ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ

SAGARA-NEWS-UPDATE

ಸಾಗರ: ಸಾಗರ ತಾಲೂಕನ್ನು ಜಿಲ್ಲಾ (District) ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲು ಸಾಗರ ಜಿಲ್ಲಾ ಘಟಕದ ಹೋರಾಟ ಸಮಿತಿಯು ಸೆ.5ರಂದು ಸಂಜೆ 4 ಗಂಟಗೆ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದೆ. ಸಾಗರ ತಾಲ್ಲೂಕು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. 2026ರ ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಅಷ್ಟರ ಒಳಗೆ ನೂತನ ಜಿಲ್ಲಾ ಕೇಂದ್ರಗಳ ರಚನೆ ಪ್ರಕ್ರಿಯೆ ಪೂರೈಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ … Read more

ತಾಳಗುಪ್ಪ ಆರೋಗ್ಯ ಕೇಂದ್ರಕ್ಕೆ ಗ್ರಾಮಸ್ಥರಿಂದ ಬೀಗ ಜಡಿಯುವ ಎಚ್ಚರಿಕೆ, ಕಾರಣವೇನು?

Villagers-protest-infront-of-talaguppa-health-centre

ಸಾಗರ: ತಾಳಗುಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ (health center) ವೈದ್ಯರ ಕೊರತೆ ನಿವಾರಿಸಿ ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಬೆಕ್ಕೋಡ್, ಮುರಳಿ ಬಲೆಗಾರು, ಸಂತೋಷ್ ಕೆಲವೆ, ಅಶೋಕ್ ಪಡವಗೋಡು ಇದ್ದರು. ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು? protest in front of talagauppa health center

ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ

AVINAHALLI SAGARA NEWS 1

ಸಾಗರ: ವಾಹನವೊಂದು ಓಮ್ನಿ ಕಾರಿಗೆ (CAR) ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿದ್ದಾರೆ. ಸಾಗರ ತಾಲೂಕಿನ ಸಿಗಂದೂರ ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಓಮ್ನಿ ಕಾರಿನಲ್ಲಿದ್ದ ಸಾಗರದ ಜಯಣ್ಣ (80) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಪಡಿಸಿದ ವಾಹನದ ಚಾಲಕ ಘಟನೆ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? … Read more

ಗಣಪತಿ ಹಬ್ಬಕ್ಕೆ ತವರಿಗೆ ಬಂದ ನವ ವಿವಾಹಿತೆ ಮನೆಯ ಜಗುಲಿಯಲ್ಲಿ ನೇಣಿಗೆ ಶರಣು

Married woman Ranjitha-anandapura-case -

ಸಾಗರ: ಗಣಪತಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ (new married) ಮನೆಯ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ರಂಜಿತಾ (28) ನೇಣಿಗೆ ಶರಣಾದವರು. ಸೆ.1ರಂದು ರಂಜಿತಾ ಅವರ ತಾಯಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಗಣಪತಿ ನೋಡಿಕೊಂಡು ಸಹೋದರ ಮನೆಗೆ ಮರಳಿದಾಗ ಬಾಗಿಲು ಹಾಕಿತ್ತು. ಹಿಂದಿನ ಬಾಗಿಲಿನಿಂದ ಮನೆಯೊಳಗೆ ಹೋದಾಗ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. 9 ವರ್ಷದ ಹಿಂದೆ ಆನಂದಪುರದ ಮುರುಘಾಮಠ ನಿವಾಸಿಯೊಬ್ಬರ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ, ಗರ್ಭ ಧರಿಸಿದ ಬಾಲಕಿ, ಅಪ್ರಾಪ್ತನ ವಿರುದ್ಧ ಕೇಸ್‌

Shimoga-News-update

ಸಾಗರ: ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ, ಸಾಗರದಲ್ಲಿ  ಅಪ್ರಾಪೆಯೊಬ್ಬಳು ಗರ್ಭ (pregnant) ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ಗೂತ್ತಾಗಿದೆ. ಕೂಲಂಕಷವಾಗಿ ವಿಚಾರಿಸಿದಾಗ ಪರಿಚಿತ ಅಪ್ರಾಪ್ತನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಾಗಿದೆ. ಓದುಗರ ಗಮನಕ್ಕೆ: … Read more

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಪೋಟ, ಯುವಕನಿಗೆ ತೀವ್ರ ಗಾಯ

sagara-generator-incident-one-admitted-to-hospital.

ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್‌ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಕೇಶ್‌ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್‌ ಸ್ಪೋಟದಿಂದ ಲೋಕೇಶ್‌ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್‌ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ … Read more

ಲಿಂಗನಮಕ್ಕಿ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಬದಲಾಯ್ತು ಜೋಗದ ಲುಕ್‌, ಎಷ್ಟು ನೀರು ಹೊರ ಬಿಡಲಾಗ್ತಿದೆ?

linganamakki-dam-gates-opened-and-Jog-falls.

ಸಾಗರ: ಲಿಂಗನಮಕ್ಕಿ ಜಲಾಶಯದ (Linganamakki Dam) ಎಲ್ಲ ಗೇಟುಗಳನ್ನು ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು (Jog Falls) ಮೈ ದುಂಬಿ ಹರಿಯುತ್ತಿದೆ. ಇವತ್ತು ಒಳ, ಹೊರ ಹರಿವು ಎಷ್ಟಿದೆ? ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿದೆ. ಅದ್ದರಿಂದ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47,232 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್‌ ಗೇಟುಗಳನ್ನು ಮೇಲೆತ್ತಿ … Read more

ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್

Center-Proposal-for-Water-Aerodrome-near-Sigandur.

ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್‌ ಏರೋಡ್ರೋಮ್‌ (Water Aerodrome) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ. ಗುಜರಾತ್‌ನ ಸಾಬರಮತಿ ನದಿಯಲ್ಲಿ ಈಗಾಗಲೇ ವಾಟರ್‌ ಏರೋಡ್ರೋಮ್‌ ಕಾರ್ಯಾಚರಿಸುತ್ತಿದೆ. ಕರ್ನಾಟಕದ 7 ಕಡೆ ಉಡಾನ್‌ ಯೋಜನೆ ಅಡಿ ವಾಟರ್‌ ಏರೋ ಡ್ರೋಮ್‌ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಸೂಪ ಡ್ಯಾಮ್‌ನ ಗಣೇಶಗುಡಿ, ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಉಡುಪಿಯ ಮಲ್ಪೆ, ಮಂಗಳೂರು ಮತ್ತು ಸಿಗಂದೂರು ಸಮೀಪ … Read more

ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ದಿನಾಂಕ ನಿಗದಿ, ಯಾವ್ಯಾವ ದಿನ ಏನೇನು ನಡೆಯಲಿದೆ?

Marikamba-Jathre-in-Sagara-City

ಸಾಗರ: ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ (Marikamba) ಜಾತ್ರಾ ಮಹೋತ್ಸವ 2026ರ ಫೆಬ್ರವರಿ 3ರಿಂದ ಆರಂಭವಾಗಲಿದೆ ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. 2026ರ ಜನವರಿ 27ಕ್ಕೆ ಮಾರಿಕಾಂಬ ಜಾತ್ರೆಗೆ ಅಂಕ ಹಾಕಲಾಗುವುದು ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌ ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ Marikamba Jathre

ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌

Tourist-at-Jog-falls-in-shimoga

ಸಾಗರ: ವೀಕೆಂಡ್‌ ಹಿನ್ನೆಲೆ ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆ ಪ್ರವಾಸಿಗರು (Tourist) ಆಗಮಿಸಿದ್ದರು. ಜಲಪಾತದ ವೈಭವ ಕಣ್ತುಂಬಿಕೊಂಡು ಖುಷಿ ಪಟ್ಟರು. ಲಿಂಗನಮಕ್ಕಿ ಜಲಾಶಯದಿಂದ ಕಳೆದ ವಾರ ನೀರು ಹರಿಸಲಾಗಿತ್ತು. ಹಾಗಾಗಿ ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳು ಭೋರ್ಗರೆಯುತ್ತಿದ್ದವು. ಇದರ ವಿಡಿಯೋಗಳು ವೈರಲ್‌ ಆಗಿದ್ದವು. ಇದರ ಬೆನ್ನಿಗೆ ಪ್ರವಾಸಿಗರು ಹೆಚ್ಚಳವಾಗಿದ್ದಾರೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌ ಜೋಗ ಜಲಪಾತಕ್ಕೆ ಇಂದು ಭಾರಿ ಸಂಖ್ಯೆಯ … Read more