲ್ಲೊಡ್ಡು ಯೋಜನೆ ವಿರೋಧ ಸಮಿತಿ ಅಸ್ಥಿತ್ವಕ್ಕೆ ಬಂದಿದ್ದು ಗೌರವಾಧ್ಯಕ್ಷರಾಗಿ ಬರೂರು ವೀರೇಶ್ ಗೌಡ, ಅಧ್ಯಕ್ಷರಾಗಿ ಟಾಕಪ್ಪ ಕುಂದೂರು, ಕಾರ್ಯದರ್ಶಿಯಾಗಿ ಮಂಜುನಾಥ್ ಮಡಿವಾಳನಕಟ್ಟೆ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಹೇಗಿರುತ್ತೆ ಯೋಜನೆ ವಿರುದ್ಧದ ಹೋರಾಟ? ಶರಾವತಿ ನದಿಗಾಗಿ ಹೋರಾಟದ … Read more

ಮೂರು ಬಾರಿ ಶಾಸಕರಾದ ಹರತಾಳು ಹಾಲಪ್ಪ ಸಚಿವರಾಗಬೇಕು, ಆಗ್ರಹ

Haratalu-Halappa

ಶಿವಮೊಗ್ಗ ಲೈವ್.ಕಾಂ | ಸಾಗರ | 1 ಆಗಸ್ಟ್ 2019 ಶಾಸಕ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಾಗರದ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ. ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ನ್ಯಾಯ ಒದಗಿಸಿದಂತೆ ಆಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಪರಶುರಾಮಪ್ಪ ತಿಳಿಸಿದ್ದಾರೆ. ಈಡಿಗ ಸಮುದಾಯ, ರಾಜ್ಯದಲ್ಲಿ ನಾಲ್ಕನೇ ಅತಿ ದೊಡ್ಡ ಸಮುದಾಯವಾಗಿದೆ. ಈ ಸಮುದಾಯದಿಂದ ಆಯ್ಕೆಯಾಗಿರುವ ಹರತಾಳು ಹಾಲಪ್ಪ, ಮುರು ಬಾರಿ … Read more

ಆನಂದಪುರ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ

ಶಿವಮೊಗ್ಗ ಲೈವ್.ಕಾಂ | ಆನಂದಪುರ | 13 ಜುಲೈ 2019 ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ರಸ್ತೆಗೆ ದಿಢೀರ್ ಬಂದ ದನಗಳಿಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋಗಿ, ಅಪಘಾತ ಸಂಭವಿಸಿದೆ. ಆನಂದಪುರ ಬಳಿಯ ಮುಂಬಾಳುವಿನಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ಬಸ್ಸಿನಿಂದ ಹೊರಗೆ ಕರೆತರಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ … Read more

ಶರಾವತಿ ನದಿಗಾಗಿ ಸಾಗರ ಸಂಪೂರ್ಣ ಬಂದ್, ಹಳ್ಳಿ ಹಳ್ಳಿಯಲ್ಲೂ ನಡೆಯುತ್ತಿದೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಜುಲೈ 2019 ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಅವೈಜ್ಞಾನಿಕ ಯೋಜನೆಯನ್ನು ವಿರೋಧಿಸಿ ಸಾಗರದಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ತಾಲೂಕು ಕೇಂದ್ರ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶದಲ್ಲೂ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ. ಸಾಗರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿವೆ. ಖಾಸಗಿ ಬಸ್ ಸೇವೆ ಸ್ಥಗಿತಗೊಂಡಿರುವುದರಿಂದ, ಸದಾ ಗಿಜಿಗುಡುತ್ತಿದ್ದ ಸಾಗರ ಖಾಸಗಿ ಬಸ್ ನಿಲ್ದಾಣದ ಸ್ಥಬ್ಧವಾಗಿದೆ. ಇನ್ನು ವಾಹನ ಸಂಚಾರವೂ ವಿರಳವಾಗಿದೆ. ಸಾಗರದ ಗ್ರಾಮೀಣ ಭಾಗದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಸಿಗಂದೂರಿಗೆ … Read more

ಆನಂದಪುರದಲ್ಲಿ ಟ್ರೇನಿಂಗ್ ಪಡೆದವರು ಭಾರತೀಯ ಸೇನೆಗೆ ಆಯ್ಕೆ, ಎಷ್ಟು ಯುವಕರಿಗೆ ಅವಕಾಶ ಸಿಕ್ಕಿದೆ ಗೊತ್ತಾ?

Indian-Army-Training-at-Anandapuram

ಶಿವಮೊಗ್ಗ ಲೈವ್.ಕಾಂ | 12 ಜೂನ್ 2019 ಸಾಗರ ತಾಲೂಕು ಆನಂದಪುರ ಮುರುಘಾಮಠದ ಆವರಣದಲ್ಲಿ, ಸೈನಿಕ ತರಬೇತಿ ಪಡೆದ ಮಲೆನಾಡಿನ 26 ಯುವಕರು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮಾಜಿ ಯೋಧರ ಕಠಿಣ ಪರಿಶ್ರಮ, ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರಕ್ಕೆ ಫಲ ಸಿಕ್ಕಂತಾಗಿದೆ. ಮಾಜಿ ಯೋಧರು ಸ್ಥಾಪಿಸಿದ ಮಲ್ನಾಡ್ ಸೋಲ್ಜರ್ ಅಕಾಡೆಮಿಯಲ್ಲಿ 65 ಯುವಕರು 15 ದಿನ ಕಠಿಣ ತರಬೇತಿ ಪಡೆದಿದ್ದರು. ಈ ಪೈಕಿ 26 ಯುವಕರು, ಗದಗದಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಾರೆ. ಮೂವರ … Read more