ಕರೋನ ಭೀತಿಯ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಫ್​​ಡಿ ಆತಂಕ ಶುರು, ಸಾಗರದ ಯುವಕನಿಗೆ ಪಾಸಿಟಿವ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 4 MAY 2021 ಕರೋನ ಭೀತಿ ನಡುವೆ ಜಿಲ್ಲೆಯಲ್ಲಿ ಕ್ಯಾಸನೂರು ಫಾರೆಸ್ಟ್‍ ಡಿಸೀಸ್ (ಕೆಎಫ್‍ಡಿ) ಆತಂಕ ಶುರುವಾಗಿದೆ. ಸಾಗರ ತಾಲೂಕಿನ ಯುವಕನೊಬ್ಬನಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಬರೂರು ಬಳಿಯ ಮತ್ತಲಬೈಲಿನ ದೀಪಕ್ (18) ಎಂಬುವವರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದ ದೀಪಕ್, ಲಾಕ್‍ಡೌನ್ ಹಿನ್ನೆಲೆ ಊರಿಗೆ ಮರಳಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದೆ. ತಾಲೂಕು ಉಪ … Read more

ಮದುವೆಯಲ್ಲಿ ಸಾವಿರ ಜನ, ಶಿವಮೊಗ್ಗ ಡಿಸಿಯನ್ನೇ ಯಾಮಾರಿಸಿದರಾ ಅಧಿಕಾರಿ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021 ಸಾಗರದ ಶ್ರೀಧರಪುರದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭ ಕರೋನ ಸಂಕಷ್ಟದ ಕಾಲದಲ್ಲಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡಿಸಿದೆ. ಶಾಸಕ ಹರತಾಳು ಹಾಲಪ್ಪ ಅವರೆ ಈ ಕುರಿತು ಶಂಕೆ ವ್ಯಕ್ತಪಡಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ. ಏನಿದು ಪ್ರಕರಣ? ಸಾಗರ ತಾಲೂಕು ಚಕ್ಕೂರಿನ ಶ್ರೀಧರಪುರದಲ್ಲಿ ಮದುವೆ ಸಮಾರಂಭದಲ್ಲಿ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು ಎಂಬ ಆರೋಪವಿದೆ.  ಅಧಿಕಾರಿಗಳ ಸಭೆಯಲ್ಲಿ ಈ ವಿಷಯವನ್ನು ಶಾಸಕ ಹರತಾಳು ಹಾಲಪ್ಪ ಪ್ರಸ್ತಾಪ … Read more

ತಾಳಗುಪ್ಪದಲ್ಲಿ ನೂರು ಮನೆ ಇರುವ ರಸ್ತೆ ಸೀಲ್ ಡೌನ್, ಜನ ಹೊರ ಬರುವಂತಿಲ್ಲ, ಗುಂಪುಗೂಡುವಂತಿಲ್ಲ

020521 Conainment Zone in Talaguppa 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 MAY 2021 ತಾಳಗುಪ್ಪದ ರಂಗನಾಥ ಬೀದಿಯನ್ನು ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. 13 ಮಂದಿಯಲ್ಲಿ ಕೋರನ ಕಾಣಿಸಿಕೊಂಡ ಹಿನ್ನೆಲೆ, ರಸ್ತೆಗೆ ಬ್ಯಾರಿಕೇಡ್ ಹಾಕಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪೊಲೀಸ್ ಠಾಣೆ ಪಕ್ಕದಿಂದ ಗೌರಿಕೆರೆ ರಸ್ತೆ ಸೇರುವವರಗೆ ಕಂಟೇನ್ಮೆಂಟ್ ಜೋನ್ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ. ಈ ರಸ್ತೆಯಲ್ಲಿ ಜನ ಮನೆಯಿಂದ ಹೊರಬರಬಾರದು, ಗುಂಪುಗೂಡಬಾರದು ಎಂದು ಸೂಚಿಸಲಾಗಿದೆ. ನೂರಕ್ಕೂ ಹೆಚ್ಚು ಮನೆಗಳು, ಐನೂರಕ್ಕೂ ಹೆಚ್ಚು ಮಂದಿ ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯಲ್ಲಿದ್ದಾರೆ. … Read more

ಸಾಗರದ ಮಸೀದಿ ಮೇಲೆ ತಹಶೀಲ್ದಾರ್, ಪೊಲೀಸರಿಂದ ದಾಳಿ, 25ಕ್ಕೂ ಹೆಚ್ಚು ಜನರ ಮೇಲೆ ಕೇಸ್

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MAY 2021 ಜಾತ್ರೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದೆ. ಹಾಗಿದ್ದೂ ಸಾಗರದ ಆಜಾರ್‍ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ, ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ  ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಸುಮಾರು 25 ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಿಢೀರ್ ದಾಳಿ ನಡೆಸಿದ ಪೊಲೀಸರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ವಶಕ್ಕೆ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಮೊದಲ ದಿನದ ವೀಕೆಂಡ್ ಕರ್ಫ್ಯೂ? ತಾಲೂಕುವಾರು ರಿಪೋರ್ಟ್

175578819 1373910869636996 6771968949187943387 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021 ವೀಕೆಂಡ್ ಕರ್ಫ್ಯೂಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದೆ. ಬಹುತೇಕ ಜನರು ಮನೆಯಿಂದ ಹೊರಬಾರದೆ ಮೊದಲ ದಿನ ಕರ್ಫ್ಯೂಗೆ ಸ್ಪಂದಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಕರ್ಫ್ಯೂ? ಶಿವಮೊಗ್ಗ ತಾಲೂಕು ಶಿವಮೊಗ್ಗ ನಗರ ಮತ್ತು ಹೊರ ವಲಯದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದರು. ಗಸ್ತು ಹೆಚ್ಚಿಸಿದ್ದರು. ಅಗತ್ಯ ವಸ್ತುಗಳ ಖರೀದಿಗೆ ಆಗಮಿಸಿದ್ದ ಜನರು ಬಳಿಕ ಮನೆ ಸೇರಿದ್ದರು. ನಡುವೆ ಹೊರ ಬರುತ್ತಿದ್ದವರಿಗೆ ಪೊಲೀಸರು … Read more

ಸಿಗಂದೂರು ದೇವಸ್ಥಾನ ಬಂದ್, ನಿತ್ಯ ಪೂಜೆಗೂ ಭಕ್ತರಿಗಿಲ್ಲ ಅವಕಾಶ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 23 APRIL 2021 ಕರೋನ ಮಾರ್ಗಸೂಚಿ ಹಿನ್ನೆಲೆ ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಭಕ್ತರಿಗೆ ದೇವರ ದರ್ಶನ, ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಪ್ರತಿ ದಿನ ಬೆಳಗ್ಗ 4 ಗಂಟೆಗೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ನಡೆಯಲಿದೆ. ಪ್ರಧಾನ ಅರ್ಚಕರಾದ ಶೇಷಗಿರಿ ಭಟ್ ಅವರು ಪೂಜೆ ನಡೆಸಲಿದ್ದಾರೆ. ಆಗಲು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ  ಎಂದು ದೇವಾಲಯದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಅವರು … Read more

ಆನಂದಪುರದಲ್ಲಿ ಉರುಳಿದ ಮರ, ವಾಹನ ಸಂಚಾರ ಬಂದ್, ಗೌತಮಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು

200421 Rain At Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 20 APRIL 2021 ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಇನ್ನು, ಸಿಡಿಲು ಬಡಿದು ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮರ ಬಿದ್ದಿರುವುದರಿಂದ ರಿಪ್ಪನ್‍ಪೇಟೆ – ಸಾಗರ ನಡುವೆ ಸಂಚಾರ ಸ್ಥಗಿತವಾಗಿದೆ. ವಾಹನ ಸಂಚಾರ ಬಂದ್ ಆಗಿದೆ. ಘಟನೆಯಲ್ಲಿ ಕೆಲವು ವಾಹನಗಳಿಗೂ ಹಾನಿಯಾಗಿದೆ. ಮತ್ತೊಂದೆಡೆ ಗೌತಮಪುರದಲ್ಲಿ ಸಿಡಿಲು ಬಡಿದು ಮನೆಯೊಂದರ ಮುಂದಿದ್ದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. … Read more

ಸಾಗರ ನಗರಸಭೆ ಅಧಿಕಾರಿಗಳಿಗೆ ಶಾಕ್ ಕೊಟ್ಟರು ಶಾಸಕ ಹಾಲಪ್ಪ

150421 Hatalu Halappa Visit Nagara Sabhe Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಕಚೇರಿಗೆ ಲೇಟಾಗಿ ಬಂದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ  ಇವತ್ತು ಆಶ್ರಯ ಸಮಿತಿ ಸಭೆ ನಿಗದಿಯಾಗಿತ್ತು. ಬೆಳಗ್ಗೆ 10.30ಕ್ಕೆ  ಶಾಸಕ ಹರತಾಳು ಹಾಲಪ್ಪ ಅವರು ನಗರಸಭೆಗೆ ಆಗಮಿಸಿದರು. ಈ ವೇಳೆ ಹಲವು ಅಧಿಕಾರಿಗಳು ಇನ್ನೂ ಕಚೇರಿಗೆ ಆಗಮಿಸಿರಲಿಲ್ಲ. ಇದನ್ನು ಕಂಡು ಶಾಸಕ ಹಾಲಪ್ಪ ಕೆಂಡಾಮಂಡಲವಾದರು. ಹಾಜರಾತಿ … Read more

ಸಾಗರದ ಇತಿಹಾಸ ಪ್ರಸಿದ್ಧ ರಥೋತ್ಸವ ಹತ್ತು ಮೀಟರ್​​ಗೆ ಸೀಮಿತ, 50 ಮಂದಿಗಷ್ಟೇ ಅವಕಾಶ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 15 APRIL 2021 ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವನ್ನು ಸರಳವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿದೆ. ಏಪ್ರಿಲ್ 16ರಂದು ರಥೋತ್ಸವ ಆಯೋಜಿಸಲಾಗಿದೆ. ಕರೋನ ಲಾಕ್‍ಡೌನ್ ಹಿನ್ನೆಲೆ ಕಳೆದ ವರ್ಷ ರಥೋತ್ಸವ ನಿಷೇಧಿಸಲಾಗಿತ್ತು. ಈ ಬಾರಿ ಸರಳವಾಗಿ ರಥೋತ್ಸವ ಆಚರಿಸಲಾಗುತ್ತಿದೆ. ಶಾಸಕ ಹರತಾಳು ಹಾಲಪ್ಪ ಅವರು ಸಾಗರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆ ನಡೆಸಿದರು. ರಥೋತ್ಸವ ಹತ್ತು ಮೀಟರ್ ಮಾತ್ರ ಶ್ರೀ ಮಹಾಗಣಪತಿ ರಥೋತ್ಸವಕ್ಕೆ … Read more

ಆಕಸ್ಮಿಕ ಬೆಂಕಿಗೆ ಸಾಗರದಲ್ಲಿ ತೋಟದ ಮನೆ, ಕ್ವಿಂಟಾಲ್​ಗಟ್ಟಲೆ ಅಡಕೆ, ಕಾಳುಮೆಣಸು ಭಸ್ಮ

130421 Areca Fire in Sagara Back Water 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 APRIL 2021 ತೋಟದ ಮನೆಗೆ ಬೆಂಕಿ ಬಿದ್ದು ದೊಡ್ಡ ಪ್ರಮಾಣದಲ್ಲಿ ಅಡಕೆ ಮತ್ತು ಕಾಳು ಮೆಣಸು ಸುಟ್ಟು ಹೋಗಿವೆ. ಸಾಗರ ತಾಲೂಕು ಹೆಸರಬೈಲು ಗ್ರಾಮದಲ್ಲಿ ಘಟನೆ ನಡೆದಿದೆ. ಸಾಗರದ ಹೊಯ್ಸಳ ಎಂಬುವವರ ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತುಗಲಿತ್ತು. ತೋಟದ ಮನೆಯಲ್ಲಿ ಸುಮಾರು 80 ಕ್ವಿಂಟಾಲ್ ಅಡಕೆ ಮತ್ತು 20 ಕ್ವಿಂಟಾಲ್ ಕಾಳು ಮೆಣಸು ಇರಿಸಲಾಗಿತ್ತು. ಇದೆಲ್ಲವು ಬೆಂಕಿಗೆ ಆಹುತಿಯಾಗಿದೆ. ಸಾಗರದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ … Read more