ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

ಸೊರಬ, ಆನಂದಪುರದಲ್ಲಿ ಮನೆ ಗೋಡೆ ಕುಸಿತ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

231121 House Wall Collapse at Soraba Ennekoppa

ಶಿವಮೊಗ್ಗ ಲೈವ್.ಕಾಂ | SORABA / ANANDAPURAM NEWS | 23 ನವೆಂಬರ್ 2021 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮನೆಗಳ ಗೋಡೆ ಕುಸಿದು ಅನಾಹುತಗಳು ಸಂಭವಿಸುತ್ತಿವೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಶಿವಪ್ಪ ಎಂಬುವವರಿಗೆ ಸೇರಿದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ. ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಗೋಡೆ ಕುಸಿತದಿಂದಾಗಿ ಮನೆಯ ಇತರೆಡೆ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ದಿಢೀರ್ ಕುಸಿದ ಮನೆ, ಅದೃಷ್ಟವಶಾತ್ … Read more

ವಸತಿ ಶಾಲೆ ಮಕ್ಕಳಿಂದ ದಿಢೀರ್ ಪ್ರತಿಭಟನೆ, ಮೈ, ಕೈ ಮೇಲೆ ಬಾಸುಂಡೆ ಪ್ರದರ್ಶನ, ಶಾಸಕರು, ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 23 ನವೆಂಬರ್ 2021 ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಸತಿ ಶಾಲೆಯ ಮಕ್ಕಳು ಬೆಳ್ಳಂಬೆಳಗ್ಗೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಗರ ತಾಲೂಕು ಆನಂದಪುರದ ಯಡೇಹಳ್ಳಿಯ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಿನ ಉಪಹಾರ ತ್ಯಜಿಸಿ, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯ ಕೊಡಿಸುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು? ‘ತರಗತಿಯಲ್ಲಿ ಮಾತನಾಡುವ ವಿಚಾರಗಳನ್ನು … Read more

ಕ್ರೈಸ್ತ ಪ್ರಾರ್ಥನಾ ಮಂದಿರದಿಂದ ಶಬ್ದ ಮಾಲಿನ್ಯ, ಪೊಲೀಸ್ ಠಾಣೆ ಮಟ್ಟಿಲೇರಿದ ಪ್ರಕರಣ

221121 Sagara Complaint Against Christain church

ಶಿವಮೊಗ್ಗ ಲೈವ್.ಕಾಂ | SAGARA NEWS | 22 ನವೆಂಬರ್ 2021 ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಶಾಂತಿನಗರದ ನಿವಾಸಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರದಹಳ್ಳಿ ರಸ್ತೆಯಲ್ಲಿರುವ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ವೇಳೆ ಜೋರಾಗಿ ಧ್ವನಿವರ್ಧಕ ಬಳಕೆ ಮಾಡುತ್ತಿದ್ದಾರೆ. ಈ ಶಬ್ದದಿಂದ ನೆರಹೊರೆಯವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು, ವೃದ್ಧರು, ಮಕ್ಕಳು ಹೆಚ್ಚಿದ್ದಾರೆ. … Read more

ಸಾಗರದಲ್ಲಿ ಭೀಕರ ಅಪಘಾತದ ಬೆನ್ನಿಗೆ ಸ್ಪೀಡ್ ಬ್ರೇಕರ್’ಗಾಗಿ ಆಗ್ರಹ

201121 ABVP Protest at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. … Read more

ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರಿಗೆ ಪಕ್ಷದಿಂದ ಬಿಗ್ ರಿಲೀಫ್

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ನವೆಂಬರ್ 2021 ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಭಜರಂಗದಳ ಸಂಘಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಪದ ಹಿನ್ನೆಲೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕ್ ಬೇಳೂರು ಅವರು ಸಾಗರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. … Read more

ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ

201121 Auto Accident at Sagara BH Road Near Indira Gandhi College

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ರಸ್ತೆ ದಾಟಲು ಮುಂದಾಗಿದ್ದ ಯುವತಿಯರಿಗೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಯುವತಿಯರಿಗೆ ಗಂಭೀರ ಗಾಯವಾಗಿದೆ. ಈ ದೃಶ್ಯ ಸಮೀಪದ ಶೋ ರೂಂ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಮ್ರೀನ್ ಬಾನು (21) ಮತ್ತು ಆಫ್ರೀನ್ ಬಾನು (19) ಗಾಯಗೊಂಡಿದ್ದಾರೆ. ಇಬ್ಬರು ಸಾಗರದ ಎಸ್.ಎನ್.ರಸ್ತೆಯ ನಿವಾಸಿಗಳಾಗಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಹೊಲಿಗೆ ತರಬೇತಿ ಮುಗಿಸಿ ಸಹೋದರಿಯರು … Read more

ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾದ ತರಕಾರಿ ವ್ಯಾಪಾರಿ

Suicide-Hanging-General

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 19 ನವೆಂಬರ್ 2021 ತರಕಾರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿನ ಹಳೇ ಸಂತೆ ಮಾರುಕಟ್ಟೆಯ ಮಹೇಶ್ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಸಂತೆ ಮಾರುಕಟ್ಟೆಯಲ್ಲಿ ಮಹೇಶ್ ತರಕಾರಿ ಅಂಗಡಿ ಇಟ್ಟುಕೊಂಡಿದ್ದರು. ವ್ಯಾಪಾರದಲ್ಲಿ ನಷ್ಟವಾಗಿತ್ತು. ಇನ್ನು, ಕಳೆದ ವರ್ಷ ಕರೋನಾದಿಂದ ಮಹೇಶ್ ಅವರ ತಾಯಿ ಮೃತರಾಗಿದ್ದರು. ಇದರಿಂದ ಮಹೇಶ್ ಖಿನ್ನತೆಗೆ ಒಳಗಾಗಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ … Read more

ಚಿತ್ರ ನಟಿ ಬಂಧನಕ್ಕೆ ಆಗ್ರಹಿಸಿ ಸಾಗರದಲ್ಲಿ ಪ್ರತಿಭಟನೆ, ರಾಷ್ಟ್ರಪತಿಗೆ ಮನವಿ

181121 Protest Against Kangara Ranut

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ನಟಿ ಕಂಗನಾ ರಣಾವತ್ ಹೇಳಿಕೆಗೆ ಸಾಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಮತ್ತು ಆಕೆಯನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ. ಸಾಗರದ ಉಪ ವಿಭಾಗೀಯ ಕಚೇರಿ ಮುಂದೆ ಜನಮನ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟಿ ಕಂಗನಾ ಬಂಧನಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ‘ಅತಿರೇಕದ ಪರಮಾವಧಿ, ಯಾರನ್ನೋ ಮೆಚ್ಚಿಸಲು ಯತ್ನ’ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಹಿತಿ ನಾ.ಡಿಸೋಜಾ, ‘1947ರಲ್ಲಿ … Read more

ಭಜರಂಗದಳ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ, ಸ್ಥಾನದಿಂದ ಅಮಾನತು ಮಾಡಿದ ಪಕ್ಷ, ಮುಜುಗರ ತಪ್ಪಿಸಲು ಯತ್ನ

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪದ ಹಿನ್ನೆಲೆ ಯುವ ಕಾಂಗ್ರೆಸ್ ಸಾಗರ ಬ್ಲಾಕ್ ಅಧ್ಯಕ್ಷರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಆವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಮಾಡುತ್ತಿದ್ದಾರೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ … Read more