ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ

Haratalu-Halappa

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಬಳಿಕ ಹಲವು ಸಮುದಾಯಗಳು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹೇರುತ್ತಿವೆ. ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಆರ್ಯ ಈಡಿಗ ಅಭಿವೃದ್ದಿ ನಿಗಮ ಸ್ಥಾಪನೆಗೆ ಮನವಿ ಮಾಡಿದ್ದಾರೆ. ಹಾಲಪ್ಪ ಅವರ ಮನವಿಯಲ್ಲಿ ಏನಿದೆ? 26 ಉಪ ಪಂಗಡಗಳನ್ನು ಹೊಂದಿರುವ ಆರ್ಯ ಈಡಿಗ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. … Read more

ಸಾಗರದಲ್ಲಿ ಕಾರು, ಬೈಕ್ ಡಿಕ್ಕಿ, ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 19 ನವೆಂಬರ್ 2020 ಕಾರು, ಬೈಕ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.ಸಾಗರ ತಾಲೂಕಿನ ಶಿರೂರು ಆಲಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಉಷಾ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಉಷಾ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ, ಸಾಗರದಲ್ಲಿ ಪ್ರತಿಭಟನೆ, ಮನವಿ

191120 Sagara Kasapa Against Marata Board 1

ಶಿವಮೊಗ್ಗ ಲೈವ್.ಕಾಂ |SAGARA NEWS | 19 NOVEMBER 2020 ಕರ್ನಾಟಕದಲ್ಲಿ ಕನ್ನಡ ಭಾಷೆ ಹೊರತುಪಡಿಸಿ ಇತರೆ ಯಾವುದೆ ಪ್ರಧಿಕಾರವನ್ನು ರಚಿಸುವುದು ಬೇಡ ಎಂದು ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಉಳಿದ ಭಾಷಿಕರ ಪ್ರಾಧಿಕಾರ ರಚನೆಯಿಂದ ಕನ್ನಡ ಭಾಷೆ ಬೆಳವಣಿಗೆ ಕುಂಠಿತವಾಗಲಿದೆ. ಆದ್ದರಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಮರಾಠ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಎಂದು ಬದಲಾಯಿಸಬೇಕು. ಆಯಾ ಪ್ರದೇಶದ ಅಭಿವೃದ್ಧಿ ಮಾಡಬೇಕು ಎಂದು ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು. … Read more

ಸಾಗರ ನಗರಸಭೆಯಿಂದ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ, ಒಂದು ಎಕರೆ ನಗರಸಭೆ ವಶಕ್ಕೆ

091120 Sagara Encroachment By Nagara Sabhe 1

ಶಿವಮೊಗ್ಗ ಲೈವ್.ಕಾಂ |SAGARA NEWS | 9 NOVEMBER 2020 ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಾಗರ ನಗರಸಭೆ ಮುಂದುವರೆಸಿದೆ. ಅಣಲೆಕೊಪ್ಪದಲ್ಲಿ ಸುಮಾರು ಒಂದು ಎಕರೆ ಜಾಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಅಣಲೆಕೊಪ್ಪದ ಸರ್ವೆ ನಂಬರ್ 8ರಲ್ಲಿ ಸುಮಾರು ಒಂದು ಎಕರೆಯಷ್ಟು ಕಂದಾಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ನಿರ್ಮಿಸಿದ್ದ ಶೆಡ್‍ಗಳನ್ನು ಅಧಿಕಾರಿಗಳು ತೆರವುಗೊಳಿಸಿದರು. ತೆರವು ಕಾರ್ಯಾಚರಣೆ ಬಳಿಕ ಆ ಜಾಗದಲ್ಲಿ ನಗರಸಭೆಗೆ ಕಾಯ್ದಿರಿಸಿದ ಜಾಗ ಎಂದು ಬೋರ್ಡ್ ಹಾಕಲಾಯಿತು. ಕೆಲವು ತಿಂಗಳಿಂದ ಇದೆ ಮಾದರಿಯಲ್ಲಿ ನಗರಸಭೆ … Read more

ಮಾಜಿ MLAಗೆ ಸಿಗಂದೂರು ದೇಗುಲದಿಂದ ಕಿಕ್ ಬ್ಯಾಕ್ ಆರೋಪ, ಪ್ರಮಾಣಕ್ಕೆ ಬರುವಂತೆ ವಿರೋಧಿಗಳಿಗೆ ಆಗ್ರಹ

031120 Beluru Gopalakrishna follwers Press Meet About Sigandur 1

ಶಿವಮೊಗ್ಗ ಲೈವ್.ಕಾಂ | SAGARA NEWS | 8 NOVEMBER 2020 ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿಗಂದೂರು ದೇಗುಲದ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪ ನಿರಾಧಾರ. ಈ ಸಂಬಂಧ ಸಿಗಂದೂರು ದೇವಿ ಸನ್ನಿಧಿಯಲ್ಲಿ ಅವರು ಪ್ರಮಾಣ ಮಾಡಲು ಸಿದ್ದರಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ನಾಗರಾಜಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜಸ್ವಾಮಿ, ಬೇಳೂರು ಗೋಪಾಲಕೃಷ್ಣ ಅವರಿಗೆ ದೇವಸ್ಥಾನದಿಂದ ಕಿಕ್ ಬ್ಯಾಕ್ ಪಡೆಯುವಂತಹ … Read more

ನಾಲ್ಕು ತಿಂಗಳು ಮಾತ್ರ ಸಿಗಂದೂರು ದೇವಸ್ಥಾನಕ್ಕೆ ಸಮಿತಿ, ಆ ಬಳಿ ಸಮಿತಿ ಇರಬೇಕೋ ಬೇಡವೋ ಮತ್ತೆ ನಿರ್ಧಾರ

081120 Swamijis Meeting CM over Siganduru Temple Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಆ ಬಳಿಕ ಸಮಿತಿ ಇರಬೇಕೊ ಬೇಡವೊ ಅನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು. ಸ್ವಾಮೀಜಿಗಳ ಮನವಿ ಏನು? ನಿಟ್ಟೂರು ನಾರಾಯಣಗುರು … Read more

ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಅವರ ಸಾಗರದ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು

theft case general image

ಶಿವಮೊಗ್ಗ ಲೈವ್.ಕಾಂ |SAGARA NEWS | 7 NOVEMBER 2020 ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಕೆ.ಎಸ್.ಗುರುಮೂರ್ತಿ ಅವರ ಸಾಗರದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಸಾಗರದ ಪ್ರಗತಿನಗರದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಆದರೆ ಯಾವುದೆ ವಸ್ತುಗಳನ್ನು ಕದ್ದೊಯ್ದಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಸಿಗಂದೂರು ಸೇತುವೆ ನಿರ್ಮಾಣ ಸ್ಥಳಕ್ಕೆ ಸದ್ಯದಲ್ಲೇ ಸಿಎಂ ಭೇಟಿ, ಸಾಗರ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆಗೆ ಸಿದ್ಧ

021120 MLA Halappa visit Sagara Bus Stand 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 NOVEMBER 2020 ಸಿಗಂದೂರು ಸೇತುವೆ ಕಾಮಗಾರಿ ಪರಿಶೀಲನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲೇ ಭೇಟಿ ನೀಡಲಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸಾಗರದಲ್ಲಿ ಮಾತನಾಡಿದ ಹಾಲಪ್ಪ, ತುಮರಿ ಸೇತುವೆ ನಿರ್ಮಾಣ ಸ್ಥಳಕ್ಕೆ ಸಿಎಂ ಭೇಟಿ ನೀಡುವ ಕುರಿತು ಎರಡ್ಮೂರು ಬಾರಿ ತಮ್ಮೊಂದಿಗೆ ಚರ್ಚಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಭೇಟಿ ನೀಡುವುದು ಬೇಡ ಎಂಬ ಸಲಹೆ ಬಂದಿದೆ. ಹಾಗಾಗಿ ಅವರು ಸದ್ಯದಲ್ಲೇ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದರು. ಖಾಸಗಿ … Read more

ನರಸೀಪುರದ ನಾಟಿ ಔಷಧ ವಿತರಣೆ ಪುನಾರಂಭ, ಆದರೆ ಸ್ಥಳ ಬದಲಾವಣೆ ಆಗಿದೆ, ಎಲ್ಲಿ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ANANDAPURA NEWS | 2 ನವೆಂಬರ್ 2020 ನರಸೀಪುರದ ನಾಟಿ ಔಷಧ ವಿತರಣಾ ಕಾರ್ಯ ಪುನಾರಂಭವಾಗಿದೆ. ಆದರೆ ಈ ಬಾರಿ ಸ್ಥಳ ಬದಲಾವಣೆ ಮಾಡಲಾಗಿದೆ. ನರಸೀಪುರ ಗ್ರಾಮದ ಬದಲು ಶಿವಗಂಗೆಯ ಗೋಡೋನ್ ಒಂದರಲ್ಲಿ ಔಷಧ ವಿತರಿಸಲಾಗುತ್ತಿದೆ. ಸ್ಥಗಿತವಾಗಿತ್ತು ಔಷಧ ವಿತರಣೆ ಕರೋನಾ ಲಾಕ್‍ಡೌನ್ ಪರಿಣಾಮ ಫೆಬ್ರವರಿಯಿಂದ ಔಷಧ ವಿತರಣೆ ಕಾರ್ಯ ಸ್ಥಗಿತವಾಗಿತ್ತು. ಜುಲೈ ತಿಂಗಳಲ್ಲಿ ನಾರಾಯಣಮೂರ್ತಿ ಅವರು ನಿಧನರಾದರು. ಈ ನಡುವೆ ನರಸೀಪುರಕ್ಕೆ ಬರುವ ಜನರು ಸ್ವಚ್ಛತೆ ಕಾಪಾಡುತ್ತಿಲ್ಲ ಮತ್ತು ಕರೋನಾ ಭೀತಿಯಿಂದ … Read more

ಶರಾವತಿ ಕಣಿವೆಯ ಹಲವು ಕಡೆ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ಪ್ಲಾನ್

police jeep

ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಜೋಡಿ ಕೊಲೆ, ಸರಣಿ ಕಳ್ಳತನ ಪ್ರಕರಣದ ಹಿನ್ನೆಲೆ ಶರಾವತಿ ಕಣಿವೆಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಸೂಚನೆ ಮೇರೆಗೆ ಬ್ಯಾಕೋಡು ಮತ್ತು ತುಮರಿಯಲ್ಲಿ ತುರ್ತು ಸಾರ್ವಜನಿಕ ಸಭೆ ನಡೆಸಿದ ಡಿವೈಎಸ್‍ಪಿ ವಿನಾಯಕ್ ಶೆಟ್ಟಿಗೇರ್ ಅವರು, ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದರು. ಅಪರಿಚಿತರ ಮಾಹಿತಿ ಕೊಡಿ ಅಹಿತಕರ ಘಟನೆ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ. ಗ್ರಾಮಕ್ಕೆ ಭೇಟಿ ನೀಡುವ ಅಪರಿಚಿತರ … Read more