ನರಸೀಪುರದ ನಾಟಿ ಔಷಧ ವಿತರಣೆ ತಾತ್ಕಾಲಿಕ ಮುಂದೂಡಿಕೆ, ಕಾರಣವೇನು? ಮತ್ತೆ ಯಾವಾಗ ಶುರುವಾಗುತ್ತೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ನರಸೀಪುರದ ನಾಟಿ ಔಷಧ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನಾಟಿ ವೈದ್ಯರ ನಾರಾಯಣಮೂರ್ತಿ ಅವರ ಪುತ್ರ ರಾಘವೇಂದ್ರ, ಕರೋನ ಎರಡನೇ ಅಲೆ ಮತ್ತು ಲಾಕ್‌ ಡೌನ್‌ ಕುರಿತು ಚರ್ಚೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಔಷಧ ನೀಡುವುದನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ | ಕ್ಯಾನ್ಸರ್‌ಗೆ ಔಷಧಿ ನೀಡುತ್ತಿದ್ದ ಸಾಗರ ನರಸೀಪುರದ ನಾರಾಯಣಮೂರ್ತಿ … Read more

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಾಗರ ವಕೀಲರು ಗರಂ

240321 Sagara Advocates Protest in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸಾಗರದ ಉಪ ವಿಭಾಗಾಧಿಕಾರಿಗೆ ವಕೀಲರು ಮನವಿ ಸಲ್ಲಿಸಿದ್ದಾರೆ. ಮಾರ್ಚ್ 31ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ವಕೀಲರೊಬ್ಬರ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಇದರ ವಿರುದ್ಧ ಕ‍ಠಿಣ ಕ್ರೈಗೊಳ್ಳಬೇಕು ಎಂದು ವಕೀಲರು ಆಗ್ರಹಿಸಿದರು. ಏನಿದು ಕೇಸ್? ಏನಂದಿದ್ದರು ಡಿಕೆಶಿ? ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ … Read more

ನಾನು ಬ್ಯಾಂಕ್ ಮ್ಯಾನೇಜರ್ ಮಾತಾಡ್ತಿರೋದು ಅಂತಾ ಹೇಳಿ, ಸಾಗರದ ವ್ಯಕ್ತಿಯ ಖಾತೆಯಿಂದ 1.65 ಲಕ್ಷ ನುಂಗಿದ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 24  MARCH 2021 ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತನೊಬ್ಬ, ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ 1.65 ಲಕ್ಷ ರೂ. ವಂಚನೆ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ | ಮೌಸ್ ಬುಕ್ ಮಾಡಲು ಹೋಗಿ 65 ಸಾವಿರ ಕಳೆದುಕೊಂಡ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿ ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತ, ತನ್ನನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ … Read more

ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಲ್ಲಿ ಪ್ರವಾಸಿಗರಿಂದ ಹಲ್ಲೆ

Sigandur-Launch-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಿನಲ್ಲಿ ಹಲ್ಲೆ ನಡೆಸಿದ್ದಾರೆ. ತುಮರಿ ಗ್ರಾಮ ಪಂಚಾಯಿತಿ ಹಂಗಾಮಿ ನೌಕರರಾದ ರಾಜೇಶ್ ಮತ್ತು ಶ್ರವಣ್ ಕುಮಾರ್‍ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಕಾರಣವೇನು? ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಗೋವಿಂದ ಕೃಷ್ಣ ಮತ್ತು ರಾಜು ಎಂಬುವವರು ಕ್ಷುಲಕ ಕಾರಣಕ್ಕೆ ಗೇಟ್ ಸಿಬ್ಬಂದಿ ಜೊತೆ ಜಗಳವಾಡಿದ್ದಾರೆ. ಬೆಂಗಳೂರಿನಿಂದ ಬಂದಿದ್ದ ತಮ್ಮ ಟಿಟಿ ವಾಹನವನ್ನು ಲಾಂಚ್‍ಗೆ ಬಿಡಲಿಲ್ಲ  ಎಂಬ … Read more

ಶಿವಮೊಗ್ಗ, ಸಾಗರ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್, ಇನ್ಮುಂದೆ ಎಚ್ಚರ ತಪ್ಪಿದರೆ ದಂಡ ಫಿಕ್ಸ್, ಯಾಕೆ?

Railway Shivamogga Board 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24  MARCH 2021 ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸಲು ರೈಲ್ವೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ನಿಲ್ದಾಣದೊಳಗೆ ಮತ್ತು ರೈಲಿನಲ್ಲಿ ಪ್ಲಾಸ್ಟಿಕ್ ಕೊಂಡೊಯ್ಯುವವರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ. ಪ್ಲಾಸ್ಟಿಕ್ ಬದಲು ಬಟ್ಟೆ ಬ್ಯಾಗ್‍ಗಳನ್ನು ವಿತರಿಸಲಾಗಿದೆ. ಪ್ಲಾಸ್ಟಿಕ್ ಕವರ್ , ಬ್ಯಾನರ್, ಶೀಟ್, ಪ್ಲಾಸ್ಟಿಕ್ ಧ್ವಜ, ಕಪ್, ಪ್ಲೇಟ್, ಸ್ಪೂನ್, ಥರ್ಮಕೋಲ್ ಸೇರಿದಂತೆ ಪ್ಲಾಸ್ಟಿಕ್‍ನಿಂದ ತಯಾರಿಸಿರುವ ವಸ್ತುಗಳನ್ನು ರೈಲು ನಿಲ್ದಾಣದ ಒಳಗೆ ಬಿಡದಿರಲು ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಜಾಗೃತಿ … Read more

ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 MARCH 2021 ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಸಾಗರ ಪೊಲೀಸರಿಗೆ ಹೈಕೋರ್ಟ್‍ ಚಾಟಿ ಬೀಸಿದೆ. ಹತ್ತು ದಿನದೊಳಗೆ ಕಾರಣ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ | ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಪೊಲೀಸ್ ಕ್ರಮ ಸರಿಯೋ ತಪ್ಪೋ ಸಂಪುಟದಲ್ಲಿ ಚರ್ಚೆ ದೂರು ದಾಖಲಾಗಿ ಹತ್ತು ತಿಂಗಳು ಕಳೆದರೂ ಸಾಗರ ಠಾಣೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿಲ್ಲ. ಇದಕ್ಕೆ ಕಾರಣ … Read more

ದಿಢೀರ್ ನೈಟ್ ರೌಂಡ್ಸ್ ಕೈಗೊಂಡ ಅಧಿಕಾರಿಗಳು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಟ್ಟಿದ ಬಿಸಿ

200321 Sagara Nagarasabhe Officials Night Rounds 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 MARCH 2021 ವಾಹನಕ್ಕೆ ಕಸ ನೀಡದೆ, ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿದ್ದವರಿಗೆ ನಗರಸಭೆ ಸಿಬ್ಬಂದಿಗಳು ಬಿಸಿ ಮುಟ್ಟಿಸಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇನ್ಮುಂದೆ ರಸ್ತೆ ಬದಿಯಲ್ಲಿ ಕಸ ಬಿಸಾಡಿದರೆ ದಂಡ ಹಾಕುವ ಎಚ್ಚರಿಕೆ ನೀಡಿದ್ದಾರೆ. ಸಾಗರ ನಗರಸಭೆಯ ಪರಿಸರ ಅಭಿಯಂತರರಾದ ಮದನ್ ಅವರ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿಗಳು ನೈಟ್ ರೌಂಡ್ಸ್  ಮಾಡಿದರು. ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಎಸೆಯುವರನ್ನು ಪತ್ತೆ ಹಚ್ಚಿ, ಬುದ್ದಿ ಮಾತು ಹೇಳಿದರು. ನಗರಸಭೆ … Read more

ಧರ್ಮಸ್ಥಳ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

090321 Accident Near Kudarur in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 MARCH 2021 ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ದೇವರ ದರ್ಶನ ಮುಗಿಸಿ ಬರುತ್ತಿದ್ದರು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಇವತ್ತು ಬೆಳಗ್ಗೆ ಹಿಂತಿರುಗುತ್ತಿದ್ದರು. … Read more

ಸಾಗರ ಬಸ್ ನಿಲ್ದಾಣಕ್ಕೆ ಶಾಸಕ ಹಾಲಪ್ಪ ದಿಢೀರ್ ಭೇಟಿ, ಮಾತು ಮರೆತ ಅಧಿಕಾರಿಗಳಿಗೆ ಕ್ಲಾಸ್, ಮಿನಿಸ್ಟರ್‌ಗೆ ಫೋನ್

010321 Sagara MLA Halappa Visit KSRTC Bus Stand 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಬಸ್ ಸಂಚಾರ ಆರಂಭಿಸಲು ಇನ್ನೂ ಹತ್ತು ದಿನ ಬೇಕು ಎಂದು ತಿಳಿಸಿದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಸಾಗರ ಶಾಸಕ ಹರತಾಳು ಹಾಲಪ್ಪ  ಇವತ್ತು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾರಿಗೆ ಸಚಿವರಿಗೆ ಕರೆ ಮಾಡಿ, ತಕ್ಷಣ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು. ಏನಿದು ಕೇಸ್? ಅಧಿಕಾರಿಗಳಿಗೆ ಕ್ಲಾಸ್ ಏಕೆ? ಸಾಗರ ತಾಲೂಕು ಕಟ್ಟಿನಕಾರು ಭಾಗಕ್ಕೆ ಬಸ್ ಸಂಚಾರ ಆರಂಭಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆಗೆ ಶಾಸಕ … Read more

ಸಾಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಓಮ್ನಿ

010321 Car Burn at Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಸಿಕೊಂಡಿದ್ದು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿತು. ಸಾಗರದ ಸರ್ಕಾರಿ ಆಸ್ಪತ್ರೆ ಬಳಿ ಇರುವ ಕೆನರಾ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ರಮೇಶ್ ಒಬ್ಬರೆ ಇದ್ದರು. ಸಾಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಂಡು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಂದಗದ್ದೆಯಲ್ಲಿರುವ ಗ್ಯಾಸ್ ಗೋಡೋನ್‍ ಕಡೆಗೆ ರಮೇಶ್ ತೆರಳುತ್ತಿದ್ದರು. ದಟ್ಟ ಹೊಗೆ, ಧಗಧಗ ಉರಿದ ಬೆಂಕಿ ಸರ್ಕಾರಿ … Read more