ಜಿಲ್ಲೆಯಲ್ಲಿ ಮುಂದುವರೆದ ಮಂಗನ ಕಾಯಿಲೆ ಮರಣ ಮೃದಂಗ, ಮತ್ತೊಬ್ಬ ವ್ಯಕ್ತಿ ಸಾವು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 1 ಮೇ 2019 ಮಂಗನ ಕಾಯಿಲೆಗೆ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದೆ. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಂಕಿತ ಮಂಗನ ಕಾಯಿಲೆಗೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ. ನಂದೋಡಿ ಗ್ರಾಮದ ಕೆರಿಯಪ್ಪ (45) ಮೃತ ವ್ಯಕ್ತಿ. ಮಂಗನ ಕಾಯಿಲೆ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಕೆರಿಯಪ್ಪ ಮೃತಪಟ್ಟಿದ್ದಾರೆ. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆ ಶಂಕೆಯಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ ಆಗಿದೆ.

ರಾಘವೇಂದ್ರ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿಯ ಸವಾಲು ಹಾಕಿದ ಬಿಜೆಪಿ ಎಂಎಲ್ಎ

Haratalu-Halappa

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಗೆಲ್ಲದೆ ಇದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಅಂತಾ ಸಾಗರ ಶಾಸಕ ಹರತಾಳು ಹಾಲಪ್ಪ ಸವಾಲು ಹಾಕಿದ್ದಾರೆ. ಸಾಗರದ ಮಡಸೂರು ಲಿಂಗದಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಹಾಲಪ್ಪ, ಈ ಸವಾಲು ಹಾಕಿದ್ದಾರೆ. ಈಡಿಗ ಸಮುದಾಯಕ್ಕೆ ಬಿಜೆಪಿಯಿಂದ ಎಂದಿಗೂ ಅನ್ಯಾಯವಾಗಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾರ್ಕಳದ ಕೋಟಿ ಚನ್ನಯ್ಯ ಪೀಠ ಸ್ಥಾಪನೆಗೆ 99 ಕೋಟಿ ರೂ. ನೀಡಿದ್ದರು. ಮಂಗಳೂರಿನಲ್ಲಿ ಜಮೀನು ನೀಡಿದ್ದಾರೆ. ಶಿವಮೊಗ್ಗದಲ್ಲಿ … Read more

ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಪಲ್ಟಿ, ಸಾವಿನ ಸಂಖ್ಯೆ ಮೂರಕ್ಕೆ

ಶಿವಮೊಗ್ಗ ಲೈವ್.ಕಾಂ | 18 ಏಪ್ರಿಲ್ 2019 ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್, ಉಳ್ಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪಲ್ಟಿಯಾಗಿದ್ದ ಬಸ್ಸಿನಡಿ ಹಲವು ಸಿಲುಕಿರುವ ಆತಂಕವಿತ್ತು. ಸ್ಥಳೀಯರು, ಪೊಲೀಸರ ನೆರವಿನಿಂದ ಪ್ರಯಾಣಿಕರ ರಕ್ಷಣಾ ಕಾರ್ಯ ನಡೆಯಿತು. ಹೊನ್ನಾವರದ ಕೀರ್ತನಾ (12), … Read more

11 ಬಸ್’ನಲ್ಲಿ ಜನರನ್ನ ಕರೆದೊಯ್ದವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 11 ಏಪ್ರಿಲ್ 2019 ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ, ಹನ್ನೊಂದು ಬಸ್’ನಲ್ಲಿ ಜನ ಕರೆದುಕೊಂಡು ಹೋದ ಆರೋಪದ ಹಿನ್ನೆಲೆ, ಸಾಗರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿಯ 11 ಬಸ್’ಗಳಲ್ಲಿ ಜನರನ್ನು ಕರೆದೊಯ್ಯಲಾಗಿತ್ತು. ಈ ಸಂಬಂಧ ಮಹಾಬಲೇಶ್ವರ ಎಂಬುವವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ತ್ಯಾಗರ್ತಿ, ಬರೂರು, ಪಡವಗೋಡು, ಮಾಸೂರು ಸೇರಿದಂತೆ ಸುತ್ತಮುತ್ತ ಗ್ರಾಮ ಪಂಚಾಯಿತಿಯಿಂದ ಜನರನ್ನು ಕರೆದೊಯ್ಯಲಾಗಿತ್ತು. ಈ … Read more

ಜ್ಯೋತಿಷಿ ಕಿರುಕುಳ, ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ, ಯಾರದು ಜ್ಯೋತಿಷಿ? ಏನಿದು ಸಮಸ್ಯೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 8 ಏಪ್ರಿಲ್ 2019 ರಸ್ತೆ ಮಾಡಿಸಿಲ್ಲ. ನೀರು ಕೊಟ್ಟಿಲ್ಲ. ಕರೆಂಟ್ ಇರಲ್ಲ. ಹೀಗೆ ಮೂಲಸೌಕರ್ಯಗಳಿಲ್ಲ ಎಂಬ ಕಾರಣಕ್ಕೆ ಚುನಾವಣೆ ಬಹಿಷ್ಕರಿಸುವುದು ಸಾಮಾನ್ಯ. ಆದರೆ ಇಲ್ಲಿ, ಜ್ಯೋತಿಷಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಲು ನಿರ್ಧರಿಸಿದೆ. ಸಾಗರ ತಾಲೂಕಿನ ಹಿರೇಮನೆ ಗ್ರಾಮದಲ್ಲಿ 22 ಕುಟುಂಬದ 60 ಮಂದಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಹತ್ತು ವರ್ಷದಿಂದ ಜ್ಯೋತಿಷಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ. ಕೋರ್ಟ್’ಗೆ ಅಲೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿ, ಚುನಾವಣೆಯನ್ನೇ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. … Read more

ಸಾಗರದ ಸಿಗಂದೂರು ರಸ್ತೆಯಲ್ಲಿ ಕಾಡುಕೋಣಗಳು ಪ್ರತ್ಯಕ್ಷ, ವಿಡಿಯೋ ವೈರಲ್

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಸಾಗರ ಪಟ್ಟಣದಲ್ಲಿ ಕಾಡುಕೋಣಗಳು ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಎರಡು ಕಾಡುಕೋಣಗಳು ರಾಜಾರೋಷವಾಗಿ ರಸ್ತೆಯಲ್ಲಿ ಸಾಗುತ್ತಿರುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಗುರುವಾರ ಮಧ್ಯರಾತ್ರಿ ಸಾಗರದ ಎಸ್.ಎನ್.ನಗರದಲ್ಲಿ ಎರಡು ಕಾಡು ಕೋಣಗಳು ಪ್ರತ್ಯಕ್ಷವಾಗಿವೆ. ಸಾಗರ ಸಿಗಂದೂರು ರಸ್ತೆಯಲ್ಲಿ ಹೋಗುತ್ತಿದ್ದ ಕಾಡುಕೋಣಗಳನ್ನು, ರಸ್ತೆಯಲ್ಲಿ ಸಾಗುತ್ತಿದ್ದ ಲಾರಿ, ಕಾರಿನಲ್ಲಿ ತೆರಳುತ್ತಿದ್ದವರು ಗಮನಿಸಿ, ವಾಹನಗಳನ್ನು ಸೈಡಿಗೆ ನಿಲ್ಲಿಸಿದ್ದಾರೆ. ಕಾಡುಕೋಣಗಳ ವಿಚಾರ ತಿಳಿಯದ ಪೊಲೀಸರು, ಬೈಕಿನಲ್ಲಿ ಅವುಗಳ ಬಳಿಗೆ ಹೋಗಿ, ಬೆದರಿ ಹಿಂತಿರುಗುವ ದೃಶ್ಯ, … Read more

ಸಾಗರದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ, ಲಾರಿಗಳ ಮುಖಾಮುಖಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಐಗಿನಬೈಲು ಬಳಿ ಘಟನೆ ನಡೆದಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಡಾಂಬರ್ ಸಾಗಿಸುತ್ತಿದ್ದ ಲಾರಿಗಳು ಡಿಕ್ಕಿಯಾಗಿವೆ. ಅಡುಗೆ ಅನಿಲ ಸಿಲಿಂಡರ್ ಲಾರಿ ಚಾಲಕ ಲೋಕೇಶ್, ಡಾಂಬರ್ ಲಾರಿ ಚಾಲಕ ಸಚಿನ್, ಕ್ಲೀನರ್ ಮಾಲಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಲಿಂಡರ್ ಲಾರಿ ಕ್ಲೀನರ್ ಉಮೇಶ್, ಗಂಭೀರ ಗಾಯಗೊಂಡಿದ್ದು, ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ಬೆಂಗಳೂರು ಹೊನ್ನಾವರ … Read more

ಚೆಕ್‌ಪೋಸ್ಟ್‌ನಲ್ಲಿ ಕಾರು ತಪಾಸಣೆ ವೇಳೆ ಎರಡು ಕೋಟಿ ಪತ್ತೆ, ಹಣ ಸೀಜ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಚೆಕ್‌ಪೋಸ್ಟ್ ಒಂದರಲ್ಲಿ ಕಾರು ತಪಾಸಣೆ ವೇಳೆ ಎರಡು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಪರಿಶೀಲನೆ ನಡೆಸಿದ ಅಧಿಕಾರಿಗಳು ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ಒಪ್ಪಿಸಲಾಗಿದೆ. ಸಾಗರ ತಾಲೂಕಿನ ಅಮಟೆಕೊಪ್ಪ ಬಳಿ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಚೆಕ್‌‌ಪೋಸ್ಟ್‌ಗೆ ಬಂದ ಎರ್ಟಿಗಾ ಕಾರು ತಪಾಸಣೆ ನಡೆಸಿದಾಗ ಎರಡು ಕೋಟಿ ರೂ. ಹಣ ಪತ್ತೆಯಾಗಿದೆ. ಹಣ ಯಾರಿಗೆ ಸೇರಿದ್ದು? ಕಾರಿನಲ್ಲಿದ್ದ ಎರಡು ಕೋಟಿ ರೂ. ಹಣ … Read more

ಆನಂದಪುರ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ, ಮೋರಿ ಕಟ್ಟೆಗೆ ಗುದ್ದಿದ ಕಾರು

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ನರಸೀಪುರದಲ್ಲಿ ಔಷಧಿ ಪಡೆಯಲು ಬರುತ್ತಿದ್ದವರ ಕಾರು ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಬೈರಾಪುರದಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು, ಬೈರಾಪುರ ಬಳಿಯ ರಸ್ತೆ ಪಕ್ಕದಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಬಾಲ ಸಾಹೇಬ್ ಕೃಷ್ಣ ದೇಸಾಯಿ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜು … Read more

ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ರಸ್ತೆ ಪಕ್ಕದ ಗುಂಡಿಗೆ ಬಿದ್ದ ಕಾರು

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019 ಶಾಸಕ ಹರತಾಳು ಹಾಲಪ್ಪ ಅವರ ಕಾರು ಅಪಘತಕ್ಕೀಡಾಗಿದೆ. ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಕಾರಿನಲ್ಲಿದ್ದ ಶಾಸಕ ಹಾಲಪ್ಪ ಅವರಿಗೆ ಯಾವುದೇ ಅಪಾಯವಾಗಿಲ್ಲ. ಶಾಸಕ ಹಾಲಪ್ಪ ಅವರು ಸಾಗರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದರು. ಈ ವೇಳೆ ಕಾಸ್ಪಾಡಿ ಬಳಿ, ಅಡ್ಡಬಂದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ. ಆದರೆ, ಚಾಲಕನ ನಿಯಂತ್ರಣ ತಪ್ಪಿದ ಕಾರು, ಗುಂಡಿಗೆ ಬಿದ್ದಿದೆ ಎಂದು ತಿಳಿದು … Read more